AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬೆಂಗಳೂರಿನಲ್ಲಿ ರೋಡ್ ರೇಜ್: ಕಾರಿನಲ್ಲಿ ತೆರಳುತಿದ್ದ ಯುವತಿಯನ್ನ ಅಡ್ಡಗಟ್ಟಿ ಯುವಕರ ಪುಂಡಾಟ

ಬೆಂಗಳೂರು ನಗರದಲ್ಲಿ ರೋಡ್ ರೇಜ್ ಪ್ರಕರಣಗಳು ಹೆಚ್ಚಾಗುತ್ತಿವೆ. ಕಾರಿನಲ್ಲಿ ತೆರಳುತಿದ್ದ ಯುವತಿಯನ್ನ ಅಡ್ಡಗಟ್ಟಿ ಯುವಕರ ಗುಂಪೊಂದು ಪುಂಡಾಟ ಮೆರೆದಿರುವಂತಹ ಘಟನೆ ನಗರದ ಅತ್ತಿಬೆಲೆಯ ಸರ್ಜಾಪುರ ರಸ್ತೆಯಲ್ಲಿ‌ ನಿನ್ನೆ ರಾತ್ರಿ ನಡೆದಿದೆ. ಯುವಕರ ಭಯಕ್ಕೆ ಬೈಕ್‌ ಮೇಲೆ ಕಾರು ಚಲಾಯಿಸಿಕೊಂಡು ಚಾಲಕಿ ಹೋಗಿದ್ದಾಳೆ. ಕಾರಿನ ಡ್ಯಾಶ್ ಕ್ಯಾಮ್​ನಲ್ಲಿ ಗಲಾಟೆಯ ದೃಶ್ಯಾವಳಿ ಸೆರೆ ಆಗಿದೆ. 

ಬೆಂಗಳೂರಿನಲ್ಲಿ ರೋಡ್ ರೇಜ್: ಕಾರಿನಲ್ಲಿ ತೆರಳುತಿದ್ದ ಯುವತಿಯನ್ನ ಅಡ್ಡಗಟ್ಟಿ ಯುವಕರ ಪುಂಡಾಟ
ರೋಡ್ ರೇಜ್
ರಾಚಪ್ಪಾಜಿ ನಾಯ್ಕ್
| Updated By: ಗಂಗಾಧರ​ ಬ. ಸಾಬೋಜಿ|

Updated on: Jan 08, 2024 | 10:40 PM

Share

ಬೆಂಗಳೂರು, ಜನವರಿ 08: ನಗರದಲ್ಲಿ ರೋಡ್ ರೇಜ್ ಪ್ರಕರಣಗಳು (Road rage case) ಹೆಚ್ಚಾಗುತ್ತಿವೆ. ಕಾರಿನಲ್ಲಿ ತೆರಳುತಿದ್ದ ಯುವತಿಯನ್ನ ಅಡ್ಡಗಟ್ಟಿ ಯುವಕರ ಗುಂಪೊಂದು ಪುಂಡಾಟ ಮೆರೆದಿರುವಂತಹ ಘಟನೆ ನಗರದ ಅತ್ತಿಬೆಲೆಯ ಸರ್ಜಾಪುರ ರಸ್ತೆಯಲ್ಲಿ‌ ನಿನ್ನೆ ರಾತ್ರಿ ನಡೆದಿದೆ. ಯುವಕರ ಭಯಕ್ಕೆ ಬೈಕ್‌ ಮೇಲೆ ಕಾರು ಚಲಾಯಿಸಿಕೊಂಡು ಚಾಲಕಿ ಹೋಗಿದ್ದಾಳೆ. ಕಾರಿನ ಡ್ಯಾಶ್ ಕ್ಯಾಮ್​ನಲ್ಲಿ ಗಲಾಟೆಯ ದೃಶ್ಯಾವಳಿ ಸೆರೆ ಆಗಿದೆ.

ಓವರ್ ಟೇಕ್ ಮಾಡುವ ವಿಚಾರವಾಗಿ ಗಲಾಟೆ ಶುರುವಾಗಿದೆ. ಯುವಕರಿಂದ ತಪ್ಪಿಸಿಕೊಳ್ಳಲು ಕಾರನ್ನು ಜೋರಾಗಿ ಓಡಿಸಿದ್ದಾಳೆ. ನಂತರ ಕಾರನ್ನು ಹಿಂಬಾಲಿಸಿಕೊಂಡು ಬಂದಿದ್ದ ಕಿಡಿಗೇಡಿಗಳು, ಕಾರನ್ನು ಯುವಕರು ಅಡ್ಡಗಟ್ಟಿದ್ದಾರೆ. ಸರ್ಜಾಪುರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲ ಘಟನೆ ಕಂಡುಬಂದಿದೆ.

ಕುಡುಕರಿಂದ ಸುಲಿಗೆ ಯತ್ನ

ಟ್ಯಾಲೆಂಟ್‌ರಾಕರ್ ಟೆಕ್ನಾಲಜೀಸ್‌ನ ಸಿಇಒ ಮತ್ತು ಸಂಸ್ಥಾಪಕ ಚರಣ್ ಪಾಲ್ ಸಿಂಗ್​ ಎಂಬುವವರು ಘಟನೆಯ ವಿಡಿಯೋವನ್ನು ಎಕ್ಸ್​ನಲ್ಲಿ ಹಂಚಿಕೊಂಡಿದ್ದು, ‘ಯಾವುದೇ ಅಪಘಾತ ಸಂಭವಿಸಿಲ್ಲ, ಇದು ಕೇವಲ ಸುಲಿಗೆ ಮತ್ತು ಕಿರುಕುಳ ಪ್ರಕರಣವಾಗಿದ್ದು, ಸರ್ಜಾಪುರ ಪೊಲೀಸ್ ಠಾಣೆಯಲ್ಲಿ ದೂರು ನೀಡಲಾಗಿದೆ. ಈ ಯುವಕರು ತಾವು ಕುಡಿದಿರುವುದಾಗಿ ಮತ್ತು ಸಂಚಾರ ನಿಯಮ ಉಲ್ಲಂಘಿಸಿದ್ದಾರೆಂದು ಒಪ್ಪಿಕೊಂಡಿದ್ದಾರೆ. ಬೆಂಗಳೂರಿನಲ್ಲಿ ನಾವು ಸುರಕ್ಷಿತವಾಗಿಲ್ಲ’ ಎಂದು ಅವರು ಬರೆದುಕೊಂಡಿದ್ದಾರೆ.

ಇದನ್ನೂ ಓದಿ: ಕಮಿಷನರ್ ವಾರ್ನ್ ಮಾಡಿದರೂ ಬುದ್ಧಿ ಕಲಿಯದ ಕೆಲ ಕಿಡಿಗೇಡಿಗಳು: ಬೆಂಗಳೂರಲ್ಲಿ ಮತ್ತೆ ಮರುಕಳಿಸಿದ ರೋಡ್ ರೇಜ್ ಪ್ರಕರಣ

ಇತ್ತೀಚಿಗೆ ಮಧ್ಯರಾತ್ರಿ ಕಾರ್​ಗೆ ಬೈಕ್ ಅಡ್ಡ ತಂದು ನಿಲ್ಲಿಸಿ ದಾದಾಗಿರಿ ಆರೋಪ ಮಾಡಲಾಗಿತ್ತು. ಅಗರ ಕೆರೆಯಿಂದ ಕೋರಮಂಗಲದವರೆಗೂ ಕಾರನ್ನ ಅಡ್ಡಗಟ್ಟುತ್ತಾ ಬಂದಿದ್ದು, ಕೊನೆಗೆ ಇಳಿದು ಬಂದು ದಾದಾಗಿರಿ ಹಾಕಿರುವುದಾಗಿ ಆರೋಪ ಮಾಡಲಾಗಿತ್ತು. ಮಧ್ಯರಾತ್ರಿ ಈ ರೀತಿಯ ಘಟನೆಯನ್ನ ನಿರೀಕ್ಷಿಸಿರಲಿಲ್ಲ ಎಂದು ಬೆಂಗಳೂರು ಪೊಲೀಸರಿಗೆ ವಿಡಿಯೋ ಟ್ಯಾಗ್ ಮಾಡಿ ಟ್ವೀಟ್ ಮಾಡಲಾಗಿತ್ತು.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

ಸಿಡ್ನಿಯ ಬೊಂಡಿ ಬೀಚ್​ನಲ್ಲಿ ಸಾಮೂಹಿಕ ಗುಂಡಿನ ದಾಳಿ, 10 ಮಂದಿ ಸಾವು
ಸಿಡ್ನಿಯ ಬೊಂಡಿ ಬೀಚ್​ನಲ್ಲಿ ಸಾಮೂಹಿಕ ಗುಂಡಿನ ದಾಳಿ, 10 ಮಂದಿ ಸಾವು
ಪ್ರೋಮೊನಲ್ಲೇ ಶಾಕ್ ಕೊಟ್ಟ ಬಿಗ್​​ಬಾಸ್: ಮನೆಯಿಂದ ಇಬ್ಬರು ಹೊರಕ್ಕೆ
ಪ್ರೋಮೊನಲ್ಲೇ ಶಾಕ್ ಕೊಟ್ಟ ಬಿಗ್​​ಬಾಸ್: ಮನೆಯಿಂದ ಇಬ್ಬರು ಹೊರಕ್ಕೆ
ದುರಹಂಕಾರದಿಂದ ಬಿಗ್ ಬಾಸ್ ನಿರೂಪಣೆ ಬೇಡ ಅಂತ ನಾನು ಹೇಳಲಿಲ್ಲ: ಸುದೀಪ್
ದುರಹಂಕಾರದಿಂದ ಬಿಗ್ ಬಾಸ್ ನಿರೂಪಣೆ ಬೇಡ ಅಂತ ನಾನು ಹೇಳಲಿಲ್ಲ: ಸುದೀಪ್
ಯಶಸ್ವಿ ಜೈಸ್ವಾಲ್ ಸ್ಫೋಟಕ ಸೆಂಚುರಿ: ಮುಂಬೈ ದಾಖಲೆಯ ರನ್ ಚೇಸ್​
ಯಶಸ್ವಿ ಜೈಸ್ವಾಲ್ ಸ್ಫೋಟಕ ಸೆಂಚುರಿ: ಮುಂಬೈ ದಾಖಲೆಯ ರನ್ ಚೇಸ್​
ಮೊಟ್ಟೆಗಳಲ್ಲಿ ಕ್ಯಾನ್ಸರ್ ಕಾರಕ ಅಂಶ ಪತ್ತೆ?: ಭಾರಿ ಚರ್ಚೆ
ಮೊಟ್ಟೆಗಳಲ್ಲಿ ಕ್ಯಾನ್ಸರ್ ಕಾರಕ ಅಂಶ ಪತ್ತೆ?: ಭಾರಿ ಚರ್ಚೆ
‘ಮಾರ್ಕ್’ ಸಿನಿಮಾದಲ್ಲಿ ಹೀರೋಯಿನ್ ಇಲ್ಲ ಯಾಕೆ? ಉತ್ತರಿಸಿದ ಕಿಚ್ಚ ಸುದೀಪ್
‘ಮಾರ್ಕ್’ ಸಿನಿಮಾದಲ್ಲಿ ಹೀರೋಯಿನ್ ಇಲ್ಲ ಯಾಕೆ? ಉತ್ತರಿಸಿದ ಕಿಚ್ಚ ಸುದೀಪ್
ಚುನಾವಣೆಯಲ್ಲಿ ಸೋತಿದ್ದಕ್ಕೆ ಮೀಸೆ ಬೋಳಿಸಿಕೊಂಡ ಎಲ್‌ಡಿಎಫ್ ಕಾರ್ಯಕರ್ತ
ಚುನಾವಣೆಯಲ್ಲಿ ಸೋತಿದ್ದಕ್ಕೆ ಮೀಸೆ ಬೋಳಿಸಿಕೊಂಡ ಎಲ್‌ಡಿಎಫ್ ಕಾರ್ಯಕರ್ತ
ಪಾಕ್ ವಿರುದ್ಧ ಫ್ಲಾಪ್: ಸುಲಭವಾಗಿ ಔಟಾದ ವೈಭವ್ ಸೂರ್ಯವಂಶಿ
ಪಾಕ್ ವಿರುದ್ಧ ಫ್ಲಾಪ್: ಸುಲಭವಾಗಿ ಔಟಾದ ವೈಭವ್ ಸೂರ್ಯವಂಶಿ
ಶಾಲೆಯ ಬಳಿ ಸೆಕ್ಯುರಿಟಿಯ ಭುಜಕ್ಕೆ ಕಚ್ಚಿದ ಬೀದಿ ನಾಯಿ
ಶಾಲೆಯ ಬಳಿ ಸೆಕ್ಯುರಿಟಿಯ ಭುಜಕ್ಕೆ ಕಚ್ಚಿದ ಬೀದಿ ನಾಯಿ
ರೈಲಿನಲ್ಲಿ ಟಾಯ್ಲೆಟ್​ನಿಂದ ಹೊರಬರಲಾರದೆ ಪೊಲೀಸರಿಗೆ ಕರೆ ಮಾಡಿದ ಮಹಿಳೆ
ರೈಲಿನಲ್ಲಿ ಟಾಯ್ಲೆಟ್​ನಿಂದ ಹೊರಬರಲಾರದೆ ಪೊಲೀಸರಿಗೆ ಕರೆ ಮಾಡಿದ ಮಹಿಳೆ