AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Bengaluru: ಪಿಂಚಣಿ ಜಾರಿಗೆ ಆಗ್ರಹಿಸಿ ಫ್ರೀಡಂಪಾರ್ಕ್​ನಲ್ಲಿ ಉಪವಾಸ ಸತ್ಯಾಗ್ರಹ ನಡೆಸುತ್ತಿದ್ದ ಮೂವರು ನಿವೃತ್ತ ಶಿಕ್ಷಕರು ಅಸ್ವಸ್ಥ

ಪಿಂಚಣಿ ಜಾರಿಗೆ ಆಗ್ರಹಿಸಿ ನಗರದ ಫ್ರೀಡಂಪಾರ್ಕ್​ನಲ್ಲಿ ಉಪವಾಸ ಸತ್ಯಾಗ್ರಹ ನಡೆಸುತ್ತಿದ್ದ ಅನುದಾನಿತ ಶಾಲಾ-ಕಾಲೇಜುಗಳ ಪಿಂಚಣಿ ವಂಚಿತ ನೌಕರರ ಸಂಘದ, ಮೂವರು ನಿವೃತ್ತ ಶಿಕ್ಷಕರು ಅಸ್ವಸ್ಥಗೊಂಡಿದ್ದಾರೆ.

ವಿವೇಕ ಬಿರಾದಾರ
ವಿವೇಕ ಬಿರಾದಾರ|

Updated on:Feb 21, 2023 | 8:45 AM

Share

ಬೆಂಗಳೂರು: ಪಿಂಚಣಿ (Pension) ಜಾರಿಗೆ ಆಗ್ರಹಿಸಿ ನಗರದ ಫ್ರೀಡಂಪಾರ್ಕ್​ನಲ್ಲಿ (Freedom Park) ಉಪವಾಸ ಸತ್ಯಾಗ್ರಹ ನಡೆಸುತ್ತಿದ್ದ ಅನುದಾನಿತ ಶಾಲಾ-ಕಾಲೇಜುಗಳ ಪಿಂಚಣಿ ವಂಚಿತ ನೌಕರರ ಸಂಘದ, ಮೂವರು ನಿವೃತ್ತ ಶಿಕ್ಷಕರು (Retired Teachers) ಅಸ್ವಸ್ಥಗೊಂಡಿದ್ದಾರೆ. ಪಿಂಚಣಿ ವಂಚಿತ ಶಿಕ್ಷಕರ ಸಂಘದ ಖಜಾಂಚಿ ಲಕ್ಷ್ಮಿಪುತ್ರ ಕಿರನಳ್ಳಿ (37), ನಿವೃತ್ತ ಶಿಕ್ಷಕರಾದ ಈಶ್ವರಪ್ಪ ಪಾವಗಡ, ನಾಗರಾಜ್​​ ಅಸ್ವಸ್ಥಗೊಂಡಿದ್ದಾರೆ. ಮೂವರನ್ನು ಬೆಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಪಿಂಚಣಿ ಜಾರಿಗೆ ಆಗ್ರಹಿಸಿ ನಿವೃತ್ತ ಶಿಕ್ಷಕರ, ಅನುದಾನಿತ ಶಾಲಾ-ಕಾಲೇಜುಗಳ ಪಿಂಚಣಿ ವಂಚಿತ ನೌಕರರ ಸಂಘ ಕಳೆದ 138 ದಿನಗಳಿಂದ ಉಪವಾಸ ಸತ್ಯಾಗ್ರಹ ನಡೆಸುತ್ತಿದೆ.

ನಿಶ್ಚಿತ ಪಿಂಚಣಿ (ಹಳೇ ಪಿಂಚಣಿ ಯೋಜನೆ) ಮತ್ತು ಆರೋಗ್ಯ ಸಂಜೀವಿನಿ ಯೋಜನೆಗಳನ್ನು ಅನುದಾನಿತ ಶಾಲಾ, ಕಾಲೇಜು ನೌಕರರಿಗೆ ಜಾರಿಗೊಳಿಸುವಂತೆ ಆಗ್ರಹಿಸಿ ಕರ್ನಾಟಕ ಅನುದಾನಿತ ಶಾಲಾ ಕಾಲೇಜುಗಳ ಪಿಂಚಣಿ ವಂಚಿತ ನೌಕರರ ಸಂಘ ಕಳೆದ 138 ದಿನಗಳಿಂದ ಪ್ರತಿಭಟನೆ ಮಾಡುತ್ತಿದೆ. ಇವರ ಬೇಡಿಕೆ ಬಜೆಟ್​ನಲ್ಲಿ ಈಡೇರದ ಹಿನ್ನೆಲೆ ನಿನ್ನೆ (ಫೆ.20) ರಂದು ವಿಧಾನಸೌಧ ಮುತ್ತಿಗೆ ಹಾಕಲು ನಿರ್ಧರಿಸಿದ್ದರು.

ಅಕ್ಟೋಬರ್ 7 ರಿಂದ ಧರಣಿ ಸತ್ಯಾಗ್ರಹ ನಡೆಸುತ್ತಿದ್ದು, 2006, ಏಪ್ರಿಲ್ 1ಕ್ಕೂ ಮುನ್ನ ನೇಮಕವಾದವರನ್ನು ಪಿಂಚಣಿ ವ್ಯವಸ್ಥೆಗೆ ಪರಿಗಣಿಸಿ, ನಿವೃತ್ತಿಯಾದ ದಿನಾಂಕದಂದು ವೇತನಕ್ಕೆ ಅನುಗುಣವಾಗಿ ಹಳೆಯ ನಿಶ್ಚಿತ ಪಿಂಚಣಿ ಯೋಜನೆ ನೀಡಬೇಕು ಎಂದು ಸಂಘಟನೆ ಆಗ್ರಹಿಸಿದೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 7:04 am, Tue, 21 February 23

Follow Us
ಪದ್ಮಶ್ರೀ ಪ್ರಶಸ್ತಿ ಸ್ವೀಕರಿಸಿದ ಧುರಂಧರ್ ನಟ ಆರ್. ಮಾಧವನ್: ವಿಡಿಯೋ ನೋಡಿ
ಪದ್ಮಶ್ರೀ ಪ್ರಶಸ್ತಿ ಸ್ವೀಕರಿಸಿದ ಧುರಂಧರ್ ನಟ ಆರ್. ಮಾಧವನ್: ವಿಡಿಯೋ ನೋಡಿ
ಮೃತರ ಕುಟುಂಬಕ್ಕೆ ನ್ಯಾಯ ಕೊಡಿಸಲು ಬದ್ಧ ಎಂದ ಶಾಸಕ ಪುಟ್ಟರಂಗಶೆಟ್ಟಿ
ಮೃತರ ಕುಟುಂಬಕ್ಕೆ ನ್ಯಾಯ ಕೊಡಿಸಲು ಬದ್ಧ ಎಂದ ಶಾಸಕ ಪುಟ್ಟರಂಗಶೆಟ್ಟಿ
ನವಿಲುಗರಿ ಧರಿಸಿ ನಿವೇದಿತಾ ಗೌಡ, ಕಿಶನ್ ರೀಲ್ಸ್: ವಿವಾದಕ್ಕೆ ಕಾರಣ ಏನು?
ನವಿಲುಗರಿ ಧರಿಸಿ ನಿವೇದಿತಾ ಗೌಡ, ಕಿಶನ್ ರೀಲ್ಸ್: ವಿವಾದಕ್ಕೆ ಕಾರಣ ಏನು?
‘ಆ ದಿನಗಳು’ ಸಿನಿಮಾ ನೆನೆದ ನಿರ್ದೇಶಕ ಕೆಎಂ ಚೈತನ್ಯ: ವಿಡಿಯೋ
‘ಆ ದಿನಗಳು’ ಸಿನಿಮಾ ನೆನೆದ ನಿರ್ದೇಶಕ ಕೆಎಂ ಚೈತನ್ಯ: ವಿಡಿಯೋ
ವಿನೋದ್ ಪ್ರಭಾಕರ್​​ಗೆ ಆಗಿದ್ದೇನು: ಮಾಹಿತಿ ನೀಡಿದ ಸಹ ನಟ ವಿಜಯ್ ಗೌಡ
ವಿನೋದ್ ಪ್ರಭಾಕರ್​​ಗೆ ಆಗಿದ್ದೇನು: ಮಾಹಿತಿ ನೀಡಿದ ಸಹ ನಟ ವಿಜಯ್ ಗೌಡ
ಮುಸ್ಲಿಂ ಸಮುದಾಯದ ಮತ್ತಿಬ್ಬರಿಗೆ ಸಚಿವ ಸ್ಥಾನ ನೀಡುವ ಬಗ್ಗೆ ಚರ್ಚೆ
ಮುಸ್ಲಿಂ ಸಮುದಾಯದ ಮತ್ತಿಬ್ಬರಿಗೆ ಸಚಿವ ಸ್ಥಾನ ನೀಡುವ ಬಗ್ಗೆ ಚರ್ಚೆ
ಅಡ್ಡಮತದಾನ ಮಾಡಿದವರಿಗೆ ತಕ್ಕ ಶಾಸ್ತಿ: ಹೈಕಮಾಂಡ್ ಗುಟ್ಟು ಬಿಚ್ಚಿಟ್ಟ ಅಶೋಕ್
ಅಡ್ಡಮತದಾನ ಮಾಡಿದವರಿಗೆ ತಕ್ಕ ಶಾಸ್ತಿ: ಹೈಕಮಾಂಡ್ ಗುಟ್ಟು ಬಿಚ್ಚಿಟ್ಟ ಅಶೋಕ್
ಪೋರ್ಟರ್, ರ‍್ಯಾಪಿಡೋ ಆ್ಯಪ್​​ಗಳ ವಿರುದ್ಧ ಬೀದಿಗಿಳಿದ ಗೂಡ್ಸ್ ವಾಹನ ಚಾಲಕರು
ಪೋರ್ಟರ್, ರ‍್ಯಾಪಿಡೋ ಆ್ಯಪ್​​ಗಳ ವಿರುದ್ಧ ಬೀದಿಗಿಳಿದ ಗೂಡ್ಸ್ ವಾಹನ ಚಾಲಕರು
ಯುಎಇ ದೇಶಕ್ಕೆ ರಫ್ತಾಗಲಿವೆ ಬ್ರಹ್ಮೋಸ್, ಆಕಾಶ್ ಕ್ಷಿಪಣಿಗಳು!
ಯುಎಇ ದೇಶಕ್ಕೆ ರಫ್ತಾಗಲಿವೆ ಬ್ರಹ್ಮೋಸ್, ಆಕಾಶ್ ಕ್ಷಿಪಣಿಗಳು!
ಬೆಂಗಳೂರು ರಸ್ತೆ ಅಭಿವೃದ್ಧಿ ಅನುದಾನದ ಬಗ್ಗೆ ತೇಜಸ್ವಿ ಸೂರ್ಯ ವಾಗ್ದಾಳಿ
ಬೆಂಗಳೂರು ರಸ್ತೆ ಅಭಿವೃದ್ಧಿ ಅನುದಾನದ ಬಗ್ಗೆ ತೇಜಸ್ವಿ ಸೂರ್ಯ ವಾಗ್ದಾಳಿ