AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ವಿಧಾನಸೌಧದಲ್ಲಿ ಸಿಎಸ್​​-ಡಿಐಜಿಗೆ 3 ಪುಟಗಳ ದೂರು ಸಲ್ಲಿಸಿ, 15 ನಿಮಿಷ ಮಾತುಕತೆ ನಡೆಸಿದ ರೋಹಿಣಿ ಸಿಂಧೂರಿ ಹೇಳಿದ್ದೇನು?

ರೋಹಿಣಿ ಸಿಂಧೂರಿ 15 ನಿಮಿಷಗಳ ಕಾಲ ಸಿಎಸ್​ ವಂದಿತಾ ಶರ್ಮಾ ಜೊತೆ ಮಾತುಕತೆ ನಡೆಸಿದ್ದಾರೆ. ಈ ಹಿಂದಿನಿಂದಲೂ ರೂಪಾ ನನ್ನ ಟಾರ್ಗೆಟ್​ ಮಾಡ್ತಾ ಬಂದಿದ್ದಾರೆ. ಡಿ.ರೂಪಾ ವೈಯಕ್ತಿಕ ವಿಚಾರವಾಗಿ ತೇಜೋವಧೆ ಮಾಡುತ್ತಿದ್ದಾರೆ.

ವಿಧಾನಸೌಧದಲ್ಲಿ ಸಿಎಸ್​​-ಡಿಐಜಿಗೆ 3 ಪುಟಗಳ ದೂರು ಸಲ್ಲಿಸಿ, 15 ನಿಮಿಷ ಮಾತುಕತೆ ನಡೆಸಿದ ರೋಹಿಣಿ ಸಿಂಧೂರಿ ಹೇಳಿದ್ದೇನು?
ರೋಹಿಣಿ ಸಿಂಧೂರಿ, ಐಎಎಸ್
TV9 Web
| Edited By: ಆಯೇಷಾ ಬಾನು|

Updated on: Feb 20, 2023 | 3:32 PM

Share

ಬೆಂಗಳೂರು: ಐಎಎಸ್​ ಅಧಿಕಾರಿ ರೋಹಿಣಿ ಸಿಂಧೂರಿ(Rohini Sindhuri) ಮತ್ತು ಐಪಿಎಸ್​ ಅಧಿಕಾರಿ ಡಿ.ರೂಪಾಗೆ (D Roopa) ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ (CM Basavaraj Bommai) ನೋಟಿಸ್ ನೀಡುವಂತೆ ಸೂಚಿಸಿದ ಬೆನ್ನಲ್ಲೇ ರೋಹಿಣಿ ಸಿಂಧೂರಿ ಸಿಎಸ್​ ವಂದಿತಾ ಶರ್ಮಾರನ್ನು ಭೇಟಿಯಾಗಿ 3 ಪುಟಗಳ ದೂರು ಸಲ್ಲಿಸಿದ್ದಾರೆ. ವಿಧಾನಸೌಧದ ಸಿಎಸ್​ ಕಚೇರಿಯಲ್ಲಿ ಭೇಟಿಯಾಗಿ ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿ ವಂದಿತಾ ಶರ್ಮಾ ಮತ್ತು ಡಿಜಿ&ಐಜಿಪಿ ಪ್ರವೀಣ್ ಸೂದ್​ ನೇತೃತ್ವದಲ್ಲಿ ಸಮಾಲೋಚನೆ ನಡೆಸಿ ಮಾತುಕತೆ ನಂತರ ಡಿ.ರೂಪಾ ವಿರುದ್ಧ ಸಿಎಸ್​ಗೆ ದೂರು ಸಲ್ಲಿಸಿದ್ದಾರೆ.

15 ನಿಮಿಷ ಸಿಎಸ್​ ವಂದಿತಾ ಶರ್ಮಾ ಜತೆ ಸಿಂಧೂರಿ ಮಾತುಕತೆ

ಇನ್ನು ರೋಹಿಣಿ ಸಿಂಧೂರಿ 15 ನಿಮಿಷಗಳ ಕಾಲ ಸಿಎಸ್​ ವಂದಿತಾ ಶರ್ಮಾ ಜೊತೆ ಮಾತುಕತೆ ನಡೆಸಿದ್ದಾರೆ. ಈ ಹಿಂದಿನಿಂದಲೂ ರೂಪಾ ನನ್ನ ಟಾರ್ಗೆಟ್​ ಮಾಡ್ತಾ ಬಂದಿದ್ದಾರೆ. ಡಿ.ರೂಪಾ ವೈಯಕ್ತಿಕ ವಿಚಾರವಾಗಿ ತೇಜೋವಧೆ ಮಾಡುತ್ತಿದ್ದಾರೆ. ವೈಯಕ್ತಿಕ ಕಾರಣದಿಂದ ನನ್ನ ಮೇಲೆ ಟಾರ್ಗೆಟ್​ ಮಾಡುತ್ತಿದ್ದಾರೆ. ಇದರಿಂದ ನನ್ನ ಕುಟುಂಬಕ್ಕೆ ಸಮಸ್ಯೆ ಆಗ್ತಿದೆ ಎಂದು ಸಿಎಸ್​ ವಂದಿತಾ ಶರ್ಮಾ ಮುಂದೆ ಸಿಂಧೂರಿ ಬೇಸರ ವ್ಯಕ್ತಪಡಿಸಿದ್ದಾರೆ ಎನ್ನಲಾಗುತ್ತಿದೆ.

ಇದನ್ನೂ ಓದಿ: IAS Vs IPS | ಅಸಲಿಗೆ ನನ್ನ ಪತ್ನಿಯ ವಿಷಯದಲ್ಲಿ ಮಾತಾಡಲು ಡಿ ರೂಪಾ ಯಾರು? ಸುಧೀರ್ ರೆಡ್ಡಿ, ರೋಹಿಣಿ ಸಿಂಧೂರಿ ಪತಿ

ಸರ್ಕಾರಿ ಅಧಿಕಾರಿಗಳು ಮಾಧ್ಯಮದ ಮುಂದೆ ಮಾತನಾಡಬಾರದು -ರೋಹಿಣಿ ಸಿಂಧೂರಿ

ಸಿಎಸ್​ ವಂದಿತಾ ಶರ್ಮಾ ಅವರೊಂದಿಗಿನ ಚರ್ಚೆ ಬಳಿಕ ಮಾತನಾಡಿದ ರೋಹಿಣಿ ಸಿಂಧೂರಿ, ಸರ್ಕಾರಿ ಅಧಿಕಾರಿಗಳು ಮಾಧ್ಯಮದ ಮುಂದೆ ಮಾತನಾಡಬಾರದು ಎಂಬ ನಿಯಮವಿದೆ. ಡಿ.ರೂಪಾ ನನ್ನ ವಿರುದ್ಧ ಇಲ್ಲಸಲ್ಲದ ಆರೋಪ ಮಾಡಿದ್ದಾರೆ. ಡಿ.ರೂಪಾ ಮೌದ್ಗಿಲ್​ಗೂ, ನನಗೂ ಯಾವುದೇ ಸಂಬಂಧವಿಲ್ಲ. ಡಿ.ರೂಪಾ ಆರೋಪಗಳಿಗೆ ನನ್ನ ಪತಿ ಪ್ರತಿಕ್ರಿಯೆ ನೀಡಿದ್ದಾರೆ. ಡಿ.ರೂಪಾ ಅವರ ಸರ್ವಿಸ್ ಬೇರೆ, ನಮ್ಮ ಸರ್ವಿಸ್​ ಬೇರೆ. ನನ್ನ ವಿರುದ್ಧ ಮಾತನಾಡಿರುವ ಬಗ್ಗೆ ಸಿಎಸ್​ಗೆ ಮಾಹಿತಿ ನೀಡಿದ್ದೇನೆ. ದೂರಿನ ಬಗ್ಗೆ ಕಾನೂನು ಕ್ರಮ ಆಗಬೇಕೆಂದು ಮನವಿ ಮಾಡಿದ್ದೇನೆ. ನನ್ನ ಖಾಸಗಿ ಜೀವನ, ವೃತ್ತಿ ಬದುಕಿನ ಬಗ್ಗೆ ರೂಪಾ ಮಾತಾಡಿದ್ದಾರೆ. ಸೋಷಿಯಲ್ ಮೀಡಿಯಾದಲ್ಲಿ ಪೋಸ್ಟ್ ಹಾಕಿರುವ ಬಗ್ಗೆ ಮಾಹಿತಿ ಇದೆ. IAS ಅಧಿಕಾರಿಗಳಿಗೆ ನಾನು ಮೆಸೇಜ್​ ಮಾಡಿದ್ದೇನೆಂದು ಆರೋಪ ಮಾಡಿದ್ದಾರೆ. ನಾನು ಯಾರಿಗೆ ಫೋಟೋ, ಮೆಸೇಜ್​ ಕಳುಹಿಸಿದ್ದೇನೆಂದು ಹೇಳಲಿ. ಆ IAS ಅಧಿಕಾರಿಗಳ ಹೆಸರು ಬಹಿರಂಗ ಪಡಿಸಲಿ ಎಂದು ಐಪಿಎಸ್​ ಅಧಿಕಾರಿ ಡಿ.ರೂಪಾಗೆ ರೋಹಿಣಿ ಸಿಂಧೂರಿ ಸವಾಲು ಹಾಕಿದ್ದಾರೆ.

ಪ್ರಮುಖ ಸುದ್ದಿಗಳನ್ನು ಓದಲು ಇದರ ಮೇಲೆ ಕ್ಲಿಕ್ ಮಾಡಿ

Follow Us
ನವಿಲುಗರಿ ಧರಿಸಿ ನಿವೇದಿತಾ ಗೌಡ, ಕಿಶನ್ ರೀಲ್ಸ್: ವಿವಾದಕ್ಕೆ ಕಾರಣ ಏನು?
ನವಿಲುಗರಿ ಧರಿಸಿ ನಿವೇದಿತಾ ಗೌಡ, ಕಿಶನ್ ರೀಲ್ಸ್: ವಿವಾದಕ್ಕೆ ಕಾರಣ ಏನು?
‘ಆ ದಿನಗಳು’ ಸಿನಿಮಾ ನೆನೆದ ನಿರ್ದೇಶಕ ಕೆಎಂ ಚೈತನ್ಯ: ವಿಡಿಯೋ
‘ಆ ದಿನಗಳು’ ಸಿನಿಮಾ ನೆನೆದ ನಿರ್ದೇಶಕ ಕೆಎಂ ಚೈತನ್ಯ: ವಿಡಿಯೋ
ವಿನೋದ್ ಪ್ರಭಾಕರ್​​ಗೆ ಆಗಿದ್ದೇನು: ಮಾಹಿತಿ ನೀಡಿದ ಸಹ ನಟ ವಿಜಯ್ ಗೌಡ
ವಿನೋದ್ ಪ್ರಭಾಕರ್​​ಗೆ ಆಗಿದ್ದೇನು: ಮಾಹಿತಿ ನೀಡಿದ ಸಹ ನಟ ವಿಜಯ್ ಗೌಡ
ಮುಸ್ಲಿಂ ಸಮುದಾಯದ ಮತ್ತಿಬ್ಬರಿಗೆ ಸಚಿವ ಸ್ಥಾನ ನೀಡುವ ಬಗ್ಗೆ ಚರ್ಚೆ
ಮುಸ್ಲಿಂ ಸಮುದಾಯದ ಮತ್ತಿಬ್ಬರಿಗೆ ಸಚಿವ ಸ್ಥಾನ ನೀಡುವ ಬಗ್ಗೆ ಚರ್ಚೆ
ಅಡ್ಡಮತದಾನ ಮಾಡಿದವರಿಗೆ ತಕ್ಕ ಶಾಸ್ತಿ: ಹೈಕಮಾಂಡ್ ಗುಟ್ಟು ಬಿಚ್ಚಿಟ್ಟ ಅಶೋಕ್
ಅಡ್ಡಮತದಾನ ಮಾಡಿದವರಿಗೆ ತಕ್ಕ ಶಾಸ್ತಿ: ಹೈಕಮಾಂಡ್ ಗುಟ್ಟು ಬಿಚ್ಚಿಟ್ಟ ಅಶೋಕ್
ಪೋರ್ಟರ್, ರ‍್ಯಾಪಿಡೋ ಆ್ಯಪ್​​ಗಳ ವಿರುದ್ಧ ಬೀದಿಗಿಳಿದ ಗೂಡ್ಸ್ ವಾಹನ ಚಾಲಕರು
ಪೋರ್ಟರ್, ರ‍್ಯಾಪಿಡೋ ಆ್ಯಪ್​​ಗಳ ವಿರುದ್ಧ ಬೀದಿಗಿಳಿದ ಗೂಡ್ಸ್ ವಾಹನ ಚಾಲಕರು
ಯುಎಇ ದೇಶಕ್ಕೆ ರಫ್ತಾಗಲಿವೆ ಬ್ರಹ್ಮೋಸ್, ಆಕಾಶ್ ಕ್ಷಿಪಣಿಗಳು!
ಯುಎಇ ದೇಶಕ್ಕೆ ರಫ್ತಾಗಲಿವೆ ಬ್ರಹ್ಮೋಸ್, ಆಕಾಶ್ ಕ್ಷಿಪಣಿಗಳು!
ಬೆಂಗಳೂರು ರಸ್ತೆ ಅಭಿವೃದ್ಧಿ ಅನುದಾನದ ಬಗ್ಗೆ ತೇಜಸ್ವಿ ಸೂರ್ಯ ವಾಗ್ದಾಳಿ
ಬೆಂಗಳೂರು ರಸ್ತೆ ಅಭಿವೃದ್ಧಿ ಅನುದಾನದ ಬಗ್ಗೆ ತೇಜಸ್ವಿ ಸೂರ್ಯ ವಾಗ್ದಾಳಿ
ಮುಮ್ಮಡಿ ನಿರ್ವಾಣ ಸ್ವಾಮೀಜಿ ಅಂತಿಮ ದರ್ಶನದ ವೇಳೆ ಸಿಎಂ ಡಿಕೆಶಿ ಭಾವುಕ
ಮುಮ್ಮಡಿ ನಿರ್ವಾಣ ಸ್ವಾಮೀಜಿ ಅಂತಿಮ ದರ್ಶನದ ವೇಳೆ ಸಿಎಂ ಡಿಕೆಶಿ ಭಾವುಕ
ಧರ್ಮಸ್ಥಳದಲ್ಲಿ ಶಾಸಕರ ಆಣೆ ಪ್ರಮಾಣ ನಿರ್ಧಾರದಿಂದ ಹಿಂದೆ ಸರಿದ ಬಿಜೆಪಿ
ಧರ್ಮಸ್ಥಳದಲ್ಲಿ ಶಾಸಕರ ಆಣೆ ಪ್ರಮಾಣ ನಿರ್ಧಾರದಿಂದ ಹಿಂದೆ ಸರಿದ ಬಿಜೆಪಿ