AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬೆಂಗಳೂರು: ತಮಿಳುನಾಡಿಗೆ ಕಾವೇರಿ ನದಿ ನೀರು ಬಿಡುಗಡೆ; ರಾಜ್ಯದ ಎಲ್ಲಾ ಸಂಸದರು ನರಸತ್ತವರು ಎಂದ ಕರವೇ ರಾಜ್ಯಾಧ್ಯಕ್ಷ ನಾರಾಯಣ ಗೌಡ

ಸಿದ್ದರಾಮಯ್ಯ ಈ ಸಮಯದಲ್ಲಿ ಕಠಿಣ ನಿರ್ಧಾರ ತೆಗೆದುಕೊಳ್ಳಬೇಕು. ನಮ್ಮ ಎಂಪಿಗಳಿಗೆ ನಾಚಿಕೆ ಆಗಬೇಕು ನರಸತ್ತಂತೆ ಕುಳಿತುಕೊಂಡಿದ್ದಾರೆ. ಒಬ್ಬ ಎಂಪಿ‌ ಮಾತಾಡ್ತಿಲ್ಲ ಬಿಜೆಪಿಯಿಂದ 25 ಎಂಪಿಗಳಿದ್ದಾರೆ. ಎಲ್ಲಾ ಎಂಪಿಗಳು ಕೂಡ ಯಾರು ಮಾತಾಡ್ತಿಲ್ಲ, ಪ್ರಧಾನಿಗಳನ್ನು ಭೇಟಿ ಮಾಡ್ತಿಲ್ಲ. ರಣಹೇಡಿ ಎಂಪಿಗಳು ಸುಮ್ಮನೆ ಕುಳಿತುಕೊಂಡಿದ್ದಾರೆ ಎಂದು ಕರವೇ ರಾಜ್ಯಾಧ್ಯಕ್ಷ ನಾರಾಯಣ ಗೌಡ ಅವರು ಕಿಡಿಕಾರಿದ್ದಾರೆ.

ಬೆಂಗಳೂರು: ತಮಿಳುನಾಡಿಗೆ ಕಾವೇರಿ ನದಿ ನೀರು ಬಿಡುಗಡೆ; ರಾಜ್ಯದ ಎಲ್ಲಾ ಸಂಸದರು ನರಸತ್ತವರು ಎಂದ ಕರವೇ ರಾಜ್ಯಾಧ್ಯಕ್ಷ ನಾರಾಯಣ ಗೌಡ
ಕರವೇ ರಾಜ್ಯಾಧ್ಯಕ್ಷ ನಾರಾಯಣ ಗೌಡ
Kiran Surya
| Edited By: |

Updated on:Sep 13, 2023 | 7:34 PM

Share

ಬೆಂಗಳೂರು, ಸೆ.13: ತಮಿಳುನಾಡಿಗೆ ಕಾವೇರಿ (Cauvery)ನದಿ ನೀರು ಬಿಡುಗಡೆ ವಿಚಾರ ಈಗಾಗಲೇ ರಾಜ್ಯದ ಹಲವೆಡೆ ಪ್ರತಿಭಟನೆಗಳು ನಡೆಯುತ್ತಿದೆ. ಅದರಂತೆ ಈ ಕುರಿತು ‘ರಾಜ್ಯದ ಎಲ್ಲಾ ಸಂಸದರು ನರಸತ್ತವರು, ಸಂಸದರ ಮನೆಗೆ ಕರವೇ ಕಾರ್ಯಕರ್ತರನ್ನು ನುಗ್ಗಿಸುತ್ತೇವೆ ಎಂದು ಕರವೇ ರಾಜ್ಯಾಧ್ಯಕ್ಷ (karave president)ನಾರಾಯಣ ಗೌಡ ಅವರು ಕಿಡಿಕಾರಿದ್ದಾರೆ. ಬೆಂಗಳೂರಿನಲ್ಲಿ ಮಾತನಾಡಿದ ಅವರು ‘ಕಾವೇರಿ ನದಿ ನೀರು ವಿಚಾರದಲ್ಲಿ ನಾವು ಭುಗಿಲೇಳಬೇಕಿದೆ. ಮತ್ತೆ 5 ಸಾವಿರ ಕ್ಯೂಸೆಕ್ ನೀರು ಬಿಡಬೇಕೆಂದು ಆದೇಶವಿದ್ದು, ನಾವು ಈ ಆದೇಶವನ್ನು ಧಿಕ್ಕರಿಸುತ್ತೇವೆ ಎಂದರು.

‘ನಮ್ಮಲ್ಲಿ ನೀರಿಲ್ಲ, ಇಂತಹ ಪರಿಸ್ಥಿತಿಯಲ್ಲಿ ಧಿಮಾಕು ಮಾಡುತ್ತಿದ್ದಾರೆ. ದೆಹಲಿಯಲ್ಲಿ ಕುಳಿತು ಧಿಮಾಕು ಮಾಡಿಕೊಂಡು ನೀರು ಕೊಡಿ ಅಂತಾರೆ. ಹೀಗೆ ಹೇಳುತ್ತಿದ್ದರೆ ತಮಿಳುನಾಡಿಗೆ ನೀರು ಕೊಡಲು ಹೇಗೆ ಸಾಧ್ಯ. ರಾಜ್ಯ ಸರ್ಕಾರದ ನಿಲುವನ್ನು ಈವರೆಗೂ ಬೆಂಬಲಿಸಿದ್ದೇವೆ. ಆದರೆ, ಈಗ ರಾಜ್ಯ ಸರ್ಕಾರದ ನಿಲುವನ್ನು ಬೆಂಬಲಿಸುವುದಿಲ್ಲ. ರಾಜ್ಯದಲ್ಲಿ ಕರ್ನಾಟಕ ರಕ್ಷಣಾ ವೇದಿಕೆ ಭುಗಿಲೇಳುತ್ತದೆ ಎಂದರು.

ಇದನ್ನೂ ಓದಿ:ಕಾವೇರಿ ನದಿ ನೀರು ಸಂಕಷ್ಟ ಚರ್ಚಿಸಲು ಸರ್ವಪಕ್ಷ ಸಭೆ ಕರೆದಿರುವ ಸಿದ್ದರಾಮಯ್ಯ, ಹರಿಪ್ರಸಾದ್ ಬಗ್ಗೆ ಕಾಮೆಂಟ್ ಮಾಡಲ್ಲ ಎಂದರು!

ಏನಾದರೂ ಬೇಕಾದರೂ ಆಗಲಿ, ನಮ್ಮ ‌ಮೇಲೆ ಲಾಠಿ ಚಾರ್ಜ್ ಆಗಲಿ, ಫೈರ್ ಮಾಡಿ, ಜೈಲಿಗೆ ಹಾಕಿದ್ರು ಅಷ್ಟೇ ನಾವು ಯಾವತ್ತೂ ಹೆದರಲ್ಲ, ಹೆದರುವುದು ಇಲ್ಲ. ಕಾವೇರಿ ಕನ್ನಡಿಗರ ಜೀವನದಿ ಅದರ ರಕ್ಷಣೆಗಾಗಿ ನಾವು ಏನು ಬೇಕಾದರೂ ಮಾಡಲು ತಯಾರಿದ್ದೇವೆ. ಮುಂದಿನ ಹೋರಾಟಕ್ಕಾಗಿ ಇಂದು ಗೋಲ್ಡ್ ಫಿಂಚ್ ಹೋಟೆಲ್​ನಲ್ಲಿ ಸಭೆ ಕರೆದಿದ್ದೇವೆ. 29 ರಿಂದ ಸೆಪ್ಟೆಂಬರ್ 12 ರ ವರೆಗೆ ಪ್ರತಿದಿನ ಐದು ಸಾವಿರ ಕ್ಯೂಸೆಕ್ಸ್ ನೀರನ್ನು ತಮಿಳುನಾಡಿಗೆ ಬಿಟ್ಟಿದ್ದೆ, ನಾವು ಯಾರು ಸಹ ಅದಕ್ಕೆ ಧ್ವನಿ ಎತ್ತಲಿಲ್ಲ. ಇವತ್ತು ಮತ್ತೆ ಐದು ಸಾವಿರ ಕ್ಯೂಸೆಕ್ ‌ನೀರನ್ನು ಬಿಡಲೇಬೇಕು ಅಂತ ಹೇಳಿ ಆದೇಶ ಮಾಡುವುದಾದರೇ ನಾವು ದಿಕ್ಕರಿಸುತ್ತೇವೆ ಎಂದು ಹೇಳಿದರು.

ಸುಪ್ರೀಂ ಕೋರ್ಟ್ ಇರಬಹುದು, ಕಾವೇರಿ ನಿಯಂತ್ರಣ ಮಂಡಳಿ ಇರಬಹುದು ನಾವು ಅದನ್ನು ಧಿಕ್ಕರಿಸುತ್ತಿವಿ. ರೈತರಿಗೆ ನೀರಿಲ್ಲ, ಬೆಂಗಳೂರಿನ ಜನರಿಗೆ ನೀರಿಲ್ಲ. ಇಂತಹ ಪರಿಸ್ಥಿತಿಯಲ್ಲಿ ದೆಹಲಿಯಲ್ಲಿ ಕುಳಿತುಕೊಂಡು ಧಿಮಾಕು ಮಾಡಿಕೊಂಡು ನೀರು ನೀರು ಕೊಡಿ ಅಂತೇಳಿ ಹೇಳುತ್ತಿದ್ದರೆ ನೀರು ಕೊಡಲು ಹೇಗೆ ಸಾಧ್ಯ. ನೀವೇನಾದ್ರು ಕಾವೇರಿ ‌ನೀರು ನಿರ್ವಹಣಾ ಮಂಡಳಿ ಆದೇಶವನ್ನು ಪಾಲಿಸಿ ನೀರು ಬಿಟ್ಟರೆ, ಕರ್ನಾಟಕ ರಾಜ್ಯದಲ್ಲಿ ಕರ್ನಾಟಕ ರಕ್ಷಣಾ ವೇದಿಕೆ ಭುಗಿಲೇಳುತ್ತದೆ. ಶನಿವಾರ ಜೈಲ್ ಬರೋ ಚಳವಳಿ ಮಾಡ್ತಿವಿ, ಎಲ್ಲಾ ಕಡೆಗಳಲ್ಲಿ ಮುತ್ತಿಗೆ ಹಾಕ್ತಿವಿ. ಎಷ್ಟು ಜನರನ್ನು ಜೈಲಿಗೆ ಈ ಸರ್ಕಾರ ಹಾಕುತ್ತದೋ ಹಾಕಲಿ ಎಂದರು.

ಇದನ್ನೂ ಓದಿ:ಕಾವೇರಿ ನದಿ ನೀರು ವಿವಾದ: ಇಂದು ತುರ್ತು ಸಭೆ ಕರೆದ ಸಿದ್ದರಾಮಯ್ಯ, ಪ್ರತಿಪಕ್ಷಗಳ ನಾಯಕರಿಗೂ ಆಹ್ವಾನ

ಸಿದ್ದರಾಮಯ್ಯ ಈ ಸಮಯದಲ್ಲಿ ಕಠಿಣ ನಿರ್ಧಾರ ತೆಗೆದುಕೊಳ್ಳಬೇಕು. ನಮ್ಮ ಎಂಪಿಗಳಿಗೆ ನಾಚಿಕೆ ಆಗಬೇಕು ನರಸತ್ತಂತೆ ಕುಳಿತುಕೊಂಡಿದ್ದಾರೆ. ಒಬ್ಬ ಎಂಪಿ‌ ಮಾತಾಡ್ತಿಲ್ಲ ಬಿಜೆಪಿಯಿಂದ 25 ಎಂಪಿಗಳಿದ್ದಾರೆ. ಎಲ್ಲಾ ಎಂಪಿಗಳು ಕೂಡ ಯಾರು ಮಾತಾಡ್ತಿಲ್ಲ, ಪ್ರಧಾನಿಗಳನ್ನು ಭೇಟಿ ಮಾಡ್ತಿಲ್ಲ. ರಣಹೇಡಿ ಎಂಪಿಗಳು ಸುಮ್ಮನೆ ಕುಳಿತುಕೊಂಡಿದ್ದಾರೆ. ನೀವು ಬಾಯಿ ಬಿಡಬೇಕು. ಕರ್ನಾಟಕ ಎಂಪಿಗಳ ನಿಯೋಗ ಹೋಗಿ ಪ್ರಧಾನಿ ಭೇಟಿ ಮಾಡಿ. ಕರ್ನಾಟಕ ಕಾವೇರಿಗಾಗಿ ಎಲ್ಲರೂ ಒಂದಾಗಿ‌ ನಾಯಿ ನರಿಗಳಂತೆ‌ ಕಚ್ಚಾಡುವುದು ಬೇಡ ಎಂದು ಹೇಳಿದರು.

ಮತ್ತಷ್ಟು ರಾಜ್ಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 7:33 pm, Wed, 13 September 23

Follow Us
SSLC Results 2026: ಹಿಂದಿ ವಿಷಯಕ್ಕೆ ಗ್ರೇಡೋ, ಅಂಕನೋ? ಗೊಂದಲಗಳಿಗೆ ತೆರೆ
SSLC Results 2026: ಹಿಂದಿ ವಿಷಯಕ್ಕೆ ಗ್ರೇಡೋ, ಅಂಕನೋ? ಗೊಂದಲಗಳಿಗೆ ತೆರೆ
ಅದ್ಭುತ... ಅತ್ಯದ್ಭುತ: ರಿಷಭ್​ ಸ್ಪೈಡಿ ಕ್ಯಾಚ್​ಗೆ ದಂಗಾದ ಪ್ರೇಕ್ಷಕರು
ಅದ್ಭುತ... ಅತ್ಯದ್ಭುತ: ರಿಷಭ್​ ಸ್ಪೈಡಿ ಕ್ಯಾಚ್​ಗೆ ದಂಗಾದ ಪ್ರೇಕ್ಷಕರು
ಮದುವೆ ಸಂಭ್ರಮದಲ್ಲಿ ಕಾರು ಡಿಕ್ಕಿಯಾಗಿ 25 ಅಡಿ ಮೇಲೆ ಹಾರಿದ ಕ್ಯಾಮೆರಾಮನ್
ಮದುವೆ ಸಂಭ್ರಮದಲ್ಲಿ ಕಾರು ಡಿಕ್ಕಿಯಾಗಿ 25 ಅಡಿ ಮೇಲೆ ಹಾರಿದ ಕ್ಯಾಮೆರಾಮನ್
ಅಮರಾವತಿ ಲೈಂಗಿಕ ಹಗರಣದ ಆರೋಪಿಗೆ ನಗರದ ರಸ್ತೆಗಳಲ್ಲಿ ಮೆರವಣಿಗೆ
ಅಮರಾವತಿ ಲೈಂಗಿಕ ಹಗರಣದ ಆರೋಪಿಗೆ ನಗರದ ರಸ್ತೆಗಳಲ್ಲಿ ಮೆರವಣಿಗೆ
ಖಾಲಿ ಕೊಡ ಹಿಡಿದು ಸಚಿವ ತಂಗಡಗಿ ಕಾರಿಗೆ ಮುತ್ತಿಗೆ ಹಾಕಿದ ಮಹಿಳೆಯರು
ಖಾಲಿ ಕೊಡ ಹಿಡಿದು ಸಚಿವ ತಂಗಡಗಿ ಕಾರಿಗೆ ಮುತ್ತಿಗೆ ಹಾಕಿದ ಮಹಿಳೆಯರು
ಬಿಸಿಲಿಗೆ ತತ್ತರ: ಹೆಲ್ಮೆಟ್ ಬದಲು ಸೊಪ್ಪು ಕಟ್ಟಿಕೊಂಡು ಬೈಕ್ ಚಾಲನೆ
ಬಿಸಿಲಿಗೆ ತತ್ತರ: ಹೆಲ್ಮೆಟ್ ಬದಲು ಸೊಪ್ಪು ಕಟ್ಟಿಕೊಂಡು ಬೈಕ್ ಚಾಲನೆ
ವಾರದಲ್ಲಿ ಎರಡನೇ ಭಾರಿ ದರ್ಶನ್ ಭೇಟಿಗೆ ಜೈಲಿಗೆ ಬಂದ ವಿಜಯಲಕ್ಷ್ಮಿ
ವಾರದಲ್ಲಿ ಎರಡನೇ ಭಾರಿ ದರ್ಶನ್ ಭೇಟಿಗೆ ಜೈಲಿಗೆ ಬಂದ ವಿಜಯಲಕ್ಷ್ಮಿ
ಹುಬ್ಬಳ್ಳಿ ಭೀಕರ ಅಪಘಾತ: ಕಾರಿನ ಇಂಜಿನ್ ಒಳಗೆ ಸಿಲುಕಿದ ವ್ಯಕ್ತಿಯ ರುಂಡ
ಹುಬ್ಬಳ್ಳಿ ಭೀಕರ ಅಪಘಾತ: ಕಾರಿನ ಇಂಜಿನ್ ಒಳಗೆ ಸಿಲುಕಿದ ವ್ಯಕ್ತಿಯ ರುಂಡ
ಪ್ರಿಯಕರನನ್ನೇ ಕೊಂದ ಪ್ರಿಯತಮೆ : ಕೊಲೆಯಾದ ಕಿರಣ್ ತಂದೆಯ ಕಣ್ಣೀರ ಮಾತು
ಪ್ರಿಯಕರನನ್ನೇ ಕೊಂದ ಪ್ರಿಯತಮೆ : ಕೊಲೆಯಾದ ಕಿರಣ್ ತಂದೆಯ ಕಣ್ಣೀರ ಮಾತು
ಕುಟುಂಬದ ಆರೋಪಕ್ಕೆ ವೈದ್ಯಕೀಯ ಅಧೀಕ್ಷರು ಹೇಳಿದ್ದೇನು?
ಕುಟುಂಬದ ಆರೋಪಕ್ಕೆ ವೈದ್ಯಕೀಯ ಅಧೀಕ್ಷರು ಹೇಳಿದ್ದೇನು?