AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬ್ಯಾಡರಹಳ್ಳಿ ವ್ಯಾಪ್ತಿಯಲ್ಲಿ ಸಾಲು ಸಾಲು ದರೋಡೆ, ವಂಚನೆಗಳು; ಜನರಲ್ಲಿ ಆತಂಕ

ನಾಗರಹೊಳೆ ನಗರ ಬಡಾವಣೆಯಲ್ಲಿ ವ್ಯಾಪಾರಿಗೆ ಮೊಬೈಲ್‌ಯಲ್ಲಿ ಪೇಟಿಎಂ ಹಾಕಿಕೊಡುವುದಾಗಿ ಆರೋಪಿಗಳು ಹೇಳಿದ್ದು ಮೊಬೈಲ್ ಪಡೆದು ತಮ್ಮ ಖಾತೆಗೆ ಹಣ ವರ್ಗಾವಣೆ ಮಾಡಿಕೊಂಡಿದ್ದಾರೆ.

ಬ್ಯಾಡರಹಳ್ಳಿ ವ್ಯಾಪ್ತಿಯಲ್ಲಿ ಸಾಲು ಸಾಲು ದರೋಡೆ, ವಂಚನೆಗಳು; ಜನರಲ್ಲಿ ಆತಂಕ
ಬ್ಯಾಡರಹಳ್ಳಿ ಪೊಲೀಸ್ ಠಾಣೆ
ಬಿ ಮೂರ್ತಿ, ನೆಲಮಂಗಲ
| Edited By: |

Updated on: Jul 08, 2023 | 10:31 AM

Share

ನೆಲಮಂಗಲ: ಬ್ಯಾಡರಹಳ್ಳಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ದರೋಡೆ, ಆನ್‌ಲೈನ್ ವಂಚನೆಯಂತಹ ಸಾಲು ಸಾಲು ಪ್ರಕರಣಗಳು ವರದಿಯಾಗಿದ್ದು ಸಾರ್ವಜನಿಕ ವಲಯದಲ್ಲಿ ಸಾಕಷ್ಟು ಆತಂಕಕ್ಕೆ ಕಾರಣವಾಗಿದೆ. ಪೇ‌ ಟಿಎಂ ಇಸ್ಟಾಲ್ ಮಾಡೋದಾಗಿ ಬೀದಿ ಬದಿ ವ್ಯಾಪಾರಿಗೆ ಮೋಸ ಮಾಡಿರುವ ಪ್ರಕರಣ ಬೆಳಕಿಗೆ ಬಂದಿದೆ. ಬೀದಿ ಬದಿ ವ್ಯಾಪಾರಿ ಧನಲಕ್ಷ್ಮಮ್ಮ ಎನ್ನುವವರ ಬ್ಯಾಂಕ್ ಖಾತೆಯಲ್ಲಿದ್ದ 22 ಸಾವಿರ ನಗದನ್ನು ದೋಚಿದ್ದಾರೆ.

ನಾಗರಹೊಳೆ ನಗರ ಬಡಾವಣೆಯಲ್ಲಿ ವ್ಯಾಪಾರಿಗೆ ಮೊಬೈಲ್‌ಯಲ್ಲಿ ಪೇಟಿಎಂ ಹಾಕಿಕೊಡುವುದಾಗಿ ಆರೋಪಿಗಳು ಹೇಳಿದ್ದು ಮೊಬೈಲ್ ಪಡೆದು ತಮ್ಮ ಖಾತೆಗೆ ಹಣ ವರ್ಗಾವಣೆ ಮಾಡಿಕೊಂಡಿದ್ದಾರೆ. ಈ ಸಂಬಂಧ ಬ್ಯಾಡರಹಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಶಿರಡಿಯಲ್ಲಿ ದರೋಡೆ ಆಗಿದೆ, ಸಹಾಯ ಮಾಡಿ ಎಂದು ವಂಚನೆ ಮಾಡಿರುವ ಮತ್ತೊಂದು ಪ್ರಕರಣ ದಾಖಲಾಗಿದೆ. ವಿದ್ಯಮಾನನಗರದ ಉದ್ಯಮಿ ಶ್ರೀನಿವಾಸ್‌ಗೆ ಕರೆ ಮಾಡಿರುವ ಆರೋಪಿಗಳು ಉದ್ಯಮಿಯ ಉದ್ಯಮಕ್ಕೆ ಪೂರೈಕದಾರ ಎಂದು ಪರಿಚಯ ಮಾಡಿಕೊಂಡಿದ್ದಾರೆ. ಬಳಿಕ ನಾವು ಶಿರಡಿಯಲ್ಲಿ ಇದ್ದೇವೆ, ಇಲ್ಲಿ ನಮ್ಮ ಕ್ಯಾಬ್ ಚಾಲಕನಿಂದ ದರೋಡೆ ಆಗಿದೆ ಇಲ್ಲಿಂದ ವಾಪಸ್ ಬರಲು 70 ಸಾವಿರ ಸಹಾಯ ಮಾಡಿ ಎಂದು ನಂಬಿಸಿದ್ದಾರೆ. ಹೀಗಾಗಿ ವಿವಿಧ ಖಾತೆಗಳಿಂದ ಹಣ ವರ್ಗಾವಣೆ ಮಾಡಿದ ಬಳಿಕ ಇದು ವಂಚನೆ ಎಂದು ಬೆಳಕಿಗೆ ಬಂದಿದ್ದು ಬ್ಯಾಡರಹಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಇದನ್ನೂ ಓದಿ: ದಿನ ಬೆಳಗಾದ್ರೆ ಸಾಕು ಪ್ರೌಢಶಾಲೆಯಲ್ಲಿ ಅಶ್ಲೀಲ ಗೋಡೆ ಬರಹ ನೋಡಿ ವಿದ್ಯಾರ್ಥಿನಿಯರು ಕಣ್ಣೀರುಡುತ್ತಿದ್ದಾರೆ, ಇದಕ್ಕೆಲ್ಲ ಕೊನೆ ಯಾವಾಗ?

ಕಾರು ಅಡ್ಡಗಟ್ಟಿ ಉದ್ಯಮಿಯ ಮೊಬೈಲ್ ದರೋಡೆ ಮಾಡಿದ್ದಾರೆ, ಬ್ಯಾಡರಹಳ್ಳಿ ಪೊಲೀಸ್ ಠಾಣಾ ವ್ಯಾಪ್ತಿಯ ನೈಸ್ ಜಂಕ್ಷನ್‌ನಲ್ಲಿ ಘಟನೆ ನಡೆದಿದ್ದು ಮೌಸೀನ್ ಅನೀಫ್ ಎಂಬುವರ ಐಫೋನ್ ದರೋಡೆ ಮಾಡಿದ್ದಾರೆ. ಸ್ನೇಹಿತನಂತೆ ಕರೆ ಮಾಡಿ ಕಾರು ನಿಲ್ಲಿಸಲು ಹೇಳಿದ ಆರೋಪಿಗಳು ಕಾರು ನಿಲ್ಲಿಸಿದ ಬಳಿಕ ಅಡ್ಡಗಟ್ಟಲು ಪ್ರಯತ್ನಿಸಿದ್ದಾರೆ, ವಿರೋಧ ವ್ಯಕ್ತಪಡಿಸಿ ಮುಂದೆ ಹೋಗುತ್ತಿದ್ದಂತೆ ಗಾಜು ಹೊಡೆದು ಮೊಬೈಲ್ ಕಸಿದು ಪರಾರಿಯಾಗಿದ್ದಾರೆ ಎಂದು ಬ್ಯಾಡರಹಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ರಾಜ್ಯದ ಪ್ರಮುಖ ಸುದ್ದಿಗಳನ್ನು ಓದಲು ಇದರ ಮೇಲೆ ಕ್ಲಿಕ್ ಮಾಡಿ

Follow Us
ಹೋದ ಜೀವ ವಾಪಸ್‌ ಕೊಡ್ತೀರಾ? ಸಿದ್ದರಾಮಯ್ಯ ವಿರುದ್ಧ ಗುಡುಗಿದ ಈಶ್ವರಪ್ಪ
ಹೋದ ಜೀವ ವಾಪಸ್‌ ಕೊಡ್ತೀರಾ? ಸಿದ್ದರಾಮಯ್ಯ ವಿರುದ್ಧ ಗುಡುಗಿದ ಈಶ್ವರಪ್ಪ
ಈ ಯುದ್ಧ ಅಗತ್ಯ ಇರಲಿಲ್ಲ: ಇರಾನ್ ನಾಯಕ ಖಮೇನಿ ಹತ್ಯೆ ಖಂಡಿಸಿದ ಸಿಎಂ
ಈ ಯುದ್ಧ ಅಗತ್ಯ ಇರಲಿಲ್ಲ: ಇರಾನ್ ನಾಯಕ ಖಮೇನಿ ಹತ್ಯೆ ಖಂಡಿಸಿದ ಸಿಎಂ
ಇರಾನ್ ಸಹಾಯದಿಂದ ಅಲಿಪುರದಲ್ಲಿ ನಿರ್ಮಿಸಿದ್ದ IK ಆಸ್ಪತ್ರೆ ಇದೆ ನೋಡಿ
ಇರಾನ್ ಸಹಾಯದಿಂದ ಅಲಿಪುರದಲ್ಲಿ ನಿರ್ಮಿಸಿದ್ದ IK ಆಸ್ಪತ್ರೆ ಇದೆ ನೋಡಿ
ಇರಾನ್ ಅಧಿಪತಿ ಖಮನೈಗೂ ಚಿಕ್ಕಬಳ್ಳಾಪುರದ ಅಲೀಪುರ ಮುಸ್ಲಿಮರಿಗೂ ನಂಟು ಏನು?
ಇರಾನ್ ಅಧಿಪತಿ ಖಮನೈಗೂ ಚಿಕ್ಕಬಳ್ಳಾಪುರದ ಅಲೀಪುರ ಮುಸ್ಲಿಮರಿಗೂ ನಂಟು ಏನು?
ಮೈಸೂರಿನಲ್ಲಿ ಡ್ರಗ್ಸ್ ಜಾಲದ ಬಗ್ಗೆ ಮಾತನಾಡಿದ ನಟ ವಿನಯ್ ರಾಜ್​ಕುಮಾರ್
ಮೈಸೂರಿನಲ್ಲಿ ಡ್ರಗ್ಸ್ ಜಾಲದ ಬಗ್ಗೆ ಮಾತನಾಡಿದ ನಟ ವಿನಯ್ ರಾಜ್​ಕುಮಾರ್
ಖಮೇನಿ ಭಾವಚಿತ್ರಕ್ಕೆ ಬೆಂಕಿ ಹಚ್ಚಿ ಅದರಲ್ಲೇ ಸಿಗರೇಟ್ ಹೊತ್ತಿಸಿಕೊಂಡ ಯುವತಿ
ಖಮೇನಿ ಭಾವಚಿತ್ರಕ್ಕೆ ಬೆಂಕಿ ಹಚ್ಚಿ ಅದರಲ್ಲೇ ಸಿಗರೇಟ್ ಹೊತ್ತಿಸಿಕೊಂಡ ಯುವತಿ
ಚಂದ್ರ ಗ್ರಹಣದಂದು ಮಂತ್ರಾಲಯ ರಾಯರ ಮಠದಲ್ಲಿಲ್ಲ ಯಾವುದೇ ನಿರ್ಬಂಧ!
ಚಂದ್ರ ಗ್ರಹಣದಂದು ಮಂತ್ರಾಲಯ ರಾಯರ ಮಠದಲ್ಲಿಲ್ಲ ಯಾವುದೇ ನಿರ್ಬಂಧ!
ವಿದಾಯ ಪಂದ್ಯದಲ್ಲಿ ಹೊಸ ಇತಿಹಾಸ ನಿರ್ಮಿಸಿದ ಅಲಿಸಾ ಹೀಲಿ
ವಿದಾಯ ಪಂದ್ಯದಲ್ಲಿ ಹೊಸ ಇತಿಹಾಸ ನಿರ್ಮಿಸಿದ ಅಲಿಸಾ ಹೀಲಿ
‘ಹಯಗ್ರೀವ’ ಬಿಡುಗಡೆಗೆ ತೊಂದರೆ ಮಾಡಿದವರಿಗೆ ಧನ್ವೀರ್ ಗೌಡ ಖಡಕ್ ತಿರುಗೇಟು
‘ಹಯಗ್ರೀವ’ ಬಿಡುಗಡೆಗೆ ತೊಂದರೆ ಮಾಡಿದವರಿಗೆ ಧನ್ವೀರ್ ಗೌಡ ಖಡಕ್ ತಿರುಗೇಟು
ಮಾ.03 ಚಂದ್ರಗ್ರಹಣ; 15ನಿಮಿಷಗಳ ಕಾಲ ಗೋಚರಿಸುವ ಗ್ರಹಣದ ಪ್ರಭಾವ ಹೇಗಿರಲಿದೆ?
ಮಾ.03 ಚಂದ್ರಗ್ರಹಣ; 15ನಿಮಿಷಗಳ ಕಾಲ ಗೋಚರಿಸುವ ಗ್ರಹಣದ ಪ್ರಭಾವ ಹೇಗಿರಲಿದೆ?