AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಖಾಸಗಿ ಬಸ್ ಮಾಲೀಕರಿಂದ 2 ಕೋಟಿ 13 ಲಕ್ಷ ರುಪಾಯಿ ದಂಡ ವಸೂಲಿ ಮಾಡಿದ ಆರ್​ಟಿಓ

ದೀಪಾವಳಿಯ ಹಬ್ಬದ ಸಮಯದಲ್ಲಿ ಪ್ರಯಾಣಿಕರಿಂದ ಓನ್ ಟೂ ಡಬಲ್ ಹಣ ವಸೂಲಿ ಮಾಡುತ್ತಿದ್ದ ಖಾಸಗಿ ಬಸ್ ಮಾಲೀಕರಿಗೆ ಆರ್​ಟಿಓ ಸರಿಯಾಗಿ ಬಿಸಿ ಮುಟ್ಟಿಸಿದೆ. ದೀಪಾವಳಿ ಹಬ್ಬದ ಹಿನ್ನೆಲೆಯಲ್ಲಿ ಪ್ರಯಾಣಿಕರಿಂದ ದುಪ್ಪಟ್ಟು ಹಣ ವಸೂಲಿ ಮಾಡುತ್ತಿದ್ದ ಖಾಸಗಿ ಬಸ್​ಗಳನ್ನು ತಪಾಸಣೆ ಮಾಡಿದ ರಾಜ್ಯ ‌ಸಾರಿಗೆ ಇಲಾಖೆಯ ಅಧಿಕಾರಿಗಳು ದಂಡ ವಸೂಲಿ ಮಾಡಿದ್ದಾರೆ.

ಖಾಸಗಿ ಬಸ್ ಮಾಲೀಕರಿಂದ 2 ಕೋಟಿ 13 ಲಕ್ಷ ರುಪಾಯಿ ದಂಡ ವಸೂಲಿ ಮಾಡಿದ ಆರ್​ಟಿಓ
ಸಾಂದರ್ಭಿಕ ಚಕಿತ್ರ
ಕಿರಣ್​ ಸೂರ್ಯ
| Edited By: ಆಯೇಷಾ ಬಾನು|

Updated on: Nov 16, 2023 | 2:58 PM

Share

ಬೆಂಗಳೂರು, ನ.16: ದೀಪಾವಳಿ (Deepavali) ಹಬ್ಬದ ಹಿನ್ನೆಲೆಯಲ್ಲಿ ರಾಜ್ಯದ ಹಬ್ಬ ಆಚರಣೆ ಮಾಡಲು ಜನರು ತಮ್ಮ ತಮ್ಮ ಊರುಗಳತ್ತ ಹೊರಟಿದ್ದರು. ಇದನ್ನು ಬಂಡವಾಳ ಮಾಡಿಕೊಂಡಿದ್ದ ಖಾಸಗಿ ಬಸ್ (Private Bus) ಮಾಲೀಕರು ಓನ್ ಟೂ ಡಬಲ್ ದರ ಹಣ ಪೀಕಿದ್ರು ಇದಕ್ಕೆ ಬ್ರೇಕ್ ಹಾಕಿದ ಆರ್ಟಿಓ ಅಧಿಕಾರಿಗಳು (RTO) ಬರೋಬ್ಬರಿ 2 ಕೋಟಿ 13 ಲಕ್ಷ ದಂಡ ವಸೂಲಿ ಮಾಡಿದ್ದಾರೆ. ಹಾಗೂ 37 ಬಸ್ ಸೀಜ್ ಮಾಡಿದ್ದಾರೆ. 1470 ಖಾಸಗಿ ಬಸ್ ಮೇಲೆ ಕೇಸ್ ಬಿದ್ದಿದೆ.

ಈ ಬಾರಿಯ ದೀಪಾವಳಿಯ ಹಬ್ಬದ ಸಮಯದಲ್ಲಿ ಪ್ರಯಾಣಿಕರಿಂದ ಓನ್ ಟೂ ಡಬಲ್ ಹಣ ವಸೂಲಿ ಮಾಡುತ್ತಿದ್ದ ಖಾಸಗಿ ಬಸ್ ಮಾಲೀಕರಿಗೆ ಆರ್​ಟಿಓ ಸರಿಯಾಗಿ ಬಿಸಿ ಮುಟ್ಟಿಸಿದೆ. ದೀಪಾವಳಿ ಹಬ್ಬದ ಹಿನ್ನೆಲೆಯಲ್ಲಿ ಪ್ರಯಾಣಿಕರಿಂದ ದುಪ್ಪಟ್ಟು ಹಣ ವಸೂಲಿ ಮಾಡುತ್ತಿದ್ದ ಖಾಸಗಿ ಬಸ್​ಗಳನ್ನು ತಪಾಸಣೆ ಮಾಡಿದ ರಾಜ್ಯ ‌ಸಾರಿಗೆ ಇಲಾಖೆಯ ಅಧಿಕಾರಿಗಳು ದಂಡ ವಸೂಲಿ ಮಾಡಿದ್ದಾರೆ. ದೀಪಾವಳಿ ಹಬ್ಬದ ಹಿನ್ನೆಲೆಯಲ್ಲಿ ಸಾಲು ಸಾಲು ರಜೆ ನೀಡಲಾಗಿತ್ತು. ಹಾಗಾಗಿ ಜನರು ತಮ್ಮ ತಮ್ಮ ‌ಸ್ವಂತ ಊರುಗಳತ್ತ ಪ್ರಯಾಣ ಬೆಳೆಸಿದ್ರು ಆದರೆ ಇದನ್ನೆ ಬಂಡವಾಳ ಮಾಡಿಕೊಂಡ ಕೆಲ ಖಾಸಗಿ ಬಸ್ ಮಾಲೀಕರು ವಿಪರೀತವಾಗಿ ಒನ್ ಟೂ ಡಬಲ್ ದರ ಫಿಕ್ಸ್ ಮಾಡಿಕೊಂಡು ಹಣ ಪೀಕಲು ಮುಂದಾಗಿದ್ದರು. ಈ ಹಿನ್ನೆಲೆಯಲ್ಲಿ ಫೀಲ್ಡ್ ಗೆ ಇಳಿದಿದ್ದ ರಾಜ್ಯ ಸಾರಿಗೆ ಇಲಾಖೆಯ ಅಧಿಕಾರಿಗಳು ಸುಮಾರು ಎರಡು ಸಾವಿರ ಬಸ್ ಗಳನ್ನು ತಪಾಸಣೆ ಮಾಡಿ 1460 ಕೇಸ್ ಗಳನ್ನು ದಾಖಲಿಸಿದ್ದಾರೆ.

ಇದನ್ನೂ ಓದಿ: ದೀಪಾವಳಿ: ಖಾಸಗಿ ಬಸ್​​​ಗಳ ಟಿಕೆಟ್ ದರ ಭಾರಿ ದುಬಾರಿ, ಬೆಂಗಳೂರಿನಿಂದ ಊರಿಗೆ ತೆರಳುವವರಿಗೆ ಸಂಕಷ್ಟ

ಇನ್ನು ಇದರಿಂದ ರಾಜ್ಯ ಸರ್ಕಾರದ ಬೊಕ್ಕಸಕ್ಕೆ ಸುಮಾರು 2 ಕೋಟಿ 14 ಲಕ್ಷ ರುಪಾಯಿ ದಂಡ ವಸೂಲಿ ಆಗಿದೆ. ಅನಧಿಕೃತವಾಗಿ ಪಟಾಕಿ ಸಾಗಿಸುತ್ತಿದ್ದ 21 ಬಸ್ ಸೇರಿದಂತೆ ಒಟ್ಟು 36 ಖಾಸಗಿ ಬಸ್ ಗಳನ್ನು ಸೀಜ್ ಮಾಡಲಾಗಿದೆ. ಈ ಬಗ್ಗೆ ಆಕ್ರೋಶ ವ್ಯಕ್ತಪಡಿಸಿದ ರಾಜ್ಯ ಖಾಸಗಿ ಬಸ್ ಮಾಲೀಕರ ಸಂಘದ ಅಧ್ಯಕ್ಷ ನಟರಾಜ್ ಶರ್ಮ ಹಬ್ಬದ ಸಂದರ್ಭದಲ್ಲಿ ಖಾಸಗಿ ಬಸ್ ಗಳು ಮಾತ್ರ ಅಲ್ಲ ಕೆಎಸ್ಆರ್ಟಿಸಿ ಬಸ್ ನವ್ರು ಹೆಚ್ಚಿನ ಹಣ ಪಡೆದುಕೊಳ್ಳುತ್ತಾರೆ, ಅತ್ತಿಬೆಲೆಯಿಂದ ಬರುವ ಬಿಎಂಟಿಸಿ ಬಸ್ ಗಳಲ್ಲಿ ಸಾಕಷ್ಟು ಪಟಾಕಿ ಸಪ್ಲೈ ಆಗಿದೆ. ಆದರೆ ಕೆಎಸ್ಆರ್ಟಿಸಿ, ಬಿಎಂಟಿಸಿ ಮೇಲೆ ಯಾಕೆ ಯಾವುದೇ ಕ್ರಮ ಕೈಗೊಂಡಿಲ್ಲ ಎಂದು ಆಕ್ರೋಶ ಹೊರ ಹಾಕಿದರು.

ಒಟ್ನಲ್ಲಿ ದುಪ್ಪಟ್ಟು ಹಣ ವಸೂಲಿ ಮಾಡುತ್ತಿದ್ದ ಖಾಸಗಿ ಮಾಲೀಕರಿಗೆ ಏನೋ ಆರ್ಟಿಓ ಅಧಿಕಾರಿಗಳು ದಂಡ ಹಾಕಿ ಬಸ್ ಸೀಜ್ ಮಾಡಿ ಬಿಸಿ ಮುಟ್ಟಿಸಿದ್ದಾರೆ. ಆದರೆ ಕೆಎಸ್ಆರ್ಟಿಸಿ ಬಸ್ ವಿರುದ್ಧ ಯಾಕೆ ಯಾವುದೇ ಕ್ರಮ ಕೈಗೊಳ್ಳುತ್ತಿಲ್ಲ ಎಂದು ಖಾಸಗಿ ಬಸ್ ಮಾಲೀಕರು ವಾಗ್ದಾಳಿ ನಡೆಸಿದ್ದಾರೆ.

ಬೆಂಗಳೂರಿಗೆ ಸಂಬಂಧಿಸಿದ ಸುದ್ದಿಗಳನ್ನು ಓದಲು ಇದರ ಮೇಲೆ ಕ್ಲಿಕ್ ಮಾಡಿ

Follow Us
Kiran Surya
Kiran Surya

ಕಿರಣ್ ಸೂರ್ಯ (Kiran Surya) ಅವರು ಟಿವಿ9 ಕನ್ನಡ (TV9 Kannada) ವಾಹಿನಿಯಲ್ಲಿ ಹಿರಿಯ ವರದಿಗಾರರಾಗಿ (Senior Reporter) ಕಾರ್ಯನಿರ್ವಹಿಸುತ್ತಿದ್ದಾರೆ

Read More
ಮುಂದಿನ ಪೀಳಿಗೆ ಕೂಡ ಡಿಕೆಶಿ ಸಾಧನೆ ಬಗ್ಗೆ ಮಾತಾಡುವಂತೆ ಕೆಲಸ ಆಗಲಿ: ರಮೇಶ್
ಮುಂದಿನ ಪೀಳಿಗೆ ಕೂಡ ಡಿಕೆಶಿ ಸಾಧನೆ ಬಗ್ಗೆ ಮಾತಾಡುವಂತೆ ಕೆಲಸ ಆಗಲಿ: ರಮೇಶ್
ಡಿಕೆ ಶಿವಕುಮಾರ್ ಪದಗ್ರಹಣದ ಬಗ್ಗೆ ಶಿವರಾಜ್ ಕುಮಾರ್ ಮಾತು: ವಿಡಿಯೋ
ಡಿಕೆ ಶಿವಕುಮಾರ್ ಪದಗ್ರಹಣದ ಬಗ್ಗೆ ಶಿವರಾಜ್ ಕುಮಾರ್ ಮಾತು: ವಿಡಿಯೋ
ಸಚಿವರಾಗಿ ಪ್ರಮಾಣದ ಬೆನ್ನಲ್ಲೇ ತಂದೆ ಸಿದ್ದರಾಮಯ್ಯ ಆಶೀರ್ವಾದ ಪಡೆದ ಯತೀಂದ್ರ
ಸಚಿವರಾಗಿ ಪ್ರಮಾಣದ ಬೆನ್ನಲ್ಲೇ ತಂದೆ ಸಿದ್ದರಾಮಯ್ಯ ಆಶೀರ್ವಾದ ಪಡೆದ ಯತೀಂದ್ರ
ಡಿಕೆ ಶಿವಕುಮಾರ್ ಸಿಎಂ ಆಗಿದ್ದಕ್ಕೆ ತುಂಬಾ ಖುಷಿ ಆಗುತ್ತಿದೆ: ನಟಿ ರಮ್ಯಾ
ಡಿಕೆ ಶಿವಕುಮಾರ್ ಸಿಎಂ ಆಗಿದ್ದಕ್ಕೆ ತುಂಬಾ ಖುಷಿ ಆಗುತ್ತಿದೆ: ನಟಿ ರಮ್ಯಾ
ಡಿಕೆಶಿ ಪದಗ್ರಹಣದ ಬೆನ್ನಲ್ಲೇ ವಿಧಾನಸೌಧದಲ್ಲಿ ಬದಲಾದ ಸಿಎಂ ಕಚೇರಿ ನಾಮಫಲಕ
ಡಿಕೆಶಿ ಪದಗ್ರಹಣದ ಬೆನ್ನಲ್ಲೇ ವಿಧಾನಸೌಧದಲ್ಲಿ ಬದಲಾದ ಸಿಎಂ ಕಚೇರಿ ನಾಮಫಲಕ
ಡಿಸಿಎಂ ಆಗಿ ಪರಮೇಶ್ವರ್ ಪ್ರಮಾಣವಚನ, ಇಲ್ಲಿದೆ ಇವರ ರಾಜಕೀಯ ಜರ್ನಿ
ಡಿಸಿಎಂ ಆಗಿ ಪರಮೇಶ್ವರ್ ಪ್ರಮಾಣವಚನ, ಇಲ್ಲಿದೆ ಇವರ ರಾಜಕೀಯ ಜರ್ನಿ
ಸಂವಿಧಾನ ಹಿಡಿದು, ಅಜ್ಜಯ್ಯನ ಹೆಸರಲ್ಲಿ ಪ್ರಮಾಣವಚನ ಸ್ವೀಕರಿಸಿದ ಡಿಕೆಶಿ
ಸಂವಿಧಾನ ಹಿಡಿದು, ಅಜ್ಜಯ್ಯನ ಹೆಸರಲ್ಲಿ ಪ್ರಮಾಣವಚನ ಸ್ವೀಕರಿಸಿದ ಡಿಕೆಶಿ
ಕಾರಿನಲ್ಲಿ ಕುಳಿತೇ ಅಭಿಮಾನಿಗಳಿಗೆ ಫ್ಲೈಯಿಂಗ್ ಕಿಸ್ ಕೊಟ್ಟ ರಾಹುಲ್ ಗಾಂಧಿ
ಕಾರಿನಲ್ಲಿ ಕುಳಿತೇ ಅಭಿಮಾನಿಗಳಿಗೆ ಫ್ಲೈಯಿಂಗ್ ಕಿಸ್ ಕೊಟ್ಟ ರಾಹುಲ್ ಗಾಂಧಿ
ಡಿಕೆ ಶಿವಕುಮಾರ್ ಪ್ರಮಾಣ ವಚನಕ್ಕೆ ಖುಷಿಯಿಂದ ಆಗಮಿಸಿದ ನಟಿ ರಮ್ಯಾ: ವಿಡಿಯೋ
ಡಿಕೆ ಶಿವಕುಮಾರ್ ಪ್ರಮಾಣ ವಚನಕ್ಕೆ ಖುಷಿಯಿಂದ ಆಗಮಿಸಿದ ನಟಿ ರಮ್ಯಾ: ವಿಡಿಯೋ
Live: ಸಿಎಂ ಆಗಿ ಡಿಕೆ ಶಿವಕುಮಾರ್ ಪದಗ್ರಹಣ; ಲೈವ್​​ ನೋಡಿ
Live: ಸಿಎಂ ಆಗಿ ಡಿಕೆ ಶಿವಕುಮಾರ್ ಪದಗ್ರಹಣ; ಲೈವ್​​ ನೋಡಿ