AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಹೆಚ್ಚಾದ ಸೈಬರ್ ಕ್ರೈಂ ಪ್ರಕರಣ; ಬೆಂಗಳೂರಲ್ಲಿ ಆ್ಯಪ್ ಡೌನ್​ಲೋಡ್ ಮಾಡಿಸಿ ನಿವೃತ್ತ ಯೋಧನಿಗೆ 1 ಲಕ್ಷ ಹಣ ವಂಚನೆ

ಅಮೇಜಾನ್​​​ ಆರ್ಡರ್ ಕ್ಯಾನ್ಸಲ್ ಆಗಿ ಹಣ ಜಮೆ ಆಗದ ಕಾರಣ ಗೂಗಲ್ ಮಾಡಿ ಸಹಾಯವಾಣಿಗೆ ಕರೆ ಮಾಡಿದ್ದ ನಿವೃತ್ತ ಯೋಧ ಮಹೇಶರಿಗೆ ಖದೀಮರು ಕರೆ ಮಾಡಿ ಹಂತ ಹಂತವಾಗಿ ಹಣ ಎಗರಿಸಿದ್ದಾರೆ.

ಹೆಚ್ಚಾದ ಸೈಬರ್ ಕ್ರೈಂ ಪ್ರಕರಣ; ಬೆಂಗಳೂರಲ್ಲಿ ಆ್ಯಪ್ ಡೌನ್​ಲೋಡ್ ಮಾಡಿಸಿ ನಿವೃತ್ತ ಯೋಧನಿಗೆ 1 ಲಕ್ಷ ಹಣ ವಂಚನೆ
ಸಾಂದರ್ಭಿಕ ಚಿತ್ರ
ರಾಚಪ್ಪಾಜಿ ನಾಯ್ಕ್
| Edited By: |

Updated on: Jul 29, 2023 | 7:01 AM

Share

ಬೆಂಗಳೂರು, ಜುಲೈ 29: ಟೆಕ್ನಾಲಜಿ ಎಷ್ಟು ಸ್ಮಾರ್ಟ್ ಆಗುತ್ತಾ ಹೋಗುತ್ತಿದೆಯೋ ಸೈಬರ್ ಖದೀಮರು ಕೂಡ ಅಷ್ಟೇ ಸ್ಮಾರ್ಟ್ ಆಗುತ್ತಿದ್ದಾರೆ. ನಕಲಿ ಬ್ಯಾಂಕ್ ಐಡಿ ನೀಡಿ 1 ಲಕ್ಷ ಹಣ ವಂಚನೆ ಮಾಡಿರುವ ಘಟನೆ ಬೆಂಗಳೂರಿನಲ್ಲಿ ನಡೆದಿದೆ. ಖದೀಮನೋರ್ವ ಮೋಸ ಮಾಡಲೆಂದೇ MOSA1122@SBI ಯುಪಿಐ ಐಡಿ ಕ್ರಿಎಟ್ ಮಾಡಿದ್ದಾನೆ. ಫೋನ್ ಮಾಡುವವರಿಗೆ, ಅಕೌಂಟ್ ಚೆಕ್ ಮಾಡಿ ಅಂತಾನೆ. ಬ್ಯಾಂಕ್ ಅಪ್ಲಿಕೇಶನ್ ಓಪನ್ ಮಾಡ್ತಿದ್ದಂತೆ ಹಣ ಮಂಗಮಾಯ ಆಗಿಬಿಡುತ್ತೆ. ಇಂತಹದೊಂದು ವಂಚನೆ ಬೆಂಗಳೂರಿನಲ್ಲಿ ನಡೆದಿದ್ದು ವಂಚನೆಗೊಳಗಾದ ನಿವೃತ್ತ ಯೋಧ ಮಹೇಶ್ ಎಂಬುವವರು ಹಲಸೂರು ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ.

ನಿವೃತ್ತ ಯೋಧ ಮಹೇಶ್ ಅಮೇಜಾನ್​​​ನಲ್ಲಿ ₹5,499 ಮೌಲ್ಯದ ಸ್ಪೀಕರ್ ಬುಕ್​ ಮಾಡಿದ್ದರು. ನಂತರ ಬುಕ್ಕಿಂಗ್ ಕ್ಯಾನ್ಸಲ್ ಆಗಿತ್ತು. ಬುಕ್ಕಿಂಗ್​ ಕ್ಯಾನ್ಸಲ್ ಆಗಿ 3 ದಿನದಲ್ಲಿ ಹಣ ವಾಪಸ್​ ಬರುತ್ತೆಂದು ಮೊಬೈಲ್​ಗೆ ಸಂದೇಶ ಬಂದಿತ್ತು. ಹಣ ಜಮೆ ಆಗದಿದ್ದಕ್ಕೆ ಗೂಗುಲ್​​ನಲ್ಲಿ ಸಹಾಯವಾಣಿ ಹುಡುಕಿ ಮಹೇಶ್ ಕರೆ ಮಾಡಿದ್ದರು. ಬಳಿಕ ಮತ್ತೊಂದು ನಂಬರ್​​ನಿಂದ ವಂಚಕರು ಕರೆ ಮಾಡಿದ್ದಾರೆ. RUSKDESK ಅಪ್ಲಿಕೇಶನ್ ಡೌನ್​​​​ಲೋಡ್ ಮಾಡಲು ಹೇಳಿದ್ದಾರೆ. ಌಪ್​​ ಡೌನ್​​​​ಲೋಡ್ ಮಾಡಿ ಬಟನ್​ ಪ್ರೆಸ್​ ಮಾಡಲು ಹೇಳಿದ್ದಾರೆ.

ಇದನ್ನೂ ಓದಿ: Bengaluru News: ಬೆಂಗಳೂರಿನಲ್ಲಿ ಕಷ್ಟಕ್ಕೆ ಮರುಗಿದ ರ್ಯಾಪಿಡೋ ಚಾಲಕನಿಗೇ ವಂಚಿಸಿದ ಗ್ರಾಹಕ

ವಂಚಕರ ಜಾಲ ತಿಳಿಯದೆ ಇದನ್ನು ನಂಬಿದ ಮಹೇಶ್ ಖದೀಮರು ಹೇಳಿದನ್ನು ಫಾಲೋ ಮಾಡಿದ್ದಾರೆ. ಆ್ಯಪ್ ಡೌನ್​​​​ಲೋಡ್ ಮಾಡಿ ಓಕೆ ಬಟನ್​ ಪ್ರೆಸ್​ ಮಾಡುತ್ತಿದ್ದಂತೆ ಮಹೇಶ್ ಅವರ ಬ್ಯಾಂಕ್ ಖಾತೆಯಿಂದ 81 ಸಾವಿರ ಹಣ ಕಡಿತಗೊಂಡಿದೆ. ಬಳಿಕ ವಂಚಕರು ಮಾತನಾಡಿ ಫೋನ್ ಇಟ್ಟಿದ್ದಾರೆ. ಬ್ಯಾಂಕ್​ನಿಂದ ಹಣ ಕಟ್ ಆದ ಬಗ್ಗೆ ತಿಳಿದ ಮಹೇಶ್ ಮತ್ತೆ ಕರೆ ಮಾಡಿ ವಿಚಾರಿಸಿದಾಗ ತಪ್ಪಾಗಿ ನಂಬರ್ ಟೈಪ್ ಮಾಡಿದ್ದೀರಿ ಎಂದಿದ್ದಾರೆ. ಹಣ ನಿಮ್ಮ ಖಾತೆಗೆ ಬರುತ್ತೆ ಎಂದು ಪದೇ ಪದೇ ಅಕೌಂಟ್ ಪರೀಕ್ಷಿಸಲು ಹೇಳಿದ್ದಾರೆ. ಹೀಗೆ ಹಂತ ಹಂತವಾಗಿ 1 ಲಕ್ಷ ಹಣವನ್ನು ಅಕೌಂಟ್ ನಿಂದ ಮಾಯ ಮಾಡಲಾಗಿದೆ. ಸದ್ಯ ಮೋಸ ಮಾಡಲೆಂದೇ ಬ್ಯಾಂಕ್​ನ ನಕಲಿ ಯುಪಿಐ ಐಡಿ ನೀಡಿ ವಂಚನೆ ಮಾಡಿರುವ ಬಗ್ಗೆ ಮಹೇಶ್ ಅವರು ಹಲಸೂರು ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ.

ಬೆಂಗಳೂರಿಗೆ ಸಂಬಂಧಿಸಿದ ಸುದ್ದಿಗಳನ್ನು ಓದಲು ಇದರ ಮೇಲೆ ಕ್ಲಿಕ್ ಮಾಡಿ

Follow Us
ಗ್ಯಾಂಗ್ಸ್ ಆಫ್ ಯುಕೆ: ಎರಡನೇ ಇನ್ನಿಂಗ್ಸ್ ನಿರೀಕ್ಷೆಯಲ್ಲಿ ಒರಟ ಪ್ರಶಾಂತ್
ಗ್ಯಾಂಗ್ಸ್ ಆಫ್ ಯುಕೆ: ಎರಡನೇ ಇನ್ನಿಂಗ್ಸ್ ನಿರೀಕ್ಷೆಯಲ್ಲಿ ಒರಟ ಪ್ರಶಾಂತ್
6,6,6,6,6.. ಪಂಜಾಬ್ ವಿರುದ್ಧ ಅಬ್ಬರಿಸಿದ ಆಯುಷ್ ಮ್ಹಾತ್ರೆ
6,6,6,6,6.. ಪಂಜಾಬ್ ವಿರುದ್ಧ ಅಬ್ಬರಿಸಿದ ಆಯುಷ್ ಮ್ಹಾತ್ರೆ
ರಂಗೇರಿದ ಚುನಾವಣಾ ಅಖಾಡ; ಪುದುಚೇರಿಯಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ರಂಗೇರಿದ ಚುನಾವಣಾ ಅಖಾಡ; ಪುದುಚೇರಿಯಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ಅಧಿಕಾರಿ ಮೇಲೆ ಪಾಲಿಕೆ ಸದಸ್ಯನಿಂದ ಹಲ್ಲೆ: ಕಮಿಷನರ್ ಶಾಕಿಂಗ್‌ ರಿಯಾಕ್ಷನ್‌
ಅಧಿಕಾರಿ ಮೇಲೆ ಪಾಲಿಕೆ ಸದಸ್ಯನಿಂದ ಹಲ್ಲೆ: ಕಮಿಷನರ್ ಶಾಕಿಂಗ್‌ ರಿಯಾಕ್ಷನ್‌
ಜೈಪುರದಲ್ಲಿ ಬಿರುಗಾಳಿ ಸಹಿತ ಭಾರೀ ಮಳೆ, ಜನಜೀವನ ಅಸ್ತವ್ಯಸ್ತ
ಜೈಪುರದಲ್ಲಿ ಬಿರುಗಾಳಿ ಸಹಿತ ಭಾರೀ ಮಳೆ, ಜನಜೀವನ ಅಸ್ತವ್ಯಸ್ತ
ಹಳೇ ಸೇಡು ತೀರಿಸಿಲು ದಾವಣಗೆರೆಯಲ್ಲಿ ಷಡ್ಯಂತ್ರ ನಡೆದಿದೆ ಎಂದ ಶ್ರೀರಾಮುಲು
ಹಳೇ ಸೇಡು ತೀರಿಸಿಲು ದಾವಣಗೆರೆಯಲ್ಲಿ ಷಡ್ಯಂತ್ರ ನಡೆದಿದೆ ಎಂದ ಶ್ರೀರಾಮುಲು
ಹಬ್ಬಳ್ಳಿ ಲವ್ ಜಿಹಾದ್​​​ಗೆ ಸ್ಫೋಟಕ ಟ್ವಿಸ್ಟ್:ಜಿಮ್ ಟ್ರೈನರ್​​ನ ಕಾಮಕಾಂಡ
ಹಬ್ಬಳ್ಳಿ ಲವ್ ಜಿಹಾದ್​​​ಗೆ ಸ್ಫೋಟಕ ಟ್ವಿಸ್ಟ್:ಜಿಮ್ ಟ್ರೈನರ್​​ನ ಕಾಮಕಾಂಡ
ವೇದಿಕೆ ಮೇಲೆ ವಾಂತಿ: ಸಂತೋಷ್ ಹೆಗ್ಡೆ ಆರೋಗ್ಯದ ಬಗ್ಗೆ ಖಾದರ್ ಮಾಹಿತಿ
ವೇದಿಕೆ ಮೇಲೆ ವಾಂತಿ: ಸಂತೋಷ್ ಹೆಗ್ಡೆ ಆರೋಗ್ಯದ ಬಗ್ಗೆ ಖಾದರ್ ಮಾಹಿತಿ
ಶಿರಸಿ ಬಳಿ ಎರಡು ಬಸ್​​ಗಳ ನಡುವೆ ಭೀಕರ ಅಪಘಾತ: ಪ್ರಯಾಣಿಕರ ಸ್ಥಿತಿ ಗಂಭೀರ
ಶಿರಸಿ ಬಳಿ ಎರಡು ಬಸ್​​ಗಳ ನಡುವೆ ಭೀಕರ ಅಪಘಾತ: ಪ್ರಯಾಣಿಕರ ಸ್ಥಿತಿ ಗಂಭೀರ
ಸಚಿವ ಮುನಿಯಪ್ಪ ಮೇಲೆ ಕೆಪಿಸಿಸಿ ವಕ್ತಾರ ಲಕ್ಷ್ಮಣ್​​ ಗರಂ!
ಸಚಿವ ಮುನಿಯಪ್ಪ ಮೇಲೆ ಕೆಪಿಸಿಸಿ ವಕ್ತಾರ ಲಕ್ಷ್ಮಣ್​​ ಗರಂ!