AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕರ್ನಾಟಕ ವಿಧಾನಸಭೆ ಕಲಾಪ: ನೀಟ್ ಪರೀಕ್ಷೆ ರದ್ದುಪಡಿಸುವಂತೆ ಒತ್ತಾಯಿಸಿ ನಿರ್ಣಯ ಅಂಗೀಕಾರ

ಗದ್ದಲ ಕೋಲಾಹಲದ ಮಧ್ಯೆಯೇ ಹಲವು ಬಿಲ್‌ಗಳ ಮಂಡನೆಯಾಯ್ತು. ವಿಧಾನಪರಿಷತ್​ನಲ್ಲಿ ಡಿಸಿಎಂ ಡಿಕೆ ಶಿವಕುಮಾರ್ ಅವರು NEET ರದ್ದತಿಗೆ ಕೋರಿ ನಿರ್ಣಯ ಮಂಡಿಸಿದರು. ಸಿಇಟಿ ಅಂಕಗಳನ್ನು ಆಧರಿಸಿ ಪ್ರವೇಶಾತಿ ನೀಡಬೇಕು. ನೀಟ್ ಪರೀಕ್ಷೆ ರದ್ದುಪಡಿಸುವಂತೆ ಕೇಂದ್ರ ಸರ್ಕಾರಕ್ಕೆ ಒತ್ತಾಯಿಸಿ ನಿರ್ಣಯ ಅಂಗೀಕಾರ ಮಾಡಲಾಯಿತು.

ಕರ್ನಾಟಕ ವಿಧಾನಸಭೆ ಕಲಾಪ: ನೀಟ್ ಪರೀಕ್ಷೆ ರದ್ದುಪಡಿಸುವಂತೆ ಒತ್ತಾಯಿಸಿ ನಿರ್ಣಯ ಅಂಗೀಕಾರ
ನೀಟ್ ಪರೀಕ್ಷೆ ರದ್ದುಪಡಿಸುವಂತೆ ಒತ್ತಾಯಿಸಿ ನಿರ್ಣಯ ಅಂಗೀಕಾರ
TV9 Web
| Edited By: ಆಯೇಷಾ ಬಾನು|

Updated on:Jul 25, 2024 | 2:16 PM

Share

ಬೆಂಗಳೂರು, ಜುಲೈ.25: ನಿನ್ನೆ ರಾತ್ರಿ ವಿಧಾನಸಭೆಯಲ್ಲೇ ಮಲಗಿ, ಅಹೋರಾತ್ರಿ ಧರಣಿ ಮಾಡಿದ್ದ ಬಿಜೆಪಿ-ಜೆಡಿಎಸ್ ನಾಯಕರು, ಇವತ್ತು ಕಲಾಪ ಆರಂಭವಾಗ್ತಿದ್ದಂತೆ ಮತ್ತೆ ಮೂಡಾ (Muda) ಹಗರಣ ವಿಚಾರ ಪ್ರಸ್ತಾಪಿಸಿದ್ರು. ಸದನದಲ್ಲಿ ನಿರಂತರವಾಗಿ ಗಲಾಟೆ ಗದ್ದಲ ಮುಂದುವರೆದಿತ್ತು. ಈ ಗಲಾಟೆ ನಡುವೆಯೇ ಕೆಲವು ವಿಧೇಯಕ ಅಂಗೀಕಾರ ಮಾಡಲಾಗಿದೆ. ನೀಟ್ ಪರೀಕ್ಷೆ (Neet Exam) ರದ್ದುಪಡಿಸುವಂತೆ ಕೇಂದ್ರ ಸರ್ಕಾರಕ್ಕೆ ಒತ್ತಾಯಿಸಿ ವಿಧಾನಸಭೆಯಲ್ಲಿ ನಿರ್ಣಯ ಅಂಗೀಕರಿಸಲಾಗಿದೆ. ಸಿಇಟಿ ಅಂಕಗಳನ್ನು ಆಧರಿಸಿ ಪ್ರವೇಶಾತಿ ನೀಡಬೇಕೆಂದು ಒತ್ತಾಯಿಸಲಾಗಿದೆ.

ವಿಧಾನಪರಿಷತ್​ನಲ್ಲಿ ಡಿಸಿಎಂ ಡಿಕೆ ಶಿವಕುಮಾರ್ ಅವರು NEET ರದ್ದತಿಗೆ ಕೋರಿ ನಿರ್ಣಯ ಮಂಡಿಸಿದರು. ಸಿಇಟಿ ಅಂಕಗಳನ್ನು ಆಧರಿಸಿ ಪ್ರವೇಶಾತಿ ನೀಡಬೇಕು. ನೀಟ್ ಪರೀಕ್ಷೆ ರದ್ದುಪಡಿಸುವಂತೆ ಕೇಂದ್ರ ಸರ್ಕಾರಕ್ಕೆ ಒತ್ತಾಯಿಸಿ ನಿರ್ಣಯ ಅಂಗೀಕಾರ ಮಾಡಲಾಯಿತು.

ಇನ್ನು ಒನ್ ನೇಷನ್, ಒನ್ ಎಲೆಕ್ಷನ್ ವಿರೋಧಿಸಿ ವಿಧಾನಪರಿಷತ್​ನಲ್ಲಿ ಸಿಎಂ ಸಿದ್ದರಾಮಯ್ಯ ​ನಿರ್ಣಯ ಮಂಡಿಸಿದರು. ಬಿಜೆಪಿ, JDS ಸದಸ್ಯ ಬಲ ಹೆಚ್ಚಿದ್ದರೂ ಗದ್ದಲದಿಂದ ನಿರ್ಣಯ ಪಾಸ್ ಮಾಡಲಾಗಿದೆ. ಒಂದು ರಾಷ್ಟ್ರ ಒಂದು ಚುನಾವಣೆ ನೀತಿಯನ್ನು ಅನುಷ್ಠಾನಗೊಳಿಸಬಾರದು. ಈ ಬಗ್ಗೆ ಕೇಂದ್ರ ಸರ್ಕಾರವನ್ನು ಒತ್ತಾಯಿಸಿ ನಿರ್ಣಯ ಅಂಗೀಕಾರ.

ಇದನ್ನೂ ಓದಿ: ಕಲಾಪದಲ್ಲಿ ಭಾಗವಹಿಸಲು ಆಗಮಿಸಿದ ಸಿದ್ದರಾಮಯ್ಯ ಪತ್ರಕರ್ತರಿಗೆ ಪ್ರತಿಕ್ರಿಯೆ ನೀಡದೆ ಸಿಡುಕಿದರು!

ವಿಧಾನಸಭೆಯಲ್ಲಿ ಅರಣ್ಯ ವಾಸಿ ಅನುಸೂಚಿತ ಬುಡಕಟ್ಟುಗಳಿಗೆ ಸಮಾನವಾಗಿ ಇತರ ಪಾರಂಪರಿಕ ಅರಣ್ಯ ವಾಸಿಗಳನ್ನು ಪರಿಗಣಿಸುವ ಹಾಗೆ, ಅನುಸೂಚಿತ ಬುಡಕಟ್ಟುಗಳ ಮತ್ತು ಇತರೆ ಪಾರಂಪರಿಕ ಅರಣ್ಯವಾಸಿಗಳ(ಅರಣ್ಯ ಹಕ್ಕುಗಳ ಮಾನ್ಯತೆ) ಅಧಿನಿಯಮ 2006(2007ರ ಕೇಂದ್ರ ಅಧಿನಿಯಮ 02) ಮತ್ತು ಅದರ ಅಡಿಯಲ್ಲಿ ಮಾಡಲಾದ ನಿಯಮಗಳನ್ನು ಸೂಕ್ತ ಮತ್ತು ಸಮರ್ಪಕವಾಗಿ ಮಾರ್ಪಡಿಸುವಂತೆ ಕೇಂದ್ರ ಸರ್ಕಾರವನ್ನು ಒತ್ತಾಯಿಸಿ ನಿರ್ಣಯ ಅಂಗೀಕಾರ ಮಾಡಲಾಯಿತು.

ವಿಪಕ್ಷಗಳ ಧರಣಿಯ ಮಧ್ಯೆ 4 ನಿರ್ಣಯಗಳ ಅಂಗೀಕಾರ

ಹೊಸ ಜನಗಣತಿಯ ಆಧಾರದಲ್ಲಿ ಕ್ಷೇತ್ರ ಪುನರ್ ವಿಂಗಡಣಾ ಪ್ರಕ್ರಿಯೆ ನಡೆಸಬಾರದು ಮತ್ತು ಜನಸಂಖ್ಯೆ ಆಧರಿಸಿ ಸ್ಥಾನಗಳ ಹೆಚ್ಚಿಸುವ ಸಂದರ್ಭದಲ್ಲಿ ಪ್ರತಿ ರಾಜ್ಯಕ್ಕೆ ಹಂಚಿಕೆ ಮಾಡಬೇಕಾದ ಲೋಕಸಭಾ ಮತ್ತು ವಿಧಾನಸಭೆ ಸ್ಥಾನಗಳನ್ನು 1971ರ ಜನಗಣತಿ ಆಧರಿಸಿ ನಿರ್ಧರಿಸುವಂತೆ ಕೇಂದ್ರ ಸರ್ಕಾರವನ್ನು ಒತ್ತಾಯಿಸಿ ನಿರ್ಣಯ ಅಂಗೀಕಾರ. ಚರ್ಚೆಗೆ ವಿಶೇಷ ಸದನ ಕರೆಯುವಂತೆ ವಿಪಕ್ಷ ನಾಯಕ ಅಶೋಕ್ ಒತ್ತಾಯಿಸಿದ್ದು ವಿಪಕ್ಷಗಳ ಬೇಡಿಕೆಗೆ ಮಣಿಯದೇ ನಿರ್ಣಯ ಅಂಗೀಕಾರ.

ರಾಜ್ಯದ ಪ್ರಮುಖ ಸುದ್ದಿಗಳನ್ನು ಓದಲು ಇದರ ಮೇಲೆ ಕ್ಲಿಕ್ ಮಾಡಿ  

Published On - 1:07 pm, Thu, 25 July 24

Follow Us
TV9 Web
TV9 Web

TV9 Kannada

Read More
ವಿಡಿಯೋ: ಸಿನಿಮಾಗಳಲ್ಲಿ ಆಕ್ಷನ್ ದೃಶ್ಯ ಎಷ್ಟು ಕಷ್ಟವಾಗಿರುತ್ತೆ ನೋಡಿ
ವಿಡಿಯೋ: ಸಿನಿಮಾಗಳಲ್ಲಿ ಆಕ್ಷನ್ ದೃಶ್ಯ ಎಷ್ಟು ಕಷ್ಟವಾಗಿರುತ್ತೆ ನೋಡಿ
ಬೈಕ್​​​ಗೆ ಗುದ್ದಿ ನೇರವಾಗಿ ಅಡಿಕೆ ತೋಟಕ್ಕೆ ನುಗ್ಗಿದ KSRTC ಬಸ್
ಬೈಕ್​​​ಗೆ ಗುದ್ದಿ ನೇರವಾಗಿ ಅಡಿಕೆ ತೋಟಕ್ಕೆ ನುಗ್ಗಿದ KSRTC ಬಸ್
ಮತದಾನವಿಲ್ಲದೇ ಕರ್ನಾಟಕದಿಂದ ನಾಲ್ವರು ರಾಜ್ಯಸಭೆಗೆ ಅವಿರೋಧವಾಗಿ ಆಯ್ಕೆ
ಮತದಾನವಿಲ್ಲದೇ ಕರ್ನಾಟಕದಿಂದ ನಾಲ್ವರು ರಾಜ್ಯಸಭೆಗೆ ಅವಿರೋಧವಾಗಿ ಆಯ್ಕೆ
‘ಬಾಯ್ಸ್ ನೆವರ್ ಕಾಂಪ್ರಮೈಸ್’: ಸಿನಿಮಾ ಬಗ್ಗೆ ನಿರ್ದೇಶಕರ ಮಾತು
‘ಬಾಯ್ಸ್ ನೆವರ್ ಕಾಂಪ್ರಮೈಸ್’: ಸಿನಿಮಾ ಬಗ್ಗೆ ನಿರ್ದೇಶಕರ ಮಾತು
'ಅವನು ನನ್ನ ವಿರುದ್ಧವೇ ಕೆಲಸ ಮಾಡಿದ್ದಾನೆ': ಜಮಿರ್ ವಿರುದ್ಧ ಸಿದ್ದು ಗರಂ
'ಅವನು ನನ್ನ ವಿರುದ್ಧವೇ ಕೆಲಸ ಮಾಡಿದ್ದಾನೆ': ಜಮಿರ್ ವಿರುದ್ಧ ಸಿದ್ದು ಗರಂ
ಹಿಂದುಳಿದ ವರ್ಗಗಳ ಇಲಾಖೆಯಲ್ಲಿ ಅನುದಾನ ತಾರತಮ್ಯದ ಆರೋಪ
ಹಿಂದುಳಿದ ವರ್ಗಗಳ ಇಲಾಖೆಯಲ್ಲಿ ಅನುದಾನ ತಾರತಮ್ಯದ ಆರೋಪ
ಸಿಎಂ ಡಿಕೆಶಿಗೆ ಯಾವುದೇ ಕಂಟಕವಿಲ್ಲ: ನೊಣವಿನಕೆರೆ ಸ್ವಾಮೀಜಿ ಭವಿಷ್ಯ
ಸಿಎಂ ಡಿಕೆಶಿಗೆ ಯಾವುದೇ ಕಂಟಕವಿಲ್ಲ: ನೊಣವಿನಕೆರೆ ಸ್ವಾಮೀಜಿ ಭವಿಷ್ಯ
26 ವರ್ಷಗಳ ಬಳಿಕ ಮನೆಗೆ ಮರಳಿದ ಮಗ: ಭಾವುಕ ಕ್ಷಣಕ್ಕೆ ಸಾಕ್ಷಿಯಾದ ಧರ್ಮಸ್ಥಳ
26 ವರ್ಷಗಳ ಬಳಿಕ ಮನೆಗೆ ಮರಳಿದ ಮಗ: ಭಾವುಕ ಕ್ಷಣಕ್ಕೆ ಸಾಕ್ಷಿಯಾದ ಧರ್ಮಸ್ಥಳ
ವಿಧಾನ ಪರಿಷತ್ ಕದನದಲ್ಲಿ ಜೆಡಿಎಸ್​ಗೆ ಡಬಲ್ ಟೆನ್ಷನ್!
ವಿಧಾನ ಪರಿಷತ್ ಕದನದಲ್ಲಿ ಜೆಡಿಎಸ್​ಗೆ ಡಬಲ್ ಟೆನ್ಷನ್!
ಕೆಆರ್​ಎಸ್ ಜಲಮಟ್ಟ 81 ಅಡಿಗೆ ಕುಸಿತ, ತಮಿಳುನಾಡಿಗೆ ನೀರು ಬಿಡುಗಡೆ ಸವಾಲು
ಕೆಆರ್​ಎಸ್ ಜಲಮಟ್ಟ 81 ಅಡಿಗೆ ಕುಸಿತ, ತಮಿಳುನಾಡಿಗೆ ನೀರು ಬಿಡುಗಡೆ ಸವಾಲು