AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬೆಂಗಳೂರಿನಲ್ಲಿ ಮಳೆ ಹಿನ್ನೆಲೆ ಫುಲ್ ಸೈಲೆಂಟ್ ಆದ ರಾಬರ್ಸ್ ಗ್ಯಾಂಗ್​! ಒಂದು ವಾರದಿಂದ ನೋ ಕೇಸ್​

ನಗರದ ವಿಭಾಗದಲ್ಲಿ ಪ್ರತಿನಿತ್ಯ 15-20 ರಾಬರಿ ಕೇಸ್ ವರದಿ ಆಗ್ತಾ ಇತ್ತು. ರಾತ್ರಿ 10 ಬಳಿಕವೇ ಒಂಟಿಯಾಗಿ ಬರೋರನ್ನು ಟಾರ್ಗೆಟ್ ಮಾಡಿ ರಾಬರಿ ಮಾಡಲಾಗುತ್ತಿತ್ತು.

ಬೆಂಗಳೂರಿನಲ್ಲಿ ಮಳೆ ಹಿನ್ನೆಲೆ ಫುಲ್ ಸೈಲೆಂಟ್ ಆದ ರಾಬರ್ಸ್ ಗ್ಯಾಂಗ್​! ಒಂದು ವಾರದಿಂದ ನೋ ಕೇಸ್​
ಪ್ರಾತಿನಿಧಿಕ ಚಿತ್ರ
TV9 Web
| Edited By: |

Updated on:Sep 11, 2022 | 11:43 AM

Share

ಬೆಂಗಳೂರು: ನಗರದಲ್ಲಿ ಮಳೆ ಹಿನ್ನೆಲೆ ರಾಬರ್ಸ್ ಕೂಡ ಫುಲ್ ಸೈಲೆಂಟ್​ ಆಗಿರುವಂತ್ತೆ ಕಾಣುತ್ತಿದೆ. ಕಳೆದ ಒಂದು ವಾರದಲ್ಲಿ ನಗರದಲ್ಲಿ ಒಂದೂ ರಾಬರಿ ಕೇಸ್​ ರಿಪೋರ್ಟ್ ಆಗಿಲ್ಲ. ಪ್ರತಿನಿತ್ಯ ಡಿವಿಷನ್​ಗೆ ಎರಡು ಮೂರು ರಾಬರಿ ಕೇಸ್​ಗಳು ದಾಖಲಾಗುತ್ತಿತ್ತು. ಆದರೆ ವಾರದಿಂದ ಕಂಟ್ರೋಲ್ ರೂಂಗೆ ಒಂದೂ ರಾಬರಿ ಆಗಿರೋ ಮಾಹಿತಿ ಬಂದಿಲ್ಲ. ನಗರದ ವಿಭಾಗದಲ್ಲಿ ಪ್ರತಿನಿತ್ಯ 15-20 ರಾಬರಿ ಕೇಸ್ ವರದಿ ಆಗ್ತಾ ಇತ್ತು. ರಾತ್ರಿ 10 ಬಳಿಕವೇ ಒಂಟಿಯಾಗಿ ಬರೋರನ್ನು ಟಾರ್ಗೆಟ್ ಮಾಡಿ ರಾಬರಿ ಮಾಡಲಾಗುತ್ತಿತ್ತು. ಅದ್ರಲ್ಲೂ ಪ್ರಮುಖವಾಗಿ ಐಟಿ ಬಿಟಿ ಕಂಪನಿ ಹೆಚ್ಚಾಗಿರೋ ಏರಿಯಾಗಳಲ್ಲೇ ರಾಬರಿ ನಡೆಯುತ್ತಿತ್ತು. ಮಹದೇವಪುರ, ವೈಟ್ ಫೀಲ್ಡ್, ಮಾರತ್ ಹಳ್ಳಿ, ಬೆಳ್ಳಂದೂರು ಸೇರಿದಂತೆ ಹಲವು ಕಡೆಗಳಲ್ಲಿ ರಾಬರಿ ನಡೆಯುತ್ತಿತ್ತು. ಇತ್ತೀಚೆಗೆ ಈ ಬಗ್ಗೆ ಪೊಲೀಸರಿಗೆ ಸಾಕಷ್ಟು ದೂರುಗಳು ಬರ್ತಾ ಇತ್ತು. ಅದ್ರಲ್ಲೂ ಮಾಸ್ಟರ್ ಕಂಟ್ರೋಲ್​ಗೆ ಪ್ರತಿನಿತ್ಯ ದೂರುಗಳು ಬರ್ತಾ ಇತ್ತು. ಇದ್ರಿಂದ ರಾತ್ರಿ ವೇಳೆ ಪೊಲೀಸ್ ಹೊಯ್ಸಳ ಗಸ್ತನ್ನು ಹೆಚ್ಚಳ ಮಾಡಲಾಗಿತ್ತು.

ಆದರೆ ಕಳೆದ ಒಂದು ವಾರದಿಂದ ಮಳೆ ಬರುತ್ತಿದ್ದು, ಮಳೆಯಿಂದ ರಾಬರ್ಸ್ ಕೂಡ ಸೈಲೆಂಟ್ ಆಗಿದ್ದಾರೆ. ಮಳೆ ಹಿನ್ನಲೆ ಬಹುತೇಕ ಪ್ರದೇಶಗಳಲ್ಲಿ ರಾತ್ರಿವೇಳೆಯೂ  ಪೊಲೀಸರು ಬೀಡು ಬಿಟ್ಟಿದ್ದಾರೆ. ಪೊಲೀಸರ ಜೊತೆಗೆ ಸಿವಿಲ್ ಡಿಫೆನ್ಸ್, ಅಗ್ನಿಶಾಮಕ ಸಿಬ್ಬಂದಿ ಹಾಗೂ ಬಿಬಿಎಂಪಿ ಸಿಬ್ಬಂದಿ ಸಹ ರಸ್ತೆಯಲ್ಲಿ ಬೀಡು ಬಿಟ್ಟಿದ್ದಾರೆ. ಮಳೆ ಹಿನ್ನಲೆ ಜನರು ಸಹ ಯಾರೂ ಹೊರಗಡೆ ಓಡಾಟ‌ ಮಾಡ್ತಾನೂ‌ ಇರಲಿಲ್ಲ. ಇದರಿಂದ ಬೆಂಗಳೂರಲ್ಲಿ ರಾಬರಿ ಗ್ಯಾಂಗ್​ಗಳು ಫುಲ್ ಸೈಲೆಂಟ್ ಆಗಿವೆ.

ಮಲಪ್ರಭಾ ನದಿಗೆ ಹಾರಿ ವ್ಯಕ್ತಿಯೋರ್ವ ಆತ್ಮಹತ್ಯೆ

ಬಾಗಲಕೋಟೆ: ಮಲಪ್ರಭಾ ನದಿಗೆ ಹಾರಿ ವ್ಯಕ್ತಿಯೋರ್ವ ಆತ್ಮಹತ್ಯೆ ಮಾಡಿಕೊಂಡಿರುವಂತಹ ಘಟನೆ ಜಿಲ್ಲೆ ಬಾದಾಮಿ ತಾಲ್ಲೂಕಿನ ಪಟ್ಟದಕಲ್ಲು ಗ್ರಾಮದ ಬಳಿ ಮಲಪ್ರಭಾ ನದಿಯಲ್ಲಿ ನಡೆದಿದೆ. ನದಿಯಲ್ಲಿ ಮುಳುಗುತ್ತಿರುವ ವಿಡಿಯೋ ಸೆರೆ ಹಿಡಿಯಲಾಗಿದೆ. ಮುಳುಗುವ ವೇಳೆ ಈಜಾಡಿ ಮೇಲೇಳಲು ಯತ್ನಿಸಿದ್ದು, ಕೊನೆಗೆ ಮೇಲೆ ಬರಲು ಆಗದೇ ವ್ಯಕ್ತಿ ಮುಳುಗಿದ್ದಾನೆ. ಕೈ ಬಡಿಯುತ್ತಾ ನೀರಲ್ಲಿ ಈಜೋಕೆ ಯತ್ನ ವಿಫಲ. ಸೇತುವೆ ಮೇಲೆ ನಿಂತು ಜನರು ವಿಡಿಯೋ ಮಾಡಿದ್ದಾರೆ. ವ್ಯಕ್ತಿ ಯಾರೆಂದು ಇನ್ನೂ ತಿಳಿದು ಬಂದಿಲ್ಲ. ಈ ಬಗ್ಗೆ ಬಾದಾಮಿ ಠಾಣೆ ಪೊಲೀಸರು ಮಾಹಿತಿ ಕಲೆ ಹಾಕುತ್ತಿದ್ದಾರೆ.

ವಿದ್ಯುತ್​​ ಲೈನ್​​ ಸರಿಪಡಿಸಲು ಹೋಗಿ ಲೈನ್​​ಮ್ಯಾನ್​ ಸಾವು

ತುಮಕೂರು: ವಿದ್ಯುತ್ ವೈರ್ ಸರಿಪಡಿಸಲು ಹೋಗಿ ಲೈನ್ ಮ್ಯಾನ್ ಸಾವನ್ನಪ್ಪಿರುವಂತಹ ಘಟನೆ ಜಿಲ್ಲೆಯ ಗುಬ್ಬಿ ತಾಲ್ಲೂಕಿನ ತಿಪ್ಪೂರಿನಲ್ಲಿ ಅವಘಡ ಸಂಭವಿಸಿದೆ. ಮಹೇಶ್‌ಗೌಡ (40) ಮೃತಪಟ್ಟ ಲೈನ್ ಮ್ಯಾನ್. ಕೆರೆ ಮಧ್ಯೆ ನೀರಿನಲ್ಲಿ ಕಡಿದು ಬಿದ್ದಿದ್ದ ವಿದ್ಯುತ್ ತಂತಿ ಸರಿಪಡಿಸಲು ಹೋದಾಗ ಘಟನೆ ನಡೆದಿದೆ. ನೀರಿನಲ್ಲಿ ಈಜುತ್ತಾ ಸುಸ್ತಾಗಿ ಮುಳುಗಿ ಸಾವನ್ನಪ್ಪಿರೋ ಶಂಕೆ ವ್ಯಕ್ತವಾಗಿದೆ. ಗುಬ್ಬಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

ಮತ್ತಷ್ಟು ಕ್ರೈಂ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Published On - 11:34 am, Sun, 11 September 22

Follow Us
SSLC Results 2026: ಹಿಂದಿ ವಿಷಯಕ್ಕೆ ಗ್ರೇಡೋ, ಅಂಕನೋ? ಗೊಂದಲಗಳಿಗೆ ತೆರೆ
SSLC Results 2026: ಹಿಂದಿ ವಿಷಯಕ್ಕೆ ಗ್ರೇಡೋ, ಅಂಕನೋ? ಗೊಂದಲಗಳಿಗೆ ತೆರೆ
ಅದ್ಭುತ... ಅತ್ಯದ್ಭುತ: ರಿಷಭ್​ ಸ್ಪೈಡಿ ಕ್ಯಾಚ್​ಗೆ ದಂಗಾದ ಪ್ರೇಕ್ಷಕರು
ಅದ್ಭುತ... ಅತ್ಯದ್ಭುತ: ರಿಷಭ್​ ಸ್ಪೈಡಿ ಕ್ಯಾಚ್​ಗೆ ದಂಗಾದ ಪ್ರೇಕ್ಷಕರು
ಮದುವೆ ಸಂಭ್ರಮದಲ್ಲಿ ಕಾರು ಡಿಕ್ಕಿಯಾಗಿ 25 ಅಡಿ ಮೇಲೆ ಹಾರಿದ ಕ್ಯಾಮೆರಾಮನ್
ಮದುವೆ ಸಂಭ್ರಮದಲ್ಲಿ ಕಾರು ಡಿಕ್ಕಿಯಾಗಿ 25 ಅಡಿ ಮೇಲೆ ಹಾರಿದ ಕ್ಯಾಮೆರಾಮನ್
ಅಮರಾವತಿ ಲೈಂಗಿಕ ಹಗರಣದ ಆರೋಪಿಗೆ ನಗರದ ರಸ್ತೆಗಳಲ್ಲಿ ಮೆರವಣಿಗೆ
ಅಮರಾವತಿ ಲೈಂಗಿಕ ಹಗರಣದ ಆರೋಪಿಗೆ ನಗರದ ರಸ್ತೆಗಳಲ್ಲಿ ಮೆರವಣಿಗೆ
ಖಾಲಿ ಕೊಡ ಹಿಡಿದು ಸಚಿವ ತಂಗಡಗಿ ಕಾರಿಗೆ ಮುತ್ತಿಗೆ ಹಾಕಿದ ಮಹಿಳೆಯರು
ಖಾಲಿ ಕೊಡ ಹಿಡಿದು ಸಚಿವ ತಂಗಡಗಿ ಕಾರಿಗೆ ಮುತ್ತಿಗೆ ಹಾಕಿದ ಮಹಿಳೆಯರು
ಬಿಸಿಲಿಗೆ ತತ್ತರ: ಹೆಲ್ಮೆಟ್ ಬದಲು ಸೊಪ್ಪು ಕಟ್ಟಿಕೊಂಡು ಬೈಕ್ ಚಾಲನೆ
ಬಿಸಿಲಿಗೆ ತತ್ತರ: ಹೆಲ್ಮೆಟ್ ಬದಲು ಸೊಪ್ಪು ಕಟ್ಟಿಕೊಂಡು ಬೈಕ್ ಚಾಲನೆ
ವಾರದಲ್ಲಿ ಎರಡನೇ ಭಾರಿ ದರ್ಶನ್ ಭೇಟಿಗೆ ಜೈಲಿಗೆ ಬಂದ ವಿಜಯಲಕ್ಷ್ಮಿ
ವಾರದಲ್ಲಿ ಎರಡನೇ ಭಾರಿ ದರ್ಶನ್ ಭೇಟಿಗೆ ಜೈಲಿಗೆ ಬಂದ ವಿಜಯಲಕ್ಷ್ಮಿ
ಹುಬ್ಬಳ್ಳಿ ಭೀಕರ ಅಪಘಾತ: ಕಾರಿನ ಇಂಜಿನ್ ಒಳಗೆ ಸಿಲುಕಿದ ವ್ಯಕ್ತಿಯ ರುಂಡ
ಹುಬ್ಬಳ್ಳಿ ಭೀಕರ ಅಪಘಾತ: ಕಾರಿನ ಇಂಜಿನ್ ಒಳಗೆ ಸಿಲುಕಿದ ವ್ಯಕ್ತಿಯ ರುಂಡ
ಪ್ರಿಯಕರನನ್ನೇ ಕೊಂದ ಪ್ರಿಯತಮೆ : ಕೊಲೆಯಾದ ಕಿರಣ್ ತಂದೆಯ ಕಣ್ಣೀರ ಮಾತು
ಪ್ರಿಯಕರನನ್ನೇ ಕೊಂದ ಪ್ರಿಯತಮೆ : ಕೊಲೆಯಾದ ಕಿರಣ್ ತಂದೆಯ ಕಣ್ಣೀರ ಮಾತು
ಕುಟುಂಬದ ಆರೋಪಕ್ಕೆ ವೈದ್ಯಕೀಯ ಅಧೀಕ್ಷರು ಹೇಳಿದ್ದೇನು?
ಕುಟುಂಬದ ಆರೋಪಕ್ಕೆ ವೈದ್ಯಕೀಯ ಅಧೀಕ್ಷರು ಹೇಳಿದ್ದೇನು?