AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಪರಿಷತ್​​ ಚುನಾವಣೆಯಲ್ಲಿ ಅಡ್ಡಮತದಾನದ ಭೀತಿ: ರಾಜ್ಯದ ಕಾಂಗ್ರೆಸ್​​ ಶಾಸಕರು ನಾಳೆ ರೆಸಾರ್ಟ್​​ಗೆ

ವಿಧಾನ ಪರಿಷತ್ ಚುನಾವಣೆಯಲ್ಲಿ ಅಡ್ಡಮತದಾನದ ಭೀತಿ ಎದುರಿಸುತ್ತಿರುವ ಕಾಂಗ್ರೆಸ್, ಮುನ್ನೆಚ್ಚರಿಕಾ ಕ್ರಮವಾಗಿ ತನ್ನ ಎಲ್ಲಾ ಶಾಸಕರನ್ನು ಬಿಡದಿಯ ವಂಡರ್‌ಲಾ ರೆಸಾರ್ಟ್‌ಗೆ ಶಿಫ್ಟ್ ಮಾಡಲು ನಿರ್ಧರಿಸಿದೆ. ಕಾಂಗ್ರೆಸ್​ನ 14 ಶಾಸಕರಿಗೆ ಜೆಡಿಎಸ್ ಸಂಪರ್ಕ ಮಾಡಿರುವ ಮಾಹಿತಿ ಹಿನ್ನೆಲೆ ಮುನ್ನೆಚ್ಚರಿಕಾ ಕ್ರಮಕ್ಕೆ ಕಾಂಗ್ರೆಸ್​​ ಮುಂದಾಗಿದ್ದು, ಮತದಾನ ಪ್ರಕ್ರಿಯೆ ಬಗ್ಗೆ ಶಾಸಕರಿಗೆ ವಿವರವಾದ ತರಬೇತಿಯನ್ನೂ ಹಮ್ಮಿಕೊಂಡಿದೆ.

ಪರಿಷತ್​​ ಚುನಾವಣೆಯಲ್ಲಿ ಅಡ್ಡಮತದಾನದ ಭೀತಿ: ರಾಜ್ಯದ ಕಾಂಗ್ರೆಸ್​​ ಶಾಸಕರು ನಾಳೆ ರೆಸಾರ್ಟ್​​ಗೆ
ಸಾಂದರ್ಭಿಕ ಚಿತ್ರImage Credit source: ndtv.com
ಪ್ರಸನ್ನ ಗಾಂವ್ಕರ್​
| Edited By: |

Updated on: Jun 15, 2026 | 9:18 AM

Share

ಬೆಂಗಳೂರು, ಜೂನ್​​ 15: ಭಾರಿ ಕುತೂಹಲ ಮೂಡಿಸಿರುವ ವಿಧಾನ ಪರಿಷತ್​​ ಚುನಾವಣೆಗೆ ದಿನಗಣನೆ ಆರಂಭವಾಗುತ್ತಿದ್ದಂತೆ ಕರ್ನಾಟಕದಲ್ಲಿ ಮತ್ತೆ ರೆಸಾರ್ಟ್ ಪಾಲಿಟಿಕ್ಸ್ ಶುರುವಾಗಿದೆ. ಕಾಂಗ್ರೆಸ್ ಪಕ್ಷದ ಎಲ್ಲಾ​ ಶಾಸಕರು ನಾಳೆ ಬಿಡದಿಯ ವಂಡರ್​ಲಾ ರೆಸಾರ್ಟ್​​ಗೆ ಶಿಫ್ಟ್​​ ಆಗಲಿದ್ದು, ರೆಸಾರ್ಟ್​ನಲ್ಲಿ ಒಟ್ಟು 140 ರೂಂ ಬುಕ್ಕಿಂಗ್ ಆಗಿದೆ. ನಾಳೆ, ನಾಡಿದ್ದು ಇಲ್ಲಿಯೇ ಕಾಂಗ್ರೆಸ್​​ ಶಾಸಕರು ವಾಸ್ತವ್ಯ ಹೂಡಲಿದ್ದಾರೆ ಎನ್ನಲಾಗಿದೆ.

ಮುಖ್ಯಾಂಶಗಳು

  • ಪರಿಷತ್​​ ಚುನಾವಣೆಯಲ್ಲಿ ಅಡ್ಡ ಮತದಾನದ ಭೀತಿ
  • ವಂಡರ್​ಲಾ ರೆಸಾರ್ಟ್​​ಗೆ ನಾಳೆ ಕಾಂಗ್ರೆಸ್​​ ಶಾಸಕರು ಶಿಫ್ಟ್​​
  • ನಾಳೆ, ನಾಡಿದ್ದು ಇಲ್ಲಿಯೇ ಕಾಂಗ್ರೆಸ್​​ ಶಾಸಕರ ವಾಸ್ತವ್ಯ

ಕಾಂಗ್ರೆಸ್​ನ 14 ಶಾಸಕರಿಗೆ ಜೆಡಿಎಸ್ ಸಂಪರ್ಕ ಮಾಡಿರುವ ಮಾಹಿತಿ ಹಿನ್ನೆಲೆ ಅಡ್ಡ ಮತದಾನದ ಭೀತಿ ಶುರುವಾಗಿರುವ ಹಿನ್ನೆಲೆ ರೆಸಾರ್ಟ್​​ಗೆ ಶಾಸಕರನ್ನು ಶಿಫ್ಟ್​​ ಮಾಡಲಾಗುತ್ತಿದೆ. ಪಕ್ಷೇತರ ಶಾಸಕರನ್ನು ಕೂಡ ಹೆಚ್​ಡಿಕೆ ಸಂಪರ್ಕ ಮಾಡಿದ್ದಾರೆಂಬ ಅನುಮಾನ ಹಿನ್ನೆಲೆ ಶಾಸಕರನ್ನು ಗಟ್ಟಿಯಾಗಿ ಹಿಡಿದಿಟ್ಟುಕೊಳ್ಳಲು ಕಸರತ್ತು ಶುರುವಾಗಿದೆ. ಜೂ.18ರಂದು ತಂಡ ತಂಡವಾಗಿ ತೆರಳಲಿರುವ ಕಾಂಗ್ರೆಸ್​​ ಶಾಸಕರು, ನೇರವಾಗಿ ವಿಧಾನಸೌಧಕ್ಕೆ ಬಂದು ಮತದಾನ ಮಾಡಲಿದ್ದಾರೆ.

ಇದನ್ನೂ ಓದಿ: ಗ್ಯಾರಂಟಿ ಯೋಜನೆಗಳು ಸ್ಥಗಿತ ಅಂತೆ-ಕಂತೆಗಳಿಗೆ ತೆರೆ ಎಳೆದ ಡಿಕೆ ಶಿವಕುಮಾರ್, ಸಿಎಂ ಕೊಟ್ಟ ಸ್ಪಷ್ಟನೆಯಲ್ಲೇನಿದೆ?

ನಾಳೆ ಸಂಜೆ 6 ಗಂಟೆಗೆ ಶಾಸಕಾಂಗ ಪಕ್ಷದ ಸಭೆ

ಡಿ.ಕೆ.ಶಿವಕುಮಾರ್​ ಸಿಎಂ ಆದ ಬಳಿಕ ಮೊದಲ ಸಿಎಲ್​ಪಿ ಸಭೆ ನಾಳೆ ಸಂಜೆ 6 ಗಂಟೆಗೆ ಬಿಡದಿಯ ವಂಡರ್​ಲಾ ರೆಸಾರ್ಟ್​ನಲ್ಲಿಯೇ ನಡೆಯಲಿದೆ. ಸಿಎಲ್​ಪಿ ಸಭೆಯಲ್ಲಿ ಮತದಾನ ಪ್ರಕ್ರಿಯೆ ಬಗ್ಗೆ ಶಾಸಕರಿಗೆ ವಿವರವಾದ ತರಬೇತಿ ನಡೆಯಲಿದ್ದು, ಒಂದೇ ಒಂದು ಮತವೂ ತಪ್ಪಾಗದಂತೆ ಎಚ್ಚರ ವಹಿಸಿ ಟ್ರೈನಿಂಗ್​​ ತಯಾರಿ ನಡೆದಿದೆ. ಅಡ್ಡ ಮತದಾನ, ಮತಗಳ ಅಸಿಂಧು, ಯಾರಿಗೆ ಮತ ಹಾಕಬೇಕೆಂಬ ಗೊಂದಲಗಳನ್ನು ತಪ್ಪಿಸಲು ರೆಸಾರ್ಟ್ ಪಾಲಿಟಿಕ್ಸ್​​ಗೆ ಕಾಂಗ್ರೆಸ್​​ ಮುಂದಾಗಿರುವ ಮಾಹಿತಿ ಇದೆ.

ಮತ್ತಷ್ಟು ಸುದ್ದಿ ಓದಲು ಇಲ್ಲಿ ಕ್ಲಿಕ್​​ ಮಾಡಿ.

Follow Us
ಅತಿಯಾಗಿ ಮಾತನಾಡುವ ಬಿಗ್ ಬಾಸ್ ಸ್ಪರ್ಧಿಗಳಿಗೆ ವಾರ್ನಿಂಗ್ ಕೊಟ್ಟ ಅವಿನಾಶ್
ಅತಿಯಾಗಿ ಮಾತನಾಡುವ ಬಿಗ್ ಬಾಸ್ ಸ್ಪರ್ಧಿಗಳಿಗೆ ವಾರ್ನಿಂಗ್ ಕೊಟ್ಟ ಅವಿನಾಶ್
ಚರ್ಚೆಗೆ ಗ್ರಾಸವಾಯ್ತು ಬಿಜೆಪಿ ಎಂಎಲ್​​ಗೆ ಸಚಿವ ಮಲ್ಲಿಕಾರ್ಜುನ್ ಬೈದ ಬೈಗುಳ
ಚರ್ಚೆಗೆ ಗ್ರಾಸವಾಯ್ತು ಬಿಜೆಪಿ ಎಂಎಲ್​​ಗೆ ಸಚಿವ ಮಲ್ಲಿಕಾರ್ಜುನ್ ಬೈದ ಬೈಗುಳ
ಒಂದೇ ಗೋರಿಗೆ ಹಿಂದೂ-ಮುಸ್ಲಿಂ ಪೂಜೆ: ಬೀದರ್​​ನಲ್ಲೊಂದು ಭಾವೈಕ್ಯತೆಯ ಜಾತ್ರೆ
ಒಂದೇ ಗೋರಿಗೆ ಹಿಂದೂ-ಮುಸ್ಲಿಂ ಪೂಜೆ: ಬೀದರ್​​ನಲ್ಲೊಂದು ಭಾವೈಕ್ಯತೆಯ ಜಾತ್ರೆ
ಚಾಮರಾಜನಗರದಲ್ಲಿ ಕಾಡುಗಳ್ಳರು ಮತ್ತೆ ಆ್ಯಕ್ಟಿವ್: ವಾರದಲ್ಲೇ ಎರಡು ಶಿಕಾರಿ
ಚಾಮರಾಜನಗರದಲ್ಲಿ ಕಾಡುಗಳ್ಳರು ಮತ್ತೆ ಆ್ಯಕ್ಟಿವ್: ವಾರದಲ್ಲೇ ಎರಡು ಶಿಕಾರಿ
ಸಿಎಂ ಡಿಕೆ ಶಿವಕುಮಾರ್​ ನಡೆಗೆ ಹೈಕೋರ್ಟ್‌ನಿಂದ ಪ್ರಶಂಸೆ
ಸಿಎಂ ಡಿಕೆ ಶಿವಕುಮಾರ್​ ನಡೆಗೆ ಹೈಕೋರ್ಟ್‌ನಿಂದ ಪ್ರಶಂಸೆ
ಸೌತ್ ರುಚೀಸ್ ಹೋಟೆಲ್ ಮೇಲೆ ಎಫ್​ಡಿಎ ದಾಳಿ
ಸೌತ್ ರುಚೀಸ್ ಹೋಟೆಲ್ ಮೇಲೆ ಎಫ್​ಡಿಎ ದಾಳಿ
ಇಡಿ ದಾಳಿ: ಬೆಂಗಳೂರಿನಲ್ಲಿ ಸತೀಶ್ ಜಾರಕಿಹೊಳಿ ಬೆಂಬಲಿಗರಿಂದ ಹೈಡ್ರಾಮಾ!
ಇಡಿ ದಾಳಿ: ಬೆಂಗಳೂರಿನಲ್ಲಿ ಸತೀಶ್ ಜಾರಕಿಹೊಳಿ ಬೆಂಬಲಿಗರಿಂದ ಹೈಡ್ರಾಮಾ!
ಕುಡುಕರ ಆಶ್ರಯತಾಣವಾಯ್ತು ಕೋಟೆನಾಡಿನ ಗುರುಭವನ
ಕುಡುಕರ ಆಶ್ರಯತಾಣವಾಯ್ತು ಕೋಟೆನಾಡಿನ ಗುರುಭವನ
ಕೆಪಿಎಸ್‌ಸಿ ಅಕ್ರಮ: ಕಲಬುರ್ಗಿಯ ಅಭ್ಯರ್ಥಿಗೆ ಶಾಕ್​​ ಕೊಟ್ಟ ಸಿಐಡಿ
ಕೆಪಿಎಸ್‌ಸಿ ಅಕ್ರಮ: ಕಲಬುರ್ಗಿಯ ಅಭ್ಯರ್ಥಿಗೆ ಶಾಕ್​​ ಕೊಟ್ಟ ಸಿಐಡಿ
ಸಿಡಬ್ಲ್ಯೂಆರ್‌ಸಿ ಆದೇಶ ಪ್ರಶ್ನಿಸಿ ಸುಪ್ರೀಂಗೆ ಹೋಗಲು ಸಿಎಂ ಸೂಚನೆ
ಸಿಡಬ್ಲ್ಯೂಆರ್‌ಸಿ ಆದೇಶ ಪ್ರಶ್ನಿಸಿ ಸುಪ್ರೀಂಗೆ ಹೋಗಲು ಸಿಎಂ ಸೂಚನೆ