AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕುಡಿದ ಮತ್ತಿನಲ್ಲಿ ಪತ್ನಿಯ ನಂಬರ್ ಕೇಳಿದ ಸ್ನೇಹಿತನ ಮೇಲೆ ಹಲ್ಲೆ,‌ ರೌಡಿಶೀಟರ್ ಮನೆಗೆ ದಾಳಿ

ಕುಡಿದ ಮತ್ತಿನಲ್ಲಿ‌ ಆರಂಭವಾದ ಜಗಳ ರೌಡಿಶೀಟರ್​ ಮನೆ ಹಾನಿಗೊಳಿಸುವ ಹಂತಕ್ಕೆ ತಲುಪಿತು. ನಿನ್ನೆ ಪತ್ನಿಯ ನಂಬರ್ ಕೊಡು ಎಂದ ಸ್ನೇಹಿತನಿಗೆ ರೌಡಿಶೀಟರ್ ಹಲ್ಲೆ ನಡೆಸಿದ್ದಾನೆ. ಇದನ್ನು ಪ್ರಶ್ನಿಸಿ ಹಲ್ಲೆಗೊಳಗಾದ ವ್ಯಕ್ತಿ ಮತ್ತು ಸಹಚರರು ರೌಡಿಶೀಟರ್ ಮನೆಗೆ ಹೋಗಿ ಜಗಳ ನಡೆಸಿದ್ದಾರೆ. ಈ ವೇಲೆ ರೌಡಿಶೀಟರ್ ಚಾಕುವಿನಿಂದ ಹಲ್ಲೆ ನಡೆಸಿದಾಗ ರೌಡಿಶೀಟರ್ ಮನೆ ಮೇಲೆ ಗುಂಪು ದಾಳಿ ನಡೆಸಿ ಹಾನಿಗೊಳಿಸಲಾಗಿದೆ.

ಕುಡಿದ ಮತ್ತಿನಲ್ಲಿ ಪತ್ನಿಯ ನಂಬರ್ ಕೇಳಿದ ಸ್ನೇಹಿತನ ಮೇಲೆ ಹಲ್ಲೆ,‌ ರೌಡಿಶೀಟರ್ ಮನೆಗೆ ದಾಳಿ
ಕುಡಿದ ಮತ್ತಿನಲ್ಲಿ ಪತ್ನಿಯ ನಂಬರ್ ಕೇಳಿದ ಸ್ನೇಹಿತನಿಗೆ ಹಲ್ಲೆ ನಡೆಸಿದ ರೌಡಿಶೀಟರ್ ಮನೆ ಮೇಲೆ ದಾಳಿ
ರಾಚಪ್ಪಾಜಿ ನಾಯ್ಕ್
| Edited By: Rakesh Nayak Manchi|

Updated on:Sep 14, 2023 | 9:04 AM

Share

ಬೆಂಗಳೂರು, ಸೆ.14: ಕುಡಿದ ಮತ್ತಿನಲ್ಲಿ‌ ಆರಂಭವಾದ ಜಗಳ ರೌಡಿಶೀಟರ್​ ಮನೆ ಹಾನಿಗೊಳಿಸುವ ಹಂತಕ್ಕೆ ತಲುಪಿದ ಘಟನೆ ನಗರದ (Bengaluru) ಚಂದ್ರಾಲೇಔಟ್ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. ನಿನ್ನೆ ಪತ್ನಿಯ ನಂಬರ್ ಕೊಡು ಎಂದ ಸ್ನೇಹಿತನಿಗೆ ರೌಡಿಶೀಟರ್ ಹಲ್ಲೆ ನಡೆಸಿದ್ದಾನೆ. ಇದನ್ನು ಪ್ರಶ್ನಿಸಿ ಹಲ್ಲೆಗೊಳಗಾದ ವ್ಯಕ್ತಿ ಮತ್ತು ಸಹಚರರು ರೌಡಿಶೀಟರ್ ಮನೆಗೆ ಹೋಗಿ ಜಗಳ ನಡೆಸಿದ್ದಾರೆ. ಈ ವೇಲೆ ರೌಡಿಶೀಟರ್ ಚಾಕುವಿನಿಂದ ಹಲ್ಲೆ ನಡೆಸಿದಾಗ ರೌಡಿಶೀಟರ್ ಮನೆ ಮೇಲೆ ಗುಂಪು ದಾಳಿ ನಡೆಸಿ ಹಾನಿಗೊಳಿಸಲಾಗಿದೆ.

ರಮೇಶ್ ಮತ್ತು ರೌಡಿಶೀಟರ್ ಕೆಂಪೇಗೌಡ ಅಲಿಯಾಸ್ ಕೆಂಪ ಸ್ನೇಹಿತರು. ಅದರಂತೆ, ಬಾರ್​ಗೆ ಹೋಗಿದ್ದ ಇಬ್ಬರು ಮದ್ಯ ಸೇವನೆ ಮಾಡಿದ್ದಾರೆ. ಈ ವೇಳೆ ಕುಡಿದ ನಶೆಯಲ್ಲಿದ್ದ ರಮೇಶ್, ನಿನ್ನ ಪತ್ನಿಯ ನಂಬರ್ ಕೊಡು ಎಂದು ಕೆಂಪನಿಗೆ ಹೇಳಿದ್ದಾನೆ. ಇದರಿಂದ ಕೋಪಗೊಂಡ ಕೆಂಪ ರಸ್ತೆಯಲ್ಲೇ ಹಿಗ್ಗಾಮುಗ್ಗಾ ಥಳಿಸಿ ಮನೆಗೆ ಹೋಗಿದ್ದಾನೆ.

ಇದನ್ನೂ ಓದಿ: ಬೆಂಗಳೂರು: ಬಯಸದೇ ಬಂದ ಭಾಗ್ಯ, ಹತ್ತೇ ಸೆಕೆಂಡ್​ನಲ್ಲಿ ಲಕ್ಷಾಧಿಪತಿಯಾದ ಯುವಕ ಈಗ ಪೊಲೀಸರ ಕೈಗೆ ಸಿಕ್ಕ

ಹಲ್ಲೆಯಿಂದ ಕೆಂಪನ ಮೇಲೆ ರಮೇಶ್ ದ್ವೇಷಕ್ಕೆ ಬಿದ್ದಿದ್ದಾನೆ. ಅದರಂತೆ ತನ್ನ ಸಹಚರರಾದ ಮಂಜುನಾಥ್, ಜವರೇಗೌಡ, ಕೃಷ್ಣಮೂರ್ತಿ ಸೇರಿದಂತೆ 10ಕ್ಕೂ ಹೆಚ್ಚು ಮಂದಿಯೊಂದಿಗೆ ಹೊಯ್ಸಳ ನಗರದಲ್ಲಿರುವ ಕೆಂಪನ ಮನೆಗೆ ಹೋದ ರಮೇಶ್ ಕೆಂಪನನ್ನು ಪ್ರಶ್ನಿಸಿದ್ದಾನೆ. ಈ ವೇಳೆ ಜಗಳ ನಡೆದಿದ್ದು, ರಮೇಶ್ ಮತ್ತಿತರರ ಮೇಲೆ ಕೆಂಪ ಚಾಕುವಿನಿಂದ ಇರಿದಿದ್ದಾನೆ.

ಇದೇ ವೇಳೆ ರಮೇಶ್ ಮತ್ತು ಸಹಚರರು ಕೆಂಪನ ಮನೆ ಮೇಲೆ ಕಲ್ಲು ತೂರಾಟ ನಡೆಸಿದ್ದು, ಕಿಟಕಿ ಗಾಜುಗಳು ಪುಡಿ‌ ಮಾಡಿ, ಮನೆ ಬಾಗಿಲು ಮುರಿದು ಹಾಕಿದ್ದಾರೆ. ಘಟನೆ ಸಂಬಂಧ ಚಂದ್ರಾಲೇಔಟ್ ಠಾಣಾ ಪೊಲೀಸರು ಕೆಂಪನನ್ನು ಬಂಧಿಸಿದ್ದಾರೆ.

ಮತ್ತಷ್ಟು ಕ್ರೈಂ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 9:04 am, Thu, 14 September 23

Follow Us
ಪದ್ಮಶ್ರೀ ಪ್ರಶಸ್ತಿ ಸ್ವೀಕರಿಸಿದ ಧುರಂಧರ್ ನಟ ಆರ್. ಮಾಧವನ್: ವಿಡಿಯೋ ನೋಡಿ
ಪದ್ಮಶ್ರೀ ಪ್ರಶಸ್ತಿ ಸ್ವೀಕರಿಸಿದ ಧುರಂಧರ್ ನಟ ಆರ್. ಮಾಧವನ್: ವಿಡಿಯೋ ನೋಡಿ
ಮೃತರ ಕುಟುಂಬಕ್ಕೆ ನ್ಯಾಯ ಕೊಡಿಸಲು ಬದ್ಧ ಎಂದ ಶಾಸಕ ಪುಟ್ಟರಂಗಶೆಟ್ಟಿ
ಮೃತರ ಕುಟುಂಬಕ್ಕೆ ನ್ಯಾಯ ಕೊಡಿಸಲು ಬದ್ಧ ಎಂದ ಶಾಸಕ ಪುಟ್ಟರಂಗಶೆಟ್ಟಿ
ನವಿಲುಗರಿ ಧರಿಸಿ ನಿವೇದಿತಾ ಗೌಡ, ಕಿಶನ್ ರೀಲ್ಸ್: ವಿವಾದಕ್ಕೆ ಕಾರಣ ಏನು?
ನವಿಲುಗರಿ ಧರಿಸಿ ನಿವೇದಿತಾ ಗೌಡ, ಕಿಶನ್ ರೀಲ್ಸ್: ವಿವಾದಕ್ಕೆ ಕಾರಣ ಏನು?
‘ಆ ದಿನಗಳು’ ಸಿನಿಮಾ ನೆನೆದ ನಿರ್ದೇಶಕ ಕೆಎಂ ಚೈತನ್ಯ: ವಿಡಿಯೋ
‘ಆ ದಿನಗಳು’ ಸಿನಿಮಾ ನೆನೆದ ನಿರ್ದೇಶಕ ಕೆಎಂ ಚೈತನ್ಯ: ವಿಡಿಯೋ
ವಿನೋದ್ ಪ್ರಭಾಕರ್​​ಗೆ ಆಗಿದ್ದೇನು: ಮಾಹಿತಿ ನೀಡಿದ ಸಹ ನಟ ವಿಜಯ್ ಗೌಡ
ವಿನೋದ್ ಪ್ರಭಾಕರ್​​ಗೆ ಆಗಿದ್ದೇನು: ಮಾಹಿತಿ ನೀಡಿದ ಸಹ ನಟ ವಿಜಯ್ ಗೌಡ
ಮುಸ್ಲಿಂ ಸಮುದಾಯದ ಮತ್ತಿಬ್ಬರಿಗೆ ಸಚಿವ ಸ್ಥಾನ ನೀಡುವ ಬಗ್ಗೆ ಚರ್ಚೆ
ಮುಸ್ಲಿಂ ಸಮುದಾಯದ ಮತ್ತಿಬ್ಬರಿಗೆ ಸಚಿವ ಸ್ಥಾನ ನೀಡುವ ಬಗ್ಗೆ ಚರ್ಚೆ
ಅಡ್ಡಮತದಾನ ಮಾಡಿದವರಿಗೆ ತಕ್ಕ ಶಾಸ್ತಿ: ಹೈಕಮಾಂಡ್ ಗುಟ್ಟು ಬಿಚ್ಚಿಟ್ಟ ಅಶೋಕ್
ಅಡ್ಡಮತದಾನ ಮಾಡಿದವರಿಗೆ ತಕ್ಕ ಶಾಸ್ತಿ: ಹೈಕಮಾಂಡ್ ಗುಟ್ಟು ಬಿಚ್ಚಿಟ್ಟ ಅಶೋಕ್
ಪೋರ್ಟರ್, ರ‍್ಯಾಪಿಡೋ ಆ್ಯಪ್​​ಗಳ ವಿರುದ್ಧ ಬೀದಿಗಿಳಿದ ಗೂಡ್ಸ್ ವಾಹನ ಚಾಲಕರು
ಪೋರ್ಟರ್, ರ‍್ಯಾಪಿಡೋ ಆ್ಯಪ್​​ಗಳ ವಿರುದ್ಧ ಬೀದಿಗಿಳಿದ ಗೂಡ್ಸ್ ವಾಹನ ಚಾಲಕರು
ಯುಎಇ ದೇಶಕ್ಕೆ ರಫ್ತಾಗಲಿವೆ ಬ್ರಹ್ಮೋಸ್, ಆಕಾಶ್ ಕ್ಷಿಪಣಿಗಳು!
ಯುಎಇ ದೇಶಕ್ಕೆ ರಫ್ತಾಗಲಿವೆ ಬ್ರಹ್ಮೋಸ್, ಆಕಾಶ್ ಕ್ಷಿಪಣಿಗಳು!
ಬೆಂಗಳೂರು ರಸ್ತೆ ಅಭಿವೃದ್ಧಿ ಅನುದಾನದ ಬಗ್ಗೆ ತೇಜಸ್ವಿ ಸೂರ್ಯ ವಾಗ್ದಾಳಿ
ಬೆಂಗಳೂರು ರಸ್ತೆ ಅಭಿವೃದ್ಧಿ ಅನುದಾನದ ಬಗ್ಗೆ ತೇಜಸ್ವಿ ಸೂರ್ಯ ವಾಗ್ದಾಳಿ