AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬೆಂಗಳೂರಿನಲ್ಲಿ ಹುಡುಗಿಯರನ್ನ ಡೇಟಿಂಗ್​​ಗೆ​​​​​ ಕರೆದುಕೊಂಡು ಹೋಗುವ ಮುನ್ನ ಎಚ್ಚರ, ಮೂರು ಪಂಗನಾಮ ಹಾಕಿಯೇ ಕಳಿಸೋದು

ಬೆಂಗಳೂರು, ಮುಂಬೈನಲ್ಲಿ 'ರೆಸ್ಟೋರೆಂಟ್ ಡೇಟಿಂಗ್ ಸ್ಕ್ಯಾಮ್' ಹೆಚ್ಚಾಗಿದೆ. ಡೇಟಿಂಗ್ ಆ್ಯಪ್‌ಗಳ ಮೂಲಕ ಯುವತಿಯರು ಪುರುಷರನ್ನು ದುಬಾರಿ ಕೆಫೆಗಳಿಗೆ ಆಹ್ವಾನಿಸಿ, ಲಕ್ಷಾಂತರ ರೂ. ಬಿಲ್ ಮಾಡಿಸುತ್ತಾರೆ. ನಂತರ "ತುರ್ತು ಕರೆ" ಎಂದು ಹೇಳಿ ಮಾಯವಾಗುತ್ತಾರೆ. ಪ್ರಶ್ನಿಸಿದರೆ ರೆಸ್ಟೋರೆಂಟ್ ಸಿಬ್ಬಂದಿ ಬೆದರಿಕೆ ಹಾಕುತ್ತಾರೆ. ಎಂ.ಜಿ. ರಸ್ತೆ, ಕೋರಮಂಗಲದಂತಹ ಪ್ರದೇಶಗಳಲ್ಲಿ ಈ ವಂಚನೆ ಸಾಮಾನ್ಯವಾಗಿದ್ದು, ಪೊಲೀಸರು ಪ್ರಕರಣಗಳನ್ನು ಪತ್ತೆ ಹಚ್ಚಿದ್ದಾರೆ. ಎಚ್ಚರವಿರಲಿ!

ಬೆಂಗಳೂರಿನಲ್ಲಿ ಹುಡುಗಿಯರನ್ನ ಡೇಟಿಂಗ್​​ಗೆ​​​​​ ಕರೆದುಕೊಂಡು ಹೋಗುವ ಮುನ್ನ ಎಚ್ಚರ, ಮೂರು ಪಂಗನಾಮ ಹಾಕಿಯೇ ಕಳಿಸೋದು
ಸಾಂದರ್ಭಿಕ ಚಿತ್ರ
ಅಕ್ಷಯ್​ ಪಲ್ಲಮಜಲು​​
|

Updated on: Jan 26, 2026 | 5:00 PM

Share

ಬೆಂಗಳೂರು, ಜ.26: ಬೆಂಗಳೂರು ಮತ್ತು ಮುಂಬೈನಂತಹ ಮಹಾ ನಗರಗಳಲ್ಲಿ ಇತ್ತೀಚೆಗೆ ‘ರೆಸ್ಟೋರೆಂಟ್ ಡೇಟಿಂಗ್ ಸ್ಕ್ಯಾಮ್’ (Restaurant Dating Scam) ಎಂಬ ವಂಚನೆ ಜಾಲ ಭಾರಿ ಸದ್ದು ಮಾಡುತ್ತಿದೆ. ಒಂದು ಸಾಮಾನ್ಯ ಡೇಟ್‌ನಲ್ಲಿ ನೀವು ಕೇವಲ 2,000 ರೂ. ಖರ್ಚು ಮಾಡಬೇಕಾದ ಜಾಗದಲ್ಲಿ 20,000 ರೂ. ರಿಂದ 50,000 ರೂ. ವರೆಗೆ ಬಿಲ್ ಪಾವತಿಸಬೇಕಾದ ಪರಿಸ್ಥಿತಿ ಬರಬಹುದು. ಈ ವಂಚನೆ ಹೇಗೆ ನಡೆಯುತ್ತದೆ ಎಂಬುದರ ಬಗ್ಗೆ ತಿಳಿದುಕೊಂಡರೆ ಖಂಡಿತ ಅಚ್ಚರಿಪಡುವುದು ನಿಜ. ವಂಚಕರು (ಸಾಮಾನ್ಯವಾಗಿ ಯುವತಿಯರು) ಟಿಂಡರ್, ಬಂಬಲ್ ಅಥವಾ ಹಿಂಜ್ ನಂತಹ ಆಪ್‌ಗಳಲ್ಲಿ ಆಕರ್ಷಕ ಪ್ರೊಫೈಲ್ ಸೃಷ್ಟಿಸಿ ಪುರುಷರನ್ನು ಸಂಪರ್ಕಿಸುತ್ತಾರೆ. ಮಾತುಕತೆ ಶುರುವಾದ ಸ್ವಲ್ಪ ಸಮಯದಲ್ಲೇ ಅವರು ಭೇಟಿಯಾಗಲು ಒತ್ತಾಯಿಸುತ್ತಾರೆ. ವಿಶೇಷವೆಂದರೆ, ಅವರು ತಮಗೆ ಮೊದಲೇ ಪರಿಚಯವಿರುವ ಅಥವಾ ನಗರದ ಯಾವುದೋ ಒಂದು ಮೂಲೆಯಲ್ಲಿರುವ ನಿರ್ದಿಷ್ಟ ಕೆಫೆ ಅಥವಾ ಬಾರ್‌ಗೆ ಬರುವಂತೆ ನಿಮ್ಮನ್ನು ಒಪ್ಪಿಸುತ್ತಾರೆ.

ನೀವು ಅಲ್ಲಿಗೆ ಬಂದ ಕೂಡಲೇ, ಅವರು ಮೆನುವಿನಲ್ಲಿರುವ ಅತ್ಯಂತ ದುಬಾರಿ ವೈನ್, ಹುಕ್ಕಾ ಅಥವಾ ಆಹಾರ ಪದಾರ್ಥಗಳನ್ನು ಸಾರಾಸಗಟಾಗಿ ಆರ್ಡರ್ ಮಾಡುತ್ತಾರೆ. ಕೆಲವೊಮ್ಮೆ ಮೆನುವಿನಲ್ಲಿ ಬೆಲೆಗಳೇ ಇರುವುದಿಲ್ಲ. ಆಹಾರ ಸೇವಿಸಿದ ತಕ್ಷಣ ಅಥವಾ ಬಿಲ್ ಬರುವ ಮುನ್ನವೇ ಅವರಿಗೆ “ತುರ್ತು ಕರೆ ಬಂದಿದೆ” ಅಥವಾ “ಮನೆಯಲ್ಲಿ ಏನೋ ಸಮಸ್ಯೆಯಾಗಿದೆ” ಎಂದು ಹೇಳಿ ಅಲ್ಲಿಂದ ಜಾಗ ಖಾಲಿ ಮಾಡುತ್ತಾರೆ. ನಂತರ ನಿಮ್ಮ ಕೈ ಸೇರುವ ಬಿಲ್ ನೋಡಿ ನೀವು ಬೆಚ್ಚಿಬೀಳುತ್ತೀರಿ. ಸಾಮಾನ್ಯ ಕೆಫೆಯಲ್ಲಿ 20,000 ರೂ. ಬಿಲ್ ಬಂದಿರುತ್ತದೆ. ಒಂದು ವೇಳೆ ಇದನ್ನು ನೀವು ಇದನ್ನು ಪ್ರಶ್ನಿಸಿದರೆ, ರೆಸ್ಟೋರೆಂಟ್‌ನ ಬೌನ್ಸರ್‌ಗಳು ಅಥವಾ ಮ್ಯಾನೇಜರ್ ನಿಮ್ಮನ್ನು ಸುತ್ತುವರಿದು ಹಣ ಪಾವತಿಸುವಂತೆ ಬೆದರಿಕೆ ಹಾಕುತ್ತಾರೆ.

ಇದನ್ನೂ ಓದಿ: “ಮದರ್ ಆಫ್ ಆಲ್ ಟ್ರೇಡ್ ಡೀಲ್ಸ್”: ಈ ಒಪ್ಪಂದದಿಂದ ಅಗ್ಗವಾಗಲಿದೆ ಈ ವಸ್ತುಗಳ ಬೆಲೆ

ಎಂ.ಜಿ. ರಸ್ತೆ ಮತ್ತು ಕೋರಮಂಗಲದ ಕೆಲವು ಕೆಫೆಗಳಲ್ಲಿ ಇಂತಹ ಪ್ರಕರಣಗಳು ವರದಿಯಾಗಿವೆ. ಒಬ್ಬ ವ್ಯಕ್ತಿಗೆ ಕೇವಲ ಒಂದು ಗಂಟೆಯ ಡೇಟ್‌ನಲ್ಲಿ 40,000 ರೂ. ಬಿಲ್ ನೀಡಲಾಗಿತ್ತು. ಅಂಧೇರಿ ಮತ್ತು ಬಾಂದ್ರಾ ಭಾಗದ ಕೆಲವು ಸಣ್ಣ ಕ್ಲಬ್‌ಗಳಲ್ಲಿ ಈ ದಂಧೆ ಹೆಚ್ಚಾಗಿದೆ. ಇನ್ನು ಈ ದಂಧೆಗಾಗಿ ರೆಸ್ಟೋರೆಂಟ್ ಮಾಲೀಕರು ಮತ್ತು ವಂಚಕ ಯುವತಿಯರು ಮೊದಲೇ ಒಪ್ಪಂದ ಮಾಡಿಕೊಂಡಿರುತ್ತಾರೆ. ಚರ್ಚ್ ಸ್ಟ್ರೀಟ್, ಇಂದಿರಾನಗರ, ಕೋರಮಂಗಲ, ಎಂ.ಜಿ. ರೋಡ್​​ನಲ್ಲಿ ಇಂತಹ ದಂಧೆ ಹೆಚ್ಚಾಗಿದೆ. ಬೆಂಗಳೂರು ಪೊಲೀಸರು ಇತ್ತೀಚೆಗೆ ಇಂತಹ ಹತ್ತಾರು ಜಾಲಗಳನ್ನು ಪತ್ತೆಹಚ್ಚಿ ರೆಸ್ಟೋರೆಂಟ್ ಮ್ಯಾನೇಜರ್‌ಗಳನ್ನು ಬಂಧಿಸಿದ್ದಾರೆ.

ಬೆಂಗಳೂರು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
ಬಂಗಾಳದ ರಾಜ್ಯಪಾಲರ ಬಳಿ ಸರ್ಕಾರ ರಚನೆಗೆ ಹಕ್ಕು ಮಂಡಿಸಿದ ಸುವೇಂದು ಅಧಿಕಾರಿ
ಬಂಗಾಳದ ರಾಜ್ಯಪಾಲರ ಬಳಿ ಸರ್ಕಾರ ರಚನೆಗೆ ಹಕ್ಕು ಮಂಡಿಸಿದ ಸುವೇಂದು ಅಧಿಕಾರಿ
ಮೂರನೇ ಬಾರಿ ರಾಜ್ಯಪಾಲರನ್ನು ಭೇಟಿ ಮಾಡಿದ ಟಿವಿಕೆ ಮುಖ್ಯಸ್ಥ ವಿಜಯ್
ಮೂರನೇ ಬಾರಿ ರಾಜ್ಯಪಾಲರನ್ನು ಭೇಟಿ ಮಾಡಿದ ಟಿವಿಕೆ ಮುಖ್ಯಸ್ಥ ವಿಜಯ್
ತಮಿಳುನಾಡಿನಲ್ಲಿ ಹೇಗಿದೆ ವಿಜಯ್ ಕ್ರೇಜ್: ಕಣ್ಣಾರೆ ನೋಡಿದ ವಜ್ರಾಂಗ್ ಮಾತು
ತಮಿಳುನಾಡಿನಲ್ಲಿ ಹೇಗಿದೆ ವಿಜಯ್ ಕ್ರೇಜ್: ಕಣ್ಣಾರೆ ನೋಡಿದ ವಜ್ರಾಂಗ್ ಮಾತು
ಮ್ಯಾಜಿಕ್ ನಂಬರ್ ಗಿಂತಲೂ ಹೆಚ್ಚಿನ ಬೆಂಬಲ: ವಿಜಯ್​​ ಕೈ ಹಿಡಿದ ಪಕ್ಷಗಳಾವುವು
ಮ್ಯಾಜಿಕ್ ನಂಬರ್ ಗಿಂತಲೂ ಹೆಚ್ಚಿನ ಬೆಂಬಲ: ವಿಜಯ್​​ ಕೈ ಹಿಡಿದ ಪಕ್ಷಗಳಾವುವು
ತಮಿಳುನಾಡಿನಲ್ಲಿ TVK ಸರ್ಕಾರ ಫಿಕ್ಸ್‌, ಮ್ಯಾಜಿಕ್ ನಂಬರ್ ಹೊಂದಿಸಿದ ವಿಜಯ್
ತಮಿಳುನಾಡಿನಲ್ಲಿ TVK ಸರ್ಕಾರ ಫಿಕ್ಸ್‌, ಮ್ಯಾಜಿಕ್ ನಂಬರ್ ಹೊಂದಿಸಿದ ವಿಜಯ್
ವಿಜಯ್ ಜೊತೆ ನಟಿಸಿರುವ ಕನ್ನಡದ ನಟ ವಜ್ರಾಂಗ್ ದಳಪತಿ ಬಗ್ಗೆ ಹೇಳಿದ್ದೇನು?
ವಿಜಯ್ ಜೊತೆ ನಟಿಸಿರುವ ಕನ್ನಡದ ನಟ ವಜ್ರಾಂಗ್ ದಳಪತಿ ಬಗ್ಗೆ ಹೇಳಿದ್ದೇನು?
ನನ್ನ ಎಲ್ಲಾ ಅಸ್ತಿ ಅನಾಥ ಆಶ್ರಮಕ್ಕೆ ಕೊಡ್ತೇನೆ ಎಂದ ತಾಯಿ
ನನ್ನ ಎಲ್ಲಾ ಅಸ್ತಿ ಅನಾಥ ಆಶ್ರಮಕ್ಕೆ ಕೊಡ್ತೇನೆ ಎಂದ ತಾಯಿ
ತಮಿಳುನಾಡಿನ ಒಳರಾಜಕೀಯನ ಎಳೆಎಳೆಯಾಗಿ ಬಿಚ್ಚಿಟ್ಟ ಕಾಂಗ್ರೆಸ್ ಉಸ್ತುವಾರಿ
ತಮಿಳುನಾಡಿನ ಒಳರಾಜಕೀಯನ ಎಳೆಎಳೆಯಾಗಿ ಬಿಚ್ಚಿಟ್ಟ ಕಾಂಗ್ರೆಸ್ ಉಸ್ತುವಾರಿ
ಆಪ್ತ ಸಹಾಯಕನ ಅರಿಶಿಣ ಶಾಸ್ತ್ರದಲ್ಲಿ ಪತ್ನಿ ಜೊತೆ ಶರಣು ಸಲಗರ ಡ್ಯಾನ್ಸ್​​
ಆಪ್ತ ಸಹಾಯಕನ ಅರಿಶಿಣ ಶಾಸ್ತ್ರದಲ್ಲಿ ಪತ್ನಿ ಜೊತೆ ಶರಣು ಸಲಗರ ಡ್ಯಾನ್ಸ್​​
ಜಿಗಣಿ ಪೊಲೀಸರ ಭರ್ಜರಿ ಬೇಟೆ: ಕೋಟ್ಯಂತರ ರೂ ಮೌಲ್ಯದ 250 ಕೆಜಿ ಗಾಂಜಾ ಜಪ್ತಿ
ಜಿಗಣಿ ಪೊಲೀಸರ ಭರ್ಜರಿ ಬೇಟೆ: ಕೋಟ್ಯಂತರ ರೂ ಮೌಲ್ಯದ 250 ಕೆಜಿ ಗಾಂಜಾ ಜಪ್ತಿ