AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಗೆಳೆಯರ ಜೊತೆ ಧರ್ಮಸ್ಥಳಕ್ಕೆ ಹೊರಟಿದ್ದ ನಿವೃತ್ತ ಪೊಲೀಸ್ ಸಿಬ್ಬಂದಿ ಮೆಜೆಸ್ಟಿಕ್​​ನಲ್ಲಿ ಶವವಾಗಿ ಪತ್ತೆ

ದೇವರ ದರ್ಶನಕ್ಕೆಂದು ಹೋಗುವುದಾಗಿ ಹೇಳಿ ಹೊರಟ ಮುನಿಆಂಜಿನೇಯನವರು ಮೆಜೆಸ್ಟಿಕ್​ನ ಕೆಎಸ್​ಆರ್​ಟಿಸಿ ಬಸ್ ನಿಲ್ದಾಣದಲ್ಲಿ ಶವವಾಗಿ ಪತ್ತೆಯಾಗಿದ್ದಾರೆ.

ಗೆಳೆಯರ ಜೊತೆ ಧರ್ಮಸ್ಥಳಕ್ಕೆ ಹೊರಟಿದ್ದ ನಿವೃತ್ತ ಪೊಲೀಸ್ ಸಿಬ್ಬಂದಿ ಮೆಜೆಸ್ಟಿಕ್​​ನಲ್ಲಿ ಶವವಾಗಿ ಪತ್ತೆ
ಮುನಿಆಂಜಿನೇಯ
TV9 Web
| Edited By: |

Updated on:Mar 07, 2023 | 10:05 AM

Share

ಬೆಂಗಳೂರು: ನಿವೃತ್ತ ಪೊಲೀಸ್ ಸಿಬ್ಬಂದಿ ಮುನಿಆಂಜಿನೇಯ(65) ಮೆಜೆಸ್ಟಿಕ್​​ನ ಬಸ್​ ನಿಲ್ದಾಣದಲ್ಲಿ ಶವವಾಗಿ ಪತ್ತೆಯಾಗಿದ್ದಾರೆ. ದೊಡ್ಡಬಳ್ಳಾಪುರದ ಮದುರನ ಹೊಸಹಳ್ಳಿ ನಿವಾಸಿ ಮುನಿಆಂಜಿನೇಯ, ಗೆಳೆಯರ ಜೊತೆ ಧರ್ಮಸ್ಥಳಕ್ಕೆ ಹೋಗಿ ಬರ್ತೀನಿ ಎಂದು ಮನೆಯಲ್ಲಿ ಹೇಳಿ ಹೊರಟಿದ್ದರು. ಆದ್ರೆ ಇಂದು ಮೆಜೆಸ್ಟಿಕ್​​ನಲ್ಲಿ ಶವ ಪತ್ತೆಯಾಗಿದೆ.

ದೇವರ ದರ್ಶನಕ್ಕೆಂದು ಹೋಗುವುದಾಗಿ ಹೇಳಿ ಹೊರಟ ಮುನಿಆಂಜಿನೇಯನವರು ಮೆಜೆಸ್ಟಿಕ್​ನ ಕೆಎಸ್​ಆರ್​ಟಿಸಿ ಬಸ್ ನಿಲ್ದಾಣದಲ್ಲಿ ಶವವಾಗಿ ಪತ್ತೆಯಾಗಿದ್ದಾರೆ. ಮುನಿಆಂಜಿನೇಯ ನಿನ್ನೆ ಮಧ್ಯಾಹ್ನ 2 ಗಂಟೆಗೆ ಮನೆಯಿಂದ ತೆರಳಿದ್ದರು. ಇಂದು ಬೆಳಗಿನ ಜಾವ 3 ಗಂಟೆಗೆ ಶವವಾಗಿ ಸಿಕ್ಕಿದ್ದಾರೆ. ಇನ್ನು ಬಸ್​ ನಿಲ್ದಾಣದಲ್ಲಿ ಗೆಳೆಯರಿಗಾಗಿ ಕಾದು ಕುಳಿತಿದ್ದಾಗ ಸಾವು ಸಂಭವಿಸಿದೆ ಎನ್ನಲಾಗುತ್ತಿದೆ. ನಿವೃತ್ತ ಪೊಲೀಸ್ ಸಿಬ್ಬಂದಿ ಸಾವಿನ ಬಗ್ಗೆ ಕುಟುಂಬಸ್ಥರು ಅನುಮಾನ ವ್ಯಕ್ತಪಡಿಸಿದ್ದಾರೆ. ಮುನಿಆಂಜಿನೇಯ ಬಳಿ ಇದ್ದ ನಗದು ಹಾಗೂ ಚಿನ್ನಾಭರಣ ನಾಪತ್ತೆಯಾಗಿದೆ. ಮುನಿಆಂಜಿನೇಯ ಮೃತದೇಹ ವಿಕ್ಟೋರಿಯಾ ಆಸ್ಪತ್ರೆಗೆ ರವಾನಿಸಲಾಗಿದ್ದು ಉಪ್ಪಾರಪೇಟೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಇದನ್ನೂ ಓದಿ: ಮಾ.24 ರಂದು ಎದುರಾಗಲಿದೆ ಬಸ್ ಸಮಸ್ಯೆ; ಅನಿರ್ದಿಷ್ಟಾವಧಿ ಧರಣಿಗೆ ಸಾರಿಗೆ ನೌಕರರ ನಿರ್ಧಾರ

ಪ್ರೀತಿಸಿದ ಹುಡುಗಿ ಸಿಗಲಿಲ್ಲ ಎಂದು ಚಾಕುವಿನಿಂದ ಇರಿದು ಹತ್ಯೆ ಮಾಡಿದ ಪಾಗಲ್ ಪ್ರೇಮಿ

ವಿಜಯನಗರ: ಪ್ರೀತಿಸಿದವಳು ಸಿಗಲಿಲ್ಲ ಎಂದು ಆಕೆಯನ್ನ ಚಾಕುವಿನಿಂದ ಇರಿದು ಕೊಲೆ ಮಾಡಿರುವ ಘಟನೆ ಜಿಲ್ಲೆಯ ಹರಪನಹಳ್ಳಿ ತಾಲೂಕಿನ ದುಗ್ಗಾವತಿ ಗ್ರಾಮದ ದುಗ್ಗಮ್ಮ ದೇವಿ ಜಾತ್ರೆಯಲ್ಲಿ ನಡೆದಿದೆ. ಆರೋಪಿ ಮೂಕಪ್ಪನವರ ಹನುಮಂತನ ಎಂಬಾತ ಪ್ರತಿಭಾಳನ್ನ ಪ್ರೀತಿಸುವುದಾಗಿ ಹೇಳಿಕೊಂಡು ಗ್ರಾಮದಲ್ಲಿ ಸುತ್ತುತ್ತಿದ್ದ. ಇದಾದ ಬಳಿಕ ಪ್ರತಿಭಾಳನ್ನ ರಾಣೆಬೆನ್ನೂರಿನ‌ ನಾಗರಾಜ್ ಎಂಬುವವರ ಜೊತೆ ಮದುವೆ ಮಾಡಿಕೊಡಲಾಗಿತ್ತು. ಜೊತೆಗೆ ಆಕೆಗೆ ಓರ್ವ ಗಂಡು ಮಗು ಸಹ‌ ಇದೆ.

ಮದುವೆಯಾದ ಬಳಿಕ ಚೆನ್ನಾಗಿ ಜೀವನ ನಡೆಸುತ್ತಿದ್ದ ಪ್ರತಿಭಾ ಚಿಕ್ಕಮ್ಮನ ಊರಿಗೆ ಜಾತ್ರೆಗೆ ಬಂದಿದ್ದಳು. ಇನ್ನೇನು ತನ್ನೂರಿಗೆ ಹೋಗಬೇಕು ಎನ್ನವಷ್ಟರಲ್ಲಿ ಪಾಗಲ್ ಪ್ರೇಮಿ ಹನುಮಂತ ಆಕೆಯನ್ನ ನಡು ರಸ್ತೆಯಲ್ಲಿ ಮನ ಬಂದಂತೆ ದೇಹದ ಬಹುತೇಕ‌ ಭಾಗಳಿಗೆ ಚಾಕುವಿನಿಂದ ಇರಿದಿದ್ದಾನೆ. ತೀವ್ರಗಾಯಗೊಂಡಿದ್ದ ಮಹಿಳೆಯನ್ನ ಆಸ್ಪತ್ರೆಗೆ ದಾಖಲು ಮಾಡುವ ಮಾರ್ಗಮಧ್ಯಯೇ ತೀವ್ರ ರಕ್ತಸ್ರಾವದಿಂದ ಸಾವನ್ನಪ್ಪಿದ್ದಾಳೆ. ಈ ಕುರಿತು ಹಲವಾಗಲು‌ ಪೊಲೀಸ್ ಠಾಣೆಯಲ್ಲಿ ‌ಪ್ರಕರಣ ದಾಖಲಾಗಿದ್ದು, ಆರೋಪಿ ಮೂಕಪ್ಪನವರ ಹನುಮಂತನನ್ನು ಬಂಧಿಸಲಾಗಿದೆ.

ಪ್ರಮುಖ ಸುದ್ದಿಗಳನ್ನು ಓದಲು ಇದರ ಮೇಲೆ ಕ್ಲಿಕ್ ಮಾಡಿ

Published On - 10:05 am, Tue, 7 March 23

ಪಕ್ಕದಲ್ಲಿ ಬೋರ್​ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು
ಪಕ್ಕದಲ್ಲಿ ಬೋರ್​ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು
ಬೋಗಸ್ ಮಾಡವ್ರೆ, ಯಶ್ ಹೆಸರು ಹಾಳು ಮಾಡ್ತಾವ್ರೆ: ಯಶ್ ತಾಯಿ ಆರೋಪ
ಬೋಗಸ್ ಮಾಡವ್ರೆ, ಯಶ್ ಹೆಸರು ಹಾಳು ಮಾಡ್ತಾವ್ರೆ: ಯಶ್ ತಾಯಿ ಆರೋಪ
ಫಿಲಂ ಚೇಂಬರ್ ನೂತನ ಅಧ್ಯಕ್ಷೆ ಜಯಮಾಲ ಹಾಕಿಕೊಂಡಿರುವ ಯೋಜನೆಗಳೇನು?
ಫಿಲಂ ಚೇಂಬರ್ ನೂತನ ಅಧ್ಯಕ್ಷೆ ಜಯಮಾಲ ಹಾಕಿಕೊಂಡಿರುವ ಯೋಜನೆಗಳೇನು?
ದೇವದತ್ ಪಡಿಕ್ಕಲ್ ಶತಕ; ಕ್ವಾರ್ಟರ್ ಫೈನಲ್​ಗೇರಿದ ಕರ್ನಾಟಕ
ದೇವದತ್ ಪಡಿಕ್ಕಲ್ ಶತಕ; ಕ್ವಾರ್ಟರ್ ಫೈನಲ್​ಗೇರಿದ ಕರ್ನಾಟಕ
ಕೇಂದ್ರ ಬಜೆಟ್ ಬಗ್ಗೆ ವ್ಯಂಗ್ಯ ಮಾಡುತ್ತಲ್ಲೇ ಕಟುವಾಗಿ ಟೀಕಿಸಿದ ಸಿಎಂ!
ಕೇಂದ್ರ ಬಜೆಟ್ ಬಗ್ಗೆ ವ್ಯಂಗ್ಯ ಮಾಡುತ್ತಲ್ಲೇ ಕಟುವಾಗಿ ಟೀಕಿಸಿದ ಸಿಎಂ!
ಆಸ್ಟ್ರೇಲಿಯನ್ ಓಪನ್ ಗೆದ್ದು ಇತಿಹಾಸ ನಿರ್ಮಿಸಿದ ಕಾರ್ಲೋಸ್ ಅಲ್ಕರಾಝ್
ಆಸ್ಟ್ರೇಲಿಯನ್ ಓಪನ್ ಗೆದ್ದು ಇತಿಹಾಸ ನಿರ್ಮಿಸಿದ ಕಾರ್ಲೋಸ್ ಅಲ್ಕರಾಝ್
ಚಿಮುಲ್ ಚುನಾವಣೆ: ಮತದಾರರಿಗೆ ಲಕ್ಷ ಲಕ್ಷ ನಗದು, ಬೆಳ್ಳಿ ತಟ್ಟೆ!
ಚಿಮುಲ್ ಚುನಾವಣೆ: ಮತದಾರರಿಗೆ ಲಕ್ಷ ಲಕ್ಷ ನಗದು, ಬೆಳ್ಳಿ ತಟ್ಟೆ!
ಟ್ಯಾಕ್ಸ್‌ ಟೆರರಿಸಂ: ಐಟಿ ದಾಳಿ ವಿರುದ್ಧ ತಿರುಗಿಬಿದ್ದ ಮೋಹನ್ ದಾಸ್ ಪೈ
ಟ್ಯಾಕ್ಸ್‌ ಟೆರರಿಸಂ: ಐಟಿ ದಾಳಿ ವಿರುದ್ಧ ತಿರುಗಿಬಿದ್ದ ಮೋಹನ್ ದಾಸ್ ಪೈ
ಅರಣ್ಯ ಇಲಾಖೆ ಸಿಬ್ಬಂದಿಯನ್ನೇ ಅಟ್ಟಾಡಿಸಿದ ಆನೆ, ಭಯಾನಕ ವಿಡಿಯೋ ನೋಡಿ
ಅರಣ್ಯ ಇಲಾಖೆ ಸಿಬ್ಬಂದಿಯನ್ನೇ ಅಟ್ಟಾಡಿಸಿದ ಆನೆ, ಭಯಾನಕ ವಿಡಿಯೋ ನೋಡಿ
Siddaramaiah Press Conference: ಸಿದ್ದರಾಮಯ್ಯ ಸುದ್ದಿಗೋಷ್ಠಿ ಲೈವ್​
Siddaramaiah Press Conference: ಸಿದ್ದರಾಮಯ್ಯ ಸುದ್ದಿಗೋಷ್ಠಿ ಲೈವ್​