AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Rekha Kadiresh ಕೌಟುಂಬಿಕ ಕಲಹಕ್ಕೆ ರೇಖಾ ಕದಿರೇಶ್ ಕೊಲೆ? ಕುಟುಂಬದ ನಾಲ್ವರು ಅರೆಸ್ಟ್

ಕದಿರೇಶ್ ಮರಣದ ನಂತರ ಕದಿರೇಶ್ ಕುಟುಂಬಸ್ಥರು ಸಾಕಷ್ಟು ನೋವು ಅನುಭವಿಸಿದ್ದರು. ಕದಿರೇಶ್ ಸಂಪಾದನೆ ಮಾಡಿದ್ದ ಆಸ್ತಿ, ರಾಜಕೀಯ ಪವರ್ ಎಲ್ಲವೂ ಕದಿರೇಶ್ ಪತ್ನಿ ರೇಖಾಗೆ ಸಿಕ್ಕಿತ್ತು. ಪವರ್ ಸಿಕ್ಕ ಬಳಿಕ ರೇಖಾ ಕದಿರೇಶ್ ಕುಟುಂಬವನ್ನು ಬಿಟ್ಟು ಒಂಟಿಯಾಗಿದ್ದರು.

Rekha Kadiresh ಕೌಟುಂಬಿಕ ಕಲಹಕ್ಕೆ ರೇಖಾ ಕದಿರೇಶ್ ಕೊಲೆ? ಕುಟುಂಬದ ನಾಲ್ವರು ಅರೆಸ್ಟ್
ರೇಖಾ ಕದಿರೇಶ್ ದಂಪತಿ (ಸಂಗ್ರಹ ಚಿತ್ರ)
TV9 Web
| Edited By: |

Updated on: Jun 25, 2021 | 9:52 AM

Share

ಬೆಂಗಳೂರು: ಹಾಡಹಗಲೇ BBMP ಮಾಜಿ ಸದಸ್ಯೆ ರೇಖಾ ಕದಿರೇಶ್ರನ್ನು ಬರ್ಬರವಾಗಿ ಕೊಚ್ಚಿ ಕೊಲೆ ಮಾಡಿದ ಪ್ರಕರಣಕ್ಕೆ ಸಂಬಂಧಿಸಿ ಕಾಟನ್‌ಪೇಟೆ ಪೊಲೀಸರು ನಾಲ್ವರನ್ನು ವಶಕ್ಕೆ ಪಡೆದಿದ್ದಾರೆ. ಕೊಲೆಗೆ ಸಹಕಾರ ನೀಡಿದ ಹಾಗೂ ಸಂಚು ರೂಪಿಸಿದ್ದ ಕಾರಣ ನಾಲ್ವರು ಅರೆಸ್ಟ್ ಆಗಿದ್ದಾರೆ. ಸದ್ಯ ಬಂಧಿತರ ವಿಚಾರಣೆ ನಡೆಸಲಾಗುತ್ತಿದೆ.

ಕೌಟುಂಬಿಕ ಕಲಹಕ್ಕೆ ರೇಖಾ ಕದಿರೇಶ್ ಕೊಲೆ? ಇನ್ನು ಕದಿರೇಶ್ ಮರಣದ ನಂತರ ಕದಿರೇಶ್ ಕುಟುಂಬಸ್ಥರು ಸಾಕಷ್ಟು ನೋವು ಅನುಭವಿಸಿದ್ದರು. ಕದಿರೇಶ್ ಸಂಪಾದನೆ ಮಾಡಿದ್ದ ಆಸ್ತಿ, ರಾಜಕೀಯ ಪವರ್ ಎಲ್ಲವೂ ಕದಿರೇಶ್ ಪತ್ನಿ ರೇಖಾಗೆ ಸಿಕ್ಕಿತ್ತು. ಪವರ್ ಸಿಕ್ಕ ಬಳಿಕ ರೇಖಾ ಕದಿರೇಶ್ ಕುಟುಂಬವನ್ನು ಬಿಟ್ಟು ಒಂಟಿಯಾಗಿದ್ದರು. ಕದಿರೇಶ್ ಕುಟುಂಬ ಹಾಗು ಕದಿರೇಶ್ ಜೊತೆಗಿದ್ದ ಯಾರಿಗೂ ಸೊಪ್ಪು ಹಾಕುತ್ತಿರಲಿಲ್ಲ. ಕದಿರೇಶ್ ಜೊತೆಗಿದ್ದ ಯಾರಿಗೂ ಹಣಕಾಸಿನ ಸಹಾಯ ಮಾಡುತ್ತಿರಲಿಲ್ಲ.

ರೇಖಾ ಬಿಜೆಪಿ ಹಿರಿಯ ನಾಯಕರ ಜೊತೆಗೆ ಒಳ್ಳೆಯ ಸಂಪರ್ಕ ಹೊಂದಿದ್ದರು. ಇದು ಎಲ್ಲರಿಗೂ ಕಂಗೆಡುವಂತೆ ಮಾಡಿತ್ತು. ಕದಿರೇಶ್ ತಮ್ಮ ಸುರೇಶ್ ಹಾಗೂ ಅಕ್ಕ ಮಾಲ ಕುಟುಂಬದ ಕಷ್ಟಗಳಿಗೆ ರೇಖಾ ಸಹಾಯ ಮಾಡಿರಲಿಲ್ಲ. ಹೀಗಾಗಿ ಕುಟುಂಬಸ್ಥರಿಗೆ ರೇಖಾ ಮೇಲೆ ಬೇಸರವಿತ್ತು. ಅಲ್ಲದೆ ಮುಂದಿನ ಚುನಾವಣೆಗೆ ನಿಲ್ಲುವ ಪ್ಲಾನ್ ಮಾಡಿಕೊಂಡಿದ್ದ ರೇಖಾ ಚುನಾವಣೆಯಲ್ಲಿ ಗೆದ್ದರೆ ಮತ್ತಷ್ಟು ದೂರವಾಗಿ ಒಬ್ಬಳೇ ಬೆಳೆದುಬಿಡುತ್ತಾಳೆ ಎಂಬ ಕಿಚ್ಚು ಕುಟುಂಬಸ್ಥರಲಿತ್ತು. ಇದೇ ಕಾರಣಕ್ಕೆ ಕದಿರೇಶ್ ಕುಟುಂಬ ಹಾಗೂ ಕದಿರೇಶ್ ಅಪ್ತ ಹುಡುಗರಿಗೆ ರೇಖಾ ವಿರುದ್ಧ ಕೋಪ ಇತ್ತು.

ಎಲ್ಲರೂ ಬೇಸತ್ತಿ ರೇಖಾ ಇದ್ದರೆ ಅವಳು ಬೆಳೆದು ಯಾರ ಕೈಗೂ ಸಿಗದಂತೆ ಅಗ್ತಾಳೆ. ಅವಳನ್ನೆ ಮುಗಿಸಿ ಬಿಡುವ ಎಂದು ಪ್ಲಾನ್ ಮಾಡಿದ್ದಾರೆ. ಕದಿರೇಶ್ ತಮ್ಮ ಸುರೇಶ್, ಅಕ್ಕ ಮಾಲ, ಮಾಲ ಪುತ್ರ ಅರೂಳ್ ಸೇರಿ ರೇಖಾ ಕೊಲೆಗೆ ಪ್ಲಾನ್ ಮಾಡಿದ್ದಾರೆ. ಬಳಿಕ ಪೀಟರ್ ಮತ್ತು ಸೂರಿ ಎಮಬ ಇಬ್ಬರು ಕೃತ್ಯ ಎಸಗಿದ್ದಾರೆ. ಸದ್ಯ ಕದಿರೇಶ್ ಅಕ್ಕ ಮಾಲ, ಮಾಲ ಮಗ ಅರೂಳ್ ಹಾಗು ಕದಿರೇಶ್ ತಮ್ಮ ಸುರೇಶ್ನನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಕೊಲೆ ಮಾಡಿದ ಪೀಟರ್ ಹಾಗೂ ಸೂರ್ಯನಿಗಾಗಿ ಹುಡುಕಾಟ ಮುಂದುವರೆದಿದೆ.

ಇದನ್ನೂ ಓದಿ: Rekha Kadiresh ಖಾಕಿ ತನಿಖೆಯಲ್ಲಿ ಬಯಲಾಯ್ತಾ ರೇಖಾ ಕದಿರೇಶ್ ಹತ್ಯೆ ಹಿಂದಿನ ಕಾರಣ? ಇಬ್ಬರ ಮೇಲೆ ಅನುಮಾನ

Follow Us
ಕೇದಾರನಾಥಕ್ಕೆ ಹೊರಟಿದ್ದೀರಾ? ಮೊದಲ ದಿನವೇ ಭಕ್ತಸಾಗರದಿಂದ ಕಾಲ್ತುಳಿತ
ಕೇದಾರನಾಥಕ್ಕೆ ಹೊರಟಿದ್ದೀರಾ? ಮೊದಲ ದಿನವೇ ಭಕ್ತಸಾಗರದಿಂದ ಕಾಲ್ತುಳಿತ
20 ಎಸೆತಗಳಲ್ಲಿ ಅರ್ಧಶತಕ ಚಚ್ಚಿದ ದೇವದತ್ ಪಡಿಕ್ಕಲ್
20 ಎಸೆತಗಳಲ್ಲಿ ಅರ್ಧಶತಕ ಚಚ್ಚಿದ ದೇವದತ್ ಪಡಿಕ್ಕಲ್
ಒಳಮೀಸಲಾತಿ ಯಾರಿಗೆ ಎಷ್ಟು? ಹೇಗೆ ಜಾರಿಯಾಗುತ್ತೆ? ವಿವರಿಸಿದ ಸಚಿವ ಮಹದೇವಪ್ಪ
ಒಳಮೀಸಲಾತಿ ಯಾರಿಗೆ ಎಷ್ಟು? ಹೇಗೆ ಜಾರಿಯಾಗುತ್ತೆ? ವಿವರಿಸಿದ ಸಚಿವ ಮಹದೇವಪ್ಪ
ಸಿಮೆಂಟ್ ಟ್ಯಾಂಕರ್, ಬಸ್ ಹಾಗೂ ಆಟೋ ನಡುವೆ ಸರಣಿ ಅಪಘಾತ: 10 ಜನರಿಗೆ ಗಾಯ
ಸಿಮೆಂಟ್ ಟ್ಯಾಂಕರ್, ಬಸ್ ಹಾಗೂ ಆಟೋ ನಡುವೆ ಸರಣಿ ಅಪಘಾತ: 10 ಜನರಿಗೆ ಗಾಯ
ಬಿಜೆಪಿಗೆ ಸೇರ್ಪಡೆಯಾದ ರಾಘವ್ ಚಡ್ಡಾ, ಸಂದೀಪ್ ಪಾಠಕ್, ಅಶೋಕ್ ಮಿತ್ತಲ್
ಬಿಜೆಪಿಗೆ ಸೇರ್ಪಡೆಯಾದ ರಾಘವ್ ಚಡ್ಡಾ, ಸಂದೀಪ್ ಪಾಠಕ್, ಅಶೋಕ್ ಮಿತ್ತಲ್
ರಾಜ್​ಕುಮಾರ್ ಹುಟ್ಟುಹಬ್ಬ: ಅಣ್ಣಾವ್ರ ಸಮಾಧಿಗೆ ಪೂಜೆ ಸಲ್ಲಿಸಿದ ಅಶ್ವಿನಿ
ರಾಜ್​ಕುಮಾರ್ ಹುಟ್ಟುಹಬ್ಬ: ಅಣ್ಣಾವ್ರ ಸಮಾಧಿಗೆ ಪೂಜೆ ಸಲ್ಲಿಸಿದ ಅಶ್ವಿನಿ
ಗುಡ್​ ನ್ಯೂಸ್: 56,400 ಹುದ್ದೆಗಳ ನೇಮಕಾತಿಗೆ ಗ್ರೀನ್ ಸಿಗ್ನಲ್
ಗುಡ್​ ನ್ಯೂಸ್: 56,400 ಹುದ್ದೆಗಳ ನೇಮಕಾತಿಗೆ ಗ್ರೀನ್ ಸಿಗ್ನಲ್
ಒಳ ಮೀಸಲಾತಿ ಗೊಂದಲಕ್ಕೆ ತೆರೆ ಎಳೆದ ರಾಜ್ಯ ಸರ್ಕಾರ
ಒಳ ಮೀಸಲಾತಿ ಗೊಂದಲಕ್ಕೆ ತೆರೆ ಎಳೆದ ರಾಜ್ಯ ಸರ್ಕಾರ
ಬಾಗಲಕೋಟೆ ವಿವಿ ಘಟಿಕೋತ್ಸವ: ರೈತನ ಮಗಳಿಗೆ ಗೋಲ್ಡ್​​ ಮೆಡಲ್
ಬಾಗಲಕೋಟೆ ವಿವಿ ಘಟಿಕೋತ್ಸವ: ರೈತನ ಮಗಳಿಗೆ ಗೋಲ್ಡ್​​ ಮೆಡಲ್
BSNL ಸಿಬ್ಬಂದಿ ಸೋಗಿನಲ್ಲಿ ಕಳ್ಳತನ ಮಾಡುತ್ತಿದ್ದ ಅಂತಾರಾಜ್ಯ ಗ್ಯಾಂಗ್ ಬಂಧನ
BSNL ಸಿಬ್ಬಂದಿ ಸೋಗಿನಲ್ಲಿ ಕಳ್ಳತನ ಮಾಡುತ್ತಿದ್ದ ಅಂತಾರಾಜ್ಯ ಗ್ಯಾಂಗ್ ಬಂಧನ