AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಜೈಲಿನಿಂದ ಹೊರ ಬಂದ ಮೂರೇ ದಿನಕ್ಕೆ ರೌಡಿ ಶೀಟರ್ ಹತ್ಯೆ

ಜನರು ಭಾರತ-ಪಾಕಿಸ್ತಾನ ಕ್ರಿಕೆಟ್ ನೋಡುತ್ತಿರುವ ಸಮಯದಲ್ಲಿಯೇ ಈ ಕೊಲೆಯೂ ನಡೆದಿದೆ.

ಜೈಲಿನಿಂದ ಹೊರ ಬಂದ ಮೂರೇ ದಿನಕ್ಕೆ ರೌಡಿ ಶೀಟರ್ ಹತ್ಯೆ
ಪ್ರಾತಿನಿದಿಕ ಚಿತ್ರ
TV9 Web
| Edited By: |

Updated on:Oct 25, 2021 | 6:46 AM

Share

ಬೆಂಗಳೂರು: ಪೀಣ್ಯ ಸಮೀಪದ ನೆಲಗೆದರನಹಳ್ಳಿಯ ಶಿವಪುರದಲ್ಲಿ ಭಾನುವಾರ ರಾತ್ರಿ ರೌಡಿಶೀಟರ್ ಆನಂದ್ ಎಂಬಾತನನ್ನು ದುಷ್ಕರ್ಮಿಗಳು ಕೊಚ್ಚಿ ಕೊಂದಿದ್ದಾರೆ. ಈತ ಬಿಜೆಪಿ ಕಾರ್ಯಕರ್ತನೂ ಆಗಿಗಿದ್ದ. ಹಲವು ದುಷ್ಕೃತ್ಯಗಳಲ್ಲಿ ಭಾಗಿಯಾಗಿದ್ದ ಆರೋಪ ಹೊತ್ತಿದ್ದ ಆನಂದ್ ಜೈಲಿಗೂ ಹೋಗಿದ್ದ. ಇತ್ತೀಚೆಗಷ್ಟೇ ಬಿಡುಗಡೆಯಾಗಿ ಹೊರಗೆ ಬಂದಿದ್ದ.

ಜನರು ಭಾರತ-ಪಾಕಿಸ್ತಾನ ಕ್ರಿಕೆಟ್ ನೋಡುತ್ತಿರುವ ಸಮಯದಲ್ಲಿಯೇ ಈ ಕೊಲೆಯೂ ನಡೆದಿದೆ. ರಾತ್ರಿ 8 ಗಂಟೆ ಸಮಯದಲ್ಲಿ ಮನೆ ಮುಂಭಾಗದ ರಸ್ತೆಯಲ್ಲಿ ವಾಕಿಂಗ್ ಮಾಡುತ್ತಿದ್ದ ವೇಳೆ ಆನಂದ್ ಮೇಲೆ ದಾಳಿ ಮಾಡಿದ ಆರೇಳು ಮಂದಿ ನಡುರಸ್ತೆಯಲ್ಲಿಯೇ ಆನಂದ್​ನನ್ನು ಕೊಂದಿದ್ದಾರೆ.

ಚಿಕ್ಕಂದಿನಿಂದಲೇ ಅಪರಾಧ ಕೃತ್ಯಗಳಲ್ಲಿ ಪಾಲ್ಗೊಳ್ಳುತ್ತಿದ್ದ ಆನಂದ್, 18 ವರ್ಷದವನಿದ್ದಾಗಲೇ ಕೊಲೆ ಪ್ರಕರಣದಲ್ಲಿ ಜೈಲು ಸೇರಿದ್ದ. ಬಿಡುಗಡೆಯಾದ ಬಳಿಕ ಅಂದರೆ, 2016ಲ್ಲಿ ₹ 15 ಲಕ್ಷ ಸುಪಾರಿ ಪಡೆದು ಜೆಡಿಎಸ್ ಮುಖಂಡನೊಬ್ಬನನ್ನು ಕೊಲೆ ಮಾಡಿ ಜೈಲು ಸೇರಿದ್ದ. ಪೀಣ್ಯ ಪೊಲೀಸ್ ಠಾಣೆಯಲ್ಲಿ ಆನಂದ್ ವಿರುದ್ಧ ರೌಡಿಶೀಟರ್ ಸಹ ಓಪನ್ ಆಗಿತ್ತು. ಇತ್ತೀಚಿಗೆ ಅಪಹರಣ ಪ್ರಕರಣವೊಂದರಲ್ಲಿ ಜೈಲು ಸೇರಿದ್ದವನು ಕಳೆದ 1 ತಿಂಗಳ ಹಿಂದೆ ಬಿಡುಗಡೆಯಾಗಿದ್ದ. ಬಿಜೆಪಿಗೆ ಸೇರ್ಪಡೆಯಾಗಿ ಮೂರು ದಿನಗಳ ಹಿಂದಷ್ಟೇ ತನ್ನ ಮನೆಗೆ ಬಂದಿದ್ದ.

ಘಟನಾ ಸ್ಥಳಕ್ಕೆ ಪೀಣ್ಯ ಪೊಲೀಸರು ಭೇಟಿ ನೀಡಿ ಪ್ರಕರಣ ದಾಖಲಿಸಿಕೊಂಡಿದ್ದಾರೆ. ಹಲವು ಅಪರಾಧ ಕೃತ್ಯಗಳಲ್ಲಿ ಪಾಲ್ಗೊಂಡಿದ್ದ ಆನಂದ್ ಜೈಲಿನಿಂದ ಹೊರಗೆ ಬಂದ ತಕ್ಷಣ ಕೊಲೆಯಾಗಿರುವುದು ಈ ಪ್ರದೇಶದಲ್ಲಿ ಆತಂಕಕ್ಕೆ ಕಾರಣವಾಗಿದೆ.

ಇದನ್ನೂ ಓದಿ: ಕುಖ್ಯಾತ ರೌಡಿ ಹೆಬ್ಬೆಟ್ ಮಂಜನ ಹೆಸರಿನಲ್ಲಿ ಬೆದರಿಕೆ! ಪೊಲೀಸರ ಬಲೆಗೆ ಬಿದ್ದ ಭಟ್ಕಳ ಮಹಿಳೆ ಇದನ್ನೂ ಓದಿ: ಬೆಂಗಳೂರಿನಲ್ಲಿ ದರೋಡೆ ಮಾಡುತ್ತಿದ್ದ 2 ರೌಡಿ ಗ್ಯಾಂಗ್ ಅರೆಸ್ಟ್!

Published On - 6:45 am, Mon, 25 October 21

ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ
ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ
ಪಕ್ಕದಲ್ಲಿ ಬೋರ್​ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು
ಪಕ್ಕದಲ್ಲಿ ಬೋರ್​ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು
ಬೋಗಸ್ ಮಾಡವ್ರೆ, ಯಶ್ ಹೆಸರು ಹಾಳು ಮಾಡ್ತಾವ್ರೆ: ಯಶ್ ತಾಯಿ ಆರೋಪ
ಬೋಗಸ್ ಮಾಡವ್ರೆ, ಯಶ್ ಹೆಸರು ಹಾಳು ಮಾಡ್ತಾವ್ರೆ: ಯಶ್ ತಾಯಿ ಆರೋಪ
ಫಿಲಂ ಚೇಂಬರ್ ನೂತನ ಅಧ್ಯಕ್ಷೆ ಜಯಮಾಲ ಹಾಕಿಕೊಂಡಿರುವ ಯೋಜನೆಗಳೇನು?
ಫಿಲಂ ಚೇಂಬರ್ ನೂತನ ಅಧ್ಯಕ್ಷೆ ಜಯಮಾಲ ಹಾಕಿಕೊಂಡಿರುವ ಯೋಜನೆಗಳೇನು?
ದೇವದತ್ ಪಡಿಕ್ಕಲ್ ಶತಕ; ಕ್ವಾರ್ಟರ್ ಫೈನಲ್​ಗೇರಿದ ಕರ್ನಾಟಕ
ದೇವದತ್ ಪಡಿಕ್ಕಲ್ ಶತಕ; ಕ್ವಾರ್ಟರ್ ಫೈನಲ್​ಗೇರಿದ ಕರ್ನಾಟಕ
ಮದ್ವೆಯಾಗಿ 5 ವರ್ಷವಾದರೂ ಅವ್ನ ಕೈಯಲ್ಲಿ ಮಗು ಮಾಡಿಕೊಳ್ಳಲಾಗಿಲ್ಲ
ಮದ್ವೆಯಾಗಿ 5 ವರ್ಷವಾದರೂ ಅವ್ನ ಕೈಯಲ್ಲಿ ಮಗು ಮಾಡಿಕೊಳ್ಳಲಾಗಿಲ್ಲ
ಕೇಂದ್ರ ಬಜೆಟ್ ಬಗ್ಗೆ ವ್ಯಂಗ್ಯ ಮಾಡುತ್ತಲ್ಲೇ ಕಟುವಾಗಿ ಟೀಕಿಸಿದ ಸಿಎಂ!
ಕೇಂದ್ರ ಬಜೆಟ್ ಬಗ್ಗೆ ವ್ಯಂಗ್ಯ ಮಾಡುತ್ತಲ್ಲೇ ಕಟುವಾಗಿ ಟೀಕಿಸಿದ ಸಿಎಂ!
ಆಸ್ಟ್ರೇಲಿಯನ್ ಓಪನ್ ಗೆದ್ದು ಇತಿಹಾಸ ನಿರ್ಮಿಸಿದ ಕಾರ್ಲೋಸ್ ಅಲ್ಕರಾಝ್
ಆಸ್ಟ್ರೇಲಿಯನ್ ಓಪನ್ ಗೆದ್ದು ಇತಿಹಾಸ ನಿರ್ಮಿಸಿದ ಕಾರ್ಲೋಸ್ ಅಲ್ಕರಾಝ್
ಚಿಮುಲ್ ಚುನಾವಣೆ: ಮತದಾರರಿಗೆ ಲಕ್ಷ ಲಕ್ಷ ನಗದು, ಬೆಳ್ಳಿ ತಟ್ಟೆ!
ಚಿಮುಲ್ ಚುನಾವಣೆ: ಮತದಾರರಿಗೆ ಲಕ್ಷ ಲಕ್ಷ ನಗದು, ಬೆಳ್ಳಿ ತಟ್ಟೆ!
ಟ್ಯಾಕ್ಸ್‌ ಟೆರರಿಸಂ: ಐಟಿ ದಾಳಿ ವಿರುದ್ಧ ತಿರುಗಿಬಿದ್ದ ಮೋಹನ್ ದಾಸ್ ಪೈ
ಟ್ಯಾಕ್ಸ್‌ ಟೆರರಿಸಂ: ಐಟಿ ದಾಳಿ ವಿರುದ್ಧ ತಿರುಗಿಬಿದ್ದ ಮೋಹನ್ ದಾಸ್ ಪೈ