AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಒಕ್ಕಲಿಗ ಸಮುದಾಯಕ್ಕೆ ಮೀಸಲಾತಿ ಕಿಚ್ಚು: ಸಮಯ ಬಂದ್ರೆ ನ್ಯಾಯದ ತಕ್ಕಡಿ ಹಿಡಿದೇ ಹೋಗ್ತೀನಿ ಎಂದ ಸಿಟಿ ರವಿ

ಒಕ್ಕಲಿಗರ ಸಮುದಾಯಕ್ಕೆ ಮೀಸಲಾತಿ ಪ್ರಮಾಣ ಹೆಚ್ಚಳ ಕುರಿತು ನ್ಯಾಯದ ತಕ್ಕಡಿ ಹಿಡಿದು ಹೋಗುತ್ತೇನೆ ಎಂದು ಶಾಸಕ ಸಿ. ಟಿ ರವಿ ಹೇಳಿದ್ದಾರೆ.

ಒಕ್ಕಲಿಗ ಸಮುದಾಯಕ್ಕೆ ಮೀಸಲಾತಿ ಕಿಚ್ಚು: ಸಮಯ ಬಂದ್ರೆ ನ್ಯಾಯದ ತಕ್ಕಡಿ ಹಿಡಿದೇ ಹೋಗ್ತೀನಿ ಎಂದ ಸಿಟಿ ರವಿ
ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ, ಸಿ.ಟಿ.ರವಿ
TV9 Web
| Edited By: |

Updated on:Oct 18, 2022 | 3:24 PM

Share

ಬೆಂಗಳೂರು: ಒಕ್ಕಲಿಗ (Vokkalig) ಸಮುದಾಯಕ್ಕೂ ಮೀಸಲಾತಿ ಪ್ರಮಾಣ ಹೆಚ್ಚಳ ಮಾಡಬೇಕು ಎಂಬ ಕೂಗು ಕೇಳಿ ಬರುತ್ತಿದೆ. ನಮ್ಮ ಸಮುದಾಯಕ್ಕೆ ನ್ಯಾಯ ಕೊಡಿಸುವುದು ನಮ್ಮ ಹೊಣೆಯಾಗಿದೆ. ಸಮಯ ಬಂದರೆ ನ್ಯಾಯದ ತಕ್ಕಡಿ ಹಿಡಿದು ಹೋಗುತ್ತೇನೆ ಎಂದು ಒಕ್ಕಲಿಗರ ಸಮುದಾಯಕ್ಕೆ ಸೇರಿದ ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ, ಶಾಸಕ ಸಿ.ಟಿ.ರವಿ (CT Ravi) ಭರವಸೆ ನೀಡಿದ್ದಾರೆ. . ಬೆಂಗಳೂರಿನಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು ಸರ್ಕಾರದ ಮೀಸಲಾತಿ ದುರ್ಬಲ ವರ್ಗಗಳಿಗೆ ಸಿಗಬೇಕು. ಕಾಲಕಾಲಕ್ಕೆ ಮೀಸಲಾತಿ ಹಂಚಿಕೆ ಮಾರ್ಪಾಡು ಆಗಬೇಕು. ಮೀಸಲಾತಿ ನ್ಯಾಯಯುತವಾಗಿ ಪರಿಶೀಲನೆ ಮಾಡಬೇಕು. ನ್ಯಾಯಸಿಗದ ವರ್ಗಕ್ಕೆ ಮೀಸಲಾತಿ ನೀಡುವ ಕೆಲಸ ಆಗಬೇಕು ಎಂದರು.

ಎಸ್​​ಸಿ, ಎಸ್​​ಟಿ ಮೀಸಲಾತಿ ಪ್ರಮಾಣ ಹೆಚ್ಚಳ ಮಾಡಿದ್ದೇವೆ. ಮೀಸಲಾತಿ ಬಹಳ ಸೂಕ್ಷ್ಮ ವಿಚಾರವಾಗಿದೆ. ರಾಜಕಾರಣದಲ್ಲಿ ಸಾಂದರ್ಭಿಕವಾಗಿ ಹೇಳುವುದು ತಪ್ಪಾಗುತ್ತದೆ. ಮೀಸಲಾತಿ ದುರ್ಬಲರ ಪರವಾಗಿ ಇರಬೇಕು. ನಾನು ನಮ್ಮ ಸಮುದಾಯದ ನಿರ್ಮಲಾನಂದ ಸ್ವಾಮೀಜಿ ಪರವಾಗಿಯೇ ಹೇಳಬೇಕು, ಇಲ್ಲ ಅಂದರೆ ಅದು ತಪ್ಪಾಗುತ್ತದೆ. ಆ ವಿಚಾರವೇ ಬೇಡ ಬಿಡಿ ಎಂದು ಜಾರಿಕೊಂಡರು.

ಬೇರೆ ಬೇರೆ ಸಣ್ಣ, ಬಡ ಸಮುದಾಯ ಇದೆ ಅವರಿಗೆ ಮೀಸಲಾತಿ ಸಿಗಲಿ. ಬಿಜೆಪಿ ಎಲ್ಲರನ್ನೂ ಪ್ರತಿನಿಧಿಸುವ ಪಕ್ಷವಾಗಿದೆ. ಮೀಸಲಾತಿಯನ್ನು ನ್ಯಾಯಯುತವಾಗಿ ಪರಿಶೀಲನೆ ಮಾಡಬೇಕು. ಯಾವ ವರ್ಗಕ್ಕೆ ನ್ಯಾಯ ಸಿಕ್ಕಿಲ್ಲವೋ ಅವರಿಗೆ ಕೊಡುವ ಕೆಲಸ ಮಾಡಬೇಕು. ಎಸ್.ಸಿ, ಎಸ್.ಟಿ. ಸಮುದಾಯಕ್ಕೆ ನ್ಯಾಯ ಕೊಡಬೇಕು ಅಂತಲೇ ಮೀಸಲಾತಿ ಹೆಚ್ಚಳ ಮಾಡಲಾಗಿದೆ. ಸಣ್ಣ ಸಮುದಾಯಗಳಿಗೆ ಧ್ವನಿ ಕೊಟ್ಟು ನ್ಯಾಯ ಕೊಡಿಸುವ ಕೆಲಸ ಮಾಡಬೇಕು ಎಂದು ಹೇಳಿದರು.

ಒಕ್ಕಲಿಗ ಸಮುದಾಯ ಮೀಸಲಾತಿ ಪ್ರಮಾಣ ಹೆಚ್ಚಳ ಕುರಿತು ಬೀದಿಗಿಳಿದರೇ, ಅವರಿಗೆ ಬೆಂಬಲಿಸುವ ವಿಚಾರ ಬಂದಾಗ ನೋಡೋಣ. ಸಮಯ ಬಂದರೆ ನ್ಯಾಯದ ತಕ್ಕಡಿ ಹಿಡಿದೇ ಹೋಗೋದು. ಯಾವುದೇ ಸಮುದಾಯಕ್ಕೆ ಅನ್ಯಾಯ ಆಗದಂತೆ ಹಾಗೂ ನಮ್ಮ ಸಮುದಾಯಕ್ಕೆ ನ್ಯಾಯ ಕೊಡಿಸೋದೇ ನಮ್ಮ ಹೊಣೆ ಎಂದು ಸ್ಪಷ್ಟಪಡಿಸಿದರು.

ಟೆಕ್ನಾಲಜಿ ಬಳಸಿಕೊಂಡು ನಗರದಲ್ಲಿನ ರಸ್ತೆ ಗುಂಡಿ ಮುಚ್ಚಬೇಕು

ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ರಸ್ತೆ ಗುಂಡಿಗೆ ಅನೇಕ ಜೀವಗಳು ಪ್ರಾಣ ಬಿಟ್ಟಿದ್ದು, ಈ ಬಗ್ಗೆ ರಾಜ್ಯ ಸರ್ಕಾರ ಕ್ರಮ ಕೈಗೊಳ್ಳದಿರುವುದಕ್ಕೆ ಸಾರ್ವಜನಿಕರು ಹಿಡಿಶಾಪ ಹಾಕುತ್ತಿದ್ದಾರೆ. ಈ ಬಗ್ಗೆ ಮಾತನಾಡಿದ ಅವರು ಟೆಕ್ನಾಲಜಿ ಬಳಸಿಕೊಂಡು ನಗರದಲ್ಲಿನ ರಸ್ತೆ ಗುಂಡಿ ಮುಚ್ಚಬೇಕು ಎಂದು ರಾಜ್ಯ ಸರ್ಕಾರಕ್ಕೆ ಸೂಚಿಸಿದ್ದಾರೆ. ರಸ್ತೆಗಳಲ್ಲಿನ ಗುಂಡಿ ಮುಚ್ಚುವ ಜವಾಬ್ದಾರಿ ಸರ್ಕಾರದ ಮೇಲಿದೆ. ಬೆಂಗಳೂರಿಗೆ 6 ಸಾವಿರ ಕೋಟಿ ವಿಶೇಷ ಅನುದಾನ ಕೊಟ್ಟಿದ್ದಾರೆ. ಗುಂಡಿ ಮುಚ್ಚುನ ಕೆಲಸ ಸರ್ಕಾರ ಮಾಡಲಿದೆ ಎಂದು ಹೇಳಿದರು.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 3:16 pm, Tue, 18 October 22

ಹಂಪಿ ಉತ್ಸವಕ್ಕೆ ಸಜ್ಜಾದ ಭವ್ಯ ವೇದಿಕೆ: 50 ಸಾವಿರ ಜನರಿಗೆ ಆಸನದ ವ್ಯವಸ್ಥೆ
ಹಂಪಿ ಉತ್ಸವಕ್ಕೆ ಸಜ್ಜಾದ ಭವ್ಯ ವೇದಿಕೆ: 50 ಸಾವಿರ ಜನರಿಗೆ ಆಸನದ ವ್ಯವಸ್ಥೆ
ಸಿಂಹ ರಾಶಿಯವರ ಮೇಲೆ ರಾಹುಗ್ರಸ್ತ ಕಂಕಣ ಸೂರ್ಯಗ್ರಹಣದ ಪ್ರಭಾವ ಹೇಗಿರಲಿದೆ?
ಸಿಂಹ ರಾಶಿಯವರ ಮೇಲೆ ರಾಹುಗ್ರಸ್ತ ಕಂಕಣ ಸೂರ್ಯಗ್ರಹಣದ ಪ್ರಭಾವ ಹೇಗಿರಲಿದೆ?
ಸೇವಾ ತೀರ್ಥ; ಪ್ರಧಾನಮಂತ್ರಿ ಕಚೇರಿಯ ನೂತನ ಹೆಸರು ಅನಾವರಣಗೊಳಿಸಿದ ಮೋದಿ
ಸೇವಾ ತೀರ್ಥ; ಪ್ರಧಾನಮಂತ್ರಿ ಕಚೇರಿಯ ನೂತನ ಹೆಸರು ಅನಾವರಣಗೊಳಿಸಿದ ಮೋದಿ
ಸರಣಿ ಅಪಘಾತದಲ್ಲಿ 7 ಜನ ದುರ್ಮರಣ: ಘಟನೆಯ ಭೀಕರತೆ ಬಿಚ್ಚಿಟ್ಟ ಚಾಲಕ
ಸರಣಿ ಅಪಘಾತದಲ್ಲಿ 7 ಜನ ದುರ್ಮರಣ: ಘಟನೆಯ ಭೀಕರತೆ ಬಿಚ್ಚಿಟ್ಟ ಚಾಲಕ
ವರ್ಷದ ಮೊದಲ ಸೂರ್ಯಗ್ರಹಣ ಕರ್ಕಾಟಕ ರಾಶಿಯವರಿಗೆ ಹೇಗಿರಲಿದೆ?
ವರ್ಷದ ಮೊದಲ ಸೂರ್ಯಗ್ರಹಣ ಕರ್ಕಾಟಕ ರಾಶಿಯವರಿಗೆ ಹೇಗಿರಲಿದೆ?
ಶಿಶುಗಳ ಕಳ್ಳತನ ತಡೆಯಲು ಹೊಸ ಪ್ಲಾನ್ ಮಾಡಿದ ಹುಬ್ಬಳ್ಳಿ ಕಿಮ್ಸ್ ಆಸ್ಪತ್ರೆ
ಶಿಶುಗಳ ಕಳ್ಳತನ ತಡೆಯಲು ಹೊಸ ಪ್ಲಾನ್ ಮಾಡಿದ ಹುಬ್ಬಳ್ಳಿ ಕಿಮ್ಸ್ ಆಸ್ಪತ್ರೆ
ತಮಿಳುನಾಡು ಚುನಾವಣೆ: ಯಾವ ಪಕ್ಷದ ಜತೆಯೂ ಮೈತ್ರಿ ಇಲ್ಲ: ವಿಜಯ್
ತಮಿಳುನಾಡು ಚುನಾವಣೆ: ಯಾವ ಪಕ್ಷದ ಜತೆಯೂ ಮೈತ್ರಿ ಇಲ್ಲ: ವಿಜಯ್
ಮಹಾ ಶಿವರಾತ್ರಿಯಂದು ಬೆಂಗಳೂರಿನಲ್ಲಿ ಮಾಂಸ ಮಾರಾಟ ನಿಷೇಧ: ಜಿಬಿಎ ಆದೇಶ
ಮಹಾ ಶಿವರಾತ್ರಿಯಂದು ಬೆಂಗಳೂರಿನಲ್ಲಿ ಮಾಂಸ ಮಾರಾಟ ನಿಷೇಧ: ಜಿಬಿಎ ಆದೇಶ
ಫೆ.17 ರಾಹುಗ್ರಸ್ತ ಕಂಕಣ ಸೂರ್ಯಗ್ರಹಣ; ಮಿಥುನ ರಾಶಿಯ ಫಲಾಫಲ ತಿಳಿಯಿರಿ
ಫೆ.17 ರಾಹುಗ್ರಸ್ತ ಕಂಕಣ ಸೂರ್ಯಗ್ರಹಣ; ಮಿಥುನ ರಾಶಿಯ ಫಲಾಫಲ ತಿಳಿಯಿರಿ
ಚಲಿಸುತ್ತಿರುವ ರೈಲಿಂದ ಬಿದ್ದ ಮಹಿಳೆಯನ್ನು ದೇವರಂತೆ ಬಂದು ಕಾಪಾಡಿದ ಟಿಸಿ
ಚಲಿಸುತ್ತಿರುವ ರೈಲಿಂದ ಬಿದ್ದ ಮಹಿಳೆಯನ್ನು ದೇವರಂತೆ ಬಂದು ಕಾಪಾಡಿದ ಟಿಸಿ