AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಖಾಸಗಿ ಬಸ್ ಮಾಲೀಕರಿಂದ 2 ಕೋಟಿ 13 ಲಕ್ಷ ರುಪಾಯಿ ದಂಡ ವಸೂಲಿ ಮಾಡಿದ ಆರ್​ಟಿಓ

ದೀಪಾವಳಿಯ ಹಬ್ಬದ ಸಮಯದಲ್ಲಿ ಪ್ರಯಾಣಿಕರಿಂದ ಓನ್ ಟೂ ಡಬಲ್ ಹಣ ವಸೂಲಿ ಮಾಡುತ್ತಿದ್ದ ಖಾಸಗಿ ಬಸ್ ಮಾಲೀಕರಿಗೆ ಆರ್​ಟಿಓ ಸರಿಯಾಗಿ ಬಿಸಿ ಮುಟ್ಟಿಸಿದೆ. ದೀಪಾವಳಿ ಹಬ್ಬದ ಹಿನ್ನೆಲೆಯಲ್ಲಿ ಪ್ರಯಾಣಿಕರಿಂದ ದುಪ್ಪಟ್ಟು ಹಣ ವಸೂಲಿ ಮಾಡುತ್ತಿದ್ದ ಖಾಸಗಿ ಬಸ್​ಗಳನ್ನು ತಪಾಸಣೆ ಮಾಡಿದ ರಾಜ್ಯ ‌ಸಾರಿಗೆ ಇಲಾಖೆಯ ಅಧಿಕಾರಿಗಳು ದಂಡ ವಸೂಲಿ ಮಾಡಿದ್ದಾರೆ.

ಖಾಸಗಿ ಬಸ್ ಮಾಲೀಕರಿಂದ 2 ಕೋಟಿ 13 ಲಕ್ಷ ರುಪಾಯಿ ದಂಡ ವಸೂಲಿ ಮಾಡಿದ ಆರ್​ಟಿಓ
ಸಾಂದರ್ಭಿಕ ಚಕಿತ್ರ
Kiran Surya
| Edited By: |

Updated on: Nov 16, 2023 | 2:58 PM

Share

ಬೆಂಗಳೂರು, ನ.16: ದೀಪಾವಳಿ (Deepavali) ಹಬ್ಬದ ಹಿನ್ನೆಲೆಯಲ್ಲಿ ರಾಜ್ಯದ ಹಬ್ಬ ಆಚರಣೆ ಮಾಡಲು ಜನರು ತಮ್ಮ ತಮ್ಮ ಊರುಗಳತ್ತ ಹೊರಟಿದ್ದರು. ಇದನ್ನು ಬಂಡವಾಳ ಮಾಡಿಕೊಂಡಿದ್ದ ಖಾಸಗಿ ಬಸ್ (Private Bus) ಮಾಲೀಕರು ಓನ್ ಟೂ ಡಬಲ್ ದರ ಹಣ ಪೀಕಿದ್ರು ಇದಕ್ಕೆ ಬ್ರೇಕ್ ಹಾಕಿದ ಆರ್ಟಿಓ ಅಧಿಕಾರಿಗಳು (RTO) ಬರೋಬ್ಬರಿ 2 ಕೋಟಿ 13 ಲಕ್ಷ ದಂಡ ವಸೂಲಿ ಮಾಡಿದ್ದಾರೆ. ಹಾಗೂ 37 ಬಸ್ ಸೀಜ್ ಮಾಡಿದ್ದಾರೆ. 1470 ಖಾಸಗಿ ಬಸ್ ಮೇಲೆ ಕೇಸ್ ಬಿದ್ದಿದೆ.

ಈ ಬಾರಿಯ ದೀಪಾವಳಿಯ ಹಬ್ಬದ ಸಮಯದಲ್ಲಿ ಪ್ರಯಾಣಿಕರಿಂದ ಓನ್ ಟೂ ಡಬಲ್ ಹಣ ವಸೂಲಿ ಮಾಡುತ್ತಿದ್ದ ಖಾಸಗಿ ಬಸ್ ಮಾಲೀಕರಿಗೆ ಆರ್​ಟಿಓ ಸರಿಯಾಗಿ ಬಿಸಿ ಮುಟ್ಟಿಸಿದೆ. ದೀಪಾವಳಿ ಹಬ್ಬದ ಹಿನ್ನೆಲೆಯಲ್ಲಿ ಪ್ರಯಾಣಿಕರಿಂದ ದುಪ್ಪಟ್ಟು ಹಣ ವಸೂಲಿ ಮಾಡುತ್ತಿದ್ದ ಖಾಸಗಿ ಬಸ್​ಗಳನ್ನು ತಪಾಸಣೆ ಮಾಡಿದ ರಾಜ್ಯ ‌ಸಾರಿಗೆ ಇಲಾಖೆಯ ಅಧಿಕಾರಿಗಳು ದಂಡ ವಸೂಲಿ ಮಾಡಿದ್ದಾರೆ. ದೀಪಾವಳಿ ಹಬ್ಬದ ಹಿನ್ನೆಲೆಯಲ್ಲಿ ಸಾಲು ಸಾಲು ರಜೆ ನೀಡಲಾಗಿತ್ತು. ಹಾಗಾಗಿ ಜನರು ತಮ್ಮ ತಮ್ಮ ‌ಸ್ವಂತ ಊರುಗಳತ್ತ ಪ್ರಯಾಣ ಬೆಳೆಸಿದ್ರು ಆದರೆ ಇದನ್ನೆ ಬಂಡವಾಳ ಮಾಡಿಕೊಂಡ ಕೆಲ ಖಾಸಗಿ ಬಸ್ ಮಾಲೀಕರು ವಿಪರೀತವಾಗಿ ಒನ್ ಟೂ ಡಬಲ್ ದರ ಫಿಕ್ಸ್ ಮಾಡಿಕೊಂಡು ಹಣ ಪೀಕಲು ಮುಂದಾಗಿದ್ದರು. ಈ ಹಿನ್ನೆಲೆಯಲ್ಲಿ ಫೀಲ್ಡ್ ಗೆ ಇಳಿದಿದ್ದ ರಾಜ್ಯ ಸಾರಿಗೆ ಇಲಾಖೆಯ ಅಧಿಕಾರಿಗಳು ಸುಮಾರು ಎರಡು ಸಾವಿರ ಬಸ್ ಗಳನ್ನು ತಪಾಸಣೆ ಮಾಡಿ 1460 ಕೇಸ್ ಗಳನ್ನು ದಾಖಲಿಸಿದ್ದಾರೆ.

ಇದನ್ನೂ ಓದಿ: ದೀಪಾವಳಿ: ಖಾಸಗಿ ಬಸ್​​​ಗಳ ಟಿಕೆಟ್ ದರ ಭಾರಿ ದುಬಾರಿ, ಬೆಂಗಳೂರಿನಿಂದ ಊರಿಗೆ ತೆರಳುವವರಿಗೆ ಸಂಕಷ್ಟ

ಇನ್ನು ಇದರಿಂದ ರಾಜ್ಯ ಸರ್ಕಾರದ ಬೊಕ್ಕಸಕ್ಕೆ ಸುಮಾರು 2 ಕೋಟಿ 14 ಲಕ್ಷ ರುಪಾಯಿ ದಂಡ ವಸೂಲಿ ಆಗಿದೆ. ಅನಧಿಕೃತವಾಗಿ ಪಟಾಕಿ ಸಾಗಿಸುತ್ತಿದ್ದ 21 ಬಸ್ ಸೇರಿದಂತೆ ಒಟ್ಟು 36 ಖಾಸಗಿ ಬಸ್ ಗಳನ್ನು ಸೀಜ್ ಮಾಡಲಾಗಿದೆ. ಈ ಬಗ್ಗೆ ಆಕ್ರೋಶ ವ್ಯಕ್ತಪಡಿಸಿದ ರಾಜ್ಯ ಖಾಸಗಿ ಬಸ್ ಮಾಲೀಕರ ಸಂಘದ ಅಧ್ಯಕ್ಷ ನಟರಾಜ್ ಶರ್ಮ ಹಬ್ಬದ ಸಂದರ್ಭದಲ್ಲಿ ಖಾಸಗಿ ಬಸ್ ಗಳು ಮಾತ್ರ ಅಲ್ಲ ಕೆಎಸ್ಆರ್ಟಿಸಿ ಬಸ್ ನವ್ರು ಹೆಚ್ಚಿನ ಹಣ ಪಡೆದುಕೊಳ್ಳುತ್ತಾರೆ, ಅತ್ತಿಬೆಲೆಯಿಂದ ಬರುವ ಬಿಎಂಟಿಸಿ ಬಸ್ ಗಳಲ್ಲಿ ಸಾಕಷ್ಟು ಪಟಾಕಿ ಸಪ್ಲೈ ಆಗಿದೆ. ಆದರೆ ಕೆಎಸ್ಆರ್ಟಿಸಿ, ಬಿಎಂಟಿಸಿ ಮೇಲೆ ಯಾಕೆ ಯಾವುದೇ ಕ್ರಮ ಕೈಗೊಂಡಿಲ್ಲ ಎಂದು ಆಕ್ರೋಶ ಹೊರ ಹಾಕಿದರು.

ಒಟ್ನಲ್ಲಿ ದುಪ್ಪಟ್ಟು ಹಣ ವಸೂಲಿ ಮಾಡುತ್ತಿದ್ದ ಖಾಸಗಿ ಮಾಲೀಕರಿಗೆ ಏನೋ ಆರ್ಟಿಓ ಅಧಿಕಾರಿಗಳು ದಂಡ ಹಾಕಿ ಬಸ್ ಸೀಜ್ ಮಾಡಿ ಬಿಸಿ ಮುಟ್ಟಿಸಿದ್ದಾರೆ. ಆದರೆ ಕೆಎಸ್ಆರ್ಟಿಸಿ ಬಸ್ ವಿರುದ್ಧ ಯಾಕೆ ಯಾವುದೇ ಕ್ರಮ ಕೈಗೊಳ್ಳುತ್ತಿಲ್ಲ ಎಂದು ಖಾಸಗಿ ಬಸ್ ಮಾಲೀಕರು ವಾಗ್ದಾಳಿ ನಡೆಸಿದ್ದಾರೆ.

ಬೆಂಗಳೂರಿಗೆ ಸಂಬಂಧಿಸಿದ ಸುದ್ದಿಗಳನ್ನು ಓದಲು ಇದರ ಮೇಲೆ ಕ್ಲಿಕ್ ಮಾಡಿ

Follow Us
ತೆಲುಗಿನ ರೀತಿ ಕನ್ನಡ ಚಿತ್ರರಂಗದಲ್ಲಿ ಯಾಕೆ ಇಲ್ಲ; ಬೇಸರ ತೋಡಿಕೊಂಡ ದಿಗಂತ್
ತೆಲುಗಿನ ರೀತಿ ಕನ್ನಡ ಚಿತ್ರರಂಗದಲ್ಲಿ ಯಾಕೆ ಇಲ್ಲ; ಬೇಸರ ತೋಡಿಕೊಂಡ ದಿಗಂತ್
ಬಂಗಾಳದ ಮತಗಟ್ಟೆಗೆ ಕಾಡಾನೆ ಎಂಟ್ರಿ; ಕಂಗಾಲಾದ ಮತದಾರರು
ಬಂಗಾಳದ ಮತಗಟ್ಟೆಗೆ ಕಾಡಾನೆ ಎಂಟ್ರಿ; ಕಂಗಾಲಾದ ಮತದಾರರು
ಟಿಎಂಸಿಯ ಗೂಂಡಾಗಿರಿ ಅಂತ್ಯವಾಗುವ ಸಮಯ ಬಂದಿದೆ; ಬಂಗಾಳದಲ್ಲಿ ಅಮಿತ್ ಶಾ
ಟಿಎಂಸಿಯ ಗೂಂಡಾಗಿರಿ ಅಂತ್ಯವಾಗುವ ಸಮಯ ಬಂದಿದೆ; ಬಂಗಾಳದಲ್ಲಿ ಅಮಿತ್ ಶಾ
ಬಂಗಾಳದ ಹೌರಾದಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ಬಂಗಾಳದ ಹೌರಾದಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ಬೆಂಗಳೂರಿನಲ್ಲಿ ಭಾರೀ ಅಗ್ನಿ ದುರಂತ, 10ಕಿ.ಮೀ ವರೆಗೂ ಗೋಚರಿಸಿದ ದಟ್ಟ ಹೊಗೆ
ಬೆಂಗಳೂರಿನಲ್ಲಿ ಭಾರೀ ಅಗ್ನಿ ದುರಂತ, 10ಕಿ.ಮೀ ವರೆಗೂ ಗೋಚರಿಸಿದ ದಟ್ಟ ಹೊಗೆ
ತಂದೆ ಸಾವಿನ ನಡುವೆ ಪರೀಕ್ಷೆ ಬರೆದಿದ್ದ ವಿದ್ಯಾರ್ಥಿ SSLC ಪಾಸ್​​
ತಂದೆ ಸಾವಿನ ನಡುವೆ ಪರೀಕ್ಷೆ ಬರೆದಿದ್ದ ವಿದ್ಯಾರ್ಥಿ SSLC ಪಾಸ್​​
ಬಂಗಾಳದಲ್ಲಿ ಬಿಜೆಪಿ ಅಭ್ಯರ್ಥಿಯನ್ನು ಅಟ್ಟಾಡಿಸಿಕೊಂಡು ಹೋಗಿ ಹಲ್ಲೆ
ಬಂಗಾಳದಲ್ಲಿ ಬಿಜೆಪಿ ಅಭ್ಯರ್ಥಿಯನ್ನು ಅಟ್ಟಾಡಿಸಿಕೊಂಡು ಹೋಗಿ ಹಲ್ಲೆ
ಶುರುವಾಯ್ತು ಸಲ್ಮಾನ್ ಖಾನ್-ನಯನತಾರಾ ಸಿನಿಮಾ: ವಿಡಿಯೋ
ಶುರುವಾಯ್ತು ಸಲ್ಮಾನ್ ಖಾನ್-ನಯನತಾರಾ ಸಿನಿಮಾ: ವಿಡಿಯೋ
ಮದುವೆ ಮಂಟಪದಿಂದ ಮತಗಟ್ಟೆಗೆ; ತಿರುನಲ್ವೇಲಿಯಲ್ಲಿ ನವವಿವಾಹಿತರ ಮತದಾನ
ಮದುವೆ ಮಂಟಪದಿಂದ ಮತಗಟ್ಟೆಗೆ; ತಿರುನಲ್ವೇಲಿಯಲ್ಲಿ ನವವಿವಾಹಿತರ ಮತದಾನ
ಜಮೀರ್ JDS ಸೇರ್ಪಡೆ ಚರ್ಚೆ ಬಗ್ಗೆ ಕುಮಾರಸ್ವಾಮಿ ಸ್ಫೋಟಕ ಹೇಳಿಕೆ!
ಜಮೀರ್ JDS ಸೇರ್ಪಡೆ ಚರ್ಚೆ ಬಗ್ಗೆ ಕುಮಾರಸ್ವಾಮಿ ಸ್ಫೋಟಕ ಹೇಳಿಕೆ!