AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಪರಿಷತ್​​ ಚುನಾವಣೆಯಲ್ಲಿ ಅಡ್ಡಮತದಾನದ ಭೀತಿ: ರಾಜ್ಯದ ಕಾಂಗ್ರೆಸ್​​ ಶಾಸಕರು ನಾಳೆ ರೆಸಾರ್ಟ್​​ಗೆ

ವಿಧಾನ ಪರಿಷತ್ ಚುನಾವಣೆಯಲ್ಲಿ ಅಡ್ಡಮತದಾನದ ಭೀತಿ ಎದುರಿಸುತ್ತಿರುವ ಕಾಂಗ್ರೆಸ್, ಮುನ್ನೆಚ್ಚರಿಕಾ ಕ್ರಮವಾಗಿ ತನ್ನ ಎಲ್ಲಾ ಶಾಸಕರನ್ನು ಬಿಡದಿಯ ವಂಡರ್‌ಲಾ ರೆಸಾರ್ಟ್‌ಗೆ ಶಿಫ್ಟ್ ಮಾಡಲು ನಿರ್ಧರಿಸಿದೆ. ಕಾಂಗ್ರೆಸ್​ನ 14 ಶಾಸಕರಿಗೆ ಜೆಡಿಎಸ್ ಸಂಪರ್ಕ ಮಾಡಿರುವ ಮಾಹಿತಿ ಹಿನ್ನೆಲೆ ಮುನ್ನೆಚ್ಚರಿಕಾ ಕ್ರಮಕ್ಕೆ ಕಾಂಗ್ರೆಸ್​​ ಮುಂದಾಗಿದ್ದು, ಮತದಾನ ಪ್ರಕ್ರಿಯೆ ಬಗ್ಗೆ ಶಾಸಕರಿಗೆ ವಿವರವಾದ ತರಬೇತಿಯನ್ನೂ ಹಮ್ಮಿಕೊಂಡಿದೆ.

ಪರಿಷತ್​​ ಚುನಾವಣೆಯಲ್ಲಿ ಅಡ್ಡಮತದಾನದ ಭೀತಿ: ರಾಜ್ಯದ ಕಾಂಗ್ರೆಸ್​​ ಶಾಸಕರು ನಾಳೆ ರೆಸಾರ್ಟ್​​ಗೆ
ಸಾಂದರ್ಭಿಕ ಚಿತ್ರImage Credit source: ndtv.com
ಪ್ರಸನ್ನ ಗಾಂವ್ಕರ್​
| Edited By: |

Updated on: Jun 15, 2026 | 9:18 AM

Share

ಬೆಂಗಳೂರು, ಜೂನ್​​ 15: ಭಾರಿ ಕುತೂಹಲ ಮೂಡಿಸಿರುವ ವಿಧಾನ ಪರಿಷತ್​​ ಚುನಾವಣೆಗೆ ದಿನಗಣನೆ ಆರಂಭವಾಗುತ್ತಿದ್ದಂತೆ ಕರ್ನಾಟಕದಲ್ಲಿ ಮತ್ತೆ ರೆಸಾರ್ಟ್ ಪಾಲಿಟಿಕ್ಸ್ ಶುರುವಾಗಿದೆ. ಕಾಂಗ್ರೆಸ್ ಪಕ್ಷದ ಎಲ್ಲಾ​ ಶಾಸಕರು ನಾಳೆ ಬಿಡದಿಯ ವಂಡರ್​ಲಾ ರೆಸಾರ್ಟ್​​ಗೆ ಶಿಫ್ಟ್​​ ಆಗಲಿದ್ದು, ರೆಸಾರ್ಟ್​ನಲ್ಲಿ ಒಟ್ಟು 140 ರೂಂ ಬುಕ್ಕಿಂಗ್ ಆಗಿದೆ. ನಾಳೆ, ನಾಡಿದ್ದು ಇಲ್ಲಿಯೇ ಕಾಂಗ್ರೆಸ್​​ ಶಾಸಕರು ವಾಸ್ತವ್ಯ ಹೂಡಲಿದ್ದಾರೆ ಎನ್ನಲಾಗಿದೆ.

ಮುಖ್ಯಾಂಶಗಳು

  • ಪರಿಷತ್​​ ಚುನಾವಣೆಯಲ್ಲಿ ಅಡ್ಡ ಮತದಾನದ ಭೀತಿ
  • ವಂಡರ್​ಲಾ ರೆಸಾರ್ಟ್​​ಗೆ ನಾಳೆ ಕಾಂಗ್ರೆಸ್​​ ಶಾಸಕರು ಶಿಫ್ಟ್​​
  • ನಾಳೆ, ನಾಡಿದ್ದು ಇಲ್ಲಿಯೇ ಕಾಂಗ್ರೆಸ್​​ ಶಾಸಕರ ವಾಸ್ತವ್ಯ

ಕಾಂಗ್ರೆಸ್​ನ 14 ಶಾಸಕರಿಗೆ ಜೆಡಿಎಸ್ ಸಂಪರ್ಕ ಮಾಡಿರುವ ಮಾಹಿತಿ ಹಿನ್ನೆಲೆ ಅಡ್ಡ ಮತದಾನದ ಭೀತಿ ಶುರುವಾಗಿರುವ ಹಿನ್ನೆಲೆ ರೆಸಾರ್ಟ್​​ಗೆ ಶಾಸಕರನ್ನು ಶಿಫ್ಟ್​​ ಮಾಡಲಾಗುತ್ತಿದೆ. ಪಕ್ಷೇತರ ಶಾಸಕರನ್ನು ಕೂಡ ಹೆಚ್​ಡಿಕೆ ಸಂಪರ್ಕ ಮಾಡಿದ್ದಾರೆಂಬ ಅನುಮಾನ ಹಿನ್ನೆಲೆ ಶಾಸಕರನ್ನು ಗಟ್ಟಿಯಾಗಿ ಹಿಡಿದಿಟ್ಟುಕೊಳ್ಳಲು ಕಸರತ್ತು ಶುರುವಾಗಿದೆ. ಜೂ.18ರಂದು ತಂಡ ತಂಡವಾಗಿ ತೆರಳಲಿರುವ ಕಾಂಗ್ರೆಸ್​​ ಶಾಸಕರು, ನೇರವಾಗಿ ವಿಧಾನಸೌಧಕ್ಕೆ ಬಂದು ಮತದಾನ ಮಾಡಲಿದ್ದಾರೆ.

ಇದನ್ನೂ ಓದಿ: ಗ್ಯಾರಂಟಿ ಯೋಜನೆಗಳು ಸ್ಥಗಿತ ಅಂತೆ-ಕಂತೆಗಳಿಗೆ ತೆರೆ ಎಳೆದ ಡಿಕೆ ಶಿವಕುಮಾರ್, ಸಿಎಂ ಕೊಟ್ಟ ಸ್ಪಷ್ಟನೆಯಲ್ಲೇನಿದೆ?

ನಾಳೆ ಸಂಜೆ 6 ಗಂಟೆಗೆ ಶಾಸಕಾಂಗ ಪಕ್ಷದ ಸಭೆ

ಡಿ.ಕೆ.ಶಿವಕುಮಾರ್​ ಸಿಎಂ ಆದ ಬಳಿಕ ಮೊದಲ ಸಿಎಲ್​ಪಿ ಸಭೆ ನಾಳೆ ಸಂಜೆ 6 ಗಂಟೆಗೆ ಬಿಡದಿಯ ವಂಡರ್​ಲಾ ರೆಸಾರ್ಟ್​ನಲ್ಲಿಯೇ ನಡೆಯಲಿದೆ. ಸಿಎಲ್​ಪಿ ಸಭೆಯಲ್ಲಿ ಮತದಾನ ಪ್ರಕ್ರಿಯೆ ಬಗ್ಗೆ ಶಾಸಕರಿಗೆ ವಿವರವಾದ ತರಬೇತಿ ನಡೆಯಲಿದ್ದು, ಒಂದೇ ಒಂದು ಮತವೂ ತಪ್ಪಾಗದಂತೆ ಎಚ್ಚರ ವಹಿಸಿ ಟ್ರೈನಿಂಗ್​​ ತಯಾರಿ ನಡೆದಿದೆ. ಅಡ್ಡ ಮತದಾನ, ಮತಗಳ ಅಸಿಂಧು, ಯಾರಿಗೆ ಮತ ಹಾಕಬೇಕೆಂಬ ಗೊಂದಲಗಳನ್ನು ತಪ್ಪಿಸಲು ರೆಸಾರ್ಟ್ ಪಾಲಿಟಿಕ್ಸ್​​ಗೆ ಕಾಂಗ್ರೆಸ್​​ ಮುಂದಾಗಿರುವ ಮಾಹಿತಿ ಇದೆ.

ಮತ್ತಷ್ಟು ಸುದ್ದಿ ಓದಲು ಇಲ್ಲಿ ಕ್ಲಿಕ್​​ ಮಾಡಿ.

Follow Us
ಪ್ರಸನ್ನ ಗಾಂವ್ಕರ್​
ಪ್ರಸನ್ನ ಗಾಂವ್ಕರ್​

ಹುಟ್ಟೂರು ಯಲ್ಲಾಪುರ, ಬೆಳೆದೂರು ದಾಂಡೇಲಿಯ ದಟ್ಟ ಕಾಡುಗಳ ನಡುವೆ. ರವಿ ಬೆಳಗೆರೆ ಎಂಬ ಅಕ್ಷರ ರಾಕ್ಷಸನ ಕಟ್ಟಾಭಿಮಾನದಿಂದ ಹಾಳಾಗಿ, ಸೈನ್ಸ್ ನಲ್ಲಿ ಡಿಗ್ರಿ ಪಡೆದು ಜರ್ನಲಿಸಂಗೆ ಹಿಂಬದಿ ಕಿಟಕಿಯಿಂದ ನುಸುಳಿದ್ದು 2010 ರ ಅಕ್ಟೋಬರ್ ನಲ್ಲಿ. ಉಡುಪಿಯಲ್ಲಿ ಮೊದಲ ಪತ್ರಿಕೋದ್ಯಮ ಕರ್ತವ್ಯ ಪ್ರಾರಂಭಿಸಿದ್ದು 2010 ರಲ್ಲಿಯೇ. ಜನಶ್ರೀ ನ್ಯೂಸ್ ಮೊದಲು ಅನ್ನ ನೀಡಿದ ಸಂಸ್ಥೆ. ಉಡುಪಿ ಜಿಲ್ಲಾ ವರದಿಗಾರನಾಗಿ ಮೂರು ವರ್ಷ ಕೆಲಸ ಮಾಡಿ 2013 ರ ಅಂತ್ಯಕ್ಕೆ ಸಮಯ ನ್ಯೂಸ್ ಮೂಲಕ ಬೆಂಗಳೂರಿಗೆ ಎಂಟ್ರಿ. ಬಿಗ್ ೩, ಬೆಂಗಳೂರ್ ಲೈವ್, ಸಮಯ ಸಕಾಲ ಕಾರ್ಯಕ್ರಮದಲ್ಲಿ ವರದಿಗಾರಿಕೆ ಮಾಡಿದ ಖುಷಿ. 2014 ರ ಡಿಸೆಂಬರ್ ನಿಂದ ಟಿವಿ9 ನಲ್ಲಿ ಕೆಲಸ ಪ್ರಾರಂಭ. ಟಿವಿ9 ನಲ್ಲಿ ಮೊದಲು ಮೆಟ್ರೋ ರಿಪೋರ್ಟಿಂಗ್ ಮೂಲಕ ಬೆಂಗಳೂರು ಸುತ್ತುವ ಅರಿಯುವ ರಾಜಧಾನಿಯ ನಾಡಿಮಿಡಿತ ಹುಡುಕುವ ಅವಕಾಶ. ಮೆಟ್ರೋ ಬ್ಯೂರೋ ದಲ್ಲಿ ಶೈಕ್ಷಣಿಕ ಹಾಗೂ ಬಿಬಿಎಂಪಿ ವರದಿಗಾರಿಕೆ. ಚಪ್ಪಲಿಯಿಂದ ಹಿಡಿದು ಚಾದರ್ ತನಕ ಸ್ಟೋರಿ ಮಾಡಿದ ಅನುಭವ. ಮೆಟ್ರೋ ಟೀಂ ನಿಂದ ರಾಜಕೀಯ ವರದಿಗಾರಿಕೆಗೆ ಶಿಫ್ಟ್ ಆದ ತಕ್ಷಣ- ಮುಂದುವರಿದಿದೆ ನಿರಂತರ ಪಯಣ. ಕಥೆ, ಕಾದಂಬರಿ, ಕವನ, ಸಿನಿಮಾ, ಸುತ್ತಾಟ, ಆಗಾಗ ಕಿತ್ತಾಟ, ಸ್ನೇಹಿತರೊಂದಿಗೆ ಒಡನಾಟ ಇವೆಲ್ಲ ಮಾಮೂಲಿ ದಿನಚರಿ. ಇವತ್ತಿಗೂ ಬರವಣಿಗೆಯೊಂದೇ ಖುಷಿ ಕೊಡುವ ಖರ್ಜೂರ. ಸ್ಟಾಕ್ ಮಾರ್ಕೆಟ್ ನಲ್ಲಿ 2019 ರಿಂದ ಆ್ಯಕ್ಟಿವ್.

Read More
ಸಾಕಷ್ಟು ಭಿನ್ನವಾಗಿ ‘ಮೋಡ ಕವಿದ ವಾತಾವರಣ’ ಸಿನಿಮಾದ ಪ್ರಚಾರ ಮಾಡಿದ ಸುನಿ
ಸಾಕಷ್ಟು ಭಿನ್ನವಾಗಿ ‘ಮೋಡ ಕವಿದ ವಾತಾವರಣ’ ಸಿನಿಮಾದ ಪ್ರಚಾರ ಮಾಡಿದ ಸುನಿ
ಸ್ಲೋವಾಕಿಯಾದಲ್ಲಿ ಬ್ರೆಡ್ ಮತ್ತು ಉಪ್ಪಿನೊಂದಿಗೆ ಪ್ರಧಾನಿ ಮೋದಿಗೆ ಸ್ವಾಗತ
ಸ್ಲೋವಾಕಿಯಾದಲ್ಲಿ ಬ್ರೆಡ್ ಮತ್ತು ಉಪ್ಪಿನೊಂದಿಗೆ ಪ್ರಧಾನಿ ಮೋದಿಗೆ ಸ್ವಾಗತ
ಯಜ್ಞ-ಯಾಗಾದಿಗಳಲ್ಲಿ ಯಾವ ಸಮಿತ್ತುಗಳನ್ನು ಅರ್ಪಿಸಿದರೆ ಏನು ಫಲ?
ಯಜ್ಞ-ಯಾಗಾದಿಗಳಲ್ಲಿ ಯಾವ ಸಮಿತ್ತುಗಳನ್ನು ಅರ್ಪಿಸಿದರೆ ಏನು ಫಲ?
ರಾಜ್​​ಕುಮಾರ್, ವಿಷ್ಣುವರ್ಧನ್, ಶಂಕರ್ ನಾಗ್ ಬಗ್ಗೆ ದೊಡ್ಡಣ್ಣ ಮಾತು
ರಾಜ್​​ಕುಮಾರ್, ವಿಷ್ಣುವರ್ಧನ್, ಶಂಕರ್ ನಾಗ್ ಬಗ್ಗೆ ದೊಡ್ಡಣ್ಣ ಮಾತು
ವಿಜಯ್ ಬೆನ್ನಲ್ಲೇ ಕೊಲ್ಲೂರು ಮೂಕಾಂಬಿಕೆ ದೇಗುಲಕ್ಕೆ ಅನಂತ್ ಅಂಬಾನಿ ಭೇಟಿ
ವಿಜಯ್ ಬೆನ್ನಲ್ಲೇ ಕೊಲ್ಲೂರು ಮೂಕಾಂಬಿಕೆ ದೇಗುಲಕ್ಕೆ ಅನಂತ್ ಅಂಬಾನಿ ಭೇಟಿ
‘ಕಾಕ್ರೂಚ್’ಗಳ ಪ್ರತಿಭಟನೆಗೆ ನಟ ಪ್ರಕಾಶ್ ರೈ ಸಾಥ್: ವಿಡಿಯೋ
‘ಕಾಕ್ರೂಚ್’ಗಳ ಪ್ರತಿಭಟನೆಗೆ ನಟ ಪ್ರಕಾಶ್ ರೈ ಸಾಥ್: ವಿಡಿಯೋ
ರಸ್ತೆ ಬದಿ ಅಂಗಡಿಯಲ್ಲಿ 1 ಟೀ ಕುಡಿದು 2 ಸಾವಿರ ರೂ. ಕೊಟ್ಟ DCM ಪರಮೇಶ್ವರ್
ರಸ್ತೆ ಬದಿ ಅಂಗಡಿಯಲ್ಲಿ 1 ಟೀ ಕುಡಿದು 2 ಸಾವಿರ ರೂ. ಕೊಟ್ಟ DCM ಪರಮೇಶ್ವರ್
ಗೃಹಲಕ್ಷ್ಮೀ, ಗೃಹಜ್ಯೋತಿಗೆ ಹೊಸ ಅರ್ಜಿಗೆ ಏನೇನು ದಾಖಲೆ ಬೇಕು?
ಗೃಹಲಕ್ಷ್ಮೀ, ಗೃಹಜ್ಯೋತಿಗೆ ಹೊಸ ಅರ್ಜಿಗೆ ಏನೇನು ದಾಖಲೆ ಬೇಕು?
ಸಹೋದರನಿಗೆ ಕೆಪಿಸಿಸಿ ಆಧ್ಯಕ್ಷ ಸ್ಥಾನ ತಪ್ಪಿದಕ್ಕೆ ಸಾಹುಕಾರ್ ಹೇಳಿದ್ದೇನು?
ಸಹೋದರನಿಗೆ ಕೆಪಿಸಿಸಿ ಆಧ್ಯಕ್ಷ ಸ್ಥಾನ ತಪ್ಪಿದಕ್ಕೆ ಸಾಹುಕಾರ್ ಹೇಳಿದ್ದೇನು?
ಕುಮಾರಸ್ವಾಮಿಯ ವಿಡಿಯೋ ರಿಲೀಸ್ ಮಾಡಿದ ಕಾಂಗ್ರೆಸ್ ಶಾಸಕ, ವಿಡಿಯೋನಲ್ಲೇನಿದೆ?
ಕುಮಾರಸ್ವಾಮಿಯ ವಿಡಿಯೋ ರಿಲೀಸ್ ಮಾಡಿದ ಕಾಂಗ್ರೆಸ್ ಶಾಸಕ, ವಿಡಿಯೋನಲ್ಲೇನಿದೆ?