AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಹಸಿರು ಮಾರ್ಗದಲ್ಲಿ ಹಳಿ ತಪ್ಪಿದ ರೀ ರೈಲ್ ಸ್ಥಳಾಂತರ; ಮರು ಸಂಚಾರ ಪ್ರಾರಂಭ

ಇದೀಗ ಹಳಿಯನ್ನು ಹೈಡ್ರಾಲಿಕ್ ಕ್ರೇನ್ ಬಳಸಿ ಸ್ಥಳಾಂತರಿಸಲಾಗಿದೆ. ಈ ಹಿನ್ನಲೆ  ಮೆಟ್ರೋ ಮಾರ್ಗದ ಸುರಕ್ಷತೆಯನ್ನು ಪರಿಶೀಲಿಸಿ, ಇದೀಗ ಎಂದಿನಂತೆ ಪ್ರಾರಂಭವಾಗಿದೆ ಎಂದು ಬಿಎಂಆರ್​ಸಿಎಲ್​ ತಿಳಿಸಿದೆ.

ಹಸಿರು ಮಾರ್ಗದಲ್ಲಿ ಹಳಿ ತಪ್ಪಿದ ರೀ ರೈಲ್ ಸ್ಥಳಾಂತರ; ಮರು ಸಂಚಾರ ಪ್ರಾರಂಭ
ಹಸಿರು ಮಾರ್ಗದ ಮೆಟ್ರೋ ಸಂಚಾರ ಆರಂಭ
Kiran Surya
| Edited By: |

Updated on:Oct 03, 2023 | 5:11 PM

Share

ಬೆಂಗಳೂರು, ಅ.03: ಇಂದು(ಅ.03) ಬೆಳಿಗ್ಗೆ ನಮ್ಮ ಮೆಟ್ರೊ (Namma Metro) ಹಸಿರು ಮಾರ್ಗದಲ್ಲಿ ರೀ ರೈಲು ಹಳಿ ತಪ್ಪಿತ್ತು. ಹೌದು, ಮೆಟ್ರೋ ರೈಲುಗಳಲ್ಲಿ ತಾಂತ್ರಿಕ ತೊಂದರೆ ಉಂಟಾದಾಗ ಅದನ್ನು ಸರಿಪಡಿಸಲು ಬಳಸುವ ರೀ ರೈಲು, ರಾಜಾಜಿನಗರ ನಿಲ್ದಾಣದ ಟ್ರ್ಯಾಕ್​ನಲ್ಲಿ ಹಳಿ ತಪ್ಪಿದ್ದು, ಇದೀಗ ಹಳಿಯನ್ನು ಹೈಡ್ರಾಲಿಕ್ ಕ್ರೇನ್ ಬಳಸಿ ಸ್ಥಳಾಂತರಿಸಲಾಗಿದೆ. ಈ ಹಿನ್ನಲೆ  ಮೆಟ್ರೋ ಮಾರ್ಗದ ಸುರಕ್ಷತೆಯನ್ನು ಪರಿಶೀಲಿಸಿ, ಇದೀಗ ಎಂದಿನಂತೆ ಸಂಚಾರ ಪ್ರಾರಂಭವಾಗಿದೆ ಎಂದು ಬಿಎಂಆರ್​ಸಿಎಲ್​ ತಿಳಿಸಿದೆ.

ಕ್ರೇನ್ ಮೂಲಕ ರೀ ರೈಲು ಲಿಫ್ಟಿಂಗ್ ಕಾರ್ಯ ಶುರು ಮಾಡಿದ್ದ ಬಿಎಂಆರ್​ಸಿಎಲ್​

ಹೌದು, ನಾಲ್ಕು‌ ಕಡೆಗೂ ಬೆಲ್ಟ್ ಹಾಕಿ ಬೃಹತ್ ಕ್ರೇನ್ ಮೂಲಕ ನಿಧಾನವಾಗಿ ಮೇಲೆತ್ತಿ, ನಂತರ ಯಶಸ್ವಿಯಾಗಿ ರೀ ರೈಲು ಕೆಳಗೆ ಇಳಿಸಲಾಗಿದೆ. ಆದ್ರೆ, ಈ ರೀತಿಯ ಸಮಸ್ಯೆ ಯಾವತ್ತೂ ಆಗಿರಲಿಲ್ಲ. ರೀ ರೈಲು ರಸ್ತೆ ಮತ್ತು ಟ್ರ್ಯಾಕ್ ಮೇಲೆ ಸಂಚರಿಸುತ್ತೆ. ನಿನ್ನೆ ಟ್ರ್ಯಾಕ್ ಮೇಲೆ ವೀಲ್ ಜಾಮ್ ಆಗಿತ್ತು. ಇದರಿಂದ ಸಮಸ್ಯೆಯಾಗಿತ್ತು. ಇನ್ನು ಘಟನೆ ಕುರಿತು ಮಾತನಾಡಿದ  ‘ಆಪರೇಷನ್ ಆಂಡ್ ಮೆಂಟೇನೆನ್ಸ್ ಎಕ್ಸಿಕ್ಯೂಟಿವ್ ಡೈರೆಕ್ಟರ್ ಶಂಕರ್ ಅವರು ‘ ಇನ್ನು ಅರ್ಧ ಗಂಟೆಯಲ್ಲಿ ಮತ್ತೆ ಎಂದಿನಂತೆ ಮೆಟ್ರೋ ಸಂಚರಿಸುತ್ತೆ. ಸದ್ಯ ಎಲ್ಲಾ ಕ್ಲಿಯರ್ ಆಗಿದ್ದು, ಟ್ರ್ಯಾಕ್ ನಲ್ಲಿ ಯಾವ ಸಮಸ್ಯೆ ಇಲ್ಲ. ರೀ ರೈಲಿನ ಚಕ್ರ ಸಿಲುಕಿದ್ದರಿಂದ ಸಮಸ್ಯೆಯಾಗಿತ್ತು ಎಂದಿದ್ದರು.

ಇದನ್ನೂ ಓದಿ:ಹಸಿರು ಮಾರ್ಗದಲ್ಲಿ ಹಳಿ ತಪ್ಪಿದ ರೀ ರೈಲ್, ಮೆಟ್ರೋ ಪ್ರಯಾಣಿಕರು ಪರದಾಟ, ನಿಲ್ದಾಣದಲ್ಲಿ ಜನವೋ ಜನ

ದೆಹಲಿ ಎಕ್ಸ್ ಪರ್ಟ್ ಗಳ ಜೊತೆ ವರ್ಚುವಲ್  ಸಭೆ ನಡೆಸಿದ್ದ ಇಂಜಿನಿಯರ್ಸ್

ಹೌದು, ಹಳಿ ತಪ್ಪಿದ ರೀ ರೈಲ್ ಸರಿಪಡಿಸಲು ಇಂಜಿನಿಯರ್​ಗಳು ಹರಸಾಹಸ ಪಟ್ಟಿದ್ದು, ಹಳಿ ತಪ್ಪಿರುವ ರೀ ರೈಲ್ ವೆಹಿಕಲ್ ಹಳಿಗೆ ತರುವ ಬಗ್ಗೆ ಹಿರಿಯ ಇಂಜಿನಿಯರ್ ಗಳಿಂದ ಮಾಹಿತಿ ಕೂಡ ಸಂಗ್ರಹಿಸಿದ್ದರು. ಹೇಗೆ ಟ್ರ್ಯಾಕ್ ಗೆ ತರುವುದು ಎನ್ನುವುದರ ಬಗ್ಗೆ ದೆಹಲಿ ಎಕ್ಸ್ ಪರ್ಟ್ ಗಳ ಜೊತೆ ವರ್ಚುವಲ್ ಸಭೆ ನಡೆಸಿ ಸಮಾಲೋಚನೆ ನಡೆಸಲಾಗುತ್ತು. ಇದೀಗ ಯಶಸ್ವಿಯಾಗಿದ್ದು, ಎಂದಿನಂತೆ ಸಂಚಾರ ಆರಂಭವಾಗಿದೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 4:56 pm, Tue, 3 October 23

ಬೈಕ್ ಶೋರೂಂನೊಳಗೆ ನುಗ್ಗಿದ ಕಾಡುಕೋಣ; ಶಾಕಿಂಗ್ ವಿಡಿಯೋ ವೈರಲ್
ಬೈಕ್ ಶೋರೂಂನೊಳಗೆ ನುಗ್ಗಿದ ಕಾಡುಕೋಣ; ಶಾಕಿಂಗ್ ವಿಡಿಯೋ ವೈರಲ್
ಚಕ್ರವರ್ತಿ ಚಂದ್ರಚೂಡ್ ವಿಡಿಯೋ ನೋಡಿ ಅಸಹ್ಯ ಆಯ್ತು: ನಟಿ ಪ್ರಿಯಾ ಹಾಸನ್
ಚಕ್ರವರ್ತಿ ಚಂದ್ರಚೂಡ್ ವಿಡಿಯೋ ನೋಡಿ ಅಸಹ್ಯ ಆಯ್ತು: ನಟಿ ಪ್ರಿಯಾ ಹಾಸನ್
ವಿಪಕ್ಷ ಶಾಸಕರ ಮಾತಿಗೆ ಸಿಎಂ ಸಿದ್ದರಾಮಯ್ಯ ಖಡಕ್ ಉತ್ತರ, ಸದನ ಫುಲ್ ಸೈಲೆಂಟ್
ವಿಪಕ್ಷ ಶಾಸಕರ ಮಾತಿಗೆ ಸಿಎಂ ಸಿದ್ದರಾಮಯ್ಯ ಖಡಕ್ ಉತ್ತರ, ಸದನ ಫುಲ್ ಸೈಲೆಂಟ್
ಟೀ, ಸಿಗರೇಟ್​​ ನೆಪದಲ್ಲಿ ಅಂಗಡಿಗೆ ಬಂದು ಮಾಂಗಲ್ಯ ಸರ ಕದ್ದು ಎಸ್ಕೇಪ್​!
ಟೀ, ಸಿಗರೇಟ್​​ ನೆಪದಲ್ಲಿ ಅಂಗಡಿಗೆ ಬಂದು ಮಾಂಗಲ್ಯ ಸರ ಕದ್ದು ಎಸ್ಕೇಪ್​!
ಕನಕೋತ್ಸವ ವೇದಿಕೆಯಲ್ಲಿ ಗಿಲ್ಲಿ, ಮಂಗ್ಲಿ ಮಸ್ತ್ ಮನರಂಜನೆ; ವಿಡಿಯೋ ನೋಡಿ
ಕನಕೋತ್ಸವ ವೇದಿಕೆಯಲ್ಲಿ ಗಿಲ್ಲಿ, ಮಂಗ್ಲಿ ಮಸ್ತ್ ಮನರಂಜನೆ; ವಿಡಿಯೋ ನೋಡಿ
ರಾಯಲ್ ಸ್ಟ್ರಾಂಗ್ ಅಂತ ಬಿಯರ್ ಇದೆ ಕಣ್ಣಯ್ಯ:ಸದನದಲ್ಲಿ ಅಶೋಕ್‌-ಸಿಎಂ ಕಾಮಿಡಿ
ರಾಯಲ್ ಸ್ಟ್ರಾಂಗ್ ಅಂತ ಬಿಯರ್ ಇದೆ ಕಣ್ಣಯ್ಯ:ಸದನದಲ್ಲಿ ಅಶೋಕ್‌-ಸಿಎಂ ಕಾಮಿಡಿ
ವಿದ್ಯಾರ್ಥಿಗಳಿಗೆ ಶಾಕ್​​: ಸಾಂಬಾರಿನಲ್ಲಿ ನುಸಿ ಹುಳ ಪತ್ತೆ
ವಿದ್ಯಾರ್ಥಿಗಳಿಗೆ ಶಾಕ್​​: ಸಾಂಬಾರಿನಲ್ಲಿ ನುಸಿ ಹುಳ ಪತ್ತೆ
ಮಕ್ಕಳನ್ನು ರಸ್ತೆಗೆ ಬಿಡುವ ಮುನ್ನ ಎಚ್ಚರ!
ಮಕ್ಕಳನ್ನು ರಸ್ತೆಗೆ ಬಿಡುವ ಮುನ್ನ ಎಚ್ಚರ!
ದೇವಸ್ಥಾನದ ಸುಪ್ರಭಾತ ಹಾಡು ಹಾಕಿದಕ್ಕೆ ಮುಸ್ಲಿಂ ಯವಕನಿಂದ ಕಿರಿಕ್
ದೇವಸ್ಥಾನದ ಸುಪ್ರಭಾತ ಹಾಡು ಹಾಕಿದಕ್ಕೆ ಮುಸ್ಲಿಂ ಯವಕನಿಂದ ಕಿರಿಕ್
ನಟ ಯಶ್​ ತಾಯಿ ಜಾಗ ವಿವಾದಕ್ಕೆ ಟ್ವಿಸ್ಟ್​​: ಒಂದೇ ಸೈಟ್​​ಗೆ ಎರಡು ದಾಖಲೆ?
ನಟ ಯಶ್​ ತಾಯಿ ಜಾಗ ವಿವಾದಕ್ಕೆ ಟ್ವಿಸ್ಟ್​​: ಒಂದೇ ಸೈಟ್​​ಗೆ ಎರಡು ದಾಖಲೆ?