AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಆರ್​ಟಿಓ ನಕಲಿ ವೆಬ್ ಸೈಟ್ ಹಾವಳಿ; HSRP ಹೆಸರಲ್ಲಿ ಜನರ ಜೇಬಿಗೆ ಕತ್ತರಿ

ಆರ್​ಟಿಓ ಅಧಿಕಾರಿಗಳು ಚಾಪೆ ಕೆಳಗೆ ನುಸುಳಿದ್ರೆ ಈ ಕಿಲಾಡಿಗಳು ರಂಗೋಲಿ ಕೆಳಗೆ ನುಸುಳುತ್ತಿದ್ದಾರೆ. ಆರ್​ಟಿಓ ವೆಬ್ ಸೈಟ್ ಮಾದರಿಯಲ್ಲೇ ನಕಲಿ ವೈಬ್ ಸೈಟ್​ಗಳನ್ನು ಕ್ರಿಯೆಟ್ ಮಾಡಿ ವಾಹನ ಮಾಲೀಕರಿಗೆ ಮೋಸ ಮಾಡುತ್ತಿದ್ದಾರೆ. ಹೀಗಾಗಿ ಆರ್​ಟಿಓ ವೆಬ್ ಸೈಟ್​ಗೆ ಭೇಟಿ ನೀಡುವ ವಾಹನ ಸವಾರರು ಎಚ್ಚರಿಕೆ ವಹಿಸಬೇಕಿದೆ.

ಆರ್​ಟಿಓ ನಕಲಿ ವೆಬ್ ಸೈಟ್ ಹಾವಳಿ; HSRP ಹೆಸರಲ್ಲಿ ಜನರ ಜೇಬಿಗೆ ಕತ್ತರಿ
ಪ್ರಾತಿನಿಧಿಕ ಚಿತ್ರ
Kiran Surya
| Edited By: |

Updated on: Jun 19, 2024 | 7:55 AM

Share

ಬೆಂಗಳೂರು, ಜೂನ್.19: ನಕಲಿ ವೆಬ್ ಸೈಟ್​ಗಳಲ್ಲಿ ಹೆಚ್ಎಸ್ಆರ್​ಪಿ (HSRP) ರೆಜಿಸ್ಟರ್ ಮಾಡುವಾಗ ವಾಹನ ಮಾಲೀಕರು ಅಲರ್ಟ್ ಆಗಿರಬೇಕು. ಹೆಚ್ಎಸ್ಆರ್​ಪಿ ನಂಬರ್ ಪ್ಲೇಟ್ ವಿಚಾರವಾಗಿ ನಕಲಿ ವೆಬ್ ಸೈಟ್​ಗಳು (Fake Website) ಜನರನ್ನು ಯಾಮಾರಿಸುತ್ತಿದೆ. ಈ ನಕಲಿ ವೆಬ್ ಸೈಟ್​ಗಳು ನೋಡೋಕೆ ಸರ್ಕಾರದ ವೆಬ್ ಸೈಟ್​ಗಳಂತೆ ಇವೆ. ಇದರಿಂದ ಜನರಿಗೆ ಮೋಸವಾಗ್ತಿದೆ. ಈ ನಕಲಿ ವೆಬ್ ಸೈಟ್ ಮೂಲಕ ನಂಬರ್ ಪ್ಲೇಟ್ ಆರ್ಡರ್ ಮಾಡಿದ್ರೆ ಹಣ ಕಟ್ ಆಗುತ್ತೆ. ಆದರೆ ಯಾವುದೇ ಅಪ್ಡೇಟ್ ಮಾತ್ರ ಸಿಗೋದಿಲ್ಲ ಅಂತ ಹಣ ಕಳೆದುಕೊಂಡವ್ರು ಆಕ್ರೋಶ ವ್ಯಕ್ತಪಡಿಸುತ್ತಿದ್ದಾರೆ.

ಇನ್ನೂ ನಕಲಿ ವೆಬ್ ಸೈಟ್​ಗಳ ಮೂಲಕ ಹೆಚ್ಎಸ್ಆರ್​ಪಿ ಬುಕ್ ಮಾಡಿದ್ರೆ ಆರ್ಡರ್ ನಂಬರ್ ಬರುತ್ತದೆ. ಟ್ರ್ಯಾಕ್ ಮಾಡಿದ್ರೆ ಮಾತ್ರ ಡಿಟೇಲ್ಸ್ ತೋರಿಸಲ್ಲ. ಎರಡು ವೆಬ್ ಸೈಟು ನೋಡೋಕೆ ಡಿಸೈನ್ ಕಲರ್ ಒಂದೇ ರೀತಿ ಇದೆ. ಇವೆರಡರಲ್ಲಿ ಯಾವುದು ರಿಯಲ್ ಯಾವುದು ಫೇಕ್ ಅಂತ ಗೊತ್ತಾಗುವುದೇ ಇಲ್ಲ. ಈಗಾಗಲೇ ಹೆಚ್ಎಸ್ಆರ್​ಪಿ ನಂಬರ್ ಪ್ಲೇಟ್ ಹೆಸರಲ್ಲಿ ನಕಲಿ ವೆಬ್ ಸೈಟ್ ಓಪನ್ ಮಾಡಿ ತಗ್ಲಾಕೊಂಡಿತ್ತು.

ಇದನ್ನೂ ಓದಿ: ಕೋಲಾರ: ಯಡಿಯೂರು ಸಿದ್ದಲಿಂಗೇಶ್ವರ ದೇವಾಲಯದ ಗಂಗಾಶ್ರೀ ಆನೆ ಸಾವು

ಆರ್ಟಿಓ ಅಧಿಕಾರಿಗಳು ಹನುಮಂತನಗರ ಪೋಲಿಸ್ ಸ್ಟೇಷನ್ ನಲ್ಲಿ ಎಫ್ಐಆರ್ ದಾಖಲು ಮಾಡಿದ್ರು. ಈಗ ಮತ್ತಷ್ಟು ನಕಲಿ ವೆಬ್ ಸೈಟ್ ಗಳು ಓಪನ್ ಆಗ್ತಿವೆ. ಈ ಬಗ್ಗೆ ಮಾತಾನಾಡಿದ ಸಾರಿಗೆ ಇಲಾಖೆಯ ಅಡಿಷನಲ್ ಕಮೀಷನರ್ ಮಲ್ಲಿಕಾರ್ಜುನ, ಈಗಾಗಲೇ ವಾಹನ ಮಾಲೀಕರಿಂದ ದೂರು ಬಂದ ಕಂಪನಿ ವಿರುದ್ಧ ಎಫ್ಐಆರ್ ದಾಖಲು ಮಾಡಿದ್ದೀವಿ. ಬೇರೆ ನಕಲಿ ವೆಬ್ ಸೈಟ್ ಬಗ್ಗೆ ಜನರು ದೂರು ನೀಡಿದ್ರೆ ಅಂತಹ ಕಂಪನಿ ವಿರುದ್ಧವೂ ಕಠಿಣ ಕ್ರಮ ಕೈಗೊಳ್ಳುತ್ತಿವಿ ಎಂದಿದ್ದಾರೆ.

ಒಟ್ನಲ್ಲಿ ಹೆಚ್ಎಸ್ಆರ್​ಪಿ ಹಾಕಿಸಿಕೊಳ್ಳಬೇಕೆಂದು ವಾಹನ ಮಾಲೀಕರು ಆನ್ ಲೈನ್ ಮೂಲಕ ಬುಕ್ ಮಾಡಲು ಮುಂದಾಗ್ತಿದ್ದಾರೆ. ಆದರೆ ಇದನ್ನು ಬಂಡವಾಳ ಮಾಡಿಕೊಂಡಿರುವ ನಕಲಿ ವೆಬ್ ಸೈಟ್ ಗಳು ಜನರಿಂದ ಹಣ ಪಡೆದುಕೊಂಡು ಮೋಸ ಮಾಡ್ತಿವೆ. ಈ ಬಗ್ಗೆ ವಾಹನ ಮಾಲೀಕರು ಎಚ್ಚರ ವಹಿಸಬೇಕಿದೆ. ಆರ್ಟಿಓ ಅಧಿಕಾರಿಗಳು ಈ ಬಗ್ಗೆ ಕ್ರಮ ಕೈಗೊಳ್ಳಬೇಕಿದೆ.

ರಾಜ್ಯದ ಪ್ರಮುಖ ಸುದ್ದಿಗಳನ್ನು ಓದಲು ಇದರ ಮೇಲೆ ಕ್ಲಿಕ್ ಮಾಡಿ

Follow Us
ಪತಿ, ಅತ್ತೆ-ಮಾವನಿಗೆ ಪತ್ನಿಯಿಂದ ಕಿರುಕುಳ
ಪತಿ, ಅತ್ತೆ-ಮಾವನಿಗೆ ಪತ್ನಿಯಿಂದ ಕಿರುಕುಳ
ಜನ ಮನೆಯಲ್ಲಿ ಕಾಯುತ್ತಿದ್ದರೆ, ಇತ್ತ ನದಿಯಲ್ಲಿ ತೇಲಿಬಂದವು ಆಧಾರ್ ಕಾರ್ಡ್
ಜನ ಮನೆಯಲ್ಲಿ ಕಾಯುತ್ತಿದ್ದರೆ, ಇತ್ತ ನದಿಯಲ್ಲಿ ತೇಲಿಬಂದವು ಆಧಾರ್ ಕಾರ್ಡ್
ವಿಷ್ಣುವರ್ಧನ್ ಅವರ ‘ಸೂರ್ಯವಂಶ’ ಪಾತ್ರ ನೆನಪಿಸಿಕೊಂಡ ಎಸ್ ನಾರಾಯಣ್
ವಿಷ್ಣುವರ್ಧನ್ ಅವರ ‘ಸೂರ್ಯವಂಶ’ ಪಾತ್ರ ನೆನಪಿಸಿಕೊಂಡ ಎಸ್ ನಾರಾಯಣ್
ವಿಷಕಾರಿ ಅಂಶ ಪತ್ತೆ: ಮಕ್ಕಳಿಗೆ ತಂಪು ಪಾನೀಯ ಕುಡಿಯುವವರೇ ಎಚ್ಚರ!
ವಿಷಕಾರಿ ಅಂಶ ಪತ್ತೆ: ಮಕ್ಕಳಿಗೆ ತಂಪು ಪಾನೀಯ ಕುಡಿಯುವವರೇ ಎಚ್ಚರ!
ರಶ್ಮಿಕಾ ಮಂದಣ್ಣ-ವಿಜಯ್ ದೇವರಕೊಂಡ ಆರತಕ್ಷತೆ ಬಂದ ಅತಿಥಿಗಳು: ವಿಡಿಯೋ
ರಶ್ಮಿಕಾ ಮಂದಣ್ಣ-ವಿಜಯ್ ದೇವರಕೊಂಡ ಆರತಕ್ಷತೆ ಬಂದ ಅತಿಥಿಗಳು: ವಿಡಿಯೋ
ಲೋಕಾ ರೈಡ್ ವೇಳೆ AEE ಮನೆಯಲ್ಲಿ ಸಿಕ್ತು ಚಿನ್ನ, ಬೆಳ್ಳಿ , ಕಂತೆ ಕಂತೆ ನಗದು
ಲೋಕಾ ರೈಡ್ ವೇಳೆ AEE ಮನೆಯಲ್ಲಿ ಸಿಕ್ತು ಚಿನ್ನ, ಬೆಳ್ಳಿ , ಕಂತೆ ಕಂತೆ ನಗದು
ರಾಜ್ಯಸಭಾ ಚುನಾವಣೆಗೆ ಬಿಹಾರ ಸಿಎಂ ನಿತೀಶ್ ಕುಮಾರ್ ನಾಮಪತ್ರ ಸಲ್ಲಿಕೆ
ರಾಜ್ಯಸಭಾ ಚುನಾವಣೆಗೆ ಬಿಹಾರ ಸಿಎಂ ನಿತೀಶ್ ಕುಮಾರ್ ನಾಮಪತ್ರ ಸಲ್ಲಿಕೆ
ಎಥೆನಾಲ್ ಟ್ಯಾಂಕರ್​​ ಪಲ್ಟಿ: ಕ್ಷಣಾರ್ಧದಲ್ಲಿ ಧಗಧಗಿಸಿದ ಬೆಂಕಿ
ಎಥೆನಾಲ್ ಟ್ಯಾಂಕರ್​​ ಪಲ್ಟಿ: ಕ್ಷಣಾರ್ಧದಲ್ಲಿ ಧಗಧಗಿಸಿದ ಬೆಂಕಿ
ಬನ್ನೇರುಘಟ್ಟದಲ್ಲಿ ಮೃಗಗಳಿಗೂ ಐಸ್ ಕ್ಯಾಂಡಿ-ಲಾಲಿಪಾಪ್!
ಬನ್ನೇರುಘಟ್ಟದಲ್ಲಿ ಮೃಗಗಳಿಗೂ ಐಸ್ ಕ್ಯಾಂಡಿ-ಲಾಲಿಪಾಪ್!
ಬೈದಿದ್ದಕ್ಕೆ ಶಿಕ್ಷಕರ ಮೇಲೆ ಹಲ್ಲೆ ನಡೆಸಿದ 10ನೇ ತರಗತಿ ವಿದ್ಯಾರ್ಥಿ
ಬೈದಿದ್ದಕ್ಕೆ ಶಿಕ್ಷಕರ ಮೇಲೆ ಹಲ್ಲೆ ನಡೆಸಿದ 10ನೇ ತರಗತಿ ವಿದ್ಯಾರ್ಥಿ