AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ತೀರ್ಥಹಳ್ಳಿಯಲ್ಲಿ 2 ಹೊಸ ಸೇತುವೆಗಳ ನಿರ್ಮಾಣಕ್ಕೆ 50 ಕೋಟಿ ರೂ. ಮಂಜೂರು

ಶಿವಮೊಗ್ಗ ಜಿಲ್ಲೆಯ ತೀರ್ಥಹಳ್ಳಿ ವಿಧಾನಸಭಾ ಕ್ಷೇತ್ರದಲ್ಲಿ ಎರಡು ಹೊಸ ಸೇತುವೆಗಳ ನಿರ್ಮಾಣಕ್ಕೆ 50 ಕೋಟಿ ರೂ. ಮಂಜೂರು ಮಾಡಲಾಗಿದೆ.

ತೀರ್ಥಹಳ್ಳಿಯಲ್ಲಿ 2 ಹೊಸ ಸೇತುವೆಗಳ ನಿರ್ಮಾಣಕ್ಕೆ 50 ಕೋಟಿ ರೂ. ಮಂಜೂರು
ವಿಧಾನ ಸೌಧ
TV9 Web
| Edited By: |

Updated on:Nov 24, 2022 | 4:54 PM

Share

ಬೆಂಗಳೂರು: ಶಿವಮೊಗ್ಗ ಜಿಲ್ಲೆಯ ತೀರ್ಥಹಳ್ಳಿ ವಿಧಾನಸಭಾ ಕ್ಷೇತ್ರದಲ್ಲಿ ಎರಡು ಹೊಸ ಸೇತುವೆಗಳ ನಿರ್ಮಾಣಕ್ಕೆ ರಾಜ್ಯ ಸರ್ಕಾರ 50 ಕೋಟಿ ರೂ. ಮಂಜೂರು ಮಾಡಿದೆ. ಸಚಿವ ಆರಗ ಜ್ಞಾನೇಂದ್ರ ಬೇಡಿಕೆಗೆ ಆರ್ಥಿಕ ಇಲಾಖೆಯೂ, ಗ್ರಾಮೀಣ ರಸ್ತೆ ಸಂಪರ್ಕ ಯೋಜನೆಯಡಿ ಕಾಮಗಾರಿಗೆ ಅನುಮೋದನೆ ನೀಡಲಾಗಿದೆ. ತೀರ್ಥಹಳ್ಳಿ ತಾಲೂಕಿನ ತೂದೂರು-ಮುಂಡುವಳ್ಳಿ ಗ್ರಾಮಗಳ ನಡುವೆ ತುಂಗಾ ನದಿಗೆ ಹೊಸ ಸೇತುವೆ ನಿರ್ಮಾಣ ಕಾಮಗಾರಿಗೆ 25.65 ಕೋಟಿ ರೂ. ಪ್ರಸ್ತಾವನೆಗೆ ಅನುಮೋದನೆ ನೀಡಲಾಗಿದೆ.  ಹೊಸನಗರ ತಾಲೂಕಿನ ಕಾರಣಗಿರಿ-ಬಪ್ಪನಮನೆ ಸಂಪರ್ಕ ರಸ್ತೆಯ ಶರಾವತಿ ಹಿನ್ನೀರಿನ ಬಿಲ್ಸಾಗರದಲ್ಲಿ ಸೇತುವೆ ನಿರ್ಮಾಣ ಕಾಮಗಾರಿಗೆ 24.36 ಕೋಟಿ ರೂ. ಪ್ರಸ್ತಾವನೆಗೆ ಒಪ್ಪಿಗೆ ನೀಡಲಾಗಿದೆ. ಎರಡು ಯೋಜನೆಗಳ ಮಂಜೂರಾತಿಗೆ ಬೇಡಿಕೆ ಮಂಡಿಸಿ  ಗೃಹ ಸಚಿವ ಆರಗ ಜ್ಞಾನೇಂದ್ರ ಪ್ರಸ್ತಾವನೆ ಸಲ್ಲಿಸಿದ್ದಾರೆ.

ತೀರ್ಥಹಳ್ಳಿ ತಾಲೂಕಿನ ಕಟ್ಟೆಹಕ್ಕಲು ಬಳಿಯ ತುಂಬ್ರಮನೆಯಲ್ಲಿ ಒಂದೂವರೆ ಕೋಟಿ ರೂಪಾಯಿ ವೆಚ್ಚದಲ್ಲಿ ಸೇತುವೆ ನಿರ್ಮಿಸಲಾಗಿದೆ. ಕೊರೋನಾ ಲಾಕ್ ಡೌನ್ ಹಾಗೂ ಮಳೆಗಾಲದ ಕ್ಲಿಷ್ಟಕರ ಸನ್ನಿವೇಶದಲ್ಲಿ, ಹಲವು ಅಡೆತಡೆ ಹಾಗೂ ಕಠಿಣ ಸವಾಲು ಎದುರಿಸಿ ಕೇವಲ ಎರಡೇ ತಿಂಗಳಿನ‌ಲ್ಲಿ ಸೇತುವೆ ನಿರ್ಮಿಸಲಾಗಿದೆ ಎಂದು ಗೃಹ ಸಚಿವ ಆರಗ ಜ್ಞಾನೇಂದ್ರ ಮಾಹಿತಿ ಹಂಚಿಕೊಂಡಿದ್ದಾರೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Published On - 4:45 pm, Thu, 24 November 22

450 ಕಿ.ಮೀ ಸ್ಕೇಟಿಂಗ್ ಮಾಡಿ ಅಯೋಧ್ಯೆಯ ರಾಮನ ದರ್ಶನ ಪಡೆದ 9 ವರ್ಷದ ಬಾಲಕಿ!
450 ಕಿ.ಮೀ ಸ್ಕೇಟಿಂಗ್ ಮಾಡಿ ಅಯೋಧ್ಯೆಯ ರಾಮನ ದರ್ಶನ ಪಡೆದ 9 ವರ್ಷದ ಬಾಲಕಿ!
ಸೋಮನಾಥ ದೇವಾಲಯದಲ್ಲಿ ಪ್ರಾರ್ಥನೆ ಸಲ್ಲಿಸಿದ ಪ್ರಧಾನಿ ಮೋದಿ
ಸೋಮನಾಥ ದೇವಾಲಯದಲ್ಲಿ ಪ್ರಾರ್ಥನೆ ಸಲ್ಲಿಸಿದ ಪ್ರಧಾನಿ ಮೋದಿ
ಸೋಮನಾಥ ದೇವಾಲಯಕ್ಕೆ ಆಗಮಿಸಿದ ಪ್ರಧಾನಿ ಮೋದಿಗೆ ಅದ್ದೂರಿ ಸ್ವಾಗತ
ಸೋಮನಾಥ ದೇವಾಲಯಕ್ಕೆ ಆಗಮಿಸಿದ ಪ್ರಧಾನಿ ಮೋದಿಗೆ ಅದ್ದೂರಿ ಸ್ವಾಗತ
ಹೆಚ್​​​ಡಿಕೆ VS ಡಿಕೆಶಿ ಸವಾಲು: ಓಪನ್ ಡಿಬೇಟ್ ಮಾಡೋಣ ಬನ್ನಿ
ಹೆಚ್​​​ಡಿಕೆ VS ಡಿಕೆಶಿ ಸವಾಲು: ಓಪನ್ ಡಿಬೇಟ್ ಮಾಡೋಣ ಬನ್ನಿ
ಶ್ವಾನ ದಾಳಿಯಿಂದ ಶ್ರೇಯಸ್ ಅಯ್ಯರ್ ಜಸ್ಟ್ ಮಿಸ್; ವಿಡಿಯೋ ನೋಡಿ
ಶ್ವಾನ ದಾಳಿಯಿಂದ ಶ್ರೇಯಸ್ ಅಯ್ಯರ್ ಜಸ್ಟ್ ಮಿಸ್; ವಿಡಿಯೋ ನೋಡಿ
ಕಿಚ್ಚನ ಮಾತು ಕೇಳಿ ಕಣ್ಣೀರು ಹಾಕಿದ ಅಶ್ವಿನಿ-ಧ್ರುವಂತ್: ವಿಡಿಯೋ ನೋಡಿ
ಕಿಚ್ಚನ ಮಾತು ಕೇಳಿ ಕಣ್ಣೀರು ಹಾಕಿದ ಅಶ್ವಿನಿ-ಧ್ರುವಂತ್: ವಿಡಿಯೋ ನೋಡಿ
ಬಳ್ಳಾರಿ ಗಲಭೆ ಖಂಡಿಸಿ ಬಿಜೆಪಿಯಿಂದ ಸಮರ: ಜ 17ರಂದು ಪ್ರತಿಭಟನೆ ಎಂದ ರೆಡ್ಡಿ
ಬಳ್ಳಾರಿ ಗಲಭೆ ಖಂಡಿಸಿ ಬಿಜೆಪಿಯಿಂದ ಸಮರ: ಜ 17ರಂದು ಪ್ರತಿಭಟನೆ ಎಂದ ರೆಡ್ಡಿ
ಪ್ರೀತಿ ಮಾಡಲು ಒಪ್ಪದಿದ್ದಕ್ಕೆ ಬೆಂಗಳೂರಿನ ಹುಡುಗಿಗೆ ಕೊಲೆ ಬೆದರಿಕೆ
ಪ್ರೀತಿ ಮಾಡಲು ಒಪ್ಪದಿದ್ದಕ್ಕೆ ಬೆಂಗಳೂರಿನ ಹುಡುಗಿಗೆ ಕೊಲೆ ಬೆದರಿಕೆ
ಮನೆ ಕಟ್ಟಲು ಅಡಿಪಾಯ ತೆಗೆಯುವಾಗ ವೇಳೆ ನಿಧಿ ಪತ್ತೆ
ಮನೆ ಕಟ್ಟಲು ಅಡಿಪಾಯ ತೆಗೆಯುವಾಗ ವೇಳೆ ನಿಧಿ ಪತ್ತೆ
ಎಣ್ಣೆ ಮತ್ತಲ್ಲಿ ಡಿವೈಡರ್​​ ಹಾರಿಸಿದ ಕಾರು ಚಾಲಕ: 8 ಜನ ಜಸ್ಟ್​ ಮಿಸ್!​​
ಎಣ್ಣೆ ಮತ್ತಲ್ಲಿ ಡಿವೈಡರ್​​ ಹಾರಿಸಿದ ಕಾರು ಚಾಲಕ: 8 ಜನ ಜಸ್ಟ್​ ಮಿಸ್!​​