AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕಿತ್ತು ಹೋಗುತ್ತಿದೆ ಪ್ರಧಾನಿ ಬಂದಾಗ ನಿರ್ಮಿಸಿದ್ದ ರಸ್ತೆ! ಬಿಬಿಎಂಪಿ ಕಳಪೆ ಕಾಮಗಾರಿಯ ಕರಾಳ ಮುಖ ಬಯಲು

ಮೋದಿ ಬರುತ್ತಾರೆಂದು ಬಿಬಿಎಂಪಿ (BBMP) ಕೋಟಿ ಕೋಟಿ ಹಣ ಖರ್ಚು ಮಾಡಿ ರಸ್ತೆಗಳನ್ನ ಅಭಿವೃದ್ಧಿ ಪಡಿಸಿದೆ. ಆದರೆ ಅಭಿವೃದ್ಧಿ ಮಾಡಿ ಒಂದು ವಾರ ಕಳೆಯುವ ಮೊದಲೇ ರಸ್ತೆ ಕಿತ್ತು ಹೋಗುತ್ತಿದ್ದು, ಬಿಬಿಎಂಪಿ ಕಳಪೆ ಕಾಮಗಾರಿಯ ಕರಾಳ ಮುಖ ಬಯಲಾಗಿದೆ.

ಕಿತ್ತು ಹೋಗುತ್ತಿದೆ ಪ್ರಧಾನಿ ಬಂದಾಗ ನಿರ್ಮಿಸಿದ್ದ ರಸ್ತೆ! ಬಿಬಿಎಂಪಿ ಕಳಪೆ ಕಾಮಗಾರಿಯ ಕರಾಳ ಮುಖ ಬಯಲು
ಬಿಬಿಎಂಪಿ ಕಚೇರಿ
TV9 Web
| Edited By: |

Updated on:Jun 23, 2022 | 11:10 AM

Share

ಬೆಂಗಳೂರು: ಅಂತರಾಷ್ಟ್ರೀಯ ಯೋಗ ದಿನಾಚರಣೆ ಹಿನ್ನೆಲೆ ಈ ಬಾರಿ ಪ್ರಧಾನಿ ನರೇಂದ್ರ ಮೋದಿ (PM Narendra Modi) ರಾಜ್ಯಕ್ಕೆ ಆಗಮಿಸಿದ್ದರು. ಮೋದಿ ಬರುತ್ತಾರೆಂದು ಬಿಬಿಎಂಪಿ (BBMP) ಕೋಟಿ ಕೋಟಿ ಹಣ ಖರ್ಚು ಮಾಡಿ ರಸ್ತೆಗಳನ್ನ ಅಭಿವೃದ್ಧಿ ಪಡಿಸಿದೆ. ಆದರೆ ಅಭಿವೃದ್ಧಿ ಮಾಡಿ ಒಂದು ವಾರ ಕಳೆಯುವ ಮೊದಲೇ ರಸ್ತೆ ಕಿತ್ತು ಹೋಗುತ್ತಿದ್ದು, ಬಿಬಿಎಂಪಿ ಕಳಪೆ ಕಾಮಗಾರಿಯ ಕರಾಳ ಮುಖ ಬಯಲಾಗಿದೆ. ಮಳೆಯಿಂದ ರಸ್ತೆ ಕಿತ್ತು ಹೋಗಿತ್ತು. ಹೀಗಾಗಿ ಬಿಬಿಎಂಪಿ ನಿನ್ನೆ ಬೆಳಗ್ಗೆ ಮತ್ತೆ ಡಾಂಬರೀಕರಣ ಮಾಡಿತ್ತು. ನಿನ್ನೆ ಮಾಡಿದ್ದ ಡಾಂಬರೀಕರಣ ಕೂಡ ಇದೀಗ ಕಿತ್ತು ಹೋಗಿದೆ.

ಬಿಬಿಎಂಪಿ 23 ಕೋಟಿ ರೂಪಾಯಿ ಖರ್ಚು ಮಾಡಿ ರಸ್ತೆ ಅಭಿವೃದ್ಧಿ ಮಾಡಿದೆ. ಆದರೆ ಇದೀಗ ಡಾಂಬರೀಕರಣ ಚಾಕೋಲೆಟ್​ನಂತೆ ಕಿತ್ತು ಬರುತ್ತಿದೆ. ಮೋದಿ ಸಂಚರಿಸಲು ನಗರದಲ್ಲಿ 14 ಕಿ.ಮೀ. ರಸ್ತೆ ಡಾಂಬರೀಕರಣ, ಫುಟ್​​ಪಾತ್ ಸ್ಲ್ಯಾಬ್, ಬೀದಿ ದೀಪ, ಮರಗಳ ರೆಂಬೆ ಕಟ್, ಚರಂಡಿ ಸ್ವಚ್ಛತೆಗೆ ಸುಮಾರು 23 ಕೋಟಿ ರೂ. ಖರ್ಚಾಗಿದೆ ಎಂದು ಈ ಬಗ್ಗೆ ಬಿಬಿಎಂಪಿ ವಿಶೇಷ ಆಯುಕ್ತ ರವೀಂದ್ರ ಮಾಹಿತಿ ನೀಡಿದ್ದರು.

ಇದನ್ನೂ ಓದಿ: Rumeli Dhar: ಮಿಥಾಲಿ ಬೆನ್ನಲ್ಲೇ ಮತ್ತೋರ್ವ ಭಾರತದ ಸ್ಟಾರ್ ಮಹಿಳಾ ಆಟಗಾರ್ತಿ ಕ್ರಿಕೆಟ್ ಲೋಕಕ್ಕೆ ವಿದಾಯ

ಇದನ್ನೂ ಓದಿ
Image
Rumeli Dhar: ಮಿಥಾಲಿ ಬೆನ್ನಲ್ಲೇ ಮತ್ತೋರ್ವ ಭಾರತದ ಸ್ಟಾರ್ ಮಹಿಳಾ ಆಟಗಾರ್ತಿ ಕ್ರಿಕೆಟ್ ಲೋಕಕ್ಕೆ ವಿದಾಯ
Image
Omicron: ಕರ್ನಾಟಕದಲ್ಲಿ ಒಮಿಕ್ರಾನ್ ಉಪತಳಿ ಪತ್ತೆ; 4ನೇ ಅಲೆಯ ಆತಂಕ
Image
ಸಿಸ್ಟರ್ ಅಭಯಾ ಕೊಲೆ ಪ್ರಕರಣ: ಕೇರಳ ಹೈಕೋರ್ಟ್​ನಿಂದ ಘೋಷಿತ ಅಪರಾಧಿಗಳ ಜೀವಾವಧಿ ಶಿಕ್ಷೆ ಅಮಾನತು, ಜಾಮೀನು
Image
ಗುಂಪುಗಾರಿಕೆಯಿಂದ ಯುದ್ಧಭೀತಿ: ನ್ಯಾಟೊ ವಿರುದ್ಧ ಹರಿಹಾಯ್ದ ಚೀನಾ ಅಧ್ಯಕ್ಷ ಷಿ ಜಿನ್​ಪಿಂಗ್

ಬೆಂಗಳೂರು ಗುಂಡಿಮುಕ್ತವಾಗಬೇಕಾದರೆ ಪ್ರಧಾನಿ ಮೋದಿ ಅವರನ್ನು ಇಲ್ಲಿಗೆ ಅಗಾಗ್ಗೆ ಕರೆಸಿಕೊಳ್ಳುತ್ತಿರಬೇಕು- ಜಮೀರ್ ಅಹ್ಮದ್: ಬೆಂಗಳೂರಿನ ರಸ್ತೆಗಳ ಗುಂಡಿ ಮುಕ್ತವಾಗಬೇಕಾದರೆ ಪ್ರಧಾನ ಮಂತ್ರಿ ನರೇಂದ್ರ ಮೋದಿಯವರನ್ನು ಆಗಾಗ ಕರೆಸಿಕೊಳ್ಳಬೇಕು ಎಂದು ಕಾಂಗ್ರೆಸ್ ಶಾಸಕ ಜಮೀರ್ ಅಹ್ಮದ್ ಅವರು ಬುಧವಾರ ಬೆಂಗಳೂರಲ್ಲಿ ಹೇಳಿದರು. ಪ್ರಧಾನಿಯವರು ತಿರುಗಾಡಬೇಕಿದ್ದ ರಸ್ತೆಗಳೆಲ್ಲವನ್ನು 24 ಕೋಟಿ ರೂ. ಖರ್ಚು ಮಾಡಿ ರಿಪೇರಿ ಮಾಡಲಾಗಿದೆ ಎಂದು ಅವರು ಹೇಳಿದರು. ತಮ್ಮ ಕ್ಷೇತ್ರದ ಅಭಿವೃದ್ಧಿಗೆ ಬಿಡುಗಡೆಯಾಗಬೇಕಿದ್ದ ರೂ. 160 ಕೋಟಿಗಳನ್ನು ಕೋವಿಡ್ ನಿರ್ವಹಣೆಗೆ ಖರ್ಚಾಗಿದೆ ಅಂತ ಹೇಳಿ ತಡೆಹಿಡಿದಿದ್ದಾರೆ ಎಂದು ಜಮೀರ್ ಅಹ್ಮದ್ ಈ ಸಂದರ್ಭದಲ್ಲಿ ಆರೋಪಿದರು.

ತಾಜಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ಪ್ರಮುಖ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On - 10:58 am, Thu, 23 June 22

Follow Us
ತಮ್ಮ ವಿವಾಹದ ಬಳಿಕ ಮತ್ತೊದು ಮದುವೆಗೆ ಹಾಜರಿ ಹಾಕಿದ ವಿಜಯ್-ರಶ್ಮಿಕಾ
ತಮ್ಮ ವಿವಾಹದ ಬಳಿಕ ಮತ್ತೊದು ಮದುವೆಗೆ ಹಾಜರಿ ಹಾಕಿದ ವಿಜಯ್-ರಶ್ಮಿಕಾ
ಬೆಂಗಳೂರು ಏರ್​ಪೋರ್ಟ್​ಗೂ ತಟ್ಟಿದ ಯುದ್ಧದ ಬಿಸಿ: 15 ವಿಮಾನಗಳ ಹಾರಾಟ ರದ್ದು
ಬೆಂಗಳೂರು ಏರ್​ಪೋರ್ಟ್​ಗೂ ತಟ್ಟಿದ ಯುದ್ಧದ ಬಿಸಿ: 15 ವಿಮಾನಗಳ ಹಾರಾಟ ರದ್ದು
ಮಂತ್ರಗಳನ್ನು ಹೇಳುವುದು ಜೀವನಕ್ಕೆ ಶುಭ, ಅಶುಭ ಎರೆಡೂ ಆಗುತ್ತೆ, ಅದು ಹೇಗೆ?
ಮಂತ್ರಗಳನ್ನು ಹೇಳುವುದು ಜೀವನಕ್ಕೆ ಶುಭ, ಅಶುಭ ಎರೆಡೂ ಆಗುತ್ತೆ, ಅದು ಹೇಗೆ?
ಈ ರಾಶಿಯವರು ಇಂದು ಮಾಡುವ ಎಲ್ಲ ಕಾರ್ಯಗಳು ಯಶಸ್ಸು ಕಾಣಲಿದೆ
ಈ ರಾಶಿಯವರು ಇಂದು ಮಾಡುವ ಎಲ್ಲ ಕಾರ್ಯಗಳು ಯಶಸ್ಸು ಕಾಣಲಿದೆ
ಮತ್ತೆ ವಿವಾದದ ಕಿಡಿ ಹೊತ್ತಿಸಿದ ಕನ್ಹೇರಿ ಸ್ವಾಮೀಜಿ , ಏನು ಹೇಳಿದ್ರು ಕೇಳಿ
ಮತ್ತೆ ವಿವಾದದ ಕಿಡಿ ಹೊತ್ತಿಸಿದ ಕನ್ಹೇರಿ ಸ್ವಾಮೀಜಿ , ಏನು ಹೇಳಿದ್ರು ಕೇಳಿ
‘ಪೆದ್ದಿ’ ಡಬ್ಬಿಂಗ್​​ನಲ್ಲಿ ನಿರ್ದೇಶಕನ ಕಾಲೆಳೆದ ರಾಮ್ ಚರಣ್: ವಿಡಿಯೋ
‘ಪೆದ್ದಿ’ ಡಬ್ಬಿಂಗ್​​ನಲ್ಲಿ ನಿರ್ದೇಶಕನ ಕಾಲೆಳೆದ ರಾಮ್ ಚರಣ್: ವಿಡಿಯೋ
ಸ್ವಿಮ್ಮಿಂಗ್ ಪೂಲ್​​ನಲ್ಲಿ ಡೈವ್ ಹೊಡೆದವ ಮೇಲೇಳಲೇ ಇಲ್ಲ: ಮನಕಲಕುವ ವಿಡಿಯೋ
ಸ್ವಿಮ್ಮಿಂಗ್ ಪೂಲ್​​ನಲ್ಲಿ ಡೈವ್ ಹೊಡೆದವ ಮೇಲೇಳಲೇ ಇಲ್ಲ: ಮನಕಲಕುವ ವಿಡಿಯೋ
‘ಹಯಗ್ರೀವ’ ಸಿನಿಮಾಕ್ಕೆ ಸಿಕ್ಕ ಪ್ರತಿಕ್ರಿಯೆ ನೋಡಿ ಸಂಜನಾ ಫುಲ್ ಖುಷ್
‘ಹಯಗ್ರೀವ’ ಸಿನಿಮಾಕ್ಕೆ ಸಿಕ್ಕ ಪ್ರತಿಕ್ರಿಯೆ ನೋಡಿ ಸಂಜನಾ ಫುಲ್ ಖುಷ್
ಇಸ್ರೇಲ್ ಏರ್​ಸ್ಟ್ರೈಕ್​ನಲ್ಲಿ ಇರಾನ್ ಮಾಜಿ ಅಧ್ಯಕ್ಷ ಸಾವು
ಇಸ್ರೇಲ್ ಏರ್​ಸ್ಟ್ರೈಕ್​ನಲ್ಲಿ ಇರಾನ್ ಮಾಜಿ ಅಧ್ಯಕ್ಷ ಸಾವು
ಹೋದ ಜೀವ ವಾಪಸ್‌ ಕೊಡ್ತೀರಾ? ಸಿದ್ದರಾಮಯ್ಯ ವಿರುದ್ಧ ಗುಡುಗಿದ ಈಶ್ವರಪ್ಪ
ಹೋದ ಜೀವ ವಾಪಸ್‌ ಕೊಡ್ತೀರಾ? ಸಿದ್ದರಾಮಯ್ಯ ವಿರುದ್ಧ ಗುಡುಗಿದ ಈಶ್ವರಪ್ಪ