ಹೆಚ್ಚಾದ ಸೈಬರ್ ಕ್ರೈಂ ಪ್ರಕರಣ; ಬೆಂಗಳೂರಲ್ಲಿ ಆ್ಯಪ್ ಡೌನ್​ಲೋಡ್ ಮಾಡಿಸಿ ನಿವೃತ್ತ ಯೋಧನಿಗೆ 1 ಲಕ್ಷ ಹಣ ವಂಚನೆ

ಅಮೇಜಾನ್​​​ ಆರ್ಡರ್ ಕ್ಯಾನ್ಸಲ್ ಆಗಿ ಹಣ ಜಮೆ ಆಗದ ಕಾರಣ ಗೂಗಲ್ ಮಾಡಿ ಸಹಾಯವಾಣಿಗೆ ಕರೆ ಮಾಡಿದ್ದ ನಿವೃತ್ತ ಯೋಧ ಮಹೇಶರಿಗೆ ಖದೀಮರು ಕರೆ ಮಾಡಿ ಹಂತ ಹಂತವಾಗಿ ಹಣ ಎಗರಿಸಿದ್ದಾರೆ.

ಹೆಚ್ಚಾದ ಸೈಬರ್ ಕ್ರೈಂ ಪ್ರಕರಣ; ಬೆಂಗಳೂರಲ್ಲಿ ಆ್ಯಪ್ ಡೌನ್​ಲೋಡ್ ಮಾಡಿಸಿ ನಿವೃತ್ತ ಯೋಧನಿಗೆ 1 ಲಕ್ಷ ಹಣ ವಂಚನೆ
ಸಾಂದರ್ಭಿಕ ಚಿತ್ರ
Follow us
| Edited By: Ayesha Banu

Updated on: Jul 29, 2023 | 7:01 AM

ಬೆಂಗಳೂರು, ಜುಲೈ 29: ಟೆಕ್ನಾಲಜಿ ಎಷ್ಟು ಸ್ಮಾರ್ಟ್ ಆಗುತ್ತಾ ಹೋಗುತ್ತಿದೆಯೋ ಸೈಬರ್ ಖದೀಮರು ಕೂಡ ಅಷ್ಟೇ ಸ್ಮಾರ್ಟ್ ಆಗುತ್ತಿದ್ದಾರೆ. ನಕಲಿ ಬ್ಯಾಂಕ್ ಐಡಿ ನೀಡಿ 1 ಲಕ್ಷ ಹಣ ವಂಚನೆ ಮಾಡಿರುವ ಘಟನೆ ಬೆಂಗಳೂರಿನಲ್ಲಿ ನಡೆದಿದೆ. ಖದೀಮನೋರ್ವ ಮೋಸ ಮಾಡಲೆಂದೇ MOSA1122@SBI ಯುಪಿಐ ಐಡಿ ಕ್ರಿಎಟ್ ಮಾಡಿದ್ದಾನೆ. ಫೋನ್ ಮಾಡುವವರಿಗೆ, ಅಕೌಂಟ್ ಚೆಕ್ ಮಾಡಿ ಅಂತಾನೆ. ಬ್ಯಾಂಕ್ ಅಪ್ಲಿಕೇಶನ್ ಓಪನ್ ಮಾಡ್ತಿದ್ದಂತೆ ಹಣ ಮಂಗಮಾಯ ಆಗಿಬಿಡುತ್ತೆ. ಇಂತಹದೊಂದು ವಂಚನೆ ಬೆಂಗಳೂರಿನಲ್ಲಿ ನಡೆದಿದ್ದು ವಂಚನೆಗೊಳಗಾದ ನಿವೃತ್ತ ಯೋಧ ಮಹೇಶ್ ಎಂಬುವವರು ಹಲಸೂರು ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ.

ನಿವೃತ್ತ ಯೋಧ ಮಹೇಶ್ ಅಮೇಜಾನ್​​​ನಲ್ಲಿ ₹5,499 ಮೌಲ್ಯದ ಸ್ಪೀಕರ್ ಬುಕ್​ ಮಾಡಿದ್ದರು. ನಂತರ ಬುಕ್ಕಿಂಗ್ ಕ್ಯಾನ್ಸಲ್ ಆಗಿತ್ತು. ಬುಕ್ಕಿಂಗ್​ ಕ್ಯಾನ್ಸಲ್ ಆಗಿ 3 ದಿನದಲ್ಲಿ ಹಣ ವಾಪಸ್​ ಬರುತ್ತೆಂದು ಮೊಬೈಲ್​ಗೆ ಸಂದೇಶ ಬಂದಿತ್ತು. ಹಣ ಜಮೆ ಆಗದಿದ್ದಕ್ಕೆ ಗೂಗುಲ್​​ನಲ್ಲಿ ಸಹಾಯವಾಣಿ ಹುಡುಕಿ ಮಹೇಶ್ ಕರೆ ಮಾಡಿದ್ದರು. ಬಳಿಕ ಮತ್ತೊಂದು ನಂಬರ್​​ನಿಂದ ವಂಚಕರು ಕರೆ ಮಾಡಿದ್ದಾರೆ. RUSKDESK ಅಪ್ಲಿಕೇಶನ್ ಡೌನ್​​​​ಲೋಡ್ ಮಾಡಲು ಹೇಳಿದ್ದಾರೆ. ಌಪ್​​ ಡೌನ್​​​​ಲೋಡ್ ಮಾಡಿ ಬಟನ್​ ಪ್ರೆಸ್​ ಮಾಡಲು ಹೇಳಿದ್ದಾರೆ.

ಇದನ್ನೂ ಓದಿ: Bengaluru News: ಬೆಂಗಳೂರಿನಲ್ಲಿ ಕಷ್ಟಕ್ಕೆ ಮರುಗಿದ ರ್ಯಾಪಿಡೋ ಚಾಲಕನಿಗೇ ವಂಚಿಸಿದ ಗ್ರಾಹಕ

ವಂಚಕರ ಜಾಲ ತಿಳಿಯದೆ ಇದನ್ನು ನಂಬಿದ ಮಹೇಶ್ ಖದೀಮರು ಹೇಳಿದನ್ನು ಫಾಲೋ ಮಾಡಿದ್ದಾರೆ. ಆ್ಯಪ್ ಡೌನ್​​​​ಲೋಡ್ ಮಾಡಿ ಓಕೆ ಬಟನ್​ ಪ್ರೆಸ್​ ಮಾಡುತ್ತಿದ್ದಂತೆ ಮಹೇಶ್ ಅವರ ಬ್ಯಾಂಕ್ ಖಾತೆಯಿಂದ 81 ಸಾವಿರ ಹಣ ಕಡಿತಗೊಂಡಿದೆ. ಬಳಿಕ ವಂಚಕರು ಮಾತನಾಡಿ ಫೋನ್ ಇಟ್ಟಿದ್ದಾರೆ. ಬ್ಯಾಂಕ್​ನಿಂದ ಹಣ ಕಟ್ ಆದ ಬಗ್ಗೆ ತಿಳಿದ ಮಹೇಶ್ ಮತ್ತೆ ಕರೆ ಮಾಡಿ ವಿಚಾರಿಸಿದಾಗ ತಪ್ಪಾಗಿ ನಂಬರ್ ಟೈಪ್ ಮಾಡಿದ್ದೀರಿ ಎಂದಿದ್ದಾರೆ. ಹಣ ನಿಮ್ಮ ಖಾತೆಗೆ ಬರುತ್ತೆ ಎಂದು ಪದೇ ಪದೇ ಅಕೌಂಟ್ ಪರೀಕ್ಷಿಸಲು ಹೇಳಿದ್ದಾರೆ. ಹೀಗೆ ಹಂತ ಹಂತವಾಗಿ 1 ಲಕ್ಷ ಹಣವನ್ನು ಅಕೌಂಟ್ ನಿಂದ ಮಾಯ ಮಾಡಲಾಗಿದೆ. ಸದ್ಯ ಮೋಸ ಮಾಡಲೆಂದೇ ಬ್ಯಾಂಕ್​ನ ನಕಲಿ ಯುಪಿಐ ಐಡಿ ನೀಡಿ ವಂಚನೆ ಮಾಡಿರುವ ಬಗ್ಗೆ ಮಹೇಶ್ ಅವರು ಹಲಸೂರು ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ.

ಬೆಂಗಳೂರಿಗೆ ಸಂಬಂಧಿಸಿದ ಸುದ್ದಿಗಳನ್ನು ಓದಲು ಇದರ ಮೇಲೆ ಕ್ಲಿಕ್ ಮಾಡಿ

ತಾಜಾ ಸುದ್ದಿ
ಸಿದ್ದರಾಮಯ್ಯ ಸರ್ಕಾರ ಈಗ ಮೇನಲ್ಲಿ ಪತನವಾಗುತ್ತೆ ಅಂತಿದ್ದಾರೆ ಕುಮಾರಸ್ವಾಮಿ
ಸಿದ್ದರಾಮಯ್ಯ ಸರ್ಕಾರ ಈಗ ಮೇನಲ್ಲಿ ಪತನವಾಗುತ್ತೆ ಅಂತಿದ್ದಾರೆ ಕುಮಾರಸ್ವಾಮಿ
ಇಂದು ಸುಪ್ರೀಂ ಕೋರ್ಟ್ ತೀರ್ಪು ನೇರ ಪ್ರಸಾರ
ಇಂದು ಸುಪ್ರೀಂ ಕೋರ್ಟ್ ತೀರ್ಪು ನೇರ ಪ್ರಸಾರ
ಡೇಂಜರಸ್ ಪಿಚ್: ಅರ್ಧಕ್ಕೆ ನಿಂತ ಬಿಗ್ ಬ್ಯಾಷ್ 2023ರ ಹೈವೋಲ್ಟೇಜ್ ಪಂದ್ಯ
ಡೇಂಜರಸ್ ಪಿಚ್: ಅರ್ಧಕ್ಕೆ ನಿಂತ ಬಿಗ್ ಬ್ಯಾಷ್ 2023ರ ಹೈವೋಲ್ಟೇಜ್ ಪಂದ್ಯ
ಅಧಿಕಾರಿಗೆ ಅವಾಚ್ಯ ಶಬ್ದಗಳಿಂದ ಬೈಯ್ಯುವ ಬಿಜೆಪಿ ಶಾಸಕ ಹರೀಶ್ ವಿಡಿಯೋ ವೈರಲ್
ಅಧಿಕಾರಿಗೆ ಅವಾಚ್ಯ ಶಬ್ದಗಳಿಂದ ಬೈಯ್ಯುವ ಬಿಜೆಪಿ ಶಾಸಕ ಹರೀಶ್ ವಿಡಿಯೋ ವೈರಲ್
ಪ್ರತಾಪ್ ಪರಿಸ್ಥಿತಿ ನೋಡಿ ತಪ್ಪಿತಸ್ಥ ಭಾವನೆ ಕಾಡಿದ್ದು ವರ್ತೂರಿಗೆ ಮಾತ್ರ​
ಪ್ರತಾಪ್ ಪರಿಸ್ಥಿತಿ ನೋಡಿ ತಪ್ಪಿತಸ್ಥ ಭಾವನೆ ಕಾಡಿದ್ದು ವರ್ತೂರಿಗೆ ಮಾತ್ರ​
ತುಕಾಲಿಯ ಡ್ಯಾನ್ಸ್​ ನೋಡಿ ಬೆಚ್ಚಿ ಬಿದ್ದ ಮನೆ ಮಂದಿ
ತುಕಾಲಿಯ ಡ್ಯಾನ್ಸ್​ ನೋಡಿ ಬೆಚ್ಚಿ ಬಿದ್ದ ಮನೆ ಮಂದಿ
ಕಾಮಸಮುದ್ರ ಅರಣ್ಯದತ್ತ ಆಗಮಿಸಿದ 50ಕ್ಕೂ ಹೆಚ್ಚು ಕಾಡಾನೆಗಳು
ಕಾಮಸಮುದ್ರ ಅರಣ್ಯದತ್ತ ಆಗಮಿಸಿದ 50ಕ್ಕೂ ಹೆಚ್ಚು ಕಾಡಾನೆಗಳು
ಬಸವಣ್ಣನ ವಚನ ಹೇಳಿ ನೆರೆದವರಿಗೆ ಶಾಕ್ ನೀಡಿದ ಪೂಜಾ ಗಾಂಧಿ
ಬಸವಣ್ಣನ ವಚನ ಹೇಳಿ ನೆರೆದವರಿಗೆ ಶಾಕ್ ನೀಡಿದ ಪೂಜಾ ಗಾಂಧಿ
ಕರುಳಿ‌ನ ಕುಡಿ ರಕ್ಷಣೆಗೆ ತಾಯಿ ಆಕಳು ಹೋರಾಟ; ಇಲ್ಲಿದೆ ಮನಕಲುಕುವ ದೃಶ್ಯ
ಕರುಳಿ‌ನ ಕುಡಿ ರಕ್ಷಣೆಗೆ ತಾಯಿ ಆಕಳು ಹೋರಾಟ; ಇಲ್ಲಿದೆ ಮನಕಲುಕುವ ದೃಶ್ಯ
ಕರಿಬಸವೇಶ್ವರ ಜಾತ್ರೆಯಲ್ಲಿದೆ ವಿಶೇಷ; ಮಹಿಳೆಯರೇ ರಥ ಎಳೆಯುವ ಸಂಪ್ರದಾಯ
ಕರಿಬಸವೇಶ್ವರ ಜಾತ್ರೆಯಲ್ಲಿದೆ ವಿಶೇಷ; ಮಹಿಳೆಯರೇ ರಥ ಎಳೆಯುವ ಸಂಪ್ರದಾಯ