AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕೆ.ಆರ್. ಸರ್ಕಲ್​​ನಲ್ಲಿ ಅಪರ ಮುಖ್ಯ ಕಾರ್ಯದರ್ಶಿ ಕಾರಿಗೆ ಬ್ರೇಕ್ ಹಾಕಿದ RTO ಅಧಿಕಾರಿ! ಸಿಡಿಮಿಡಿಗೊಂಡ ಹಿರಿಯ IAS

ರಾಜ್ಯದಲ್ಲಿ ಅಸೆಂಬ್ಲಿ ಚುನಾವಣೆಗಳು ಘೋಷಣೆಗೊಂಡಿವೆ. ಈ ಸಂದರ್ಭದಲ್ಲಿ ಅಧಿಕಾರಿಗಳೇ ರಾಜ್ಯದ ಚುಕ್ಕಾಣಿ ಹಿಡಿದು ಮುನ್ನಡೆಸುವುದು ಸಾಮಾನ್ಯ. ಇಂತಹ ಸಂದರ್ಭದಲ್ಲಿ ಅಧಿಕಾರಿಗಳ ಕಾರುಬಾರು ಮೇಲುಗೈ ಆಗಿರುತ್ತದೆ. ದೊಡ್ಡಮಟ್ಟದ ಐಎಎಸ್ ಅಧಿಕಾರಿಗೂ ಇದರ ಬಿಸಿ ತಟ್ಟಿದೆ.

ಕೆ.ಆರ್. ಸರ್ಕಲ್​​ನಲ್ಲಿ ಅಪರ ಮುಖ್ಯ ಕಾರ್ಯದರ್ಶಿ ಕಾರಿಗೆ ಬ್ರೇಕ್ ಹಾಕಿದ RTO ಅಧಿಕಾರಿ! ಸಿಡಿಮಿಡಿಗೊಂಡ ಹಿರಿಯ IAS
ಕೆ.ಆರ್. ಸರ್ಕಲ್​​ನಲ್ಲಿ ಅಪರ ಮುಖ್ಯ ಕಾರ್ಯದರ್ಶಿ ಕಾರಿಗೆ ಬ್ರೇಕ್ ಹಾಕಿದ RTO ಅಧಿಕಾರಿ
TV9 Web
| Updated By: ಸಾಧು ಶ್ರೀನಾಥ್​|

Updated on: Apr 05, 2023 | 3:36 PM

Share

ಬೆಂಗಳೂರು: ರಾಜ್ಯದಲ್ಲಿ ಅಸೆಂಬ್ಲಿ ಚುನಾವಣೆಗಳು (Karnataka Assembly Elections 2023) ಘೋಷಣೆಗೊಂಡಿವೆ. ಈ ಸಂದರ್ಭದಲ್ಲಿ ಅಧಿಕಾರಿಗಳೇ ರಾಜ್ಯದ ಚುಕ್ಕಾಣಿ ಹಿಡಿದು ಮುನ್ನಡೆಸುವುದು ಸಾಮಾನ್ಯ. ಇಂತಹ ಸಂದರ್ಭದಲ್ಲಿ ಅಧಿಕಾರಿಗಳ ಕಾರುಬಾರು ಮೇಲುಗೈ ಆಗಿರುತ್ತದೆ. ದೊಡ್ಡಮಟ್ಟದ ಐಎಎಸ್ ಅಧಿಕಾರಿಗೂ ಇದರ ಬಿಸಿ ತಟ್ಟಿದೆ. ಪ್ರಸ್ತುತ ನಗರಾಭಿವೃದ್ಧಿ ಇಲಾಖೆಯ ಅಪರ ಮುಖ್ಯ ಕಾರ್ಯದರ್ಶಿ (ACS) ಮತ್ತು ಬಿಬಿಎಂಪಿ ಆಡಳಿತಗಾರ ರಾಕೇಶ್ ಸಿಂಗ್ ಅವರು ಕೆಳಹಂತದ (RTO) ಅಧಿಕಾರಿಯೊಬ್ಬರು ಅತ್ಯುತ್ಸಾಹದಲ್ಲಿ ಕೈಗೊಂಡಿರುವ ಕ್ರಮದಿಂದ ಕಸಿವಿಸಿ ಅನುಭವಿಸಿದ್ದಾರೆ. ಅದೂ ನಡುರಸ್ತೆಯಲ್ಲಿ ಇಂತಹ ಅಧಿಕ ಪ್ರಸಂಗವೊಂದು ಒದಗಿಬಂದಿರುವುದು ಅವರಿಗೆ ಮುಜುಗುರ ತಂದಿದೆ.

ರಾಜ್ಯಾದ್ಯಂತ ಆರ್​​ಟಿಓ ಅಧಿಕಾರಿಗಳು ಎಲೆಕ್ಷನ್ ಡ್ಯೂಟಿಗಾಗಿ ಸರ್ಕಾರಿ ವಾಹನಗಳನ್ನು (Car) ವಶಕ್ಕೆ ಪಡೆದುಕೊಳ್ಳುತ್ತಿದ್ದಾರೆ. ಆರ್​​ಟಿಓ ಅಧಿಕಾರಿಗಳು ಮತ್ತು ಪೊಲೀಸರು ಈಗಾಗಲೇ ಸುಮಾರು 450 ಸರ್ಕಾರಿ ವಾಹನಗಳನ್ನು ವಶಕ್ಕೆ ಪಡೆದುಕೊಂಡಿದ್ದಾರೆ. ಇಂತಹ ಪರಿಸ್ಥಿತಿಯಲ್ಲಿ ಇಂದು ಬುಧವಾರ ಕೆ.ಆರ್. ಸರ್ಕಲ್ ನಲ್ಲಿ ಮೇಲಿನ ಘಟನೆ ನಡೆದಿದೆ.

Also Read:

IAS Vandita Sharma: ಆರು ತಿಂಗಳ ಅಧಿಕಾರಾವಧಿಗೆ ಕರ್ನಾಟಕ ಮುಖ್ಯ ಕಾರ್ಯದರ್ಶಿಯಾಗಿ ವಂದಿತಾ ಶರ್ಮಾ ಅಧಿಕಾರ ಸ್ವೀಕಾರ

ಈ ವೇಳೆ ನಗರಾಭಿವೃದ್ಧಿ ಇಲಾಖೆಯ ಅಪಾರ ಮುಖ್ಯ ಕಾರ್ಯದರ್ಶಿ ಮತ್ತು ಬಿಬಿಎಂಪಿ ಆಡಳಿತಗಾರ ರಾಕೇಶ್ ಸಿಂಗ್ ಅವರು ಆರ್ಟಿಓ ಅಧಿಕಾರಿ ವಿರುದ್ಧ ಸಿಡಿಮಿಡಿಗೊಂಡಿದ್ದಾರೆ. ನನ್ನ ವಾಹನವನ್ನು ವಶಕ್ಕೆ ಪಡೆದುಕೊಳ್ಳಿ. ನಾನು ನಿಮ್ಮದೇ ಆರ್​​ಟಿಓ ಜೀಪ್ ನಲ್ಲಿ ಹೋಗ್ತೀನಿ ಎಂದು ರಾಕೇಶ್ ಗರಂ ಆಗಿದ್ದಾರೆ. ಇದಕ್ಕೆ ಆರ್​​ಟಿಓ ಅಧಿಕಾರಿ ಕೈ ಮುಗಿದು,‌ ನಿಮ್ಮ ಕಾರು ವಶಕ್ಕೆ ಪಡೆದಿಲ್ಲ ಎಂದು ಸಮಜಾಯಿಷಿ ನೀಡತೊಡಗಿದ್ದಾರೆ. ‌ನಿಮ್ಮ ಕಾರು ಎಂದು ನಮಗೆ ಗೊತ್ತಾಗಿಲ್ಲ ಸಾರ್. ದಯವಿಟ್ಟು ನೀವು ಹೋಗಿ ಸರ್ ಎಂದು ಆರ್ಟಿಓ ಅಧಿಕಾರಿ ಕೈ ಮುಗಿದು ಕೇಳಿಕೊಂಡಿದ್ದಾರೆ.

ಪ್ರಮುಖ ಸುದ್ದಿಗಳನ್ನು ಓದಲು ಇದರ ಮೇಲೆ ಕ್ಲಿಕ್ ಮಾಡಿ

ಭಾಷೆಯಿಂದ ನಾವು, ನಮ್ಮಿಂದ ಭಾಷೆ ಅಲ್ಲ: ಗೋಲ್ಡನ್ ಸ್ಟಾರ್ ಗಣೇಶ್
ಭಾಷೆಯಿಂದ ನಾವು, ನಮ್ಮಿಂದ ಭಾಷೆ ಅಲ್ಲ: ಗೋಲ್ಡನ್ ಸ್ಟಾರ್ ಗಣೇಶ್
ಉತ್ತರಾಖಂಡದಲ್ಲಿ ಪ್ರವಾಹ, ಭೂಕುಸಿತದಿಂದ ರಸ್ತೆಗಳೇ ಮಾಯ!
ಉತ್ತರಾಖಂಡದಲ್ಲಿ ಪ್ರವಾಹ, ಭೂಕುಸಿತದಿಂದ ರಸ್ತೆಗಳೇ ಮಾಯ!
ಫೋಟೋಶೂಟ್ ಮಾಡಿಕೊಳ್ಳೋಕೆ ಬಂದ್ರಾ?; ಮಹಿಳೆಯ ಪ್ರಶ್ನೆಗೆ ಬೆವರಿದ ಕಂಗನಾ
ಫೋಟೋಶೂಟ್ ಮಾಡಿಕೊಳ್ಳೋಕೆ ಬಂದ್ರಾ?; ಮಹಿಳೆಯ ಪ್ರಶ್ನೆಗೆ ಬೆವರಿದ ಕಂಗನಾ
ಎಲ್ಲರ ಅಪೇಕ್ಷೆಯಂತೆ ಬಿಜೆಪಿಯಲ್ಲಿ ಖಂಡಿತ ಬದಲಾವಣೆಗಳು ಆಗಲಿವೆ: ಈಶ್ವರಪ್ಪ
ಎಲ್ಲರ ಅಪೇಕ್ಷೆಯಂತೆ ಬಿಜೆಪಿಯಲ್ಲಿ ಖಂಡಿತ ಬದಲಾವಣೆಗಳು ಆಗಲಿವೆ: ಈಶ್ವರಪ್ಪ
ಸುರ್ಜೇವಾಲಾ ನನಗೆ ಬಾಯ್ಮುಚ್ಚಿಕೊಂಡಿರುವಂತೆ ಹೇಳಿದ್ದಾರೆ: ಮಧು ಬಂಗಾರಪ್ಪ
ಸುರ್ಜೇವಾಲಾ ನನಗೆ ಬಾಯ್ಮುಚ್ಚಿಕೊಂಡಿರುವಂತೆ ಹೇಳಿದ್ದಾರೆ: ಮಧು ಬಂಗಾರಪ್ಪ
ಯಾವಾಗಲೂ ಕುಮಾರ್ ಬಂಗಾರಪ್ಪ ಮನೆಯಲ್ಲಿ ಸಭೆ ನಡೆಸುತ್ತಿದ್ದ ರೆಬೆಲ್​ಗಳು
ಯಾವಾಗಲೂ ಕುಮಾರ್ ಬಂಗಾರಪ್ಪ ಮನೆಯಲ್ಲಿ ಸಭೆ ನಡೆಸುತ್ತಿದ್ದ ರೆಬೆಲ್​ಗಳು
ನೀರಿಗಿಳಿಯಬಾರದೆಂಬ ಸೂಚನೆಯಿದ್ದರೂ ಉಲ್ಲಂಘಿಸುತ್ತಿರುವ ಪ್ರವಾಸಿಗರು
ನೀರಿಗಿಳಿಯಬಾರದೆಂಬ ಸೂಚನೆಯಿದ್ದರೂ ಉಲ್ಲಂಘಿಸುತ್ತಿರುವ ಪ್ರವಾಸಿಗರು
ಸಿಎಂ, ಡಿಸಿಎಂ ಆದಿಯಾಗಿ ಎಲ್ಲರೂ ಫೋನ್ ರಿಸೀವ್ ಮಾಡುತ್ತಾರೆ: ಲಕ್ಷ್ಮಣ ಸವದಿ
ಸಿಎಂ, ಡಿಸಿಎಂ ಆದಿಯಾಗಿ ಎಲ್ಲರೂ ಫೋನ್ ರಿಸೀವ್ ಮಾಡುತ್ತಾರೆ: ಲಕ್ಷ್ಮಣ ಸವದಿ
ಕವಡೆ ಶಾಸ್ತ್ರವೇ ನಿಜವಾದರೆ ಕಾಂಗ್ರೆಸ್ ನಾಯಕರು ಆಗೇನು ಹೇಳುತ್ತಾರೆ? ಅಶೋಕ
ಕವಡೆ ಶಾಸ್ತ್ರವೇ ನಿಜವಾದರೆ ಕಾಂಗ್ರೆಸ್ ನಾಯಕರು ಆಗೇನು ಹೇಳುತ್ತಾರೆ? ಅಶೋಕ
ಗಣ್ಯರಿಗೆ ಖಾಸಗಿ ಆಸ್ಪತ್ರೆಗಳೇ ಯಾಕೆ? ಸರ್ಕಾರೀ ಆಸ್ಪತ್ರೆ ಯಾಕೆ ಬೇಡ?
ಗಣ್ಯರಿಗೆ ಖಾಸಗಿ ಆಸ್ಪತ್ರೆಗಳೇ ಯಾಕೆ? ಸರ್ಕಾರೀ ಆಸ್ಪತ್ರೆ ಯಾಕೆ ಬೇಡ?