AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸೋಂಕಿನ ಭೀತಿಯ ಮಧ್ಯೆಯೂ ಮಾಜಿ ರೌಡಿಶೀಟರ್‌ ಭರ್ಜರಿ ಬರ್ತ್​ ಡೇ

ಬೆಂಗಳೂರು: ಕೊರೊನಾ ಸೋಂಕಿನ ಭೀತಿ ಬೆಂಗಳೂರಿಗರನ್ನ ಇನ್ನೂ ಕಾಡುತ್ತಲೇ ಇದೆ. ಜನ ಗುಂಪಿನಲ್ಲಿ ಸೇರಿ ಮಾತನಾಡಲು ಸಹ ಹಿಂಜರಿಯುತ್ತಿದ್ದಾರೆ. ಅಷ್ಟರ ಮಟ್ಟಿಗೆ ಕೊರೊನಾ ಹಾವಳಿ ಮಿತಿ ಮೀರಿದೆ.  ಆದರೆ, ಈ ಮಧ್ಯೆ ಜನರನ್ನು ಸೇರಿಸಿ ಮಾಜಿ ರೌಡಿಶೀಟರ್‌ ಅದ್ಧೂರಿಯಾಗಿ ಹುಟ್ಟುಹಬ್ಬ ಆಚರಣೆ ಮಾಡಿಕೊಂಡಿರುವ ಘಟನೆ ಬಾಗಲಗುಂಟೆ ಬಳಿಯಿರುವ ಮಲ್ಲಸಂದ್ರದಲ್ಲಿ ನಡೆದಿದೆ. ಭರ್ಜರಿಯಾಗಿ ಬರ್ತ್​ ಡೇ ಆಚರಿಸಿಕೊಂಡ ಮಾಜಿ ರೌಡಿಶೀಟರ್ ಕಿಟ್ಟಿ ಅಲಿಯಾಸ್ ರೋನಿಗೆ ಆತನ ಪಟಾಲಂ ಮೊದಲು ಕ್ರೇನ್​ ಮೂಲಕ ದೊಡ್ಡ ಹಾರವನ್ನು ಹಾಕಿ ಬಳಿಕ ಅವರ […]

ಸೋಂಕಿನ ಭೀತಿಯ ಮಧ್ಯೆಯೂ ಮಾಜಿ ರೌಡಿಶೀಟರ್‌ ಭರ್ಜರಿ ಬರ್ತ್​ ಡೇ
KUSHAL V
| Edited By: |

Updated on:Jun 25, 2020 | 12:02 PM

Share

ಬೆಂಗಳೂರು: ಕೊರೊನಾ ಸೋಂಕಿನ ಭೀತಿ ಬೆಂಗಳೂರಿಗರನ್ನ ಇನ್ನೂ ಕಾಡುತ್ತಲೇ ಇದೆ. ಜನ ಗುಂಪಿನಲ್ಲಿ ಸೇರಿ ಮಾತನಾಡಲು ಸಹ ಹಿಂಜರಿಯುತ್ತಿದ್ದಾರೆ. ಅಷ್ಟರ ಮಟ್ಟಿಗೆ ಕೊರೊನಾ ಹಾವಳಿ ಮಿತಿ ಮೀರಿದೆ.  ಆದರೆ, ಈ ಮಧ್ಯೆ ಜನರನ್ನು ಸೇರಿಸಿ ಮಾಜಿ ರೌಡಿಶೀಟರ್‌ ಅದ್ಧೂರಿಯಾಗಿ ಹುಟ್ಟುಹಬ್ಬ ಆಚರಣೆ ಮಾಡಿಕೊಂಡಿರುವ ಘಟನೆ ಬಾಗಲಗುಂಟೆ ಬಳಿಯಿರುವ ಮಲ್ಲಸಂದ್ರದಲ್ಲಿ ನಡೆದಿದೆ.

ಭರ್ಜರಿಯಾಗಿ ಬರ್ತ್​ ಡೇ ಆಚರಿಸಿಕೊಂಡ ಮಾಜಿ ರೌಡಿಶೀಟರ್ ಕಿಟ್ಟಿ ಅಲಿಯಾಸ್ ರೋನಿಗೆ ಆತನ ಪಟಾಲಂ ಮೊದಲು ಕ್ರೇನ್​ ಮೂಲಕ ದೊಡ್ಡ ಹಾರವನ್ನು ಹಾಕಿ ಬಳಿಕ ಅವರ ಕೈಯಲ್ಲಿ ಕೇಕ್​ ಕೂಡ ಕತ್ತರಿಸಿದ್ಧಾರೆ.

‘ದಕ್ಷಿಣ ಧ್ರುವದ ಧ್ರುವತಾರೆಯೂ ನೀನೆ!’ ನಮಗೆಂದೆಂದೂ ನಾಯಕ ನೀನೇ. ದಕ್ಷಿಣ ಧ್ರುವದ ಧ್ರುವತಾರೆಯೂ ನೀನೆ. ಅಭಿಮಾನಿ ಬಳಗದ ಹೃದಯವು ನೀನೆ, ಅಂತ್ಯ ಕಾಣದ ಆಗಸ ನೀನೆ ಎಂದು ಕಿಟ್ಟಿಯನ್ನ ಹಾರೈಸಿದ ನೂರಾರು ಅಭಿಮಾನಿಗಳಿಗೆ ಸ್ಥಳೀಯ ರಾಜಕಾರಣಿಗಳು ಕೂಡ ಸಾಥ್​ ನೀಡಿದರು ಎಂದು ತಿಳಿದುಬಂದಿದೆ.

ಮಲ್ಲಸಂದ್ರ ವಾರ್ಡ್​ನಲ್ಲಿ ಎರಡು ಕೊರೊನಾ ಕೇಸ್​ ಪತ್ತೆಯಾಗಿದೆ. ಆದರೂ ಸಾಮಾಜಿಕ ಅಂತರವನ್ನು ಮರೆತು ಜನ ಸೇರಿದ್ದು ನಿಜಕ್ಕೂ ವಿಪರ್ಯಾಸ. ಜೊತೆಗೆ ಕೂಗಳತೆ ದೂರದಲ್ಲಿ ಬಾಗಲಗುಂಟೆ ಠಾಣೆ ಇದ್ರೂ ಪೋಲಿಸರು ಯಾವುದೇ ಕ್ರಮವನ್ನು ಕೈಗೊಂಡಿಲ್ಲ ಎಂದು ಸ್ಥಳೀಯರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಆರು ತಿಂಗಳ ಹಿಂದೆಯಷ್ಟೇ ಕಿಟ್ಟಿಯನ್ನ ರೌಡಿಶೀಟರ್​ ಪಟ್ಟಿಯಿಂದ ಕೈಬಿಡಲಾಗಿತ್ತು ಎಂದು ಪೋಲಿಸರು ಮಾಹಿತಿ ನೀಡಿದ್ದಾರೆ.

Published On - 12:01 pm, Thu, 25 June 20

ಹಿಪೊಪೊಟಮಸ್​ಗಳಿಂದ ತುಂಬಿದ ಹೊಳೆಯಲ್ಲಿ ಹೆದರದೆ ನಿಂತ ಆನೆ
ಹಿಪೊಪೊಟಮಸ್​ಗಳಿಂದ ತುಂಬಿದ ಹೊಳೆಯಲ್ಲಿ ಹೆದರದೆ ನಿಂತ ಆನೆ
ಕೊಲ್ಕತ್ತಾ ಅಗ್ನಿ ದುರಂತದ ಮೃತರ ಕುಟುಂಬಕ್ಕೆ 2 ಲಕ್ಷ ಪರಿಹಾರ ಘೋಷಿಸಿದ ಮೋದಿ
ಕೊಲ್ಕತ್ತಾ ಅಗ್ನಿ ದುರಂತದ ಮೃತರ ಕುಟುಂಬಕ್ಕೆ 2 ಲಕ್ಷ ಪರಿಹಾರ ಘೋಷಿಸಿದ ಮೋದಿ
ಹರ್‌ಪ್ರೀತ್ ಮ್ಯಾಜಿಕಲ್ ಎಸೆತಕ್ಕೆ ರಾಹುಲ್ ಕ್ಲೀನ್ ಬೌಲ್ಡ್
ಹರ್‌ಪ್ರೀತ್ ಮ್ಯಾಜಿಕಲ್ ಎಸೆತಕ್ಕೆ ರಾಹುಲ್ ಕ್ಲೀನ್ ಬೌಲ್ಡ್
ಜೊಕೊವಿಕ್- ಅಲ್ಕರಾಜ್ ನಡುವೆ ಆಸ್ಟ್ರೇಲಿಯನ್ ಓಪನ್‌ ಫೈನಲ್​
ಜೊಕೊವಿಕ್- ಅಲ್ಕರಾಜ್ ನಡುವೆ ಆಸ್ಟ್ರೇಲಿಯನ್ ಓಪನ್‌ ಫೈನಲ್​
ನಟಿ, ಮಾಜಿ ರಾಜ್ಯಸಭಾ ಸದಸ್ಯೆ ಬಿ ಜಯಶ್ರೀಯ ಸತಾಯಿಸಿದ ಅಧಿಕಾರಿಗಳು
ನಟಿ, ಮಾಜಿ ರಾಜ್ಯಸಭಾ ಸದಸ್ಯೆ ಬಿ ಜಯಶ್ರೀಯ ಸತಾಯಿಸಿದ ಅಧಿಕಾರಿಗಳು
ಉದ್ಯಮ ಸಾಮ್ರಾಜ್ಯ ಕಟ್ಟಿದ್ದ ಸಿಜೆ ರಾಯ್ ಆತ್ಮಹತ್ಯೆ,ಕಮಿಷನರ್ ಹೇಳಿದ್ದಿಷ್ಟು
ಉದ್ಯಮ ಸಾಮ್ರಾಜ್ಯ ಕಟ್ಟಿದ್ದ ಸಿಜೆ ರಾಯ್ ಆತ್ಮಹತ್ಯೆ,ಕಮಿಷನರ್ ಹೇಳಿದ್ದಿಷ್ಟು
ದಾರಿ ಬಿಡಿ, ದಾರಿ ಬಿಡಿ.. ತವರಿನಲ್ಲಿ ಸಂಜು ಸ್ಯಾಮ್ಸನ್ ಕಾಲೆಳೆದ ಸೂರ್ಯ
ದಾರಿ ಬಿಡಿ, ದಾರಿ ಬಿಡಿ.. ತವರಿನಲ್ಲಿ ಸಂಜು ಸ್ಯಾಮ್ಸನ್ ಕಾಲೆಳೆದ ಸೂರ್ಯ
ಲಂಚ ಪಡೆಯುವಾಗ ತಗ್ಲಾಕೊಂಡ ಇನ್ಸ್​​ಪೆಕ್ಟರ್​​​​​​​ ಕೂಗಾಡಿ ರಂಪಾಟ!
ಲಂಚ ಪಡೆಯುವಾಗ ತಗ್ಲಾಕೊಂಡ ಇನ್ಸ್​​ಪೆಕ್ಟರ್​​​​​​​ ಕೂಗಾಡಿ ರಂಪಾಟ!
ವಿರೋಧದ ನಡುವೆ ಮುಸ್ಲಿಂ ಹುಡ್ಗನ ಮದ್ವೆಯಾಗಿ ಬೀದಿಗೆ ಬಿದ್ದ ಯುವತಿ
ವಿರೋಧದ ನಡುವೆ ಮುಸ್ಲಿಂ ಹುಡ್ಗನ ಮದ್ವೆಯಾಗಿ ಬೀದಿಗೆ ಬಿದ್ದ ಯುವತಿ
ಎಲ್ಲೆಂದರಲ್ಲಿ ಕಸ ಬಿಸಾಡಿದ್ರೇ ಇದೇ ಶಾಸ್ತಿ: ಆಗಿದ್ದೇನು? ವಿಡಿಯೋ ನೋಡಿ
ಎಲ್ಲೆಂದರಲ್ಲಿ ಕಸ ಬಿಸಾಡಿದ್ರೇ ಇದೇ ಶಾಸ್ತಿ: ಆಗಿದ್ದೇನು? ವಿಡಿಯೋ ನೋಡಿ