AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬೆಂಗಳೂರಿನ ಕೆರೆಗಳ ಕಲ್ಮಶ ಸಂಖ್ಯೆ ಏರಿಕೆ: BWSSB ನಿರ್ಲಕ್ಷ್ಯವೇ ಕಾರಣ?

ಬೆಂಗಳೂರು ಮಹಾನಗರ ಪಾಲಿಕೆ ಹಾಗೂ ಬಿಡಿಎಯಿಂದ ಕೋಟ್ಯಂತರ ರೂಪಾಯಿ ವೆಚ್ಚ ಮಾಡಿ ಅಭಿವೃದ್ಧಿ ಮಾಡಿರುವ ಕೆರೆಗಳು ಬಿಡಬ್ಲ್ಯುಎಸ್‌ಎಸ್‌ಬಿಯ ನಿರ್ಲಕ್ಷ್ಯದಿಂದ ಮಾಲಿನ್ಯ ತಾಣಗಳಾಗಿವೆ.

ಬೆಂಗಳೂರಿನ ಕೆರೆಗಳ ಕಲ್ಮಶ ಸಂಖ್ಯೆ ಏರಿಕೆ: BWSSB ನಿರ್ಲಕ್ಷ್ಯವೇ ಕಾರಣ?
ಪ್ರಾತಿನಿಧಿಕ ಚಿತ್ರImage Credit source: vijaykarnataka.com
ಗಂಗಾಧರ​ ಬ. ಸಾಬೋಜಿ
|

Updated on:Mar 10, 2023 | 8:12 PM

Share

ಬೆಂಗಳೂರು: ಬೆಂಗಳೂರು ಕೇವಲ ಸಿಲಿಕಾನ್​ ಸಿಟಿ, ಸಿಲಿಕಾನ್​ ವ್ಯಾಲಿ, ಐಟಿ ಬಿಟಿ ಹಬ್​​, ನಿವೃತ್ತರ ಸ್ವರ್ಗ, ಉದ್ಯಾನ ನಗರಿ, ಗ್ರೀನ್​​ ಸಿಟಿ ಸೇರಿದಂತೆ ಹಲವು ಅಭಿದಾನಕ್ಕೆ ಪಾತ್ರವಾಗಿದೆ. ಈ ಎಲ್ಲಾ ಖ್ಯಾತಿಗಳೊಂದಿಗೆ ಈ ಹಿಂದೆ ಬೆಂಗಳೂರನ್ನು ಕೆರೆಗಳ (lakes) ನಗರಿ ಎಂದು ಸಹ ಕರೆಯುತ್ತಿದ್ದರು. ಸಾಕಷ್ಟು ಕೆರೆಗಳ ಪೈಕಿ ಸದ್ಯ ಕೆಲವೇ ಕೆಲವು ಕರೆಗಳು ಮಾತ್ರ ಉಳಿದುಕೊಂಡಿವೆ. ಆದರೆ ಉಳಿದುಕೊಂಡಿರುವ ಕೆರೆಗಳು ಸಹ ಮಾಲಿನ್ಯದಿಂದ ಕೂಡಿವೆ. ಬೆಂಗಳೂರು ಮಹಾನಗರ ಪಾಲಿಕೆ ಹಾಗೂ ಬಿಡಿಎಯಿಂದ ಕೋಟ್ಯಂತರ ರೂ. ವೆಚ್ಚ ಮಾಡಿ ಅಭಿವೃದ್ಧಿ ಮಾಡಿರುವ ಕೆರೆಗಳು ಸದ್ಯ ಮಾಲಿನ್ಯದಿಂದ ಕೂಡಿದ್ದು, ಬಿಡಬ್ಲ್ಯುಎಸ್‌ಎಸ್‌ಬಿಯ (BWSSB) ನಿರ್ಲಕ್ಷ್ಯವೇ ಇದಕ್ಕೆ ಕಾರಣವೆನ್ನಲಾಗುತ್ತಿದೆ.

ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿಯ ಮೇಲ್ವಿಚಾರಣೆ ಕೊರತೆಯಿಂದ ಮಾಲಿನ್ಯ ತಾಣಗಳಾಗಿವೆ. ಜನವರಿಯಲ್ಲೇ 21 ಕೆರೆಗಳು ಅತ್ಯಂತ ಗರಿಷ್ಠ ಮಟ್ಟ ಮಾಲಿನ್ಯ ಹೊಂದಿವೆ ಎನ್ನಲಾಗುತ್ತಿದೆ. ಕರ್ನಾಟಕ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿ ನಗರದಲ್ಲಿರುವ 106 ಕೆರೆಗಳಲ್ಲಿನ ನೀರಿನ ಗುಣಮಟ್ಟ ಅಳೆಯಲು ಸೆನ್ಸಾರ್‌ ಮಾಪನಗಳನ್ನು ಅಳವಡಿಸಲಾಗಿದೆ.

ಇದನ್ನೂ ಓದಿ: ಬೆಂಗಳೂರು-ಮೈಸೂರು ಎಕ್ಸ್‌ಪ್ರೆಸ್‌ವೇ ಕರ್ನಾಟಕದ ಅಭಿವೃದ್ಧಿಯ ಪಥಕ್ಕೆ ಕೊಡುಗೆ: ಪ್ರಧಾನಿ ಮೋದಿ

ಮೀನು ಸಾಕಲು ಯೋಗ್ಯವಲ್ಲ

ಒಟ್ಟಾರೆ 47 ಕೆರೆಗಳ ನೀರಿನ ಗುಣಮಟ್ಟ ಕಟ್ಟಕಡೆಯ ಇ-ಗ್ರೇಡ್‌ನಲ್ಲಿದೆ. ಅಂದರೆ, ಈ ಕೆರೆಗಳ ನೀರು ಲೋಹ, ಕಲ್ಮಶಯುಕ್ತ, ಕೈಗಾರಿಕೆ ಮಾಲಿನ್ಯಕಾರಕಗಳನ್ನು ಅತಿಹೆಚ್ಚಾಗಿ ಹೊಂದಿವೆ. ಮೀನುಗಳನ್ನು ಸಾಕಲು ಯೋಗ್ಯವಲ್ಲ. ಪ್ರತಿಯೊಂದು ಕೆರೆಗೆ ಕನಿಷ್ಠ 5 ಕೋಟಿಯನ್ನು ವೆಚ್ಚ ಮಾಡಲಾಗಿದೆ. ಆದರೂ ಅವು ಎಷ್ಟು ಹಾಳಾಗಿವೆ ಎನ್ನುವುದನ್ನು ಮಾಲಿನ್ಯ ನಿಯಂತ್ರಣ ಮಂಡಳಿಯ ದತ್ತಾಂಶವೇ ಸಾಬೀತು ಮಾಡುತ್ತದೆ.

ಕಾಯ್ದೆ ನಿರ್ವಹಣೆ ಇಲ್ಲ: ನಿಯಮಗಳನ್ನು ಗಾಳಿಗೆ ತೂರಿತಾ ಮಾಲಿನ್ಯ ನಿಯಂತ್ರಣ ಮಂಡಳಿ?

ನೀರು ಕಾಯ್ದೆ–1974 ಪ್ರಕಾರ ಎಲ್ಲ ರೀತಿಯ ಮಾಲಿನ್ಯವನ್ನು ನಿಯಂತ್ರಿಸಲು ಕ್ರಮ ಕೈಗೊಳ್ಳಬೇಕಾದದ್ದು ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿಯ ಜವಾಬ್ದಾರಿ. ಆದರೆ, ಈ ಕಾರ್ಯವನ್ನು ಅದು ಮಾಡುತ್ತಿಲ್ಲ. ಮಾಲಿನ್ಯ ನಿಯಂತ್ರಣ ಮಂಡಳಿಯವರು ಜನರಿಗೆ ಮಾಹಿತಿಯನ್ನೂ ನೀಡುವುದಿಲ್ಲ ಅಂತ ಪರಿಸರ ವಾದಿಗಳು ಆಕ್ರೋಶ ವ್ಯಕ್ತಪಡಿಸುತ್ತಿದ್ದಾರೆ.

ಇದನ್ನೂ ಓದಿ: Kalghatgi Thottilu: ಪ್ರಧಾನಿ ಮೋದಿಗೆ ಉಡುಗೊರೆ ನೀಡಲು ಸಿದ್ಧವಾಯಿತು ಜಗತ್ಪ್ರಸಿದ್ಧ ಕಲಘಟಗಿ ತೊಟ್ಟಿಲು

ಕಲುಷಿತಗೊಂಡ ಕೆರಗಳ ವಿವಿರ ಹೀಗಿದೆ

ಅರಕೆರೆ, ಜಸವನಪುರ, ವೆಂಗಯ್ಯನಕೆರೆ, ದೊಡ್ಡನೆಕ್ಕುಂದಿ, ವರ್ತೂರು, ತುಬ್ರಹಳ್ಳಿ, ಗರುಡಾಚಾರ್ ಪಾಳ್ಯ, ಚಿನ್ನಪ್ಪನಹಳ್ಳಿ, ದ್ಯಾವಸಂದ್ರ, ವೈಟ್ ಫೀಲ್ಡ್ ಕೆರೆ, ಹೇರೋಹಳ್ಳಿ, ಚಿಕ್ಕಬಾಣಾವಾರ, ಕಮ್ಮಗೊಂಡನಹಳ್ಳಿ, ಬಂಡೆಮಠ ಕೆರೆ, ಹೆಬ್ಬಾಳ ಕೆರೆ, ಅಲ್ಲಾಳಸಂದ್ರ ಹಾಗೂ ಯಲಹಂಕ ಕೆರೆ.

ವರದಿ: ಅನಿಲ್ ಕಲ್ಕೆರೆ, ಟಿವಿ9, ಬೆಂಗಳೂರು.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Published On - 8:08 pm, Fri, 10 March 23

Follow Us
Gangadhar Saboji
Gangadhar Saboji

ಬಾಗಲಕೋಟೆ ಜಿಲ್ಲೆಯ ರಬಕವಿ-ಬನಹಟ್ಟಿ ತಾಲೂಕಿನ ರಬಕವಿ ನನ್ನೂರು. ಡಿಗ್ರಿ ಬಳಿಕ ಮನಸ್ಸು ವಾಲಿದ್ದು ಮಾಧ್ಯಮ ಕ್ಷೇತ್ರದ ಕಡೆ. ಹಾಗಾಗಿ ಧಾರವಾಡದ ಕರ್ನಾಟಕ ವಿಶ್ವವಿದ್ಯಾಲಯದಲ್ಲಿ ಎಂಎ ಪತ್ರಿಕೋದ್ಯಮ ಪದವಿ ಮಾಡಿದೆ. ಆ ಸಂದರ್ಭದಲ್ಲಿಯೇ ಲೋಕಲ್ ಚಾನೆಲ್​ನಲ್ಲಿ ಸುದ್ದಿ ಬರವಣಿಗೆ, ಆ್ಯಂಕರಿಂಗ್​, ವೈಯಿಸ್​ ಓವರ್​, ಎಡಿಟಿಂಗ್​ ಕಲಿಕೆ. ಬಳಿಕ ಟಿವಿ6 ಸುದ್ದಿ ವಾಹಿನಿಯಲ್ಲಿ ಇಂಟರ್ನ್‌ಶಿಪ್. ನಂತರ ದಾವಣಗೆರೆ ವಿಶ್ವವಿದ್ಯಾಲಯದಲ್ಲಿ ಬೋಧನಾ ಸಹಾಯಕನಾಗಿ ನನ್ನ ಜ್ಞಾನವನ್ನು ಇತತರಿಗೆ ಹಂಚುವ ಕೆಲಸ. ಇದೀಗ ‘ಉತ್ತಮ ಸಮಾಜಕ್ಕಾಗಿ’ ನನ್ನ ಕಾಯಕ. ಓದು, ಬರವಣಿಗೆ, ಸಿನಿಮಾ ನನ್ನ ಆಸಕ್ತಿ.

Read More
‘ಮ್ಯಾಂಗೋ ಪಚ್ಚ’ ಚಿತ್ರದಲ್ಲಿ ಕಿಚ್ಚ ಸುದೀಪ್​ಗೆ ನೀಡಲಾಗಿದೆ ಟ್ರಿಬ್ಯೂಟ್
‘ಮ್ಯಾಂಗೋ ಪಚ್ಚ’ ಚಿತ್ರದಲ್ಲಿ ಕಿಚ್ಚ ಸುದೀಪ್​ಗೆ ನೀಡಲಾಗಿದೆ ಟ್ರಿಬ್ಯೂಟ್
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಬಾಲಕಿಯನ್ನು ಹೊತ್ತೊಯ್ಯುವಾಗ ಬಾಗಿಲಲ್ಲೇ ತಡೆದ ಬಾಲಕ
ಬಾಲಕಿಯನ್ನು ಹೊತ್ತೊಯ್ಯುವಾಗ ಬಾಗಿಲಲ್ಲೇ ತಡೆದ ಬಾಲಕ
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!
ನರ್ಮದಾ-ಕ್ಷಿಪ್ರ ಪೈಪ್​ಲೈನ್ ಸ್ಫೋಟ, ಮುಗಿಲೆತ್ತರಕ್ಕೆ ಚಿಮ್ಮಿದ ನೀರು
ನರ್ಮದಾ-ಕ್ಷಿಪ್ರ ಪೈಪ್​ಲೈನ್ ಸ್ಫೋಟ, ಮುಗಿಲೆತ್ತರಕ್ಕೆ ಚಿಮ್ಮಿದ ನೀರು