AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಇನ್ಮುಂದೆ ರೌಡಿಶೀಟರ್​ಗಳನ್ನು ಬೇಕಾಬಿಟ್ಟಿ ಠಾಣೆಗೆ ಕರೆಸುವಂತ್ತಿಲ್ಲ: ಪ್ರಕ್ರಿಯೆ ನಿಗದಿಪಡಿಸಿದ ಹೈಕೋರ್ಟ್

ಚುನಾವಣೆ, ಹಬ್ಬ ಹರಿ ದಿನಗಳಂದು ಸೇರಿ ಕೆಲ ಸಂದರ್ಭದಲ್ಲಿ ಮೌಖಿಕವಾಗಿ ಠಾಣೆಗೆ ರೌಡಿಶೀಟರ್​ಗಳನ್ನು ಕರೆಸಿ ಪೊಲೀಸರು ಎಚ್ಚರಿಕೆ ನೀಡುತ್ತಿದ್ದರು. ಸದ್ಯ ಈ ವಿಧಾನಕ್ಕೆ ಬ್ರೇಕ್​​ ಬೀಳಲಿದೆ. ರೌಡಿಶೀಟರ್​ಗಳನ್ನು ಪೊಲೀಸ್ ಠಾಣೆಗೆ ಕರೆಸುವುದಕ್ಕೆ ಪ್ರಕ್ರಿಯೆ ನಿಗದಿ ಪಡಿಸಿ ನ್ಯಾಯಮೂರ್ತಿ ಆರ್.ನಟರಾಜ್ ಅವರಿದ್ದ ಹೈಕೋರ್ಟ್ ಪೀಠ ಆದೇಶ ಹೊರಡಿಸಿದೆ.

ಇನ್ಮುಂದೆ ರೌಡಿಶೀಟರ್​ಗಳನ್ನು ಬೇಕಾಬಿಟ್ಟಿ ಠಾಣೆಗೆ ಕರೆಸುವಂತ್ತಿಲ್ಲ: ಪ್ರಕ್ರಿಯೆ ನಿಗದಿಪಡಿಸಿದ ಹೈಕೋರ್ಟ್
ಹೈಕೋರ್ಟ್
Ramesha M
| Edited By: |

Updated on:Dec 10, 2025 | 9:31 PM

Share

ಬೆಂಗಳೂರು, ಡಿಸೆಂಬರ್​ 10: ಇನ್ಮುಂದೆ ರೌಡಿಶೀಟರ್​ಗಳನ್ನು (Rowdysheeter) ಪೊಲೀಸ್ ಠಾಣೆಗೆ ಕರೆಸುವುದಕ್ಕೆ ಪ್ರಕ್ರಿಯೆ ನಿಗದಿ ಮಾಡಲಾಗಿದೆ. ಎಸ್‌ಎಂಎಸ್ ಅಥವಾ ವಾಟ್ಸಾಪ್ ಮೂಲಕ ಪೊಲೀಸ್ ಠಾಣೆಗೆ (Police Station) ಕರೆಸಬಹುದು ಎಂದು ನ್ಯಾಯಮೂರ್ತಿ ಆರ್.ನಟರಾಜ್ ಅವರಿದ್ದ ಹೈಕೋರ್ಟ್ ಪೀಠ ಬುಧವಾರ ಆದೇಶ ಹೊರಡಿಸಿದೆ. ಆ ಮೂಲಕ ಮೌಖಿಕವಾಗಿ ಪೊಲೀಸ್ ಠಾಣೆಗೆ ರೌಡಿಶೀಟರ್​ಗಳನ್ನು ಕರೆಸುವುದಕ್ಕೆ ಬ್ರೇಕ್​ ಬಿದ್ದಂತಾಗಿದೆ.

ಹೈಕೋರ್ಟ್ ಮೆಟ್ಟಿಲೇರಿದ್ದ ರೌಡಿಶೀಟರ್ ಸೈಲೆಂಟ್ ಸುನೀಲ್

ಅಲೋಕ್ ಕುಮಾರ್ ಹೆಚ್ಚುವರಿ ಆಯುಕ್ತರಾಗಿದ್ದಾಗ ರೌಡಿಶೀಟರ್ ಸುನೀಲ್ ಕುಮಾರ್ ಅಲಿಯಾಸ್​ ಸೈಲೆಂಟ್ ಸುನೀಲ್​​ ಕರೆಸಿ ಎಚ್ಚರಿಸಿದ್ದರು. ಅಲೋಕ್ ಕುಮಾರ್ ವಾರ್ನಿಂಗ್​ ನೀಡುತ್ತಿದ್ದ ದೃಶ್ಯ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿತ್ತು. ಹೀಗಾಗಿ ಸೈಲೆಂಟ್ ಸುನೀಲ್ ಹೈಕೋರ್ಟ್ ಮೆಟ್ಟಿಲೇರಿದ್ದರು. ಇದೀಗ ಸುನೀಲ್ ಕುಮಾರ್ ರಿಟ್ ಅರ್ಜಿ ಸಂಬಂಧ ಆದೇಶ ಹೊರಡಿಸಲಾಗಿದೆ.

ಇದನ್ನೂ ಓದಿ: ಕೊನೆಗೂ ಅಲೋಕ್ ಕುಮಾರ್​​ಗೆ ಸಿಕ್ತು ಮುಂಬಡ್ತಿ: ಸರ್ಕಾರದ ವಿರುದ್ಧ ತೊಡೆತಟ್ಟಿ ಗೆದ್ದ IPS

ಎಸ್‌ಎಂಎಸ್ ಅಥವಾ ವಾಟ್ಸಾಪ್ ಮೂಲಕ ಪೊಲೀಸ್ ಠಾಣೆಗೆ ಕರೆಸಬಹುದು. ಠಾಣೆಗಳಿಗೆ ರೌಡಿಶೀಟರ್​ಗಳು ತಮ್ಮ ಮೊಬೈಲ್ ನಂಬರ್ ನೀಡಬೇಕು. ಮೌಖಿಕವಾಗಿ ಕರೆಯುವ ಬದಲು SMS, ವಾಟ್ಸಾಪ್ ಸಂದೇಶ ನೀಡಬೇಕು. ಒಂದು ವೇಳೆ ಆಗಲೂ ಠಾಣೆಗೆ ಬರದಿದ್ದರೆ ರೌಡಿಶೀಟರ್ ಮನೆಗೆ ಪೊಲೀಸರು ತೆರಳಬಹುದು ಎಂದು ಪೀಠ ತಿಳಿಸಿದೆ.

ಇದನ್ನೂ ಓದಿ: ಅತ್ಯಾಚಾರ ಪ್ರಕರಣದಲ್ಲಿ ಪ್ರಜ್ವಲ್ ರೇವಣ್ಣಗೆ ಮತ್ತೊಂದು ಶಾಕ್; ಜೀವಿತಾವಧಿ ಸೆರೆವಾಸ ಶಿಕ್ಷೆಗೆ ತಡೆ ನೀಡಲು ಹೈಕೋರ್ಟ್ ನಕಾರ

ಇನ್ನು ಅಪರಾಧ ಚಟುವಟಿಕೆಯಲ್ಲಿ ಭಾಗಿಯಾದರೆ ಈ ಆದೇಶದ ರಕ್ಷಣೆ ಸಿಗುವುದಿಲ್ಲ. ದಂಡಾಧಿಕಾರಿಯ ಅಧಿಕಾರವನ್ನು ಈ ಆದೇಶ ಕುಂಠಿತಗೊಳಿಸುವುದಿಲ್ಲ. ಸರ್ಕಾರ ಕಾನೂನು ರೂಪಿಸುವವರೆಗೆ ಈ ಪ್ರಕ್ರಿಯೆ ಪಾಲಿಸಲು ನ್ಯಾಯಮೂರ್ತಿ ಆರ್.ನಟರಾಜ್ ಅವರಿದ್ದ ಹೈಕೋರ್ಟ್ ಪೀಠ ಸೂಚನೆ ನೀಡಿದೆ.

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Published On - 9:24 pm, Wed, 10 December 25

Follow Us
ವಚನಾನಂದ ಸ್ವಾಮೀಜಿ ಉಚ್ಚಾಟನೆ ಮಠದಲ್ಲಿ ತಳ್ಳಾಟ, ನೂಕಾಟ: ಶ್ರೀಗಳಿಗೆ ಗಾಯ
ವಚನಾನಂದ ಸ್ವಾಮೀಜಿ ಉಚ್ಚಾಟನೆ ಮಠದಲ್ಲಿ ತಳ್ಳಾಟ, ನೂಕಾಟ: ಶ್ರೀಗಳಿಗೆ ಗಾಯ
ಹೇಗಿದೆ ನೋಡಿ ಕುಂದಾಪುರದ ವಂಡ್ಸೆ ಶಾಲೆಯ ರೋಬೋಟ್​​ ಟೀಚರ್​​ ಪಾಠ
ಹೇಗಿದೆ ನೋಡಿ ಕುಂದಾಪುರದ ವಂಡ್ಸೆ ಶಾಲೆಯ ರೋಬೋಟ್​​ ಟೀಚರ್​​ ಪಾಠ
ಪತ್ನಿ ಗರ್ಭಿಣಿಯಾಗುತ್ತಿದ್ದಂತೆ ಪತಿಯ ರಂಗೀನಾಟ: ಹೆರಿಗೆಗೆ ಹೋದಾಗ ಮತ್ತೊಂದು
ಪತ್ನಿ ಗರ್ಭಿಣಿಯಾಗುತ್ತಿದ್ದಂತೆ ಪತಿಯ ರಂಗೀನಾಟ: ಹೆರಿಗೆಗೆ ಹೋದಾಗ ಮತ್ತೊಂದು
ಪಂಚಮಸಾಲಿ ಗುರುಪೀಠದಿಂದ ಉಚ್ಛಾಟನೆ ಮಾಡಿರುವ ಬಗ್ಗೆ ವಚನಾನಂದ ಸ್ವಾಮೀಜಿ ಮಾತು
ಪಂಚಮಸಾಲಿ ಗುರುಪೀಠದಿಂದ ಉಚ್ಛಾಟನೆ ಮಾಡಿರುವ ಬಗ್ಗೆ ವಚನಾನಂದ ಸ್ವಾಮೀಜಿ ಮಾತು
ಪಾದಚಾರಿಗಳ ಮೇಲೆ ಎರಗಿದ ಕಾರು; ಸಿಸಿಟಿವಿಯಲ್ಲಿ ಸೆರೆಯಾಯ್ತು ಭೀಕರ ದೃಶ್ಯ
ಪಾದಚಾರಿಗಳ ಮೇಲೆ ಎರಗಿದ ಕಾರು; ಸಿಸಿಟಿವಿಯಲ್ಲಿ ಸೆರೆಯಾಯ್ತು ಭೀಕರ ದೃಶ್ಯ
ಬಸವಜಯ ಮೃತ್ಯುಂಜಯಶ್ರೀ ಲೈಂಗಿಕ ಕಿರುಕುಳ ಪ್ರಕರಣಕ್ಕೆ ಬಿಗ್​​ ಟ್ವಿಸ್ಟ್
ಬಸವಜಯ ಮೃತ್ಯುಂಜಯಶ್ರೀ ಲೈಂಗಿಕ ಕಿರುಕುಳ ಪ್ರಕರಣಕ್ಕೆ ಬಿಗ್​​ ಟ್ವಿಸ್ಟ್
ಹರಿಹರ ಪಂಚಮಸಾಲಿ ಮಠದ ಮುಂದೆ ಭಕ್ತರ ಗಲಾಟೆ!
ಹರಿಹರ ಪಂಚಮಸಾಲಿ ಮಠದ ಮುಂದೆ ಭಕ್ತರ ಗಲಾಟೆ!
ಅಂಕ ಮುಖ್ಯವಲ್ಲ, ಮಗ ಪಾಸಾಗಿದ್ದೇ ದೊಡ್ಡ ಸಂಭ್ರಮ
ಅಂಕ ಮುಖ್ಯವಲ್ಲ, ಮಗ ಪಾಸಾಗಿದ್ದೇ ದೊಡ್ಡ ಸಂಭ್ರಮ
ನ್ಯೂಸ್ ಪೇಪರ್ ವಿತರಕನ ಮೇಲೆ ಬೀದಿ ನಾಯಿ ದಾಳಿ
ನ್ಯೂಸ್ ಪೇಪರ್ ವಿತರಕನ ಮೇಲೆ ಬೀದಿ ನಾಯಿ ದಾಳಿ
ಚಿಕ್ಕಮಗಳೂರು: ತಮ್ಮದೇ ಹೆಸರಿನ ಸೇತುವೆ ಉದ್ಘಾಟಿಸಿದ ಸಿಎಂ ಸಿದ್ದರಾಮಯ್ಯ
ಚಿಕ್ಕಮಗಳೂರು: ತಮ್ಮದೇ ಹೆಸರಿನ ಸೇತುವೆ ಉದ್ಘಾಟಿಸಿದ ಸಿಎಂ ಸಿದ್ದರಾಮಯ್ಯ