AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಪೊಲೀಸರ ಎದುರಲ್ಲೇ ಕೈಗೆ ಕೋಳ ಹಾಕಿದ್ದಾಗಲೇ ಸಿಗರೇಟ್ ಸೇದಿದ ರೌಡಿಶೀಟರ್, ರೀಲ್ಸ್ ವೈರಲ್

ಈ ಹಿಂದೆ ಕೊಲೆಯತ್ನ ಕೇಸ್​ನಲ್ಲಿ ತಾಕತ್ ಇದ್ರೆ ಹಿಡಿಯಿರಿ ಎಂದು ಅವಾಜ್ ವಾಕಿ ವಿಡಿಯೋ ಮಾಡಿದ್ದ ಸ್ಟಾರ್ ರಾಹುಲ್ ಮತ್ತೊಂದು ರೀಲ್ಸ್ ಮಾಡಿದ್ದಾನೆ. ನ್ಯಾಯಾಲಯಕ್ಕೆ ಪೊಲೀಸರು ಹಾಜರು ಪಡೆಸಿ ಹೊರ ಕರೆತರುವಾಗಲೂ ಸಹ Instagram ರೀಲ್ಸ್ ಮಾಡಿದ್ದಾನೆ.

ಪೊಲೀಸರ ಎದುರಲ್ಲೇ ಕೈಗೆ ಕೋಳ ಹಾಕಿದ್ದಾಗಲೇ ಸಿಗರೇಟ್ ಸೇದಿದ ರೌಡಿಶೀಟರ್, ರೀಲ್ಸ್ ವೈರಲ್
ರೌಡಿಶೀಟರ್ ರಾಹುಲ್ ಅಲಿಯಾಸ್ ಸ್ಟಾರ್ ರಾಹುಲ್
ಪ್ರಜ್ವಲ್​ ಕುಮಾರ್ ಎನ್​ ವೈ
| Edited By: |

Updated on:Oct 20, 2023 | 10:05 AM

Share

ಬೆಂಗಳೂರು, ಅ.20:‘ಪೊಲೀಸರು ನನ್ನನ್ನು ಬಂಧಿಸಲು ಸಾಧ್ಯವಿಲ್ಲ’ ಎಂದು ವಿಡಿಯೋ ಮಾಡಿ ಹುಡುಗರಿಗೆ ಸ್ಟಾರ್ ಆಗಿದ್ದ ಸಿದ್ದಾಪುರ ರೌಡಿಶೀಟರ್ ರಾಹುಲ್ ಅಲಿಯಾಸ್ ಸ್ಟಾರ್ ರಾಹುಲ್ (Rowdy Sheeter Rahul) ಈಗ ಮತ್ತೊಂದು ರೀಲ್ಸ್ ಮಾಡಿ ಸುದ್ದಿಯಾಗಿದ್ದಾನೆ. ಪೊಲೀಸರ ಎದುರಲ್ಲೆ ಕೈಗೆ ಕೋಳ ಹಾಕಿದ್ದಾಗಲೇ ಸಿಗರೇಟ್ ಸೇದಿ ರೀಲ್ಸ್ ಮಾಡಿದ್ದಾನೆ. ಇದನ್ನು ಕಂಡ ಸಹಚರರು ಹೆಂಗೆ ನಮ್ಮಣ್ಣ ಎಂದು ಮೆರೆಯುತ್ತಿದ್ದಾರೆ.

ಈ ಹಿಂದೆ ಕೊಲೆಯತ್ನ ಕೇಸ್​ನಲ್ಲಿ ತಾಕತ್ ಇದ್ರೆ ಹಿಡಿಯಿರಿ ಎಂದು ಅವಾಜ್ ವಾಕಿ ವಿಡಿಯೋ ಮಾಡಿದ್ದ ಸ್ಟಾರ್ ರಾಹುಲ್ ಮತ್ತೊಂದು ರೀಲ್ಸ್ ಮಾಡಿದ್ದಾನೆ. ನ್ಯಾಯಾಲಯಕ್ಕೆ ಪೊಲೀಸರು ಹಾಜರು ಪಡೆಸಿ ಹೊರ ಕರೆತರುವಾಗಲೂ ಸಹ Instagram ರೀಲ್ಸ್ ಮಾಡಿದ್ದಾನೆ. ಪೊಲೀಸರ ಎದುರಲ್ಲೇ ಸಿಗರೇಟ್ ಸೇದಿ ವಿಡಿಯೋ ಮಾಡಿಸಿ ನಾನ್ ಕಸ್ಟಡಿಯಲ್ಲಿದ್ದರೂ ರಾಜನೇ, ಪೊಲೀಸರು ನನಗೇನು ಮಾಡಲಾರರು ಎಂಬ ಸಂದೇಶ ರವಾನಿಸಿದ್ದಾನೆ. ಸದ್ಯ ನಗರದಲ್ಲಿ ಸಾರ್ವಜನಿಕ ಪ್ರದೇಶದಲ್ಲಿ ಧೂಮಪಾನ ಮಾಡಿದವರಿಗೆ ಕೇಸ್ ದಾಖಲು ಮಾಡಲಾಗಿದೆ.

ಇದನ್ನೂ ಓದಿ: ಮಂಡ್ಯ: ಪಿತೃಪಕ್ಷ ಹಬ್ಬ ಮಾಡಲು ಊರಿಗೆ ಬಂದಿದ್ದ ಹೆಂಡತಿ, ಮಗನಿಂದಲೇ ಹತ್ಯೆಗೀಡಾದ ವ್ಯಕ್ತಿ; ಇಲ್ಲಿದೆ ವಿವರ

ಕುಳ್ಳು ರಿಜ್ವಾನ್ ಅತ್ಯಾಪ್ತ ಸಹಚರರಲ್ಲಿ ಒಬ್ಬನಾಗಿದ್ದ ಸ್ಟಾರ್ ರಾಹುಲ್ ಮೇಲೆ ನಗರದ ವಿವಿಧ ಪೊಲೀಸ್ ಠಾಣೆಗಳಲ್ಲಿ 960 ಕ್ಕೂ ಹೆಚ್ಚು ದೂರುಗಳು ದಾಖಲಾಗಿವೆ. ಇನ್ಸ್ಟಾಗ್ರಾಂ ವಿಡಿಯೋ ಮಾಡಿದ್ದ ಸ್ಟಾರ್ ರಾಹುಲ್ ಸಿಸಿಬಿ ಹಾಗೂ ಬೆಂಗಳೂರು ಸೌತ್ ಪೊಲೀಸ್ರು ಪೂರ್ತಿ ಹುಡುಕುತ್ತಿದ್ದಾರೆ ಆದ್ರೂ ನಾನು ಸಿಗಲ್ಲ ಎಂದಿದ್ದ.

ಜೊತೆಗೆ ಇನ್ನೊಬ್ಬ ರೌಡಿಶೀಟರ್ ಸೈಕಲ್ ರವಿ ಅಪ್ತ ಬೇಕರಿ ರಘು ಹತ್ಯೆಗೆ ಯತ್ನಿಸಿರುವುದಾಗಿಯೂ ವಿಡಿಯೋದಲ್ಲಿ ಹೇಳಿ ಪೊಲೀಸ್ರನ್ನ ಅವಾಚ್ಯ ಶಬ್ದಗಳಿಂದ ನಿಂದಿಸಿದ್ದ. ಈ ಹಿನ್ನಲೆ ಪೊಲೀಸರು ಆರೋಪಿಗಾಗಿ ತೀವ್ರ ಹುಡುಕಾಟ ನಡೆಸುತ್ತಿದ್ದರು. ಈತನ ಮೇಲೆ ಕೊಲೆಯತ್ನ, ಸುಲಿಗೆ, ಡಕಾಯಿತಿ ಸೇರಿದಂತೆ ಅನೇಕ ಪ್ರಕರಣಗಳಿವೆ. ಇನ್ನು ಕಳೆದ ವರ್ಷ ಗಾಂಜಾ ಕೇಸ್ ಸಂಬಂಧ ರೌಡಿಶೀಟರ್ ರಾಹುಲ್ ಕಾಲಿಗೆ ಗುಂಡು‌ ಹಾರಿಸಿ ಬಂಧಿಸಿದ್ದರು.

ಅಪರಾಧ ಸುದ್ದಿಗಳನ್ನು ಓದಲು ಇದರ ಮೇಲೆ ಕ್ಲಿಕ್ ಮಾಡಿ

Published On - 10:05 am, Fri, 20 October 23

Follow Us
ಬಹ್ರೇನ್​​ನ ಗಗನಚುಂಬಿ ಕಟ್ಟಡಗಳ ಮೇಲೆ ಇರಾನ್ ದಾಳಿ
ಬಹ್ರೇನ್​​ನ ಗಗನಚುಂಬಿ ಕಟ್ಟಡಗಳ ಮೇಲೆ ಇರಾನ್ ದಾಳಿ
ಸಚಿವ ಮಂಕಾಳು ವೈದ್ಯ ಮಾತಿಗೆ ಸಿಟ್ಟಾಗಿ ಸಭೆಯಿಂದ ಹೊರನಡೆದ ಸತೀಶ್ ಸೈಲ್
ಸಚಿವ ಮಂಕಾಳು ವೈದ್ಯ ಮಾತಿಗೆ ಸಿಟ್ಟಾಗಿ ಸಭೆಯಿಂದ ಹೊರನಡೆದ ಸತೀಶ್ ಸೈಲ್
ಮಿಸ್ ಆಗಿ ಅಮೆರಿಕದ 3 ಫೈಟರ್​​ ಜೆಟ್​​ಗಳನ್ನು ಹೊಡೆದುರುಳಿಸಿದ ಕುವೈತ್​​
ಮಿಸ್ ಆಗಿ ಅಮೆರಿಕದ 3 ಫೈಟರ್​​ ಜೆಟ್​​ಗಳನ್ನು ಹೊಡೆದುರುಳಿಸಿದ ಕುವೈತ್​​
ಫೋಕ್ಸೋ ಕೇಸ್: ಮಲ್ಲಿಕಾರ್ಜುನ ಮುತ್ಯಾ ಬೆಂಬಲಕ್ಕೆ ನಿಂತ ಭಕ್ತ ಸಮೂಹ
ಫೋಕ್ಸೋ ಕೇಸ್: ಮಲ್ಲಿಕಾರ್ಜುನ ಮುತ್ಯಾ ಬೆಂಬಲಕ್ಕೆ ನಿಂತ ಭಕ್ತ ಸಮೂಹ
ಎಲ್ಲಾ ಸರ್ಕಾರದಲ್ಲೂ ಫೋನ್ ಟ್ಯಾಪಿಂಗ್ ಇತ್ತು, ಈಗಲೂ ಇದೆ: HDK ಸ್ಫೋಟಕ ಮಾತು
ಎಲ್ಲಾ ಸರ್ಕಾರದಲ್ಲೂ ಫೋನ್ ಟ್ಯಾಪಿಂಗ್ ಇತ್ತು, ಈಗಲೂ ಇದೆ: HDK ಸ್ಫೋಟಕ ಮಾತು
ಸ್ವಾಮಿ ವಿವೇಕಾನಂದರ ಕೆನಡಾ ಭೇಟಿಯನ್ನು ಉಲ್ಲೇಖಿಸಿದ ಪ್ರಧಾನಿ ಕಾರ್ನಿ
ಸ್ವಾಮಿ ವಿವೇಕಾನಂದರ ಕೆನಡಾ ಭೇಟಿಯನ್ನು ಉಲ್ಲೇಖಿಸಿದ ಪ್ರಧಾನಿ ಕಾರ್ನಿ
Lunar Eclipse 2026: ಚಂದ್ರ ಗ್ರಹಣ ಯಾರಿಗೆ ಶುಭ ಸುದ್ದಿ ತರುತ್ತೆ?
Lunar Eclipse 2026: ಚಂದ್ರ ಗ್ರಹಣ ಯಾರಿಗೆ ಶುಭ ಸುದ್ದಿ ತರುತ್ತೆ?
ದೆಹಲಿಯಲ್ಲಿ ಪ್ರಧಾನಿ ಮೋದಿಯನ್ನು ಭೇಟಿಯಾದ ಕೆನಡಾ ಪಿಎಂ ಮಾರ್ಕ್ ಕಾರ್ನಿ
ದೆಹಲಿಯಲ್ಲಿ ಪ್ರಧಾನಿ ಮೋದಿಯನ್ನು ಭೇಟಿಯಾದ ಕೆನಡಾ ಪಿಎಂ ಮಾರ್ಕ್ ಕಾರ್ನಿ
ಯುದ್ಧ ಪೀಡಿತ ಪ್ರದೇಶದಲ್ಲಿರೋ ಕನ್ನಡಿಗರ ಬಗ್ಗೆ ಕುಮಾರಸ್ವಾಮಿ ಶಾಕಿಂಗ್ ಹೇಳಿ
ಯುದ್ಧ ಪೀಡಿತ ಪ್ರದೇಶದಲ್ಲಿರೋ ಕನ್ನಡಿಗರ ಬಗ್ಗೆ ಕುಮಾರಸ್ವಾಮಿ ಶಾಕಿಂಗ್ ಹೇಳಿ
ಭಾರತ ಮತ್ತು ಇಲ್ಲಿನ ಜನರ ಪ್ರೀತಿ ಅದ್ಭುತ: ಇರಾನ್ ಮೂಲದ ಪೈಲ್ವಾನ್ ಮಿರ್ಜಾ
ಭಾರತ ಮತ್ತು ಇಲ್ಲಿನ ಜನರ ಪ್ರೀತಿ ಅದ್ಭುತ: ಇರಾನ್ ಮೂಲದ ಪೈಲ್ವಾನ್ ಮಿರ್ಜಾ