AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮುಸ್ಲಿಂ ಪುರುಷರು ಏನು ಮಾಡಿಬಿಡ್ತಾರೆಂಬ ಭಯಕ್ಕೆ ಮಹಿಳೆಯರು ಬುರ್ಖಾ ಧರಿಸುತ್ತಾರೆ, ಜಮೀರ್ ಹೇಳಿಕೆ ಸಮರ್ಥಿಸಿಕೊಂಡ RSS ಮುಖಂಡ

ಹಿಜಾಬ್ ಸಂಬಂಧ ಮಾತನಾಡಿದ ಕಲ್ಲಡ್ಕ ಪ್ರಭಾಕರ್ ಭಟ್, ಹಿಜಾಬ್ ವಿವಾದ ಪೂರ್ವಯೋಜಿತವಾಗಿದೆ. ಹಿಜಾಬ್ ಹಿಂದೆ ಕೆಲ ಸಂಘಟನೆಗಳ ಷಡ್ಯಂತ್ರವಿದೆ. ದೇಶವನ್ನ ವಿಭಜನೆ ಮಾಡುವ ಷಡ್ಯಂತರ ನಡೆದಿದೆ. ಈ ಬಗ್ಗೆ NIA ತನಿಖೆಯಾಗಬೇಕು. ಜಮೀರ್ ಅಹ್ಮದ್ ಹೇಳಿದ್ದು ಅವರ ಸಮಾಜದ ಬಗ್ಗೆ. ಮುಸ್ಲಿಂ ಮಹಿಳೆಯರು ಮನೆಯಲ್ಲೂ ಬುರ್ಖಾ ಹಾಕ್ತಾರೆ.

ಮುಸ್ಲಿಂ ಪುರುಷರು ಏನು ಮಾಡಿಬಿಡ್ತಾರೆಂಬ ಭಯಕ್ಕೆ ಮಹಿಳೆಯರು ಬುರ್ಖಾ ಧರಿಸುತ್ತಾರೆ, ಜಮೀರ್ ಹೇಳಿಕೆ ಸಮರ್ಥಿಸಿಕೊಂಡ RSS ಮುಖಂಡ
ಪ್ರಾತಿನಿಧಿಕ ಚಿತ್ರ
TV9 Web
| Edited By: |

Updated on:Feb 15, 2022 | 12:31 PM

Share

ಬೆಂಗಳೂರು: ರಾಜ್ಯದಲ್ಲಿ ಹಿಜಾಬ್ ಕಿಚ್ಚು ಕಾಡ್ಗಿಚ್ಚಿನಂತೆ ವ್ಯಾಪಿಸ್ತಿದೆ. ಹೈಕೋರ್ಟ್ ಮಧ್ಯಂತರ ಆದೇಶವನ್ನ ಹೊರಡಿಸಿದ್ರೂ. ಸರ್ಕಾರ ಸಮವಸ್ತ್ರ ರೂಲ್ಸ್ ಜಾರಿಗೆ ತಂದಿದ್ರೂ ವಿದ್ಯಾರ್ಥಿನಿಯರು ಹಿಜಾಬ್ ತೆಗೆಯಲ್ಲ ಅಂತಾ ಪಟ್ಟು ಹಿಡಿದು ನಿಂತಿದ್ದಾರೆ. ಸದ್ಯ ಈ ಬಗ್ಗೆ ಪರ-ವಿರೋಧ ಚರ್ಚೆಗಳು ನಡೆಯುತ್ತಲೇ ಇವೆ. ಸದ್ಯ ಹಿಜಾಬ್ ವಿವಾದ ಪೂರ್ವಯೋಜಿತವಾಗಿದೆ ಎಂದು RSS ಮುಖಂಡ ಕಲ್ಲಡ್ಕ ಪ್ರಭಾಕರ್ ಭಟ್ ಹೇಳಿಕೆ ನೀಡಿದ್ದಾರೆ.

ಹಿಜಾಬ್ ಸಂಬಂಧ ಮಾತನಾಡಿದ ಕಲ್ಲಡ್ಕ ಪ್ರಭಾಕರ್ ಭಟ್, ಹಿಜಾಬ್ ವಿವಾದ ಪೂರ್ವಯೋಜಿತವಾಗಿದೆ. ಹಿಜಾಬ್ ಹಿಂದೆ ಕೆಲ ಸಂಘಟನೆಗಳ ಷಡ್ಯಂತ್ರವಿದೆ. ದೇಶವನ್ನ ವಿಭಜನೆ ಮಾಡುವ ಷಡ್ಯಂತರ ನಡೆದಿದೆ. ಈ ಬಗ್ಗೆ NIA ತನಿಖೆಯಾಗಬೇಕು. ಜಮೀರ್ ಅಹ್ಮದ್ ಹೇಳಿದ್ದು ಅವರ ಸಮಾಜದ ಬಗ್ಗೆ. ಮುಸ್ಲಿಂ ಮಹಿಳೆಯರು ಮನೆಯಲ್ಲೂ ಬುರ್ಖಾ ಹಾಕ್ತಾರೆ. ಮುಸ್ಲಿಂ ಪುರುಷರು ಏನು ಮಾಡಿಬಿಡ್ತಾರೆಂಬ ಭಯಕ್ಕೆ. ಅರಬ್ ರಾಷ್ಟ್ರಗಳಲ್ಲಿ ಮಹಿಳೆಯರು ಬುರ್ಖಾ ಧರಿಸುತ್ತಿದ್ದರು. ಯಾಕಂದ್ರೆ ಅಲ್ಲಿ ಅವರ ಮೇಲೆ ಅತ್ಯಾಚಾರ ನಡೆಯುತ್ತೆಂದು ಬುರ್ಖಾ ಹಾಕುತ್ತಾರೆ. ಅದೇ ರೀತಿ ಇಲ್ಲಿಯೂ ಮುಸ್ಲಿಂ ಮಹಿಳೆಯರು ಮನೆಯಲ್ಲೂ ಬುರ್ಖಾ ಹಾಕ್ತಾರೆ. ಕಾರಣ ಅವರ ಸಮುದಾಯದ ಪುರುಷರಿಂದ ರಕ್ಷಣೆ ಪಡೆಯೋಕೆ. ವಿದ್ಯಾರ್ಥಿಗಳು ಹಿಂದೆ ಯಾವ ರೀತಿ ಕಾಲೇಜುಗಳಿಗೆ ಬರ್ತಾಯಿದ್ರೋ ಹಾಗೇ ಬರಲಿ. ಸರ್ಕಾರ ಕ್ರಮಗಳನ್ನ ತೆಗೆದುಕೊಳ್ಳಲು ಹಿಂಜರಿಯಬಾರದು. ಹಿಜಾಬ್ ವಿವಾದ ಸೃಷ್ಟಿಯಾದಾಗ ರಜೆ ಘೋಷಣೆ ಮಾಡುವ ಅವಶ್ಯಕತೆ ಇರಲಿಲ್ಲ ಎಂದು ಬೆಂಗಳೂರಿನಲ್ಲಿ ಕಲ್ಲಡ್ಕ ಪ್ರಭಾಕರ್ ಭಟ್ ತಿಳಿಸಿದ್ರು.

ಹಿಂದೂಗಳು ಯಾವತ್ತೂ ಆ್ಯಕ್ಷನ್‌ಗೆ ಹೋಗುವುದಿಲ್ಲ. ರಿಯಾಕ್ಷನ್ ಮಾತ್ರ ಮಾಡುತ್ತಾರೆ. ಅವರು ಹಿಜಾಬ್ ಧರಿಸಿದ್ದಕ್ಕೆ ಕೇಸರಿ ಶಾಲು ಹಾಕಿದ್ದಾರೆ. ಹೈಕೋರ್ಟ್ ಮಧ್ಯಂತರ ಆದೇಶವನ್ನು ನೀಡಿದೆ. ಆದರೂ ವಿದ್ಯಾರ್ಥಿನಿಯರು ಹಿಜಾಬ್ ಧರಿಸುತ್ತಿದ್ದಾರೆ. ಇವರ ಹಿಂದೆ ಮುಸ್ಲಿಂ ಸಂಘಟನೆಗಳ ಕೈವಾಡವಿದೆ. ನಾಳೆ ಸುಪ್ರೀಂ ಕೋರ್ಟ್ ಆದೇಶ ನೀಡಿದ್ರೂ, ಇವರು ಹಿಜಾಬ್ ಧರಿಸಿಕೊಂಡು ಬರ್ತಾರೆ ಎಂದು RSS ಮುಖಂಡ ಕಲ್ಲಡ್ಕ ಪ್ರಭಾಕರ್ ಭಟ್ ಹೇಳಿದ್ದಾರೆ.

ವಿದ್ಯಾರ್ಥಿಗಳ ಮನಸ್ಸು ಹಾಳು ಮಾಡುವುದು ಸರಿಯಲ್ಲ ಇನ್ನು ಹಿಜಾಬ್ ವಿವಾದದ ಬಗ್ಗೆ ರಾಜ್ಯ ಬಿಜೆಪಿ ಘಟಕದ ಉಪಾಧ್ಯಕ್ಷ ವಿಜಯೇಂದ್ರ ಕೂಡ ಪ್ರತಿಕ್ರಿಯೆ ನೀಡಿದ್ದಾರೆ. ಶಾಲಾ ಕಾಲೇಜುಗಳಲ್ಲಿ ಹಿಜಾಬ್ ವಿವಾದ ದುರದೃಷ್ಟಕರ ಎಂದು ರಾಮನಗರ ಜಿಲ್ಲೆಯ ಮಾಗಡಿ ತಾಲೂಕಿನ ವೀರಾಪುರ ಗ್ರಾಮದಲ್ಲಿ ಬಿ.ವೈ.ವಿಜಯೇಂದ್ರ ಬೇಸರ ವ್ಯಕ್ತಪಡಿಸಿದ್ದಾರೆ. ವಿದ್ಯಾರ್ಥಿಗಳ ಮನಸ್ಸು ಹಾಳು ಮಾಡುವುದು ಸರಿಯಲ್ಲ. ಹಿಜಾಬ್ ವಿಚಾರದಲ್ಲಿ ಕಾಂಗ್ರೆಸ್ ರಾಜಕೀಯ ಬೆರೆಸ್ತಿದೆ ಎಂದಿದ್ದಾರೆ.

ಇದನ್ನೂ ಓದಿ: ಸಮುದಾಯ ಮಾರ್ಗಸೂಚಿಗಳನ್ನು ಉಲ್ಲಂಘಿಸಿದ್ದಕ್ಕಾಗಿ ಸಂಸದ್ ಟಿವಿಯ ಯುಟ್ಯೂಬ್ ಖಾತೆ ರದ್ದು

Published On - 12:30 pm, Tue, 15 February 22

ಕುಡಿದು ಟೈಟ್ ಆದವರಿಗೆ ಉಚಿತವಾಗಿ ಮನೆಗೆ ತಲುಪಿಸುವ ವ್ಯವಸ್ಥೆ
ಕುಡಿದು ಟೈಟ್ ಆದವರಿಗೆ ಉಚಿತವಾಗಿ ಮನೆಗೆ ತಲುಪಿಸುವ ವ್ಯವಸ್ಥೆ
ಮಾಧ್ಯಮದ ಕ್ಯಾಮೆರಾ​​​ ನೋಡುತ್ತಿದ್ದಂತೆ ಮುಖ ಮುಚ್ಚಿಕೊಂಡ ಯುವತಿ
ಮಾಧ್ಯಮದ ಕ್ಯಾಮೆರಾ​​​ ನೋಡುತ್ತಿದ್ದಂತೆ ಮುಖ ಮುಚ್ಚಿಕೊಂಡ ಯುವತಿ
New Year 2026 Live: 2025ಕ್ಕೆ ಬೈಬೈ.. ಹೊಸ ವರ್ಷ 2026ಕ್ಕೆ ಹಾಯ್ ಹಾಯ್
New Year 2026 Live: 2025ಕ್ಕೆ ಬೈಬೈ.. ಹೊಸ ವರ್ಷ 2026ಕ್ಕೆ ಹಾಯ್ ಹಾಯ್
ಪುಟಿನ್ ನಿವಾಸದ ಮೇಲೆ ದಾಳಿ ಮಾಡಿದ ಉಕ್ರೇನ್; ರಷ್ಯಾದಿಂದ ವಿಡಿಯೋ ಬಿಡುಗಡೆ
ಪುಟಿನ್ ನಿವಾಸದ ಮೇಲೆ ದಾಳಿ ಮಾಡಿದ ಉಕ್ರೇನ್; ರಷ್ಯಾದಿಂದ ವಿಡಿಯೋ ಬಿಡುಗಡೆ
ಕನ್ಯಾಕುಮಾರಿಯಲ್ಲಿ 2025ರ ಕೊನೆಯ ಸೂರ್ಯಾಸ್ತದ ನೋಡಲು ಆಗಮಿಸಿದ ಜನಸಾಗರ
ಕನ್ಯಾಕುಮಾರಿಯಲ್ಲಿ 2025ರ ಕೊನೆಯ ಸೂರ್ಯಾಸ್ತದ ನೋಡಲು ಆಗಮಿಸಿದ ಜನಸಾಗರ
ನ್ಯೂಇಯರ್ ಸೆಲೆಬ್ರೇಷನ್​​​ ಮುನ್ನ ಮಳೆ ಎಂಟ್ರಿ: ಪಾರ್ಟಿ ಪ್ರಿಯರಿಗೆ ಶಾಕ್!​
ನ್ಯೂಇಯರ್ ಸೆಲೆಬ್ರೇಷನ್​​​ ಮುನ್ನ ಮಳೆ ಎಂಟ್ರಿ: ಪಾರ್ಟಿ ಪ್ರಿಯರಿಗೆ ಶಾಕ್!​
ಅಭಿಮಾನಿಗಳ ಜೊತೆ ಸಿನಿಮಾ ನೋಡುತ್ತಿರುವ ಉದ್ದೇಶ ಏನು? ಸುದೀಪ್ ಉತ್ತರ
ಅಭಿಮಾನಿಗಳ ಜೊತೆ ಸಿನಿಮಾ ನೋಡುತ್ತಿರುವ ಉದ್ದೇಶ ಏನು? ಸುದೀಪ್ ಉತ್ತರ
ಕಳೆದು ಹೋಗಿದ್ದ ಬಾಲಕಿಯನ್ನು ಮರಳಿ ತಾಯಿ ಮಡಿಲಿಗೆ ಸೇರಿಸಿದ ಪೊಲೀಸರು
ಕಳೆದು ಹೋಗಿದ್ದ ಬಾಲಕಿಯನ್ನು ಮರಳಿ ತಾಯಿ ಮಡಿಲಿಗೆ ಸೇರಿಸಿದ ಪೊಲೀಸರು
ನನ್ನ ಮಗಳು ಸರಿಯಾಗಿಯೇ ಹೇಳಿದ್ದಾಳೆ: ಸುದೀಪ್
ನನ್ನ ಮಗಳು ಸರಿಯಾಗಿಯೇ ಹೇಳಿದ್ದಾಳೆ: ಸುದೀಪ್
ಸ್ಟ್ರೋಕ್ ಗೆ ಒಳಗಾದವರನ್ನು ಎಷ್ಟು ಸಮಯದೊಳಗೆ ಆಸ್ಪತ್ರೆಗೆ ದಾಖಲಿಸಬೇಕು?
ಸ್ಟ್ರೋಕ್ ಗೆ ಒಳಗಾದವರನ್ನು ಎಷ್ಟು ಸಮಯದೊಳಗೆ ಆಸ್ಪತ್ರೆಗೆ ದಾಖಲಿಸಬೇಕು?