AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬೆಂಗಳೂರಿನಲ್ಲಿ ಭಾರಿ ಮಳೆಗೆ ಕುಸಿದ ರಸ್ತೆ; ಸವಾರರಿಗೆ ತಟ್ಟಿದ ಟ್ರಾಫಿಕ್​ ಬಿಸಿ

ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ಕಳೆದ ಒಂದು ವಾರದಿಂದ ಸಂಜೆಯಾಗುತ್ತಿದ್ದಂತೆ ಭರ್ಜರಿ ಮಳೆ ಆಗುತ್ತಿದ್ದು, ಇಂದು ಕೂಡ ಸಾಯಂಕಾಲ ಆಗುತ್ತಿದ್ದಂತೆ ಅರ್ಧ ಗಂಟೆಗೂ ಅಧಿಕ ಕಾಲ ಮಳೆಯಾಗಿದೆ. ಈ ಹಿನ್ನಲೆ ರಿಚಮಂಡ್ ಸರ್ಕಲ್​​ನಿಂದ ಕಾರ್ಪೊರೇಷನ್ ಕಡೆಗೆ ತೆರಳುವ ಮಾರ್ಗದಲ್ಲಿ ರಸ್ತೆ ಕಳೆದ 2 ಗಂಟೆ ಹಿಂದೆ ಕುಸಿತವಾಗಿದೆ.

ಬೆಂಗಳೂರಿನಲ್ಲಿ ಭಾರಿ ಮಳೆಗೆ ಕುಸಿದ ರಸ್ತೆ; ಸವಾರರಿಗೆ ತಟ್ಟಿದ ಟ್ರಾಫಿಕ್​ ಬಿಸಿ
ಬೆಂಗಳೂರಿನಲ್ಲಿ ಭಾರಿ ಮಳೆಗೆ ಕುಸಿದ ರಸ್ತೆ; ಸವಾರರಿಗೆ ತಟ್ಟಿದ ಟ್ರಾಫಿಕ್​ ಬಿಸಿ
Vinayak Hanamant Gurav
| Edited By: |

Updated on:Jun 07, 2024 | 8:11 PM

Share

ಬೆಂಗಳೂರು, ಜೂ.07: ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ಕಳೆದ ಒಂದು ವಾರದಿಂದ ಸಂಜೆಯಾಗುತ್ತಿದ್ದಂತೆ ಭರ್ಜರಿ ಮಳೆ ಆಗುತ್ತಿದ್ದು, ಇಂದು ಕೂಡ ಸಾಯಂಕಾಲ ಆಗುತ್ತಿದ್ದಂತೆ ಅರ್ಧ ಗಂಟೆಗೂ ಅಧಿಕ ಕಾಲ ಮಳೆಯಾಗಿದೆ. ಭಾರಿ ಮಳೆಗೆ ಸುಬ್ಬಯ್ಯ ಸರ್ಕಲ್(Subbaiah circle)​​ ಬಳಿ ರಸ್ತೆ ಕುಸಿದಿದೆ. ಈ ಹಿನ್ನಲೆ ಹಲಸೂರು ಗೇಟ್ ಟ್ರಾಫಿಕ್ ಪೊಲೀಸರು ಬ್ಯಾರಿಕೇಡ್​ ಹಾಕಿದ್ದು, ವಾಹನ ಸವಾರರು ಪರದಾಡುವಂತಾಗಿದೆ. ಇತ್ತ ರಸ್ತೆ ಕುಸಿದರೂ ಬಿಬಿಎಂಪಿ (BBMP) ಅಧಿಕಾರಿಗಳು ಸ್ಥಳಕ್ಕೆ ಬಂದಿಲ್ಲ.

ರಿಚಮಂಡ್ ಸರ್ಕಲ್​​ನಿಂದ ಕಾರ್ಪೊರೇಷನ್ ಕಡೆಗೆ ತೆರಳುವ ಮಾರ್ಗದಲ್ಲಿ ರಸ್ತೆ ಕುಸಿತ

ಇವತ್ತು ಸುರಿದ ಮಳೆಗೆ ಮಳೆಯಿಂದ ರಿಚಮಂಡ್ ಸರ್ಕಲ್​​ನಿಂದ ಕಾರ್ಪೊರೇಷನ್ ಕಡೆಗೆ ತೆರಳುವ ಮಾರ್ಗದಲ್ಲಿ ರಸ್ತೆ ಕಳೆದ 2 ಗಂಟೆ ಹಿಂದೆ ಕುಸಿತವಾಗಿದ್ದು, ರಸ್ತೆ ಕೆಳಗಡೆ ಅಂಡರ್‌ಗ್ರೌಂಡ್ ಡ್ರೈನೇಜ್ ಇರುವ ಕಾರಣ ಮಳೆಯಾದರೆ ಇನ್ನೂ ರಸ್ತೆ ಕುಸಿಯುವ ಆತಂಕ ಎದುರಾಗಿದೆ. ಇದರಿಂದ ಕೆಲಸ ಮುಗಿಸಿ ಮನೆಗೆ ತೆರಳುವವರಿಗೆ ಟ್ರಾಫಿಕ್ ಬಿಸಿ ತಟ್ಟಿದ್ದು, ರಸ್ತೆಯಲ್ಲಿಯೇ ಪರದಾಡುವಂತಾಗಿದೆ.

ಇದನ್ನೂ ಓದಿ:ಒಂದೇ ಮಳೆಗೆ ಕೆರೆಯಂತಾದ ಹೊನ್ನಾಳಿಯ ಖಾಸಗಿ ಬಸ್ ನಿಲ್ದಾಣ, ಶಾಸಕ ಶಾಂತನಗೌಡರೇ ಈ ಕಡೆ ಬರಬೇಡಿ!

ಯಲ್ಲೋ ಅಲರ್ಟ್

ಇಂದಿನಿಂದ 10 ನೇ ತಾರೀಖಿನವರೆಗೂ ಹವಾಮಾನ ಇಲಾಖೆ ಯಲ್ಲೋ ಅಲರ್ಟ್ ನೀಡಿದ್ದು, ರಾಜ್ಯದಲ್ಲಿ ಒಂದು ವಾರ ಭರ್ಜರಿ ಮಳೆಯಾಗಲಿದೆ ಹಾಗೂ ಜೂನ್ 6 ರಿಂದ 8 ರವರೆಗೆ ಉತ್ತರ ಒಳನಾಡಿನ ಜಿಲ್ಲೆಗಳಲ್ಲಿ ಹಾಗೂ ಜೂನ್ 8 ರಿಂದ 12 ರವರೆಗೆ ಕರಾವಳಿ ಜಿಲ್ಲೆಗಳಲ್ಲಿ ಜೊತೆಗೆ ಕರಾವಳಿ ಜಿಲ್ಲೆಗಳಿಗೆ ಹೊಂದಿಕೊಂಡಂತಹ ಮಲೆನಾಡು ಜಿಲ್ಲೆಗಳಲ್ಲಿ ಭಾರಿ ಮಳೆಯಾಗುವ ಸಾಧ್ಯತೆ ಇದೆ ಎಚ್ಚರವಾಗಿರಲು ಹವಾಮಾನ ಇಲಾಖೆ ಸೂಚಿಸಿದೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 8:06 pm, Fri, 7 June 24

Follow Us
ದಂಡ ಕಟ್ಟಿದ ಬಳಿಕ ಫಾರ್ಮ್​ಗೆ ಮರಳಿದ ರಿಯಾನ್ ಪರಾಗ್
ದಂಡ ಕಟ್ಟಿದ ಬಳಿಕ ಫಾರ್ಮ್​ಗೆ ಮರಳಿದ ರಿಯಾನ್ ಪರಾಗ್
ಇರಾನ್​ ಪರಿಸ್ಥಿತಿ ಹೇಗಿದೆ?ಯುದ್ಧದ ನೆಲದಿಂದ ವರದಿ ಮಾಡಿದ ಟಿವಿ9 ರಿಪೋರ್ಟರ್
ಇರಾನ್​ ಪರಿಸ್ಥಿತಿ ಹೇಗಿದೆ?ಯುದ್ಧದ ನೆಲದಿಂದ ವರದಿ ಮಾಡಿದ ಟಿವಿ9 ರಿಪೋರ್ಟರ್
ಡೆಲ್ಲಿ ವಿರುದ್ಧ ಐದೇ ಎಸೆತಗಳಿಗೆ ಸುಸ್ತಾದ ಜೈಸ್ವಾಲ್, ವೈಭವ್
ಡೆಲ್ಲಿ ವಿರುದ್ಧ ಐದೇ ಎಸೆತಗಳಿಗೆ ಸುಸ್ತಾದ ಜೈಸ್ವಾಲ್, ವೈಭವ್
ಅವನ ಮರ್ಯಾದೆ ತೆಗೆಯದೇ ಬಿಡಲ್ಲ: ನಿರ್ಮಾಪಕನ ವಿರುದ್ಧ ಕಿಡಿಕಾರಿದ ಹಂಸಾ
ಅವನ ಮರ್ಯಾದೆ ತೆಗೆಯದೇ ಬಿಡಲ್ಲ: ನಿರ್ಮಾಪಕನ ವಿರುದ್ಧ ಕಿಡಿಕಾರಿದ ಹಂಸಾ
ಇರಾನ್​ ಯುದ್ಧಭೂಮಿಯಲ್ಲಿ ಟಿವಿ9; ಟೆಹ್ರಾನ್​ನ ನೈಜ ಚಿತ್ರಣ ಇಲ್ಲಿದೆ
ಇರಾನ್​ ಯುದ್ಧಭೂಮಿಯಲ್ಲಿ ಟಿವಿ9; ಟೆಹ್ರಾನ್​ನ ನೈಜ ಚಿತ್ರಣ ಇಲ್ಲಿದೆ
ಹಿಡಕಲ್ ಜಲಾಶಯದಲ್ಲಿ ಮುಳುಗಿ ಹೋಗಿದ್ದ ದೇಗುಲ ಗೋಚರ
ಹಿಡಕಲ್ ಜಲಾಶಯದಲ್ಲಿ ಮುಳುಗಿ ಹೋಗಿದ್ದ ದೇಗುಲ ಗೋಚರ
ಲಂಚದ ಬೇಡಿಕೆಯಿಟ್ಟ ಟಿಕೆಟ್​ ಇನ್​ಸ್ಪೆಕ್ಟರ್ ಮೈಚಳಿ ಬಿಡಿಸಿದ ಪ್ರಯಾಣಿಕ
ಲಂಚದ ಬೇಡಿಕೆಯಿಟ್ಟ ಟಿಕೆಟ್​ ಇನ್​ಸ್ಪೆಕ್ಟರ್ ಮೈಚಳಿ ಬಿಡಿಸಿದ ಪ್ರಯಾಣಿಕ
ಅಜ್ಜನಾದ ಡಿಕೆ ಶಿವಕುಮಾರ್, ಮೊಮ್ಮಗಳನ್ನ ನೋಡಲು ಆಸ್ಪತ್ರೆಗೆ ದೌಡು
ಅಜ್ಜನಾದ ಡಿಕೆ ಶಿವಕುಮಾರ್, ಮೊಮ್ಮಗಳನ್ನ ನೋಡಲು ಆಸ್ಪತ್ರೆಗೆ ದೌಡು
‘ವಸುದೇವ ಕುಟುಂಬ’ ಧಾರಾವಾಹಿ ನಿರ್ಮಾಪಕರ ಮೇಲೆ ಉರಿದು ಬಿದ್ದ ನಟಿ ಹಂಸ
‘ವಸುದೇವ ಕುಟುಂಬ’ ಧಾರಾವಾಹಿ ನಿರ್ಮಾಪಕರ ಮೇಲೆ ಉರಿದು ಬಿದ್ದ ನಟಿ ಹಂಸ
ಶಾಲಾ ಬಸ್‌ನಿಂದ ಇಳಿದು ರಸ್ತೆ ದಾಟುತ್ತಿದ್ದ ಮಗುವಿಗೆ ಬೈಕ್ ಡಿಕ್ಕಿ
ಶಾಲಾ ಬಸ್‌ನಿಂದ ಇಳಿದು ರಸ್ತೆ ದಾಟುತ್ತಿದ್ದ ಮಗುವಿಗೆ ಬೈಕ್ ಡಿಕ್ಕಿ