AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Rohith Chkratirtha: ಸತ್ಯಕ್ಕಾಗಿ ಜಗತ್ತನ್ನೇ ಎದುರು ಹಾಕಿಕೊಳ್ಳಲು ಸಂಶೋಧಕ ಸಿದ್ಧನಿರುತ್ತಾನೆ: ರೋಹಿತ್ ಚಕ್ರತೀರ್ಥ

‘ವಿಸರ್ಜನೆ’ ಆದ ಮೇಲೂ ಉಳಿಯುವುದು ನನ್ನ ಜಾಯಮಾನಕ್ಕೆ ಒಗ್ಗುವಂಥಾದ್ದಲ್ಲ. ನನ್ನ ಕೆಲಸಗಳಿಗೆ ಮರಳಿದ್ದೇನೆ ಎಂದು ಫೇಸ್​ಬುಕ್ ಪೋಸ್ಟ್​ನಲ್ಲಿ ತಿಳಿಸಿದ್ದಾರೆ.

Rohith Chkratirtha: ಸತ್ಯಕ್ಕಾಗಿ ಜಗತ್ತನ್ನೇ ಎದುರು ಹಾಕಿಕೊಳ್ಳಲು ಸಂಶೋಧಕ ಸಿದ್ಧನಿರುತ್ತಾನೆ: ರೋಹಿತ್ ಚಕ್ರತೀರ್ಥ
ರೋಹಿತ್ ಚಕ್ರತೀರ್ಥ
TV9 Web
| Edited By: |

Updated on: Jun 07, 2022 | 10:39 PM

Share

ಬೆಂಗಳೂರು: ‘ಸಂಶೋಧಕನಿಗೆ ಸತ್ಯವೇ ಮುಖ್ಯವಾಗುತ್ತದೆ. ಅದಕ್ಕಾಗಿ ಆತ ಜಗತ್ತನ್ನೇ ಎದುರು ಹಾಕಿಕೊಳ್ಳಲು ಸಿದ್ಧನಿರುತ್ತಾನೆ’ ಎಂದು ಪಠ್ಯಪುಸ್ತಕ ಪರಿಷ್ಕರಣೆ ಸಮಿತಿಯ (Text Book Review Committee) ಮಾಜಿ ಅಧ್ಯಕ್ಷ ರೋಹಿತ್ ಚಕ್ರತೀರ್ಥ (Rohith Chakratirtha) ಫೇಸ್​ಬುಕ್ ಪೋಸ್ಟ್​ನಲ್ಲಿ ಹೇಳಿದ್ದಾರೆ. ಪಠ್ಯಪುಸ್ತಕ ಪರಿಷ್ಕರಣೆ ಸಮಿತಿಯನ್ನು ವಿಸರ್ಜಿಸಿರುವುದಾಗಿ ರಾಜ್ಯ ಸರ್ಕಾರ ಘೋಷಿಸಿದ ನಂತರ ತಮ್ಮ ಅಭಿಪ್ರಾಯ ತಿಳಿಸಿರುವ ರೋಹಿತ್ ಚಕ್ರತೀರ್ಥ, ‘ಸಂಶೋಧಕನಿಗೆ ಸತ್ಯವೇ ಮುಖ್ಯವಾಗುತ್ತದೆ. ಅದಕ್ಕಾಗಿ ಆತ ಜಗತ್ತನ್ನೇ ಎದುರುಹಾಕಿಕೊಳ್ಳಲೂ ಸಿದ್ಧನಿರುತ್ತಾನೆ. ಆದರೆ ರಾಜಕೀಯ ಪಕ್ಷ, ಸರ್ಕಾರಗಳಿಗೆ ಮತಗಳೇ ಅಂತಿಮ. ಪಠ್ಯ ಸಮಿತಿಗೆ ಆರಿಸಿದ್ದೇವೆ ಎಂದು ಘೋಷಿಸಿದಾಗಲೂ ನಾನು ಉಬ್ಬಿರಲಿಲ್ಲ. ತೆಗೆದುಹಾಕಿದ್ದೇವೆ ಎಂದಾಗ ಕುಗ್ಗಲೂ ಇಲ್ಲ ಎಂದು ಹೇಳಿದ್ದಾರೆ.

‘ಓರ್ವ ಸಂಶೋಧಕನ ದಾರಿ, ಒಂದು ರಾಜಕೀಯ ಪಕ್ಷ ಅಥವಾ ಸರ್ಕಾರದ ದಾರಿಯೂ ಆಗಿರಬೇಕಿಲ್ಲ. ಸಂಶೋಧಕನಿಗೆ ಸತ್ಯವೇ ಮುಖ್ಯವಾಗುತ್ತದೆ. ಅದಕ್ಕಾಗಿ ಆತ ಜಗತ್ತನ್ನೇ ಎದುರುಹಾಕಿಕೊಳ್ಳುವುದಕ್ಕೂ ಸಿದ್ಧನಿರುತ್ತಾನೆ. ಆದರೆ ರಾಜಕೀಯ ಪಕ್ಷ ಅಥವಾ ಸರ್ಕಾರಗಳಿಗೆ ಅಂತಿಮವಾಗಿ ಮುಖ್ಯವಾಗುವುದು ಮತಗಳು. ಸತ್ಯ ಮತ್ತು ಮತ ಎಂಬೆರಡು ದಾರಿಗಳ ನಡುವೆ ಸಂಶೋಧಕ ಮೊದಲನೆಯದನ್ನು ಆಯ್ದುಕೊಂಡರೆ, ರಾಜಕೀಯ ಶಕ್ತಿ ಎರಡನೆಯದನ್ನು ಆರಿಸಿಕೊಳ್ಳುತ್ತದೆ’ ಎಂದು ತಮ್ಮ ಅಭಿಪ್ರಾಯವನ್ನು ವಿವರಿಸಿದ್ದಾರೆ.

‘ಪಠ್ಯ ಪುಸ್ತಕ ಪರಿಷ್ಕರಣೆ ಸಮಿತಿಗೆ ನನ್ನನ್ನು ಆರಿಸಿದ್ದೇವೆ ಎಂದಾಗ ನಾನು ಉಬ್ಬಿಲ್ಲ. ತೆಗೆದುಹಾಕಿದ್ದೇವೆ ಎಂದಾಗ ಕುಗ್ಗಿಯೂ ಇಲ್ಲ. ‘ಚಕ್ರತೀರ್ಥನಿಗೆ ಗೇಟ್‌ ಪಾಸ್‌’ ಎಂಬ ಮಾತನ್ನು ಮಾಧ್ಯಮದಲ್ಲಿ ಓದಿದಾಗ ನಗು ಬರುತ್ತದೆ. ಗೇಟ್​ಪಾಸ್‌ ಕೊಡಲು ನಾನು ಯಾವ ಕಾಂಪೌಂಡ್​ನೊಳಗೂ ನಿಂತಿರಲಿಲ್ಲ. ತನಗೆ ಬೇಕಾದಂತೆ ಇತಿಹಾಸ ಬರೆಯುವುದು ಎಷ್ಟು ಅರ್ಥಹೀನವೋ, ಅಷ್ಟೇ ಅರ್ಥಹೀನವಾದದ್ದು ಬೇರೆಯವರಿಗೆ ಬೇಕಾದಂತೆ ಇತಿಹಾಸ ಬರೆಯುತ್ತೇನೆ ಎಂಬುದು ಕೂಡ. ಇತಿಹಾಸಕ್ಕೆ ನಿಷ್ಠವಾಗಿ ಇತಿಹಾಸವನ್ನು ಬರೆಯಬೇಕೆಂಬ ನನ್ನದು ಎರಡು ಕಡೆಗೂ ಒಪ್ಪಿಗೆಯಾಗದ ಪಂಥವಿರಬಹುದು’ ಎಂದು ಹೇಳಿದ್ದಾರೆ.

‘ವಿಸರ್ಜನೆ’ ಆದ ಮೇಲೂ ಉಳಿಯುವುದು ನನ್ನ ಜಾಯಮಾನಕ್ಕೆ ಒಗ್ಗುವಂಥಾದ್ದಲ್ಲ. ನನ್ನ ಕೆಲಸಗಳಿಗೆ ಮರಳಿದ್ದೇನೆ ಎಂದು ಫೇಸ್​ಬುಕ್ ಪೋಸ್ಟ್​ನಲ್ಲಿ ತಿಳಿಸಿದ್ದಾರೆ.

‘45’ ಸಿನಿಮಾ ಬಿಡುಗಡೆ ಇಷ್ಟು ತಡವಾಗಿದ್ದೇಕೆ? ವಿವರಿಸಿದ ಅರ್ಜುನ್ ಜನ್ಯ
‘45’ ಸಿನಿಮಾ ಬಿಡುಗಡೆ ಇಷ್ಟು ತಡವಾಗಿದ್ದೇಕೆ? ವಿವರಿಸಿದ ಅರ್ಜುನ್ ಜನ್ಯ
ವಿಶೇಷಚೇತನ ಮಕ್ಕಳ ಮೇಲೆ ಶಿಕ್ಷಕ ದಂಪತಿ ರಾಕ್ಷಸಿ ಕೃತ್ಯ: SP ಹೇಳಿದ್ದಿಷ್ಟು
ವಿಶೇಷಚೇತನ ಮಕ್ಕಳ ಮೇಲೆ ಶಿಕ್ಷಕ ದಂಪತಿ ರಾಕ್ಷಸಿ ಕೃತ್ಯ: SP ಹೇಳಿದ್ದಿಷ್ಟು
ಗುವಾಹಟಿಯಲ್ಲಿ ಭಾರತದ ಮೊದಲ ಪ್ರಕೃತಿ ಥೀಮ್​ನ ಟರ್ಮಿನಲ್ ಉದ್ಘಾಟನೆ
ಗುವಾಹಟಿಯಲ್ಲಿ ಭಾರತದ ಮೊದಲ ಪ್ರಕೃತಿ ಥೀಮ್​ನ ಟರ್ಮಿನಲ್ ಉದ್ಘಾಟನೆ
ಅನಧಿಕೃತ‌ ಮನೆಗಳ ಮೇಲೆ ಜೆಸಿಬಿ ಘರ್ಜನೆ: 190ಕ್ಕೂ ಹೆಚ್ಚು ಮನೆಗಳು ನೆಲಸಮ
ಅನಧಿಕೃತ‌ ಮನೆಗಳ ಮೇಲೆ ಜೆಸಿಬಿ ಘರ್ಜನೆ: 190ಕ್ಕೂ ಹೆಚ್ಚು ಮನೆಗಳು ನೆಲಸಮ
ನೀವೆಲ್ಲ ಏನು ಮಕ್ಕಳೆ? ಸ್ಪರ್ಧಿಗಳಿಗೆ ಕ್ಲಾಸ್ ತೆಗೆದುಕೊಂಡ ಕಿಚ್ಚ
ನೀವೆಲ್ಲ ಏನು ಮಕ್ಕಳೆ? ಸ್ಪರ್ಧಿಗಳಿಗೆ ಕ್ಲಾಸ್ ತೆಗೆದುಕೊಂಡ ಕಿಚ್ಚ
ರೈಲ್ವೆ ಸೇತುವೆಯಲ್ಲಿ ಯುವಕನಿಂದ ಅಪಾಯಕಾರಿ ಸಾಹಸ
ರೈಲ್ವೆ ಸೇತುವೆಯಲ್ಲಿ ಯುವಕನಿಂದ ಅಪಾಯಕಾರಿ ಸಾಹಸ
ಚಿತ್ರಕ್ಕೆ ನಾನು ಡೈರೆಕ್ಟರ್, ನೀವಲ್ಲ ಎಂದಿದ್ದ ಉಪ್ಪಿ; ಶಿವಣ್ಣನ ಏನಂದ್ರು?
ಚಿತ್ರಕ್ಕೆ ನಾನು ಡೈರೆಕ್ಟರ್, ನೀವಲ್ಲ ಎಂದಿದ್ದ ಉಪ್ಪಿ; ಶಿವಣ್ಣನ ಏನಂದ್ರು?
ಹೈಕಮಾಂಡ್ ನಮಗಿಬ್ರಿಗೂ ಏನೋ ಹೇಳಿದೆ: ಡಿಕೆಶಿ ಅಚ್ಚರಿಯ ಹೇಳಿಕೆ
ಹೈಕಮಾಂಡ್ ನಮಗಿಬ್ರಿಗೂ ಏನೋ ಹೇಳಿದೆ: ಡಿಕೆಶಿ ಅಚ್ಚರಿಯ ಹೇಳಿಕೆ
ಪಾವಗಡ ಕಡಮಲಕುಂಟೆ ಬಳಿ ಭೀಕರ ಅಪಘಾತ: ಕಾರು ಚಾಲಕ ಸಾವು
ಪಾವಗಡ ಕಡಮಲಕುಂಟೆ ಬಳಿ ಭೀಕರ ಅಪಘಾತ: ಕಾರು ಚಾಲಕ ಸಾವು
‘45’ ಶೂಟ್​​ನಲ್ಲಿ ಸಾವಿನ ಬಗ್ಗೆ ಮಾತನಾಡಿದ್ದ ಶಿವಣ್ಣ; ಜನ್ಯ, ರಾಜ್
‘45’ ಶೂಟ್​​ನಲ್ಲಿ ಸಾವಿನ ಬಗ್ಗೆ ಮಾತನಾಡಿದ್ದ ಶಿವಣ್ಣ; ಜನ್ಯ, ರಾಜ್