AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಹೆಚ್ಚಾದ ಸೈಬರ್ ಕ್ರೈಂ ಪ್ರಕರಣ; ಬೆಂಗಳೂರಲ್ಲಿ ಆ್ಯಪ್ ಡೌನ್​ಲೋಡ್ ಮಾಡಿಸಿ ನಿವೃತ್ತ ಯೋಧನಿಗೆ 1 ಲಕ್ಷ ಹಣ ವಂಚನೆ

ಅಮೇಜಾನ್​​​ ಆರ್ಡರ್ ಕ್ಯಾನ್ಸಲ್ ಆಗಿ ಹಣ ಜಮೆ ಆಗದ ಕಾರಣ ಗೂಗಲ್ ಮಾಡಿ ಸಹಾಯವಾಣಿಗೆ ಕರೆ ಮಾಡಿದ್ದ ನಿವೃತ್ತ ಯೋಧ ಮಹೇಶರಿಗೆ ಖದೀಮರು ಕರೆ ಮಾಡಿ ಹಂತ ಹಂತವಾಗಿ ಹಣ ಎಗರಿಸಿದ್ದಾರೆ.

ಹೆಚ್ಚಾದ ಸೈಬರ್ ಕ್ರೈಂ ಪ್ರಕರಣ; ಬೆಂಗಳೂರಲ್ಲಿ ಆ್ಯಪ್ ಡೌನ್​ಲೋಡ್ ಮಾಡಿಸಿ ನಿವೃತ್ತ ಯೋಧನಿಗೆ 1 ಲಕ್ಷ ಹಣ ವಂಚನೆ
ಸಾಂದರ್ಭಿಕ ಚಿತ್ರ
ರಾಚಪ್ಪಾಜಿ ನಾಯ್ಕ್
| Edited By: ಆಯೇಷಾ ಬಾನು|

Updated on: Jul 29, 2023 | 7:01 AM

Share

ಬೆಂಗಳೂರು, ಜುಲೈ 29: ಟೆಕ್ನಾಲಜಿ ಎಷ್ಟು ಸ್ಮಾರ್ಟ್ ಆಗುತ್ತಾ ಹೋಗುತ್ತಿದೆಯೋ ಸೈಬರ್ ಖದೀಮರು ಕೂಡ ಅಷ್ಟೇ ಸ್ಮಾರ್ಟ್ ಆಗುತ್ತಿದ್ದಾರೆ. ನಕಲಿ ಬ್ಯಾಂಕ್ ಐಡಿ ನೀಡಿ 1 ಲಕ್ಷ ಹಣ ವಂಚನೆ ಮಾಡಿರುವ ಘಟನೆ ಬೆಂಗಳೂರಿನಲ್ಲಿ ನಡೆದಿದೆ. ಖದೀಮನೋರ್ವ ಮೋಸ ಮಾಡಲೆಂದೇ MOSA1122@SBI ಯುಪಿಐ ಐಡಿ ಕ್ರಿಎಟ್ ಮಾಡಿದ್ದಾನೆ. ಫೋನ್ ಮಾಡುವವರಿಗೆ, ಅಕೌಂಟ್ ಚೆಕ್ ಮಾಡಿ ಅಂತಾನೆ. ಬ್ಯಾಂಕ್ ಅಪ್ಲಿಕೇಶನ್ ಓಪನ್ ಮಾಡ್ತಿದ್ದಂತೆ ಹಣ ಮಂಗಮಾಯ ಆಗಿಬಿಡುತ್ತೆ. ಇಂತಹದೊಂದು ವಂಚನೆ ಬೆಂಗಳೂರಿನಲ್ಲಿ ನಡೆದಿದ್ದು ವಂಚನೆಗೊಳಗಾದ ನಿವೃತ್ತ ಯೋಧ ಮಹೇಶ್ ಎಂಬುವವರು ಹಲಸೂರು ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ.

ನಿವೃತ್ತ ಯೋಧ ಮಹೇಶ್ ಅಮೇಜಾನ್​​​ನಲ್ಲಿ ₹5,499 ಮೌಲ್ಯದ ಸ್ಪೀಕರ್ ಬುಕ್​ ಮಾಡಿದ್ದರು. ನಂತರ ಬುಕ್ಕಿಂಗ್ ಕ್ಯಾನ್ಸಲ್ ಆಗಿತ್ತು. ಬುಕ್ಕಿಂಗ್​ ಕ್ಯಾನ್ಸಲ್ ಆಗಿ 3 ದಿನದಲ್ಲಿ ಹಣ ವಾಪಸ್​ ಬರುತ್ತೆಂದು ಮೊಬೈಲ್​ಗೆ ಸಂದೇಶ ಬಂದಿತ್ತು. ಹಣ ಜಮೆ ಆಗದಿದ್ದಕ್ಕೆ ಗೂಗುಲ್​​ನಲ್ಲಿ ಸಹಾಯವಾಣಿ ಹುಡುಕಿ ಮಹೇಶ್ ಕರೆ ಮಾಡಿದ್ದರು. ಬಳಿಕ ಮತ್ತೊಂದು ನಂಬರ್​​ನಿಂದ ವಂಚಕರು ಕರೆ ಮಾಡಿದ್ದಾರೆ. RUSKDESK ಅಪ್ಲಿಕೇಶನ್ ಡೌನ್​​​​ಲೋಡ್ ಮಾಡಲು ಹೇಳಿದ್ದಾರೆ. ಌಪ್​​ ಡೌನ್​​​​ಲೋಡ್ ಮಾಡಿ ಬಟನ್​ ಪ್ರೆಸ್​ ಮಾಡಲು ಹೇಳಿದ್ದಾರೆ.

ಇದನ್ನೂ ಓದಿ: Bengaluru News: ಬೆಂಗಳೂರಿನಲ್ಲಿ ಕಷ್ಟಕ್ಕೆ ಮರುಗಿದ ರ್ಯಾಪಿಡೋ ಚಾಲಕನಿಗೇ ವಂಚಿಸಿದ ಗ್ರಾಹಕ

ವಂಚಕರ ಜಾಲ ತಿಳಿಯದೆ ಇದನ್ನು ನಂಬಿದ ಮಹೇಶ್ ಖದೀಮರು ಹೇಳಿದನ್ನು ಫಾಲೋ ಮಾಡಿದ್ದಾರೆ. ಆ್ಯಪ್ ಡೌನ್​​​​ಲೋಡ್ ಮಾಡಿ ಓಕೆ ಬಟನ್​ ಪ್ರೆಸ್​ ಮಾಡುತ್ತಿದ್ದಂತೆ ಮಹೇಶ್ ಅವರ ಬ್ಯಾಂಕ್ ಖಾತೆಯಿಂದ 81 ಸಾವಿರ ಹಣ ಕಡಿತಗೊಂಡಿದೆ. ಬಳಿಕ ವಂಚಕರು ಮಾತನಾಡಿ ಫೋನ್ ಇಟ್ಟಿದ್ದಾರೆ. ಬ್ಯಾಂಕ್​ನಿಂದ ಹಣ ಕಟ್ ಆದ ಬಗ್ಗೆ ತಿಳಿದ ಮಹೇಶ್ ಮತ್ತೆ ಕರೆ ಮಾಡಿ ವಿಚಾರಿಸಿದಾಗ ತಪ್ಪಾಗಿ ನಂಬರ್ ಟೈಪ್ ಮಾಡಿದ್ದೀರಿ ಎಂದಿದ್ದಾರೆ. ಹಣ ನಿಮ್ಮ ಖಾತೆಗೆ ಬರುತ್ತೆ ಎಂದು ಪದೇ ಪದೇ ಅಕೌಂಟ್ ಪರೀಕ್ಷಿಸಲು ಹೇಳಿದ್ದಾರೆ. ಹೀಗೆ ಹಂತ ಹಂತವಾಗಿ 1 ಲಕ್ಷ ಹಣವನ್ನು ಅಕೌಂಟ್ ನಿಂದ ಮಾಯ ಮಾಡಲಾಗಿದೆ. ಸದ್ಯ ಮೋಸ ಮಾಡಲೆಂದೇ ಬ್ಯಾಂಕ್​ನ ನಕಲಿ ಯುಪಿಐ ಐಡಿ ನೀಡಿ ವಂಚನೆ ಮಾಡಿರುವ ಬಗ್ಗೆ ಮಹೇಶ್ ಅವರು ಹಲಸೂರು ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ.

ಬೆಂಗಳೂರಿಗೆ ಸಂಬಂಧಿಸಿದ ಸುದ್ದಿಗಳನ್ನು ಓದಲು ಇದರ ಮೇಲೆ ಕ್ಲಿಕ್ ಮಾಡಿ

Follow Us
‘ಟಾಕ್ಸಿಕ್’ ಸ್ವಾಗತಕ್ಕೆ ಸಿದ್ಧವಾಗಿವೆ ‘ರಾಕಿಂಗ್ ಸ್ಟಾರ್’ ಯಶ್ ಕಟೌಟ್​ಗಳು
‘ಟಾಕ್ಸಿಕ್’ ಸ್ವಾಗತಕ್ಕೆ ಸಿದ್ಧವಾಗಿವೆ ‘ರಾಕಿಂಗ್ ಸ್ಟಾರ್’ ಯಶ್ ಕಟೌಟ್​ಗಳು
ರೈಲ್ವೆ ನಿಲ್ದಾಣಗಳ ಆಹಾರ ಮಳಿಗೆಗಳಲ್ಲಿ ತಪಾಸಣೆ: ಯುಟಿ ಖಾದರ್ ಹೇಳಿದ್ದಿಷ್ಟು
ರೈಲ್ವೆ ನಿಲ್ದಾಣಗಳ ಆಹಾರ ಮಳಿಗೆಗಳಲ್ಲಿ ತಪಾಸಣೆ: ಯುಟಿ ಖಾದರ್ ಹೇಳಿದ್ದಿಷ್ಟು
ವಿಧಾನಸಭೆಯಲ್ಲಿ ಆಕ್ಷೇಪಾರ್ಹ ಪದ ಬಳಸಿದ ಸಚಿವ ಶಿವಲಿಂಗೇಗೌಡ
ವಿಧಾನಸಭೆಯಲ್ಲಿ ಆಕ್ಷೇಪಾರ್ಹ ಪದ ಬಳಸಿದ ಸಚಿವ ಶಿವಲಿಂಗೇಗೌಡ
KPSC Scam: ಇಡಿಯಿಂದಲೂ ಅಭ್ಯರ್ಥಿಗಳಿಗೆ ಟೆಸ್ಟ್
KPSC Scam: ಇಡಿಯಿಂದಲೂ ಅಭ್ಯರ್ಥಿಗಳಿಗೆ ಟೆಸ್ಟ್
ಮೌನದಿಂದಲೇ ಆಧ್ಯಾತ್ಮ: ರಾಷ್ಟ್ರಭಕ್ತಿ ಬಿತ್ತುವ ಹವಾ ಮಲ್ಲಿನಾಥ ಮಹಾರಾಜರು
ಮೌನದಿಂದಲೇ ಆಧ್ಯಾತ್ಮ: ರಾಷ್ಟ್ರಭಕ್ತಿ ಬಿತ್ತುವ ಹವಾ ಮಲ್ಲಿನಾಥ ಮಹಾರಾಜರು
ವರಮಹಾಲಕ್ಷ್ಮಿ ವ್ರತ:ಇಷ್ಟಾರ್ಥ ಸಿದ್ಧಿಗಾಗಿ ಪೂಜಾ ವಿಧಿವಿಧಾನಗಳ ಮಾರ್ಗದರ್ಶಿ
ವರಮಹಾಲಕ್ಷ್ಮಿ ವ್ರತ:ಇಷ್ಟಾರ್ಥ ಸಿದ್ಧಿಗಾಗಿ ಪೂಜಾ ವಿಧಿವಿಧಾನಗಳ ಮಾರ್ಗದರ್ಶಿ
ಚಿತ್ರರಂಗಕ್ಕೆ ಬಂದು 10 ವರ್ಷ, ಅಭಿಮಾನಿಗಳೊಟ್ಟಿಗೆ ನಟಿ ಆಶಿಕಾ ಸಂಭ್ರಮಾಚರಣೆ
ಚಿತ್ರರಂಗಕ್ಕೆ ಬಂದು 10 ವರ್ಷ, ಅಭಿಮಾನಿಗಳೊಟ್ಟಿಗೆ ನಟಿ ಆಶಿಕಾ ಸಂಭ್ರಮಾಚರಣೆ
ಹೊಳೆ ಆಲೂರು - ಅಮರಗೋಳ ರಸ್ತೆ ಸಂಪೂರ್ಣ ಅದ್ವಾನ
ಹೊಳೆ ಆಲೂರು - ಅಮರಗೋಳ ರಸ್ತೆ ಸಂಪೂರ್ಣ ಅದ್ವಾನ
ತೀವ್ರ ವಿರೋಧದ ನಡುವೆಯೂ ಮೈಸೂರಿನಲ್ಲಿ ಕಂಬಳಕ್ಕೆ ಟ್ರ್ಯಾಕ್ ನಿರ್ಮಾಣ ಶುರು
ತೀವ್ರ ವಿರೋಧದ ನಡುವೆಯೂ ಮೈಸೂರಿನಲ್ಲಿ ಕಂಬಳಕ್ಕೆ ಟ್ರ್ಯಾಕ್ ನಿರ್ಮಾಣ ಶುರು
ಹುಮನಾಬಾದ್ ಪುರಭವನಕ್ಕಿಲ್ಲ ಉದ್ಘಾಟನೆ ಭಾಗ್ಯ: ಪಾಳುಬಿದ್ದ ಕಟ್ಟಡ
ಹುಮನಾಬಾದ್ ಪುರಭವನಕ್ಕಿಲ್ಲ ಉದ್ಘಾಟನೆ ಭಾಗ್ಯ: ಪಾಳುಬಿದ್ದ ಕಟ್ಟಡ