AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Republic Day 2022: ಏರೋಪ್ಲೇನ್‌ ಬಳಸಿ ಗಣರಾಜ್ಯೋತ್ಸವದ ಶುಭಾಶಯ ಕೋರಿದ ಕೆನರಾ ಬ್ಯಾಂಕ್‌

ಏರಿಯಲ್‌ ವರ್ಕ್ಸ್‌ ಏರೋ ಎಲ್‌ಎಲ್‌ಪಿ ಸಂಸ್ಥೆಯ ಕ್ಯಾಪ್ಟನ್‌ ಮುರಳಿ ಅವರು ಹಾರಿಸಿದ ವಿಮಾನದಲ್ಲಿ ಜಕ್ಕೂರಿನ ಏರೋಡ್ರೋಂ ನಿಂದ ಫಲಕವನ್ನ ನಗರದ ಜೆ.ಸಿ ರಸ್ತೆ, ಲಾಲ್‌ಬಾಗ್‌ ಹಾಗೂ ಬೆಂಗಳೂರು ದಕ್ಷಿಣ ಭಾಗದಲ್ಲಿ ಸುಮಾರು 2 ಗಂಟೆಗಳ ಕಾಲ ಹಾರಾಟ ನಡೆಸಿ ಗಣರಾಜ್ಯೋತ್ಸವದ ಸಂದೇಶವನ್ನು ಭಿತ್ತರಿಸಿದರು.

Republic Day 2022: ಏರೋಪ್ಲೇನ್‌ ಬಳಸಿ ಗಣರಾಜ್ಯೋತ್ಸವದ ಶುಭಾಶಯ ಕೋರಿದ ಕೆನರಾ ಬ್ಯಾಂಕ್‌
ಏರೋಪ್ಲೇನ್‌ ಬಳಸಿ ಗಣರಾಜ್ಯೋತ್ಸವದ ಶುಭಾಷಯ ಕೋರಿದ ಕೆನರಾ ಬ್ಯಾಂಕ್‌
Follow us
TV9 Web
| Updated By: ಆಯೇಷಾ ಬಾನು

Updated on:Jan 28, 2022 | 1:19 PM

ಬೆಂಗಳೂರು: ಜನವರಿ 26ರಂದು ಇಡೀ ದೇಶ ವಿಜೃಂಭಣೆಯಿಂದ ಗಣರಾಜ್ಯೋತ್ಸವವನ್ನು ಆಚರಿಸಿದೆ. ಈ ನಡುವೆ ಈ ಬಾರಿ ಕೆನರಾ ಬ್ಯಾಂಕ್‌ ಗಣರಾಜ್ಯೋತ್ಸವವನ್ನು ವಿಶೇಷ ರೀತಿಯಲ್ಲಿ ಆಚರಿಸಿದೆ. ಏರೋಪ್ಲೇನ್‌ ಬಳಸಿ ಗಣರಾಜ್ಯೋತ್ಸವದ ಶುಭಾಷಯ ಕೋರಿದೆ. ಬೆಂಗಳೂರಿನಲ್ಲಿ ಏರೋಪ್ಲೇನ್‌ ಮೂಲಕ ಶುಭಾಷಯ ಕೋರಿ ಗಣರಾಜ್ಯೋತ್ಸವವನ್ನು ವಿಶೇಷವಾಗಿ ಆಚರಿಸಲಾಯಿತು. ಕೆನರಾ ಬ್ಯಾಂಕ್‌ ನಗರದ ಜನರಿಗೆ ಗಣರಾಜ್ಯೋತ್ಸವದ ಶುಭಾಷಯಗಳನ್ನು ವಿಶೇಷವಾಗಿ ತಿಳಿಸುವ ಉದ್ದೇಶದಿಂದ ಇಂತಹ ಅಭಿಯಾನವನ್ನು ಕೈಗೊಂಡಿತ್ತು. ಬೆಂಗಳೂರಿನ ಆಕಾರ್‌ ಅಡ್ವರ್‌ ಟೈಸಿಂಗ್‌ ಮತ್ತು ಏರಿಯಲ್‌ ವರ್ಕ್ಸ್‌ ಏರೋ ಎಲ್‌ಎಲ್‌ಪಿ ಸಂಸ್ಥೆಗಳು ಹ್ಯಾಪಿ ರಿಪಬ್ಲಿಕ್‌ ಡೇ ಎನ್ನುವ ಫಲಕವನ್ನ ನಗರದ ವಿವಿಧ ಭಾಗಗಳಲ್ಲಿ ಯಶಸ್ವಿಯಾಗಿ ಭಿತ್ತರಿಸಿದವು. ಏರಿಯಲ್‌ ವರ್ಕ್ಸ್‌ ಏರೋ ಎಲ್‌ಎಲ್‌ಪಿ ಸಂಸ್ಥೆಯ ಕ್ಯಾಪ್ಟನ್‌ ಮುರಳಿ ಅವರು ಹಾರಿಸಿದ ವಿಮಾನದಲ್ಲಿ ಜಕ್ಕೂರಿನ ಏರೋಡ್ರೋಂ ನಿಂದ ಫಲಕವನ್ನ ನಗರದ ಜೆ.ಸಿ ರಸ್ತೆ, ಲಾಲ್‌ಬಾಗ್‌ ಹಾಗೂ ಬೆಂಗಳೂರು ದಕ್ಷಿಣ ಭಾಗದಲ್ಲಿ ಸುಮಾರು 2 ಗಂಟೆಗಳ ಕಾಲ ಹಾರಾಟ ನಡೆಸಿ ಗಣರಾಜ್ಯೋತ್ಸವದ ಸಂದೇಶವನ್ನು ಭಿತ್ತರಿಸಿದರು.

ನಂತರ ಕ್ಯಾಪ್ಟನ್‌ ಮುರಳಿ ಮಾತನಾಡಿ, ರಾಜ್ಯದಲ್ಲಿ ಮೊದಲ ಬಾರಿಗೆ ಇಂತಹ ಜಾಹಿರಾತು ಸೇವೆಯನ್ನ ಒದಗಿಸುತ್ತಿರುವುದು ಸಂತಸದ ಸಂಗತಿಯಾಗಿದೆ. ನಮ್ಮ ಸಂಸ್ಥೆ ಏರಿಯಲ್‌ ವರ್ಕ್ಸ್‌ ಏರೋ ಎಲ್‌ಎಲ್‌ಪಿ, ಆಕಾರ್‌ ಅಡ್ವರ್‌ ಟೈಸಿಂಗ್‌ ಜೊತೆಯಾಗಿ ರಾಜ್ಯದ ಜನರಿಗೆ ಈ ವಿಶೇಷ ಸೇವೆಯನ್ನು ಪ್ರಾರಂಭಿಸಲಾಗಿದೆ. ಆಕಾಶದಲ್ಲಿ ಸುತ್ತುತ್ತಾ ಪ್ರೀತಿಯ ಸಂದೇಶಗಳನ್ನು ಪ್ರೀತಿಪಾತ್ರರಿಗೆ ತಲುಪಿಸುವ ಸೇವೆ ಇದಾಗಿದೆ. ಅಲ್ಲದೇ, ಸಂಸ್ಥೆಯ ಬಗ್ಗೆ, ಜನರಿಗೆ ಸಂದೇಶಗಳನ್ನು ಒದಗಿಸುವಂತಹ, ರಾಜಕೀಯ ವಿಷಯಗಳನ್ನು ಬಿತ್ತರಿಸುವಂತಹ ಜಾಹೀರಾತುಗಳನ್ನು ಈ ಸೇವೆಯ ಮೂಲಕ ಬಿತ್ತರಿಸಬಹುದಾಗಿದೆ ಎಂದು ಹೇಳಿದರು.

ದೇಶದ ಮೂರನೇ ದೊಡ್ಡ ಪಿಎಸ್‌ಯು ಬ್ಯಾಂಕ್‌ ಆಗಿರುವ ಕೆನರಾ ಬ್ಯಾಂಕ್‌ ಮೊದಲಿನಿಂದಲೂ ಹೊಸತನದ ಮಾಧ್ಯಮವನ್ನು ಅಳವಡಿಸಿಕೊಳ್ಳುವಲ್ಲಿ ಮುಂಚೂಣಿಯಲ್ಲಿದೆ. ಏರೋಪ್ಲೇನ್‌ ಮೂಲಕ ವಿಶೇಷವಾಗಿ ಶುಭಾಷಯ ತಿಳಿಸುವ ನೂತನ ವಿಧಾನವನ್ನು ಬಳಸಿಕೊಳ್ಳುವ ಮೂಲಕ ಮತ್ತೊಮ್ಮೆ ವಿಶೇಷ ಮೆರೆಯಿತು.

ವಿಮಾನದ ಮೂಲಕ ಆಕಾಶದಲ್ಲಿ ಜಾಹೀರಾತು ನೀಡುವುದು ಬಹಳ ಪರಿಣಾಮಕಾರಿ ಎನ್ನುವುದು ಸಂಶೋಧನೆಗಳಿಂದ ತಿಳಿದುಬಂದಿದೆ. ಜಾಹೀರಾತುಗಳನ್ನ ಏರೋಪ್ಲೇನ್‌ನಿಂದ ಬಿತ್ತರಿಸುವುದು ಅಲ್ಲದೆ ವೈಯಕ್ತಿಕವಾದ ಸಂದೇಶ ಒಳಗೊಂಡ ಬ್ಯಾನರ್‌ಗಳನ್ನು ಈ ಸೇವೆಯ ಮೂಲಕ ಪ್ರದರ್ಶಿಸಬಹುದಾಗಿದೆ. ನಮ್ಮ ದೇಶದ 73 ನೇ ಗಣರಾಜ್ಯೋತ್ಸವದ ಶುಭಾಷಯಗಳನ್ನು ತಿಳಿಸುವ ಅತ್ಯಂತ ಮಹತ್ವದ ದಿನದ ಅಭಿಯಾನಕ್ಕೆ ಏರಿಯಲ್‌ ಜಾಹೀರಾತು ಮಾಧ್ಯಮವನ್ನು ಕೆನರಾ ಬ್ಯಾಂಕ್‌ ಬಳಸಿಕೊಂಡಿದ್ದು ಬಹಳ ಸಂತಸದ ವಿಷಯವಾಗಿದೆ ಎಂದು ಆಕಾರ್‌ ಅಡ್ವರ್ಟೈಸಿಂಗ್‌ನ ಸಿಇಓ ಶರಣ್‌ ಮಖಿಜಾ ತಿಳಿಸಿದರು.

ಇದನ್ನೂ ಓದಿ:  ಕಡು ಬಡತನದಲ್ಲೂ ಅಪ್ಪುಗಾಗಿ ಅದ್ದೂರಿ ಕಾರ್ಯಕ್ರಮ; ಮಗನಿಗೆ ಪುನೀತ್​ ಎಂದು ನಾಮಕರಣ

Published On - 10:04 am, Thu, 27 January 22

ಟೇಕಾಫ್​​ನಿಂದ ಪತನದವರೆಗೆ; ಏರ್ ಇಂಡಿಯಾ ವಿಮಾನದ ಕೊನೆಯ ಕ್ಷಣಗಳಿವು
ಟೇಕಾಫ್​​ನಿಂದ ಪತನದವರೆಗೆ; ಏರ್ ಇಂಡಿಯಾ ವಿಮಾನದ ಕೊನೆಯ ಕ್ಷಣಗಳಿವು
ಊಟಕ್ಕೆ ಕುಳಿತ ವೈದ್ಯಕೀಯ ವಿದ್ಯಾರ್ಥಿಗಳ ಪ್ರಾಣವನ್ನೇ ಬಲಿ ಪಡೆದ ವಿಮಾನ
ಊಟಕ್ಕೆ ಕುಳಿತ ವೈದ್ಯಕೀಯ ವಿದ್ಯಾರ್ಥಿಗಳ ಪ್ರಾಣವನ್ನೇ ಬಲಿ ಪಡೆದ ವಿಮಾನ
ತಕ್ಷಣ ಆಸ್ಪತ್ರೆಗೆ ಕರೆದುಕೊಂಡ ಹೋದ್ರೂ ಕಾಂತಾರ ಸಿನಿಮಾದ ನಟ ಬದುಕಲಿಲ್ಲ
ತಕ್ಷಣ ಆಸ್ಪತ್ರೆಗೆ ಕರೆದುಕೊಂಡ ಹೋದ್ರೂ ಕಾಂತಾರ ಸಿನಿಮಾದ ನಟ ಬದುಕಲಿಲ್ಲ
ವಿಮಾನ ಅಪಘಾತದಲ್ಲಿ ಪವಾಡದಂತೆ ಬದುಕುಳಿದ ಒಬ್ಬ ವ್ಯಕ್ತಿ!
ವಿಮಾನ ಅಪಘಾತದಲ್ಲಿ ಪವಾಡದಂತೆ ಬದುಕುಳಿದ ಒಬ್ಬ ವ್ಯಕ್ತಿ!
ಅಹಮದಾಬಾದ್​ನಲ್ಲಿ ವಿಮಾನ ಅಪಘಾತದ ಸ್ಥಳಕ್ಕೆ ಭೇಟಿ ನೀಡಿದ ಅಮಿತ್ ಶಾ
ಅಹಮದಾಬಾದ್​ನಲ್ಲಿ ವಿಮಾನ ಅಪಘಾತದ ಸ್ಥಳಕ್ಕೆ ಭೇಟಿ ನೀಡಿದ ಅಮಿತ್ ಶಾ
ಕಿರಣ್ ರಾಜ್ ಜೀವನದ ‘ಕರ್ಣ’ ಯಾರು? ಅವರೇ ಕೊಟ್ಟಿದ್ದಾರೆ ಉತ್ತರ
ಕಿರಣ್ ರಾಜ್ ಜೀವನದ ‘ಕರ್ಣ’ ಯಾರು? ಅವರೇ ಕೊಟ್ಟಿದ್ದಾರೆ ಉತ್ತರ
ವಿಮಾನದಲ್ಲಿ ಪ್ರಯಾಣಿಸುತ್ತಿದ್ದವರೆಲ್ಲ ಸತ್ತಿರುವ ಶಂಕೆಯಿದೆ: ಪರಮೇಶ್ವರ್
ವಿಮಾನದಲ್ಲಿ ಪ್ರಯಾಣಿಸುತ್ತಿದ್ದವರೆಲ್ಲ ಸತ್ತಿರುವ ಶಂಕೆಯಿದೆ: ಪರಮೇಶ್ವರ್
ದುರಂತದಲ್ಲಿ ಮಡಿದವರು ಭಾರತೀಯರು; ಕನ್ನಡ, ತೆಲುಗು ತಾರತಮ್ಯ ಬೇಡ: ಶಿವಕುಮಾರ್
ದುರಂತದಲ್ಲಿ ಮಡಿದವರು ಭಾರತೀಯರು; ಕನ್ನಡ, ತೆಲುಗು ತಾರತಮ್ಯ ಬೇಡ: ಶಿವಕುಮಾರ್
ಏರ್ ಇಂಡಿಯಾ ವಿಮಾನ ಪತನವಾದ ಜಾಗದಲ್ಲಿ ಬಿದ್ದ ಪ್ರಯಾಣಿಕರ ಲಗೇಜ್ ರಾಶಿ
ಏರ್ ಇಂಡಿಯಾ ವಿಮಾನ ಪತನವಾದ ಜಾಗದಲ್ಲಿ ಬಿದ್ದ ಪ್ರಯಾಣಿಕರ ಲಗೇಜ್ ರಾಶಿ
ಚಾಲಕನ ಹುಚ್ಚು ಸಾಹಸ: ಹಳ್ಳದಲ್ಲಿ ಸಿಲುಕಿದ ಜನರಿದ್ದ ಟ್ರ್ಯಾಕ್ಟರ್
ಚಾಲಕನ ಹುಚ್ಚು ಸಾಹಸ: ಹಳ್ಳದಲ್ಲಿ ಸಿಲುಕಿದ ಜನರಿದ್ದ ಟ್ರ್ಯಾಕ್ಟರ್