AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕದ್ದ ಹಣದಲ್ಲೇ ಸ್ನೇಹಿತರಿಗೆ ಪಾರ್ಟಿ, ಬಡವರಿಗೆ ಸಹಾಯ! ಖತರ್ನಾಕ್ ಮನೆಗಳ್ಳ ಅರೆಸ್ಟ್

ಕದ್ದ ಹಣದಲ್ಲಿ ಬಡವರಿಗೆ ನೆರವಾಗಿ, ಸ್ನೇಹಿತರಿಗೆ ಪಾರ್ಟಿ ನೀಡುತ್ತಿದ್ದ ಖತರ್ನಾಕ್ ಮನೆಗಳ್ಳ ಶಿವರಸನ್‌ನನ್ನು ಬೇಗೂರು ಪೊಲೀಸರು ಬಂಧಿಸಿದ್ದಾರೆ. ವೈಟ್‌ಫೀಲ್ಡ್‌ನಲ್ಲಿ ನೆಲೆಸಿದ್ದ ಈತನಿಂದ 8 ಮನೆಗಳ್ಳತನ ಪ್ರಕರಣ ಭೇದಿಸಲಾಗಿದ್ದು, 196 ಗ್ರಾಂ ಚಿನ್ನ ಹಾಗೂ 4 ಕೆಜಿ ಬೆಳ್ಳಿ ಸೇರಿದಂತೆ ₹36 ಲಕ್ಷ ಮೌಲ್ಯದ ವಸ್ತುಗಳನ್ನು ವಶಪಡಿಸಿಕೊಳ್ಳಲಾಗಿದೆ.

ಕದ್ದ ಹಣದಲ್ಲೇ ಸ್ನೇಹಿತರಿಗೆ ಪಾರ್ಟಿ, ಬಡವರಿಗೆ ಸಹಾಯ! ಖತರ್ನಾಕ್ ಮನೆಗಳ್ಳ ಅರೆಸ್ಟ್
ಮನೆಗಳ್ಳ ಶಿವರಸನ್ (34)
ವಿಕಾಸ್​ ಬಿಎಂ
| Edited By: |

Updated on: Aug 25, 2026 | 12:21 PM

Share

ಮುಖ್ಯಾಂಶಗಳು

  • ಕದ್ದ ಹಣದಲ್ಲಿ ಬಡವರಿಗೆ ಸಹಾಯ ಮಾಡುತ್ತಿದ್ದ ಕಳ್ಳ ಬಂಧನ.
  • ತಮಿಳುನಾಡು ಮೂಲದ ಶಿವರಸನ್‌ನನ್ನು ಬಂಧಿಸಿದ ಬೇಗೂರು ಪೊಲೀಸರು.
  • ಬಂಧಿತನಿಂದ 36 ಲಕ್ಷ ಮೌಲ್ಯದ ಚಿನ್ನ-ಬೆಳ್ಳಿ ವಶಕ್ಕೆ ಪಡೆಯಲಾಗಿದೆ.

ಬೆಂಗಳೂರು, ಆಗಸ್ಟ್ 25: ಕದ್ದ ಹಣದಲ್ಲೇ ಬಡವರಿಗೆ ನೆರವಾಗಿ, ಸ್ನೇಹಿತರಿಗೆ ಗ್ರಾಂಡ್ ಪಾರ್ಟಿ ನೀಡುತ್ತಿದ್ದ ಖತರ್ನಾಕ್ ಮನೆಗಳ್ಳ ಶಿವರಸನ್ (34) ಎಂಬಾತನನ್ನು ನಗರದ (Bengaluru) ಬೇಗೂರು ಪೊಲೀಸರು ಬಂಧಿಸಿದ್ದಾರೆ. ವೈಟ್‌ಫೀಲ್ಡ್‌ನಲ್ಲಿ ವಾಸವಿದ್ದ ಈತ, ಬೆಳಗಿನ ಜಾವ ಬೀಗ ಹಾಕಿದ ಮನೆಗಳನ್ನೇ ಟಾರ್ಗೆಟ್ ಮಾಡಿ ಕಳ್ಳತನ ಮಾಡುತ್ತಿದ್ದ. ಬಂಧಿತನಿಂದ 8 ಮನೆಗಳ್ಳತನ ಪ್ರಕರಣ ಭೇದಿಸಲಾಗಿದ್ದು, ಚಿನ್ನ-ಬೆಳ್ಳಿ ಸೇರಿದಂತೆ 36 ಲಕ್ಷ ರೂ. ಮೌಲ್ಯದ ವಸ್ತುಗಳನ್ನು ವಶಪಡಿಸಿಕೊಳ್ಳಲಾಗಿದೆ.

ಶೋಕಿಗಾಗಿ ಕಳ್ಳತನ ಮಾಡ್ತಿದ್ದ ಕಲಾವಿದ!

ಮೂಲತಃ ಕಲಾವಿದ ಆಗಿ ಕೆಲಸ ಮಾಡುತ್ತಿದ್ದ ಶಿವರಸನ್, ಶೋಕಿ ಜೀವನಕ್ಕಾಗಿ ಕಳ್ಳತನದ ಹಾದಿ ಹಿಡಿದಿದ್ದ. ವೈಟ್‌ಫೀಲ್ಡ್‌ನಲ್ಲಿ ಬಾಡಿಗೆ ಮನೆ ಮಾಡಿಕೊಂಡು ವಾಸವಿದ್ದ ಈತ, ಬೆಳಗಿನ ಜಾವದಲ್ಲಿ ಬೈಕ್‌ನಲ್ಲಿ ಸುತ್ತಾಡಿ ಬೀಗ ಹಾಕಿದ್ದ ಮನೆಗಳನ್ನು ಟಾರ್ಗೆಟ್ ಮಾಡುತ್ತಿದ್ದ. ಆಟೋ ಚಾಲಕರು ಮತ್ತು ಬಡವರಿಗೆ ಕದ್ದ ಹಣದಿಂದ ಸ್ವಲ್ಪ ಧನಸಹಾಯ ಮಾಡಿ, ಅವರಿಂದಲೇ ಬೀಗ ಹಾಕಿದ ಮನೆಗಳ ಮಾಹಿತಿ ಸಂಗ್ರಹಿಸುತ್ತಿದ್ದ. ಈತನ ವಿರುದ್ಧ ಈಗಾಗಲೇ ಬೆಂಗಳೂರಿನ ವಿವಿಧ ಠಾಣೆಗಳಲ್ಲಿ 30ಕ್ಕೂ ಹೆಚ್ಚು ಪ್ರಕರಣಗಳು ದಾಖಲಾಗಿವೆ.

8 ಮನೆಗಳ್ಳತನ ಪ್ರಕರಣ

ಖಚಿತ ಮಾಹಿತಿ ಆಧರಿಸಿ ದಾಳಿ ನಡೆಸಿದ ಬೇಗೂರು ಪೊಲೀಸರು ಆರೋಪಿಯನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ. ಆರೋಪಿಯಿಂದ ಬೇಗೂರಿನ 3, ರಾಮಮೂರ್ತಿನಗರದ 2, ಆಲವಳ್ಳಿ, ಹೊಸಕೋಟೆ (ಹನಗೊಂಡನಹಳ್ಳಿ) ಹಾಗೂ ಕೆ.ಆರ್.ಪುರಂನ ತಲಾ 1 ಮನೆ ಸೇರಿದಂತೆ ಒಟ್ಟು 8 ಮನೆಗಳ್ಳತನ ಪ್ರಕರಣಗಳನ್ನು ಭೇದಿಸಲಾಗಿದೆ.

ಬಂಧಿತನಿಂದ 196 ಗ್ರಾಂ ಚಿನ್ನ ಹಾಗೂ 4 ಕೆಜಿ ಬೆಳ್ಳಿ ಸೇರಿದಂತೆ ಒಟ್ಟು 36 ಲಕ್ಷ ರೂ. ಮೌಲ್ಯದ ಚಿನ್ನಾಭರಣ ಹಾಗೂ ಬೆಳ್ಳಿ ವಸ್ತುಗಳನ್ನು ವಶಪಡಿಸಿಕೊಳ್ಳಲಾಗಿದೆ. ಬೇಗೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಹೆಚ್ಚಿನ ತನಿಖೆ ಮುಂದುವರಿದಿದೆ.

ಕರ್ನಾಟಕದ ಇನ್ನಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
'ಬಿಗ್ ಬಾಸ್ ಅಗ್ನಿ ಪರೀಕ್ಷೆ'ಯಲ್ಲಿ ಹೈ-ವೋಲ್ಟೇಜ್ ಕಾದಾಟ
'ಬಿಗ್ ಬಾಸ್ ಅಗ್ನಿ ಪರೀಕ್ಷೆ'ಯಲ್ಲಿ ಹೈ-ವೋಲ್ಟೇಜ್ ಕಾದಾಟ
ಕರಾವಳಿಯಲ್ಲಿ ಇಂದು ಈದ್ ಮಿಲಾದ್: ದ.ಕ, ಉಡುಪಿ ಜಿಲ್ಲೆಗೆ ಸಾರ್ವತ್ರಿಕ ರಜೆ
ಕರಾವಳಿಯಲ್ಲಿ ಇಂದು ಈದ್ ಮಿಲಾದ್: ದ.ಕ, ಉಡುಪಿ ಜಿಲ್ಲೆಗೆ ಸಾರ್ವತ್ರಿಕ ರಜೆ
ಮಂಗಳ ಗೌರಿ ವ್ರತ, ಪ್ರದೋಷ ದಿನ: 12 ರಾಶಿಗಳ ದಿನ ಭವಿಷ್ಯ ಇಲ್ಲಿದೆ
ಮಂಗಳ ಗೌರಿ ವ್ರತ, ಪ್ರದೋಷ ದಿನ: 12 ರಾಶಿಗಳ ದಿನ ಭವಿಷ್ಯ ಇಲ್ಲಿದೆ
ಆಯಿಲ್ ಟ್ಯಾಂಕರ್ ಪಲ್ಟಿ; ಎಣ್ಣೆ ಹಿಡಿಯಲು ಬಕೆಟ್ ಹಿಡಿದು ನುಗ್ಗಿದ ಜನ!
ಆಯಿಲ್ ಟ್ಯಾಂಕರ್ ಪಲ್ಟಿ; ಎಣ್ಣೆ ಹಿಡಿಯಲು ಬಕೆಟ್ ಹಿಡಿದು ನುಗ್ಗಿದ ಜನ!
'ರಾಮಾಯಣ' ಚಿತ್ರದ ಪೆನ್ಸಿಲ್ ಆರ್ಟ್
'ರಾಮಾಯಣ' ಚಿತ್ರದ ಪೆನ್ಸಿಲ್ ಆರ್ಟ್
ದೆಹಲಿಯಲ್ಲಿ ಧಾರಾಕಾರ ಮಳೆ; ಜಲಾವೃತಗೊಂಡ ರಸ್ತೆಗಳಲ್ಲಿ ಈಜಾಡಿದ ಮಕ್ಕಳು
ದೆಹಲಿಯಲ್ಲಿ ಧಾರಾಕಾರ ಮಳೆ; ಜಲಾವೃತಗೊಂಡ ರಸ್ತೆಗಳಲ್ಲಿ ಈಜಾಡಿದ ಮಕ್ಕಳು
ಕಾಶ್ಮೀರಿ ಪಂಡಿತರಿಗಿರುವ ಬೆದರಿಕೆ​ಗೆ ಕಳವಳ ವ್ಯಕ್ತಪಡಿಸಿದ ಒಮರ್ ಅಬ್ದುಲ್ಲಾ
ಕಾಶ್ಮೀರಿ ಪಂಡಿತರಿಗಿರುವ ಬೆದರಿಕೆ​ಗೆ ಕಳವಳ ವ್ಯಕ್ತಪಡಿಸಿದ ಒಮರ್ ಅಬ್ದುಲ್ಲಾ
‘ಅಪ್ಪು ಸರ್ ನೆನಪಿನಲ್ಲಿ ಗಡ್ಡ ಬಿಟ್ಟೆ’: ಭಾವುಕವಾಗಿ ಮಾತನಾಡಿದ ಎಂ.ಕೆ. ಮಠ
‘ಅಪ್ಪು ಸರ್ ನೆನಪಿನಲ್ಲಿ ಗಡ್ಡ ಬಿಟ್ಟೆ’: ಭಾವುಕವಾಗಿ ಮಾತನಾಡಿದ ಎಂ.ಕೆ. ಮಠ
‘ಟಾಕ್ಸಿಕ್’ ಸಿನಿಮಾಗೆ ಭರ್ಜರಿ ಬುಕಿಂಗ್; ಲೆಕ್ಕ ನೀಡಿದ ಪ್ರದರ್ಶಕ ಜಗದೀಶ್
‘ಟಾಕ್ಸಿಕ್’ ಸಿನಿಮಾಗೆ ಭರ್ಜರಿ ಬುಕಿಂಗ್; ಲೆಕ್ಕ ನೀಡಿದ ಪ್ರದರ್ಶಕ ಜಗದೀಶ್
9 ಗಂಟೆಗಳ ಶೋಧ: ಪ್ಲ್ಯಾನ್ ಮಾಡಿಯೇ ಎಸ್ಕೇಪ್ ಆದ್ರಾ ಜ್ಞಾನೇಂದ್ರ ಕುಮಾರ್?
9 ಗಂಟೆಗಳ ಶೋಧ: ಪ್ಲ್ಯಾನ್ ಮಾಡಿಯೇ ಎಸ್ಕೇಪ್ ಆದ್ರಾ ಜ್ಞಾನೇಂದ್ರ ಕುಮಾರ್?