AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Namma Metro: ನಮ್ಮ ಮೆಟ್ರೋಗೆ ಬಸವೇಶ್ವರ ಮೆಟ್ರೋ ಅಂತ ಹೆಸರಿಡಲು‌ ಸಿಎಂ ಬಳಿ‌ ಚರ್ಚಿಸಿ ತೀರ್ಮಾನ; ಎಂಬಿ ಪಾಟೀಲ್​​

ವಿಜಯಪುರ ಜಿಲ್ಲೆ ಮೊದಲು ಬಿಜಾಪುರ ಜಿಲ್ಲೆ ಆಗಿತ್ತು. ಬಸವೇಶ್ವರ ಜಿಲ್ಲೆಯಾಗಲಿ ಅದರಲ್ಲಿ‌ ತಪ್ಪೇನಿಲ್ಲ. ಸಿಎಂ ಜೊತೆ ಚರ್ಚೆ ಮಾಡಿ ಸೂಕ್ತ ನಿರ್ಧಾರ ತೆಗೆದುಕೊಳ್ಳುತ್ತೇವೆ. ನಮ್ಮ ನಾಡು ಬಸವ ನಾಡು, ಬಸವ ಸಂಸ್ಕೃತಿ ಆಗಬೇಕು. ಈ ಮಾತನ್ನು ಹಲವುಬಾರಿ ಹೇಳಿದ್ದೇವೆ ಎಂದು ಸಚಿವ ಎಂಬಿ ಪಾಟೀಲ್​ ಹೇಳಿದರು.

Namma Metro: ನಮ್ಮ ಮೆಟ್ರೋಗೆ ಬಸವೇಶ್ವರ ಮೆಟ್ರೋ ಅಂತ ಹೆಸರಿಡಲು‌ ಸಿಎಂ ಬಳಿ‌ ಚರ್ಚಿಸಿ ತೀರ್ಮಾನ; ಎಂಬಿ ಪಾಟೀಲ್​​
ಸಚಿವ ಎಂಬಿ ಪಾಟೀಲ್​
Anil Kalkere
| Edited By: |

Updated on:Oct 30, 2023 | 12:59 PM

Share

ಬೆಂಗಳೂರು ಅ.27: ನಮ್ಮ ಮೆಟ್ರೋಗೆ (Namma Metro) ಬಸವೇಶ್ವರ ಮೆಟ್ರೋ (Basaveshwara Metro) ಎಂದು ಹೆಸರಿಡಲು‌ ಮನವಿ ಬಂದಿದೆ. ಈ ಬಗ್ಗೆ ಸಿಎಂ ಬಳಿ‌ ಚರ್ಚಿಸಿ ತೀರ್ಮಾನ ಕೈಗೊಳ್ಳಲಾಗುತ್ತೆ ಎಂದು ಬೃಹತ್ ಮತ್ತು ಮಧ್ಯಮ ಕೈಗಾರಿಕೆ, ಮೂಲಸೌಲಭ್ಯ ಅಭಿವೃದ್ಧಿ ಸಚಿವ ಎಂ. ಬಿ. ಪಾಟೀಲ (MB Patil) ತಿಳಿಸಿದರು. ವಿಜಯಪುರ ಹೆಸರು ಬದಲಾವಣೆ ವಿಚಾರವಾಗಿ ಬೆಂಗಳೂರಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು ವಿಜಯಪುರ ಜಿಲ್ಲೆ ಮೊದಲು ಬಿಜಾಪುರ ಜಿಲ್ಲೆ ಆಗಿತ್ತು. ಬಸವೇಶ್ವರ ಜಿಲ್ಲೆಯಾಗಲಿ ಅದರಲ್ಲಿ‌ ತಪ್ಪೇನಿಲ್ಲ. ಸಿಎಂ ಜೊತೆ ಚರ್ಚೆ ಮಾಡಿ ಸೂಕ್ತ ನಿರ್ಧಾರ ತೆಗೆದುಕೊಳ್ಳುತ್ತೇವೆ. ನಮ್ಮ ನಾಡು ಬಸವ ನಾಡು, ಬಸವ ಸಂಸ್ಕೃತಿ ಆಗಬೇಕು. ಈ ಮಾತನ್ನು ಹಲವುಬಾರಿ ಹೇಳಿದ್ದೇವೆ ಎಂದರು.

ಆಣೆ, ಪ್ರಮಾಣ ವಿಚಾರವಾಗಿ ಹೆಚ್​​ಡಿ ಕುಮಾರಸ್ವಾಮಿ ಹೇಳಿಕೆ ವಿಚಾರವಾಗಿ ಮಾತನಾಡಿದ ಅವರು ಯಾವ ಮಟ್ಟಕ್ಕೆ ಹೋಯ್ತು ರಾಜಕಾರಣ. ಇದು ಗ್ರಾಮ ಪಂಚಾಯಿತಿಗೆ ರೀತಿ ಆಯ್ತಲ್ಲ. ಮೊದಲು‌ ಅವರು ಹೋಗಿ ಆಣೆ ಮಾಡಿ ಬರಲಿ. ಬಿಜೆಪಿಗೆ ನಮ್ಮ ಪಕ್ಷದ ಐದು ಶಾಸಕರನ್ನು ಸೇರಿಸಿಕೊಳ್ಳಲು ಆಗಲ್ಲ. ಸರ್ಕಾರ ರಚಿಸಲು ಬಿಜೆಪಿಗೆ 65 ಶಾಸಕರು ಬೇಕು. ಸರ್ಕಾರ ಬೀಳಿಸುವುದು ಹುಡುಗಾಟದ ಮಾತಾ? ಎಂದು ತಿರುಗೇಟು ನೀಡಿದರು.

ಇದನ್ನೂ ಓದಿ: ಬೆಂಗಳೂರಿನ ನಮ್ಮ ಮೆಟ್ರೋ ವಿಸ್ತೃತ ಮಾರ್ಗ ಉದ್ಘಾಟಿಸಿದ ಮೋದಿ, ಸಿದ್ದರಾಮಯ್ಯ ಹೇಳಿದ್ದೇನು? 

ಎರಡೂವರೆ ವರ್ಷದ ಬಳಿಕ ಸಿಎಂ ಬದಲಾಗುತ್ತಾರೆ ಎಂಬ ಸ್ವಪಕ್ಷದಲ್ಲೇ ಕೆಲವರ ಹೇಳಿಕೆ ವಿಚಾರವಾಗಿ ಮಾತನಾಡಿದ ಅವರು ನಮ್ಮಲ್ಲಿ‌ ಯಾರು ಸಿಎಂ ಆಗಬೇಕು. ಎಲ್ಲವನ್ನ ಪಕ್ಷ ಹಾಗೂ ಹೈಕಮಾಂಡ್ ತೀರ್ಮಾನ ಮಾಡುತ್ತೆ. ಈ ಎಲ್ಲ ಹೇಳಿಕೆಗಳು ಅವರ ವೈಯಕ್ತಿಕ ಹೇಳಿಕೆ. ಏನೇ ಇದ್ದರೂ ಪಕ್ಷದ ಹೈಕಮಾಂಡ್ ತೀರ್ಮಾನ ಮಾಡುತ್ತೆ. ಯಾರು ಸಚಿವರಾಗಬೇಕು, ಸಿಎಂ ಆಗಬೇಕು ಎಲ್ಲವನ್ನೂ ಹೈಕಮಾಂಡ್ ನಿರ್ಧರಿಸುತ್ತೆ ಎಂದರು.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 1:17 pm, Fri, 27 October 23

ದೆಹಲಿಗೆ ಹೊರಟ ಪ್ರಧಾನಿ ಮೋದಿಗೆ ಓಮನ್​​​ನಲ್ಲಿ ಆತ್ಮೀಯ ವಿದಾಯ
ದೆಹಲಿಗೆ ಹೊರಟ ಪ್ರಧಾನಿ ಮೋದಿಗೆ ಓಮನ್​​​ನಲ್ಲಿ ಆತ್ಮೀಯ ವಿದಾಯ
ಓಮನ್​​ನಲ್ಲೂ ನಮೋ ಕ್ರೇಜ್; ಕಿಕ್ಕಿರಿದ ಭಾರತೀಯರಿಂದ ಮೋದಿ ಮೋದಿ ಘೋಷಣೆ
ಓಮನ್​​ನಲ್ಲೂ ನಮೋ ಕ್ರೇಜ್; ಕಿಕ್ಕಿರಿದ ಭಾರತೀಯರಿಂದ ಮೋದಿ ಮೋದಿ ಘೋಷಣೆ
ಬಿಗ್​​ಬಾಸ್ ಬಳಿಕ ಜೀವನ ಹೇಗಿದೆ? ಮಾಜಿ ಸ್ಪರ್ಧಿ ಸ್ನೇಹಿತ್ ಹೇಳಿದ್ದು ಹೀಗೆ
ಬಿಗ್​​ಬಾಸ್ ಬಳಿಕ ಜೀವನ ಹೇಗಿದೆ? ಮಾಜಿ ಸ್ಪರ್ಧಿ ಸ್ನೇಹಿತ್ ಹೇಳಿದ್ದು ಹೀಗೆ
ಭಾರತದ ಪ್ರಧಾನಿ ಮೋದಿಗೆ ಓಮನ್​ನ ಅತ್ಯುನ್ನತ ರಾಷ್ಟ್ರೀಯ ಪ್ರಶಸ್ತಿ ಪ್ರದಾನ
ಭಾರತದ ಪ್ರಧಾನಿ ಮೋದಿಗೆ ಓಮನ್​ನ ಅತ್ಯುನ್ನತ ರಾಷ್ಟ್ರೀಯ ಪ್ರಶಸ್ತಿ ಪ್ರದಾನ
ಸೀಕ್ರೆಟ್ ರೂಮ್​​ನಲ್ಲಿ ಮಿತಿ ಮೀರಿತು ರಕ್ಷಿತಾ ಶೆಟ್ಟಿ ಕೋಪ
ಸೀಕ್ರೆಟ್ ರೂಮ್​​ನಲ್ಲಿ ಮಿತಿ ಮೀರಿತು ರಕ್ಷಿತಾ ಶೆಟ್ಟಿ ಕೋಪ
ಹೈವೇನಲ್ಲಿ ಭಯಾನಕ ಅಪಘಾತ: ಬುಗುರಿ ತಿರುಗಿದಂತೆ ತಿರುಗಿದ ಕಾರು
ಹೈವೇನಲ್ಲಿ ಭಯಾನಕ ಅಪಘಾತ: ಬುಗುರಿ ತಿರುಗಿದಂತೆ ತಿರುಗಿದ ಕಾರು
ಪ್ರೀತಿ ಬಲೆಗೆ ಬಿದ್ದ ವಿದ್ಯಾರ್ಥಿನಿ ಲೈಫೇ ಬರ್ಬಾದ್​​: ಯುವತಿ ಮೇಲೆ ವಿಕೃತಿ
ಪ್ರೀತಿ ಬಲೆಗೆ ಬಿದ್ದ ವಿದ್ಯಾರ್ಥಿನಿ ಲೈಫೇ ಬರ್ಬಾದ್​​: ಯುವತಿ ಮೇಲೆ ವಿಕೃತಿ
ಮುಡಾ ಹಗರಣ: ಲೋಕಾಯುಕ್ತ ವಿರುದ್ಧವೇ ಸ್ನೇಹಮಯಿ ಕೃಷ್ಣ ಬಿಗ್​​ಬಾಂಬ್
ಮುಡಾ ಹಗರಣ: ಲೋಕಾಯುಕ್ತ ವಿರುದ್ಧವೇ ಸ್ನೇಹಮಯಿ ಕೃಷ್ಣ ಬಿಗ್​​ಬಾಂಬ್
ಕರ್ತವ್ಯದಲ್ಲಿದ್ದ ಎಎಸ್ಐ ಮಾಂಗಲ್ಯಸರವನ್ನೇ ಕದ್ದ ಕಳ್ಳರು!
ಕರ್ತವ್ಯದಲ್ಲಿದ್ದ ಎಎಸ್ಐ ಮಾಂಗಲ್ಯಸರವನ್ನೇ ಕದ್ದ ಕಳ್ಳರು!
ಬಿಗ್​​ಬಾಸ್ ಮನೆಯಲ್ಲಿ ತಮ್ಮ ಮೊದಲ ಪ್ರೀತಿಯ ಕತೆ ಹೇಳಿದ ರವಿಚಂದ್ರನ್
ಬಿಗ್​​ಬಾಸ್ ಮನೆಯಲ್ಲಿ ತಮ್ಮ ಮೊದಲ ಪ್ರೀತಿಯ ಕತೆ ಹೇಳಿದ ರವಿಚಂದ್ರನ್