AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಹಾಡಹಗಲೇ ಚಾಕು ತೋರಿಸಿ ದರೋಡೆ; ಖದೀಮರ ಕೈಚಳಕ ಸಿಸಿಟಿವಿ ಕ್ಯಾಮಾರಾದಲ್ಲಿ ಸೆರೆ

ಅವರು ಅಂತಿಂಥಾ ಖದೀಮರಲ್ಲ, ಡೈಲಿ ಫೈನಾನ್ಸ್ ಹಣ ಕಲೆಕ್ಷನ್ ಮಾಡೋ ಯುವಕರನ್ನೇ ಟಾರ್ಗೆಟ್ ಮಾಡೋ ನಟೋರಿಯಸ್​ಗಳು. ಹಾಡಹಗಲೇ ಚಾಕು ತೋರಿಸಿ ಖತರ್ನಾಕ್ ದರೋಡೆಕೋರರು ಹಣ ದೋಚಿ ಎಸ್ಕೇಪ್ ಆಗಿದ್ದಾರೆ. ಮಟಮಟ ಮಧ್ಯಾಹ್ನ ನಡೆದ ರಾಬರಿ ದೃಶ್ಯ ಕಂಡು ಜನರು ಬೆಚ್ಚಿ ಬಿದ್ದಿದ್ದಾರೆ. 

ಹಾಡಹಗಲೇ ಚಾಕು ತೋರಿಸಿ ದರೋಡೆ; ಖದೀಮರ ಕೈಚಳಕ ಸಿಸಿಟಿವಿ ಕ್ಯಾಮಾರಾದಲ್ಲಿ ಸೆರೆ
ಆನೇಕಲ್​ನಲ್ಲಿ ದರೋಡೆ
ರಾಮು, ಆನೇಕಲ್​
| Updated By: ಕಿರಣ್ ಹನುಮಂತ್​ ಮಾದಾರ್|

Updated on:Oct 01, 2023 | 7:55 PM

Share

ಬೆಂಗಳೂರು ನಗರ, ಅ.01: ಜಿಲ್ಲೆಯ ಆನೇಕಲ್(Anekal) ತಾಲ್ಲೂಕಿನ ಮರಸೂರಿನಲ್ಲಿ ಡೈಲಿ ಫೈನಾನ್ಸ್ ಕಲೆಕ್ಷನ್ ಮಾಡುವ ಯುವಕರನ್ನೇ ಟಾರ್ಗೆಟ್ ಮಾಡಿದ ಖದೀಮರು, ಚಾಕು ತೋರಿಸಿ ಹಣ ದೋಚಿ ಎಸ್ಕೇಪ್ ಆಗಿದ್ದಾರೆ. ಹೌದು, ಹೊಸೂರಿನ ಶ್ರೀರಾಮ್ ಫೈನಾನ್ಸ್​ನಲ್ಲಿ ಕೆಲಸ ಮಾಡುತ್ತಿದ್ದ ಶಿವಲಿಂಗ ಹಾಗೂ ಚರಣ್ ಅತ್ತಿಬೆಲೆ ಎಂಬುವವರು ಚಂದಾಪುರ ಮಾರ್ಗವಾಗಿ ಡೈಲಿ ಫೈನಾನ್ಸ್ ಕಲೆಕ್ಷನ್ ಮಾಡಿಕೊಂಡು ಮರಸೂರಿನ ಎಸ್.ಎಲ್‌.ಎನ್ ಮೆಡಿಕಲ್ ಶಾಪ್ ಬಳಿ ಬಂದಿದ್ದಾರೆ. ಮೆಡಿಕಲ್ ಶಾಪ್​ನವರ ಬಳಿ ಫೈನಾನ್ಸ್ ಕಲೆಕ್ಷನ್ ಮಾಡಿ ಹಣವನ್ನ ಜೇಬಿನಲ್ಲಿ ಇಟ್ಟುಕೊಳ್ಳುವಷ್ಟರಲ್ಲಿ ಬೈಕ್​ನಲ್ಲಿ ಬಂದ ಮೂವರು ಅಸಾಮಿಗಳು, ಚಾಕು ತೋರಿಸಿ ಅವರ ಬಳಿ ಇದ್ದ 50 ಸಾವಿರಕ್ಕೂ ಅಧಿಕ ಹಣವನ್ನು ಕಸಿದು ಸಿನಿಮೀಯ ರೀತಿಯಲ್ಲಿ ಬೈಕ್​ನಲ್ಲಿ ಎಸ್ಕೇಪ್ ಆಗಿದ್ದಾರೆ.

ಇನ್ನು ಡೈಲಿ ಅಂಗಡಿಗಳ ಬಳಿ ಫೈನಾನ್ಸ್ ಹಣವನ್ನು ಕಲೆಕ್ಷನ್ ಮಾಡುವವರ ಬಳಿ ಹೆಚ್ಚು ಹಣ ಇರುತ್ತದೆ  ಎಂದು ಪ್ಲ್ಯಾನ್ ಮಾಡಿದ್ದ ಅಸಾಮಿಗಳು, ಅವರನ್ನ ಹಿಂಬಾಲಿಸುತ್ತಿದ್ದರು. ಅದರಂತೆಯೇ ಶ್ರೀರಾಮ್ ಫೈನಾನ್ಸ್​ನ ಶಿವಲಿಂಗ ಹಾಗೂ ಚರಣ್ ಮೆಡಿಕಲ್ ಶಾಫ್​ ಬಳಿ ಫೈನಾನ್ಸ್ ಹಣವನ್ನ ಕಲೆಕ್ಷನ್ ಮಾಡಲು ಹೋದಾಗ ಖದೀಮರು ಚಾಕು ತೋರಿಸಿ ಯುವಕರ ಜೇಬಿಗೆ ಕೈಹಾಕಿ ಹಣವನ್ನ ರಾಬರಿ ಮಾಡಿದ್ದಾರೆ. ಅದರಲ್ಲೂ ಮಧ್ಯಾಹ್ನದ ವೇಳೆ ಜನವಸತಿ ಪ್ರದೇಶದಲ್ಲಿ, ಎಲ್ಲರೂ ಓಡಾಡುವ ಸಂಧರ್ಭದಲ್ಲಿಯೇ ದರೋಡೆಕೋರರು ಯಾವುದೇ ಭಯವಿಲ್ಲದೆ ಕೃತ್ಯ ಎಸಗಿದ್ದು, ಜನರನ್ನ ಬೆಚ್ಚಿ ಬೀಳಿಸಿದೆ.  ಇನ್ನು ದರೋಡೆಕೋರರ ಕೈಚಳಕದ ದೃಶ್ಯ ಮೆಡಿಕಲ್ ಶಾಫ್​ನ ಸಿಸಿಟಿವಿ ಕ್ಯಾಮಾರಾದಲ್ಲಿ ಸೆರೆಯಾಗಿದೆ.

ಇದನ್ನೂ ಓದಿ:ಬರಗಾಲದಲ್ಲೂ ಹನಿ ಹನಿ ನೀರು ಉಳಿಸಿ ದಾಳಿಂಬೆ ಬೆಳೆದಿದ್ದ ವಿಜಯಪುರ ರೈತ: ರಾತ್ರೋರಾತ್ರಿ ನಾಲ್ಕಾರು ಲಕ್ಷ ಮೌಲ್ಯದ ದಾಳಿಂಬೆ ಕದ್ದ ಖದೀಮರು!

ಈ ಘಟನೆ ಸಂಬಂಧ ಸ್ಥಳಕ್ಕೆ ಭೇಟಿ ನೀಡಿದ ಸೂರ್ಯನಗರ ಪೋಲೀಸರು, ಪರಿಶೀಲನೆ ನಡೆಸಿ ಪ್ರಕರಣ ದಾಖಲು ಮಾಡಿಕೊಂಡಿದ್ದು, ಆರೋಪಿಗಳ ಪತ್ತೆಗಾಗಿ ಬಲೆ ಬೀಸಿದ್ದಾರೆ. ಒಟ್ಟಿನಲ್ಲಿ ಹಾಡಹಗಲೇ ಈ ರೀತಿ ದರೋಡೆ ಪ್ರಕರಣಗಳು ನಡೆಯುತ್ತಿದ್ದು, ಸಾರ್ವಜನಿಕರಲ್ಲಿ ಆತಂಕದ ವಾತಾವರಣ ನಿರ್ಮಾಣವಾಗಿದೆ. ಅದಷ್ಟು ಬೇಗ ಪೋಲೀಸರು ಈ ಖತರ್ನಾಕ್ ಖದೀಮರನ್ನು ಹೆಡೆಮುರಿ ಕಟ್ಟುವ ಮೂಲಕ ಸಾರ್ವಜನಿಕರಲ್ಲಿರುವ ಆತಂಕವನ್ನ ದೂರಮಾಡಬೇಕಿದೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 7:54 pm, Sun, 1 October 23

ಎಲಿಮಿನೇಟ್ ಆಗದಿದ್ದರೂ ರಕ್ಷಿತಾ ಶೆಟ್ಟಿಗೆ ಶುರುವಾಯ್ತು ಹೊಸ ಚಿಂತೆ
ಎಲಿಮಿನೇಟ್ ಆಗದಿದ್ದರೂ ರಕ್ಷಿತಾ ಶೆಟ್ಟಿಗೆ ಶುರುವಾಯ್ತು ಹೊಸ ಚಿಂತೆ
Video: ಆರತಿ ಎತ್ತಿರೋ ಫುಟ್​ಪಾತ್​ ಮೇಲೆ ಗಾಡಿ ಓಡ್ಸವ್ರಿಗೆ
Video: ಆರತಿ ಎತ್ತಿರೋ ಫುಟ್​ಪಾತ್​ ಮೇಲೆ ಗಾಡಿ ಓಡ್ಸವ್ರಿಗೆ
ಸೈಕಲ್ ಸವಾರನಿಗೆ ಡಿಕ್ಕಿ ಹೊಡೆದು ತಿರುಗಿಯೂ ನೋಡದೆ ಹೋದ ಬೈಕ್ ಸವಾರ
ಸೈಕಲ್ ಸವಾರನಿಗೆ ಡಿಕ್ಕಿ ಹೊಡೆದು ತಿರುಗಿಯೂ ನೋಡದೆ ಹೋದ ಬೈಕ್ ಸವಾರ
Video: ಅಮ್ಮಾ ನನ್ನ ಮೈಬಣ್ಣ ಬೇರೆ ಮಾಡೋಕೆ ಆಗಲ್ವಾ, ಕಣ್ಣೀರಿಟ್ಟ ಬಾಲಕಿ
Video: ಅಮ್ಮಾ ನನ್ನ ಮೈಬಣ್ಣ ಬೇರೆ ಮಾಡೋಕೆ ಆಗಲ್ವಾ, ಕಣ್ಣೀರಿಟ್ಟ ಬಾಲಕಿ
ವಿಷ್ಣು ತುಳಿಸಿ, ಹಾಗೂ ಲಕ್ಷ್ಮೀ ತುಳಸಿ ಎರೆಡೂ ಮನೆಯಲ್ಲಿರಬೇಕು ಯಾಕೆ?
ವಿಷ್ಣು ತುಳಿಸಿ, ಹಾಗೂ ಲಕ್ಷ್ಮೀ ತುಳಸಿ ಎರೆಡೂ ಮನೆಯಲ್ಲಿರಬೇಕು ಯಾಕೆ?
ಇಂದು ಈ ರಾಶಿಯವರಿಗೆ ಐದು ಗ್ರಹಗಳ ಶುಭಫಲವಿರುತ್ತದೆ
ಇಂದು ಈ ರಾಶಿಯವರಿಗೆ ಐದು ಗ್ರಹಗಳ ಶುಭಫಲವಿರುತ್ತದೆ
ಮದ್ಯ ಕರ್ನಾಟದಲ್ಲಿ ಶಮನೂರು ಸಾಮ್ರಾಜ್ಯ: ಹೆಲಿಕಾಪ್ಟರ್, ಮಿನಿ ವಿಮಾನ ಒಡೆಯ
ಮದ್ಯ ಕರ್ನಾಟದಲ್ಲಿ ಶಮನೂರು ಸಾಮ್ರಾಜ್ಯ: ಹೆಲಿಕಾಪ್ಟರ್, ಮಿನಿ ವಿಮಾನ ಒಡೆಯ
ಟಿ20 ಕ್ರಿಕೆಟ್‌ನಲ್ಲಿ ವಿಕೆಟ್​ಗಳ ಶತಕ ಪೂರೈಸಿದ ಹಾರ್ದಿಕ್ ಪಾಂಡ್ಯ
ಟಿ20 ಕ್ರಿಕೆಟ್‌ನಲ್ಲಿ ವಿಕೆಟ್​ಗಳ ಶತಕ ಪೂರೈಸಿದ ಹಾರ್ದಿಕ್ ಪಾಂಡ್ಯ
ಶಾಮನೂರು ಶಿವಶಂಕರಪ್ಪನವರಿಗೆ ಏನಾಗಿತ್ತು?ಆಸ್ಪತ್ರೆ ಮುಖ್ಯಸ್ಥ ಹೇಳಿದ್ದಿಷ್ಟು
ಶಾಮನೂರು ಶಿವಶಂಕರಪ್ಪನವರಿಗೆ ಏನಾಗಿತ್ತು?ಆಸ್ಪತ್ರೆ ಮುಖ್ಯಸ್ಥ ಹೇಳಿದ್ದಿಷ್ಟು
‘ಮಾರ್ಕ್’-‘45’ ಒಂದೇ ದಿನ ಬಿಡುಗಡೆ: ಸುದೀಪ್ ಹೇಳಿದ್ದೇನು?
‘ಮಾರ್ಕ್’-‘45’ ಒಂದೇ ದಿನ ಬಿಡುಗಡೆ: ಸುದೀಪ್ ಹೇಳಿದ್ದೇನು?