Sign In

By signing in or creating an account, you agree with Associated Broadcasting Company's Terms & Conditions and Privacy Policy.

ರೋಹಿಣಿ ಸಿಂಧೂರಿ ಮಾನನಷ್ಟ ಮೊಕದ್ದಮೆ: ರೂಪಾ ಮೌದ್ಗಿಲ್​ಗೆ ಸಮನ್ಸ್ ಜಾರಿಗೊಳಿಸಿದ ಮ್ಯಾಜಿಸ್ಟ್ರೇಟ್​​​ ಕೋರ್ಟ್

ಐಪಿಎಸ್​ ಡಿ.ರೂಪಾ ಮೌದ್ಗಿಲ್​ ವಿರುದ್ಧ ಐಎಎಸ್ ಅಧಿಕಾರಿ ರೋಹಿಣಿ ಸಿಂಧೂರಿ ಕೇಸ್​ಗೆ ಸಂಬಂಧಿಸಿದಂತೆ ಮ್ಯಾಜಿಸ್ಟ್ರೇಟ್ ಕೋರ್ಟ್​​ ಕ್ರಿಮಿನಲ್ ಮಾನನಷ್ಟ ಪ್ರಕರಣ ದಾಖಲಿಸಿಕೊಂಡಿದ್ದು, ರೂಪಾ‌‌ ಮೌದ್ಗಿಲ್​ಗೆ ಸಮನ್ಸ್ ಜಾರಿಗೊಳಿಸಿದೆ.

ರೋಹಿಣಿ ಸಿಂಧೂರಿ ಮಾನನಷ್ಟ ಮೊಕದ್ದಮೆ: ರೂಪಾ ಮೌದ್ಗಿಲ್​ಗೆ ಸಮನ್ಸ್ ಜಾರಿಗೊಳಿಸಿದ ಮ್ಯಾಜಿಸ್ಟ್ರೇಟ್​​​ ಕೋರ್ಟ್
ರೂಪಾ ಮೌದ್ಗಿಲ್, ರೋಹಿಣಿ ಸಿಂಧೂರಿ Image Credit source: freepressjournal.in
Follow us
ಗಂಗಾಧರ​ ಬ. ಸಾಬೋಜಿ
|

Updated on:Mar 24, 2023 | 6:05 PM

ಬೆಂಗಳೂರು: ಐಪಿಎಸ್​ ಡಿ.ರೂಪಾ ಮೌದ್ಗಿಲ್​ ವಿರುದ್ಧ ಐಎಎಸ್ ಅಧಿಕಾರಿ ರೋಹಿಣಿ ಸಿಂಧೂರಿ (Rohini Sindhuri) ಕೇಸ್​ಗೆ ಸಂಬಂಧಿಸಿದಂತೆ ಮ್ಯಾಜಿಸ್ಟ್ರೇಟ್ ಕೋರ್ಟ್​​ ಕ್ರಿಮಿನಲ್ ಮಾನನಷ್ಟ ಪ್ರಕರಣ ದಾಖಲಿಸಿಕೊಂಡಿದ್ದು, ರೂಪಾ‌‌ ಮೌದ್ಗಿಲ್​ಗೆ ಸಮನ್ಸ್ ಜಾರಿಗೊಳಿಸಿದೆ. ಏ. 26ಕ್ಕೆ ಹಾಜರಾಗುವಂತೆ 8ನೇ ಎಸಿಎಂಎಂ ಕೋರ್ಟ್ ಸಮನ್ಸ್​ ಜಾರಿ ಮಾಡಿದೆ. ಡಿ.ರೂಪಾ ಮೌದ್ಗಿಲ್​ ವಿರುದ್ಧ ರೋಹಿಣಿ ಸಿಂಧೂರಿ ಮಾನನಷ್ಟ ಮೊಕದ್ದಮೆ ದಾಖಲಿಸಿದ್ದರು. ಈ ವಿಚಾರವಾಗಿ ಐಪಿಎಸ್ ಅಧಿಕಾರಿ ಡಿ. ರೂಪಾ ಮೌದ್ಗಿಲ್ ರೋಹಿಣಿ ಸಿಂಧೂರಿ ವಿರುದ್ಧ ಅನೇಕ ಆರೋಪಗಳನ್ನು ಮಾಡಿದ್ದರು. ಇದು ಕರ್ನಾಟಕ ರಾಜಕೀಯದಲ್ಲಿಯೂ ಭಾರೀ ಕೋಲಾಹಲಕ್ಕೆ ಕಾರಣವಾಗಿತ್ತು. ಇದರ ಬೆನ್ನಲ್ಲೇ ಡಿ. ರೂಪಾ ವಿರುದ್ಧ ರೋಹಿಣಿ ಸಿಂಧೂರಿ ಮಾನನಷ್ಟ ಪರಿಹಾರ ಕೋರಿ ಲೀಗಲ್‌ ನೋಟಿಸ್‌ ಜಾರಿ ಮಾಡಿದ್ದರು. ಒಂದೋ ಕ್ಷಮೆ ಕೇಳಬೇಕು, ಇಲ್ಲವಾದಲ್ಲಿ 1 ಕೋಟಿ ರೂ. ಮಾನನಷ್ಟ ಪರಿಹಾರ ನೀಡಬೇಕು ಎಂದು ನೋಟಿಸ್​ನಲ್ಲಿ ಉಲ್ಲೇಖಿಸಲಾಗಿತ್ತು.

1 ಕೋಟಿ ರೂಪಾಯಿ ಮಾನನಷ್ಟ ದಾಖಲಿಸುವುದಾಗಿ ಎಚ್ಚರಿಕೆ 

ಸಾಮಾಜಿಕ ಜಾಲತಾಣಗಳಲ್ಲಿ ಐಎಎಸ್ ಅಧಿಕಾರಿ ರೋಹಿಣಿ ಸಿಂಧೂರಿ ಅವರ ವೈಯಕ್ತಿ ಫೋಟೋಗಳನ್ನು ಹರಿಬಿಟ್ಟು ಸಾಲು ಸಾಲು ಆರೋಪಗಳನ್ನು ಮಾಡಿರುವ ಐಪಿಎಸ್​ ಡಿ. ರೂಪಾಗೆ ಲೀಗಲ್‌ ನೋಟಿಸ್‌ ನೀಡಲಾಗಿತ್ತು. ರೋಹಿಣಿ ಸಿಂಧೂರಿ ಅವರು ತಮ್ಮ ಪರ ವಕೀಲ ಸಿವಿ ನಾಗೇಶ್‌ ಮೂಲಕ ಲೀಗಲ್‌ ನೋಟಿಸ್‌ ನೀಡಿದ್ದರು. ಈ ನೋಟಿಸ್‌ ತಲುಪಿದ 24 ಗಂಟೆಯ ಒಳಗಾಗಿ ರೂಪಾ ಅವರು ಕ್ಷಮೆ ಕೇಳಬೇಕು. ಇಲ್ಲದಿದ್ದರೆ 1 ಕೋಟಿ ರೂಪಾಯಿ ಮಾನನಷ್ಟ ಮೊಕದ್ದಮೆ ದಾಖಲಿಸುವುದಾಗಿ ಎಚ್ಚರಿಕೆ ನೀಡಿದ್ದರು.

ಇದನ್ನೂ ಓದಿ: ರೋಹಿಣಿ ಸಿಂಧೂರಿಯವರ ವೈಯಕ್ತಿ ಫೋಟೋ ಏಕೆ ಹಾಕಿದ್ದೀರಿ ಎಂದು ಪ್ರಶ್ನಿಸಿದವರಿಗೆ ರೂಪಾ ಕೊಟ್ಟ ಉತ್ತರ ಹೀಗಿದೆ

ನೋಟಿಸ್​ನಲ್ಲಿ 21 ಅಂಶಗಳನ್ನು ಉಲ್ಲೇಖಿಸಿ ರೂಪಾ ಅವರ ಮನೆ ಹಾಗೂ ಕೆಲಸದ ಸ್ಥಳದ ವಿಳಾಸಕ್ಕೆ ಕಳುಹಿಸಲಾಗಿತ್ತು. ಅದರೊಂದಿಗೆ ತಮ್ಮ ಫೇಸ್‌ಬುಕ್‌ ಪೇಜ್​ನಲ್ಲಿ ಹಂಚಿಕೊಂಡಿರುವ ಮಾನಹಾನಿಕರ ಮೆಸೇಜ್‌ಗಳು ಹಾಗೂ ಚಿತ್ರವನ್ನು ತಕ್ಷಣವೇ ಡಿಲೀಟ್‌ ಮಾಡಬೇಕು. ಹಾಗೇ ಕ್ಷಮೆಯಾಚಿಸಬೇಕೆಂದು ನೋಟಿಸ್​ನಲ್ಲಿ ಉಲ್ಲೇಖಿಸಿದ್ದರು.

ಡಿ. ರೂಪಾ ಮೌದ್ಗಿಲ್ ವಿರುದ್ಧ ಆಕ್ರೋಶ  

ಡಿ. ರೂಪಾ ಮೌದ್ಗಿಲ್​ ಅವರು ರೋಹಿಣಿ ಸಿಂಧೂರಿ ಅವರ ಕೆಲ ವೈಯಕ್ತಿ ಫೋಟೋಗಳನ್ನು ಬಹಿರಂಗವಾಗಿ ಸಾಮಾಜಿಕ ಜಾಲತಾಣಗಳಲ್ಲಿ ಹಾಕಿ ಕೆಲ ಗಂಭೀರ ಆರೋಪಗಳನ್ನು ಮಾಡಿದ್ದರು. ಈ ಫೋಟೋಗಳನ್ನು ಹಾಕಿದ್ದಕ್ಕೆ ಕೆಲವರು ರೂಪಾ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದರು. ವೈಯಕ್ತಿಕ ಫೋಟೋಗಳನ್ನು ಈ ರೀತಿ ಬಹಿರಂಗವಾಗಿ ಹಾಕುವುದು ಎಷ್ಟು ಸರಿ? ಈ ರೀತಿ ಮತ್ತೊಬ್ಬರ ಫೋಟೋಗಳನ್ನು ಅವರ ಅನುಮತಿ ಇಲ್ಲದೆ ಸಾಮಾಜಿಕ ಜಾಲತಾಣಗಳಲ್ಲಿ ಹಂಚುವುದು ನಿಮ್ಮ ಸರ್ಕಾರದ ನಾಗರಿಕ ಸೇವಾ ನಿಯಮಗಳ ಉಲ್ಲಂಘನೆಯಾಗುವುದಿಲ್ವಾ? ಅಥವಾ ಇಂಥ ನಿಯಮಗಳು ನಿಮಗೆ ಮಾತ್ರ ಅನ್ವಯಿಸುವುದಿಲ್ವಾ? ಅಂತೆಲ್ಲಾ ರೂಪಾ ವಿರುದ್ಧ ಗರಂ ಆಗಿದ್ದರು.

ಇದನ್ನೂ ಓದಿ: ತಮ್ಮ ಖಾಸಗಿ ಫೋಟೋಗಳಿಗೆ ಸ್ಪಷ್ಟನೆ ಕೊಟ್ಟ ರೋಹಿಣಿ ಸಿಂಧೂರಿ, IPS ರೂಪಾ ವಿರುದ್ಧ ಕಾನೂನು ಹೋರಾಟಕ್ಕೆ ತೀರ್ಮಾನ

ಖಾಸಗಿ ಫೋಟೋಗಳು ಹಾಕಿ ಗಂಭೀರ ಆರೋಪ

ಮೊದಲ ಮೊದಲಿಗೆ ರೋಹಿಣಿ ಸಿಂಧೂರಿ ಹಾಗೂ ಡಿ. ರೂಪಾ ನಡುವೆ ಕಾಳಗ ಶುರುವಾಗಿದ್ದೆ ಈ ಫೋಟೋಗಳಿಂದ. ರೂಪಾ ಅವರೇ ಸಿಂಧೂರಿ ಅವರ ಒಂದಿಷ್ಟು ಖಾಸಗಿ ಫೋಟೋಗಳನ್ನು ಫೇಸ್​​ಬುಕ್​ನಲ್ಲಿ ಹಂಚಿಕೊಂಡಿದ್ದರು. ಅಲ್ಲದೇ ಈ ರೀತಿಯ ಪಿಕ್ಚರ್ಸ್ ನಾರ್ಮಲ್ ಅನ್ನಿಸಬಹುದು. ಆದರೆ, ಒಬ್ಬ ಮಹಿಳಾ ಐಎಎಸ್ ಅಧಿಕಾರಿ ಒಂದಲ್ಲ, ಎರಡಲ್ಲ ಮೂರು ಐಎಎಸ್ ಪುರುಷ ಅಧಿಕಾರಿಗಳಿಗೆ ಆಗಾಗ ಇವುಗಳನ್ನು ಹಾಗೂ ಈ ರೀತಿಯ ಅನೇಕ ಪಿಕ್ಸ್​ಗಳ ಒನ್​ ಟು ಒನ್ ಕಳಿಸ್ತಾರೆ ಅಂದ್ರೆ ಅದಕ್ಕೆ ಏನರ್ಥ? ಎಂದು ಪ್ರಶ್ನಿಸಿದ್ದರು.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Published On - 6:05 pm, Fri, 24 March 23

ಯತ್ನಾಳ್ ಆದಷ್ಟು ಬೇಗ ಪಕ್ಷಕ್ಕೆ ವಾಪಸ್ಸಾಗುವ ನಿರೀಕ್ಷೆ ಇದೆ: ಸುಧಾಕರ್
ಯತ್ನಾಳ್ ಆದಷ್ಟು ಬೇಗ ಪಕ್ಷಕ್ಕೆ ವಾಪಸ್ಸಾಗುವ ನಿರೀಕ್ಷೆ ಇದೆ: ಸುಧಾಕರ್
ಸಪ್ತಗಿರಿ ವಿಶ್ವವಿದ್ಯಾಲಯ ಉತ್ತಮ ಗುಣಮಟ್ಟದ ಶಿಕ್ಷಣ ಒದಗಿಸುತ್ತಿದೆ: ಉಮೇಶ್
ಸಪ್ತಗಿರಿ ವಿಶ್ವವಿದ್ಯಾಲಯ ಉತ್ತಮ ಗುಣಮಟ್ಟದ ಶಿಕ್ಷಣ ಒದಗಿಸುತ್ತಿದೆ: ಉಮೇಶ್
ಛತ್ತೀಸ್‌ಗಢದ ದಾಂತೇಶ್ವರಿ ದೇವಸ್ಥಾನದಲ್ಲಿ ಪೂಜೆ ಸಲ್ಲಿಸಿದ ಅಮಿತ್ ಶಾ
ಛತ್ತೀಸ್‌ಗಢದ ದಾಂತೇಶ್ವರಿ ದೇವಸ್ಥಾನದಲ್ಲಿ ಪೂಜೆ ಸಲ್ಲಿಸಿದ ಅಮಿತ್ ಶಾ
ಹಾಲ್​ ಟಿಕೆಟ್​​ನೊಂದಿಗೆ ಮಾದರಿ ಒಎಂಆರ್ ಶೀಟ್ ಕೂಡ ಡೌನ್ಲೋಡ್: ಪ್ರಸನ್ನ
ಹಾಲ್​ ಟಿಕೆಟ್​​ನೊಂದಿಗೆ ಮಾದರಿ ಒಎಂಆರ್ ಶೀಟ್ ಕೂಡ ಡೌನ್ಲೋಡ್: ಪ್ರಸನ್ನ
ಪುಟ್ಟ ಬಾಲಕನ ದೈವ ನರ್ತನ: ಮೈ ಜುಮ್ಮೆನಿಸುವ ವಿಡಿಯೋ ನೋಡಿ
ಪುಟ್ಟ ಬಾಲಕನ ದೈವ ನರ್ತನ: ಮೈ ಜುಮ್ಮೆನಿಸುವ ವಿಡಿಯೋ ನೋಡಿ
CET ಪರೀಕ್ಷೆ ಬಗ್ಗೆ ಭಯ ಬೇಡ; ತಜ್ಞರು ನೀಡಿರುವ ಟಿಪ್ಸ್​​ ಇಲ್ಲಿದೆ
CET ಪರೀಕ್ಷೆ ಬಗ್ಗೆ ಭಯ ಬೇಡ; ತಜ್ಞರು ನೀಡಿರುವ ಟಿಪ್ಸ್​​ ಇಲ್ಲಿದೆ
ಒಂದು ಕಾಲದ ಜೋಡೆತ್ತುಗಳು, ಈಗ ಬದ್ಧ ವೈರಿಗಳು!
ಒಂದು ಕಾಲದ ಜೋಡೆತ್ತುಗಳು, ಈಗ ಬದ್ಧ ವೈರಿಗಳು!
KSRTC ಬಸ್​​ನಲ್ಲಿ ಅಕ್ರಮ ಗೋಮಾಂಸ ಸಾಗಿಸುತ್ತಿದ್ದ ಶಕೀರಾ ವಶಕ್ಕೆ
KSRTC ಬಸ್​​ನಲ್ಲಿ ಅಕ್ರಮ ಗೋಮಾಂಸ ಸಾಗಿಸುತ್ತಿದ್ದ ಶಕೀರಾ ವಶಕ್ಕೆ
ಇಂಜಿನಿಯರಿಂಗ್​​ಗೆ ಯಾವ ಕಾಲೇಜು, ಯಾವ ಕೋರ್ಸ್ ಬೆಸ್ಟ್?
ಇಂಜಿನಿಯರಿಂಗ್​​ಗೆ ಯಾವ ಕಾಲೇಜು, ಯಾವ ಕೋರ್ಸ್ ಬೆಸ್ಟ್?
ಮಾಜಿ ಪ್ರಧಾನಿಯ ಮಗನಾಗಿ ಸರ್ಕಾರಿ ಜಮೀನು ಒತ್ತುವರಿ ಮಾಡ್ತೀನಾ? ಕುಮಾರಸ್ವಾಮಿ
ಮಾಜಿ ಪ್ರಧಾನಿಯ ಮಗನಾಗಿ ಸರ್ಕಾರಿ ಜಮೀನು ಒತ್ತುವರಿ ಮಾಡ್ತೀನಾ? ಕುಮಾರಸ್ವಾಮಿ