AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಜೈಲಿನಿಂದ ಹೊರ ಬಂದ ಮೂರೇ ದಿನಕ್ಕೆ ರೌಡಿ ಶೀಟರ್ ಹತ್ಯೆ

ಜನರು ಭಾರತ-ಪಾಕಿಸ್ತಾನ ಕ್ರಿಕೆಟ್ ನೋಡುತ್ತಿರುವ ಸಮಯದಲ್ಲಿಯೇ ಈ ಕೊಲೆಯೂ ನಡೆದಿದೆ.

ಜೈಲಿನಿಂದ ಹೊರ ಬಂದ ಮೂರೇ ದಿನಕ್ಕೆ ರೌಡಿ ಶೀಟರ್ ಹತ್ಯೆ
ಪ್ರಾತಿನಿದಿಕ ಚಿತ್ರ
TV9 Web
| Edited By: |

Updated on:Oct 25, 2021 | 6:46 AM

Share

ಬೆಂಗಳೂರು: ಪೀಣ್ಯ ಸಮೀಪದ ನೆಲಗೆದರನಹಳ್ಳಿಯ ಶಿವಪುರದಲ್ಲಿ ಭಾನುವಾರ ರಾತ್ರಿ ರೌಡಿಶೀಟರ್ ಆನಂದ್ ಎಂಬಾತನನ್ನು ದುಷ್ಕರ್ಮಿಗಳು ಕೊಚ್ಚಿ ಕೊಂದಿದ್ದಾರೆ. ಈತ ಬಿಜೆಪಿ ಕಾರ್ಯಕರ್ತನೂ ಆಗಿಗಿದ್ದ. ಹಲವು ದುಷ್ಕೃತ್ಯಗಳಲ್ಲಿ ಭಾಗಿಯಾಗಿದ್ದ ಆರೋಪ ಹೊತ್ತಿದ್ದ ಆನಂದ್ ಜೈಲಿಗೂ ಹೋಗಿದ್ದ. ಇತ್ತೀಚೆಗಷ್ಟೇ ಬಿಡುಗಡೆಯಾಗಿ ಹೊರಗೆ ಬಂದಿದ್ದ.

ಜನರು ಭಾರತ-ಪಾಕಿಸ್ತಾನ ಕ್ರಿಕೆಟ್ ನೋಡುತ್ತಿರುವ ಸಮಯದಲ್ಲಿಯೇ ಈ ಕೊಲೆಯೂ ನಡೆದಿದೆ. ರಾತ್ರಿ 8 ಗಂಟೆ ಸಮಯದಲ್ಲಿ ಮನೆ ಮುಂಭಾಗದ ರಸ್ತೆಯಲ್ಲಿ ವಾಕಿಂಗ್ ಮಾಡುತ್ತಿದ್ದ ವೇಳೆ ಆನಂದ್ ಮೇಲೆ ದಾಳಿ ಮಾಡಿದ ಆರೇಳು ಮಂದಿ ನಡುರಸ್ತೆಯಲ್ಲಿಯೇ ಆನಂದ್​ನನ್ನು ಕೊಂದಿದ್ದಾರೆ.

ಚಿಕ್ಕಂದಿನಿಂದಲೇ ಅಪರಾಧ ಕೃತ್ಯಗಳಲ್ಲಿ ಪಾಲ್ಗೊಳ್ಳುತ್ತಿದ್ದ ಆನಂದ್, 18 ವರ್ಷದವನಿದ್ದಾಗಲೇ ಕೊಲೆ ಪ್ರಕರಣದಲ್ಲಿ ಜೈಲು ಸೇರಿದ್ದ. ಬಿಡುಗಡೆಯಾದ ಬಳಿಕ ಅಂದರೆ, 2016ಲ್ಲಿ ₹ 15 ಲಕ್ಷ ಸುಪಾರಿ ಪಡೆದು ಜೆಡಿಎಸ್ ಮುಖಂಡನೊಬ್ಬನನ್ನು ಕೊಲೆ ಮಾಡಿ ಜೈಲು ಸೇರಿದ್ದ. ಪೀಣ್ಯ ಪೊಲೀಸ್ ಠಾಣೆಯಲ್ಲಿ ಆನಂದ್ ವಿರುದ್ಧ ರೌಡಿಶೀಟರ್ ಸಹ ಓಪನ್ ಆಗಿತ್ತು. ಇತ್ತೀಚಿಗೆ ಅಪಹರಣ ಪ್ರಕರಣವೊಂದರಲ್ಲಿ ಜೈಲು ಸೇರಿದ್ದವನು ಕಳೆದ 1 ತಿಂಗಳ ಹಿಂದೆ ಬಿಡುಗಡೆಯಾಗಿದ್ದ. ಬಿಜೆಪಿಗೆ ಸೇರ್ಪಡೆಯಾಗಿ ಮೂರು ದಿನಗಳ ಹಿಂದಷ್ಟೇ ತನ್ನ ಮನೆಗೆ ಬಂದಿದ್ದ.

ಘಟನಾ ಸ್ಥಳಕ್ಕೆ ಪೀಣ್ಯ ಪೊಲೀಸರು ಭೇಟಿ ನೀಡಿ ಪ್ರಕರಣ ದಾಖಲಿಸಿಕೊಂಡಿದ್ದಾರೆ. ಹಲವು ಅಪರಾಧ ಕೃತ್ಯಗಳಲ್ಲಿ ಪಾಲ್ಗೊಂಡಿದ್ದ ಆನಂದ್ ಜೈಲಿನಿಂದ ಹೊರಗೆ ಬಂದ ತಕ್ಷಣ ಕೊಲೆಯಾಗಿರುವುದು ಈ ಪ್ರದೇಶದಲ್ಲಿ ಆತಂಕಕ್ಕೆ ಕಾರಣವಾಗಿದೆ.

ಇದನ್ನೂ ಓದಿ: ಕುಖ್ಯಾತ ರೌಡಿ ಹೆಬ್ಬೆಟ್ ಮಂಜನ ಹೆಸರಿನಲ್ಲಿ ಬೆದರಿಕೆ! ಪೊಲೀಸರ ಬಲೆಗೆ ಬಿದ್ದ ಭಟ್ಕಳ ಮಹಿಳೆ ಇದನ್ನೂ ಓದಿ: ಬೆಂಗಳೂರಿನಲ್ಲಿ ದರೋಡೆ ಮಾಡುತ್ತಿದ್ದ 2 ರೌಡಿ ಗ್ಯಾಂಗ್ ಅರೆಸ್ಟ್!

Published On - 6:45 am, Mon, 25 October 21

Follow Us
ನವಿಲುಗರಿ ಧರಿಸಿ ನಿವೇದಿತಾ ಗೌಡ, ಕಿಶನ್ ರೀಲ್ಸ್: ವಿವಾದಕ್ಕೆ ಕಾರಣ ಏನು?
ನವಿಲುಗರಿ ಧರಿಸಿ ನಿವೇದಿತಾ ಗೌಡ, ಕಿಶನ್ ರೀಲ್ಸ್: ವಿವಾದಕ್ಕೆ ಕಾರಣ ಏನು?
‘ಆ ದಿನಗಳು’ ಸಿನಿಮಾ ನೆನೆದ ನಿರ್ದೇಶಕ ಕೆಎಂ ಚೈತನ್ಯ: ವಿಡಿಯೋ
‘ಆ ದಿನಗಳು’ ಸಿನಿಮಾ ನೆನೆದ ನಿರ್ದೇಶಕ ಕೆಎಂ ಚೈತನ್ಯ: ವಿಡಿಯೋ
ವಿನೋದ್ ಪ್ರಭಾಕರ್​​ಗೆ ಆಗಿದ್ದೇನು: ಮಾಹಿತಿ ನೀಡಿದ ಸಹ ನಟ ವಿಜಯ್ ಗೌಡ
ವಿನೋದ್ ಪ್ರಭಾಕರ್​​ಗೆ ಆಗಿದ್ದೇನು: ಮಾಹಿತಿ ನೀಡಿದ ಸಹ ನಟ ವಿಜಯ್ ಗೌಡ
ಮುಸ್ಲಿಂ ಸಮುದಾಯದ ಮತ್ತಿಬ್ಬರಿಗೆ ಸಚಿವ ಸ್ಥಾನ ನೀಡುವ ಬಗ್ಗೆ ಚರ್ಚೆ
ಮುಸ್ಲಿಂ ಸಮುದಾಯದ ಮತ್ತಿಬ್ಬರಿಗೆ ಸಚಿವ ಸ್ಥಾನ ನೀಡುವ ಬಗ್ಗೆ ಚರ್ಚೆ
ಅಡ್ಡಮತದಾನ ಮಾಡಿದವರಿಗೆ ತಕ್ಕ ಶಾಸ್ತಿ: ಹೈಕಮಾಂಡ್ ಗುಟ್ಟು ಬಿಚ್ಚಿಟ್ಟ ಅಶೋಕ್
ಅಡ್ಡಮತದಾನ ಮಾಡಿದವರಿಗೆ ತಕ್ಕ ಶಾಸ್ತಿ: ಹೈಕಮಾಂಡ್ ಗುಟ್ಟು ಬಿಚ್ಚಿಟ್ಟ ಅಶೋಕ್
ಪೋರ್ಟರ್, ರ‍್ಯಾಪಿಡೋ ಆ್ಯಪ್​​ಗಳ ವಿರುದ್ಧ ಬೀದಿಗಿಳಿದ ಗೂಡ್ಸ್ ವಾಹನ ಚಾಲಕರು
ಪೋರ್ಟರ್, ರ‍್ಯಾಪಿಡೋ ಆ್ಯಪ್​​ಗಳ ವಿರುದ್ಧ ಬೀದಿಗಿಳಿದ ಗೂಡ್ಸ್ ವಾಹನ ಚಾಲಕರು
ಯುಎಇ ದೇಶಕ್ಕೆ ರಫ್ತಾಗಲಿವೆ ಬ್ರಹ್ಮೋಸ್, ಆಕಾಶ್ ಕ್ಷಿಪಣಿಗಳು!
ಯುಎಇ ದೇಶಕ್ಕೆ ರಫ್ತಾಗಲಿವೆ ಬ್ರಹ್ಮೋಸ್, ಆಕಾಶ್ ಕ್ಷಿಪಣಿಗಳು!
ಬೆಂಗಳೂರು ರಸ್ತೆ ಅಭಿವೃದ್ಧಿ ಅನುದಾನದ ಬಗ್ಗೆ ತೇಜಸ್ವಿ ಸೂರ್ಯ ವಾಗ್ದಾಳಿ
ಬೆಂಗಳೂರು ರಸ್ತೆ ಅಭಿವೃದ್ಧಿ ಅನುದಾನದ ಬಗ್ಗೆ ತೇಜಸ್ವಿ ಸೂರ್ಯ ವಾಗ್ದಾಳಿ
ಮುಮ್ಮಡಿ ನಿರ್ವಾಣ ಸ್ವಾಮೀಜಿ ಅಂತಿಮ ದರ್ಶನದ ವೇಳೆ ಸಿಎಂ ಡಿಕೆಶಿ ಭಾವುಕ
ಮುಮ್ಮಡಿ ನಿರ್ವಾಣ ಸ್ವಾಮೀಜಿ ಅಂತಿಮ ದರ್ಶನದ ವೇಳೆ ಸಿಎಂ ಡಿಕೆಶಿ ಭಾವುಕ
ಧರ್ಮಸ್ಥಳದಲ್ಲಿ ಶಾಸಕರ ಆಣೆ ಪ್ರಮಾಣ ನಿರ್ಧಾರದಿಂದ ಹಿಂದೆ ಸರಿದ ಬಿಜೆಪಿ
ಧರ್ಮಸ್ಥಳದಲ್ಲಿ ಶಾಸಕರ ಆಣೆ ಪ್ರಮಾಣ ನಿರ್ಧಾರದಿಂದ ಹಿಂದೆ ಸರಿದ ಬಿಜೆಪಿ