ಮಳೆ ಬೆನ್ನಲ್ಲೇ ಬೆಂಗಳೂರಿನಲ್ಲಿ ಹೆಚ್ಚಾದ ಸಾಂಕ್ರಾಮಿಕ ರೋಗಗಳ ಆತಂಕ: ವೈರಾಣು ಜ್ವರ, ಕೆಮ್ಮು, ನೆಗಡಿ ಪ್ರಕರಣ ಹೆಚ್ಚಳ

ಬೆಂಗಳೂರಿನಲ್ಲಿ ಒಂದು ವಾರ ಮಳೆ, ಮತ್ತೊಂದು ವಾರ ಬಿಸಿಲಿನ ವಾತಾವರಣ ಜನರನ್ನು ಹೈರಾಣುಗೊಳಿಸಿತ್ತು . ಆದರೆ, ಕಳೆದ ಮೂರು ದಿನಗಳಿಂದ ಸುರಿದ ರಣಮಳೆಯ ಕಾರಣ ವಾತಾವರಣ ಬದಲಾಗಿದೆ. ಬದಲಾಗುತ್ತಿರುವ ಬೆಂಗಳೂರಿನ ಹವಾಮಾನ ಸಾಂಕ್ರಾಮಿಕ ರೋಗಗಳ ಸಂಖ್ಯೆಯನ್ನೂ ಹೆಚ್ಚಿಸಿದೆ. ವೈರಾಣು ಜ್ವರ, ಕೆಮ್ಮು, ನೆಗಡಿ ಪ್ರಕರಣ ಹೆಚ್ಚಾಗಿದ್ದು, ಅದರಲ್ಲೂ ಪುಟಾಣಿ ಮಕ್ಕಳಿಗೆ ಹೆಚ್ಚು ಸಮಸ್ಯೆ ತಂದೊಡ್ಡುತ್ತಿದೆ.

ಮಳೆ ಬೆನ್ನಲ್ಲೇ ಬೆಂಗಳೂರಿನಲ್ಲಿ ಹೆಚ್ಚಾದ ಸಾಂಕ್ರಾಮಿಕ ರೋಗಗಳ ಆತಂಕ: ವೈರಾಣು ಜ್ವರ, ಕೆಮ್ಮು, ನೆಗಡಿ ಪ್ರಕರಣ ಹೆಚ್ಚಳ
ಸಾಂದರ್ಭಿಕ ಚಿತ್ರ
Updated By: Ganapathi Sharma

Updated on: May 22, 2025 | 6:59 AM

ಬೆಂಗಳೂರು, ಮೇ 22: ಮೂರ್ನಾಲ್ಕು ದಿನಗಳಿಂದ ಬೆಂಗಳೂರಿನಲ್ಲಿ ಭಾರಿ ಮಳೆಯಾಗಿ (Bengaluru rains) ಹಲವು ಕಡೆಗಳಲ್ಲಿ ರಸ್ತೆಗಳು ಜಲಾವೃತಗೊಂಡು ಕೊಳಚೆ ಆವರಿಸಿದೆ. ಕೆಲವೆಡೆ ಮನೆಗಳಿಗೂ ನೀರು ನುಗ್ಗಿದೆ. ಬಿಸಿಲಿನಿಂದ ಕೂಡಿದ್ದ ವಾತಾವರಣ ಏಕಾಏಕಿ ಥಂಡಿಯಾಗಿದೆ. ಜೊತೆಗೆ ಮಳೆಯಿಂದಾಗಿ ಅನೇಕ ಕಡೆಗಳಲ್ಲಿ ಕುಡಿಯುವ ನೀರಿನಲ್ಲಿ ಚರಂಡಿ ನೀರು ಮಿಶ್ರವಾಗಿದೆ. ಇದರಿಂದಾಗಿ ಏಕಾಏಕಿ ಇದೀಗ ಸಾಂಕ್ರಾಮಿಕ ರೋಗಗಳು (Infectious diseases) ಹೆಚ್ಚಾಗತೊಡಗಿವೆ. ವೈರಾಣು ಜ್ವರ, ಕೆಮ್ಮು, ನೆಗಡಿ, ಅತಿಸಾರ ವಾಂತಿ, ಬೇಧಿ ಪ್ರಕರಣಹಳು ಹೆಚ್ಚಿವೆ. ಆಸ್ಪತ್ರೆಗಳ ಹೊರ ರೋಗಿಗಳ ವಿಭಾಗದಲ್ಲಿ ಶೇ 30 ರಷ್ಟು ಹೆಚ್ಚಳ ಕಂಡುಬಂದಿದೆ. ಇದಕ್ಕೆಲ್ಲ ಸಿಲಿಕಾನ್ ಸಿಟಿಯಲ್ಲಿ ಕ್ಷಣ ಕ್ಷಣಕ್ಕೂ ಬದಲಾಗುತ್ತಿರುವ ಹವಮಾನ ಕಾರಣ ಎಂದು ವೈದ್ಯರು ಅಭಿಪ್ರಾಯಪಟ್ಟಿದ್ದಾರೆ.

ವೈರಾಣು ಜ್ವರದ ಜೊತೆ ಇನ್​​ಫ್ಲುಯೆಂಜಾ ಪ್ರಕರಣಗಳಲ್ಲಿಯೂ ಏರಿಕೆ ಕಂಡು ಬರುತ್ತಿದೆ. ಜತೆಗೆ ಕೆಸಿ ಜನರಲ್ ಆಸ್ಪತ್ರೆ, ವಿಕ್ಟೋರಿಯಾ ಆಸ್ಪತ್ರೆ, ಸಿವಿ ರಾಮನ್ ನಗರ ಆಸ್ಪತ್ರೆ, ವಾಣಿವಿಲಾಸ್ ಆಸ್ಪತ್ರೆ ಸೇರಿದಂತೆ ಬಹುತೇಕ ಆಸ್ಪತ್ರೆಗಳಲ್ಲಿ ದಾಖಲಾಗುವ ಅರ್ದದಷ್ಟು ಹೊರ ರೋಗಿಗಳಲ್ಲಿಯೂ ವೈರಾಣು ಜ್ವರ ಕಂಡು ಬರುತ್ತಿದೆ

ವೈದ್ಯರು ಹೇಳುವುದೇನು?

ಮಕ್ಕಳಲ್ಲಿ ಹಾಗೂ ವೃದ್ಧರಲ್ಲಿ ರೋಗ ನಿರೋಧಕ ಶಕ್ತಿ ಕಡಿಮೆ ಇರುವುದರಿಂದ ಹೆಚ್ಚಾಗಿ ಜ್ವರ ಕಂಡುಬರುತ್ತಿದೆ. ಮನೆಯಲ್ಲಿ ಸೋಂಕು ತಗುಲಿದವರಿಂದ ಮನೆ ಮಂದಿಗೆಲ್ಲ ಹರಡುತ್ತಿದೆ. ಡೆಂಗ್ಯೂ, ಮಲೇರಿಯಾದಂತಹ ಜ್ವರ ಪತ್ತೆಗೆ ಗುಣಲಕ್ಷಣ ಕಂಡುಬಂದ ರೋಗಿಗಳಿಗೆ ಪರೀಕ್ಷೆ ಮಾಡಿಸಲಾಗುತ್ತಿದೆ. ಜನರು ಆರೋಗ್ಯದಲ್ಲಿ ಸಣ್ಣ ಬದಲಾವಣೆಯಾದರೂ ನಿರ್ಲಕ್ಷ್ಯವಹಿದಂತೆ ವೈದ್ಯೆ ಡಾ. ಪಲ್ಲವಿ ಸೂಚಿಸಿದ್ದಾರೆ.

ಇದನ್ನೂ ಓದಿ
ಬೆಂಗಳೂರು: ರಾಜಕಾಲುವೆ ಒತ್ತುವರಿ ತೆರವಿಗೆ ಸಿದ್ದರಾಮಯ್ಯ ಸೂಚನೆ
ಬೆಂಗಳೂರಿನಲ್ಲಿ ಡೆಂಗಿ ನಿಯಂತ್ರಣಕ್ಕೆ ಆರೋಗ್ಯ ಇಲಾಖೆಯಿಂದ ಹೊಸ ಪ್ಲಾನ್​
ಟಿವಿ9 ವರದಿಗಾರ ಪ್ರಶ್ನಿಸುತ್ತಿದ್ದಂತೆಯೇ ರೆಡ್ ಕಾರ್ಪೆಟ್ ಮಂಗಮಾಯ
ವಕ್ಫ್​ ಆಸ್ತಿ ಕಬಳಿಕೆ ತೆರವು: ವಕ್ಫ್ ನಮ್ಮ ದುಷ್ಮನ್ ಎಂದ ಮುಸ್ಲಿಂ ಮಹಿಳೆ

ಡೆಂಗ್ಯೂ ತಡೆಗೆ ಆರೋಗ್ಯ ಇಲಾಖೆ ಅಲರ್ಟ್

ಬೆಂಗಳೂರಿನಲ್ಲಿ ಡೆಂಗ್ಯೂ ಪ್ರಕರಣಗಳ ಏರಿಕೆ ಬಗ್ಗೆ ‘ಟಿವಿ9’ ಕಳೆದ ವಾರವಷ್ಟೇ ಸುದ್ದಿ ಪ್ರಸಾರ ಮಾಡಿತ್ತು. ಇದರ ಬೆನ್ನಲ್ಲೇ ಆರೋಗ್ಯ ಇಲಾಖೆ ಅಲರ್ಟ್ ಆಗಿದ್ದು, ಡೆಂಗ್ಯೂ ನಿಯಂತ್ರಣಕ್ಕೆ ಬೆಂಗಳೂರಿನಲ್ಲಿ 240 ಆರೋಗ್ಯ ನಿರೀಕ್ಷಣಾಧಿಕಾರಿಗಳು ಹಾಗೂ 700 ಸ್ವಯಂ ಸೇವಕರನ್ನು ನೇಮಿಸಿದೆ. ಕರ್ನಾಟಕದ ಒಟ್ಟು ಪ್ರಕರಣಗಳ ಪೈಕಿ ಬೆಂಗಳೂರಿನಲ್ಲಿಯೇ ಶೇ 40 ರಿಂದ 50 ರಷ್ಟು ಡೆಂಗ್ಯೂ ಪ್ರಕರಣಗಳು ಕಂಡುಬರುತ್ತಿದ್ದು, ನಾಗರಿಕರು ಕೂಡ ಹೆಚ್ಚಿನ ಮುನ್ನೆಚ್ಚರಿಕೆ ವಹಿಸುವುದು ಅಗತ್ಯ ಎಂದು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಹೇಳಿದ್ದಾರೆ.

ಇದನ್ನೂ ಓದಿ: ನಿರಂತರ ಮಳೆಗೆ ಹೈರಾಣದ ಬೆಂಗಳೂರು ಜನ: ವ್ಯಾಪಾರ ವಹಿವಾಟು ಭಾರಿ ಕುಸಿತ

ಒಟ್ಟಿನಲ್ಲಿ ಡೆಂಗ್ಯೂ ಹಾವಳಿ ಜೊತೆಗೆ ಈಗ ಹೆಚ್ಚಾಗುತ್ತಿರುವ ವೈರಾಣು ಜ್ವರ ಆತಂಕಕ್ಕೆ ಕಾರವಾಗಿದೆ. ಹೀಗಾಗಿ ಜನರು ಸ್ವಚ್ಛತೆ ಕಾಪಾಡುವುದು ಹಾಗೂ ಬಿಸಿ ನೀರು ಕುಡಿಯುವುದು, ಆರೋಗ್ಯಕರ ಆಹಾರ ಸೇವನೆ ಮಾಡುವುದು ಅಗತ್ಯ ಎಂದು ವೈದ್ಯರು ಸಲಹೆ ನೀಡಿದ್ದಾರೆ.

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ