Sign In

By signing in or creating an account, you agree with Associated Broadcasting Company's Terms & Conditions and Privacy Policy.

ಹಳೆ ವಾಹನಗಳನ್ನ ಗುಜುರಿಗೆ ಹಾಕಲು ಆರ್​​ಟಿಒನಿಂದ ಸ್ಕ್ರ್ಯಾಪಿಂಗ್ ಕೇಂದ್ರ ಸ್ಥಾಪನೆ

ಹಳೆ ವಾಹನಗಳನ್ನ ಗುಜುರಿಗೆ ಹಾಕಲು ಆರ್​​ಟಿಒನಿಂದ ಸ್ಕ್ರಾಪಿಂಗ್​ ಕೇಂದ್ರ ಸ್ಥಾಪನೆ ಮುಂದಾಗಿದ್ದು, M/s Mahindra M5TC Recycling Pvt Ltd, ವಿಜಯಪುರ, ದೇವನಹಳ್ಳಿ ಇವರಿಗೆ ಮೊಟ್ಟ ಮೊದಲ ಸ್ಕ್ರಾಪಿಂಗ್ ಕೇಂದ್ರವನ್ನು ಸ್ಥಾಪಿಸಲು ಇಂದಿನಿಂದ ಜಾರಿಗೆ ಬರುವಂತೆ ಆರ್​​ಟಿಒ ನೋಂದಣಿ ಪತ್ರ ನೀಡಿದೆ.

ಹಳೆ ವಾಹನಗಳನ್ನ ಗುಜುರಿಗೆ ಹಾಕಲು ಆರ್​​ಟಿಒನಿಂದ ಸ್ಕ್ರ್ಯಾಪಿಂಗ್ ಕೇಂದ್ರ ಸ್ಥಾಪನೆ
ಪ್ರಾತಿನಿಧಿಕ ಚಿತ್ರ
Follow us
Kiran Surya
| Updated By: ಗಂಗಾಧರ​ ಬ. ಸಾಬೋಜಿ

Updated on: Sep 14, 2023 | 9:15 PM

ಬೆಂಗಳೂರು, ಸೆಪ್ಟೆಂಬರ್​ 14: ಹಳೆ ವಾಹನಗಳನ್ನ ಗುಜುರಿಗೆ ಹಾಕಲು ಆರ್​​ಟಿಒನಿಂದ ಸ್ಕ್ರ್ಯಾಪಿಂಗ್ (Vehicle Scrap) ಕೇಂದ್ರ ಸ್ಥಾಪನೆ ಮುಂದಾಗಿದ್ದು, M/s Mahindra M5TC Recycling Pvt Ltd, ವಿಜಯಪುರ, ದೇವನಹಳ್ಳಿ ಇವರಿಗೆ ಮೊಟ್ಟ ಮೊದಲ ಸ್ಕ್ರ್ಯಾಪಿಂಗ್ ಕೇಂದ್ರವನ್ನು ಸ್ಥಾಪಿಸಲು ಇಂದಿನಿಂದ ಜಾರಿಗೆ ಬರುವಂತೆ ಆರ್​​ಟಿಒ ನೋಂದಣಿ ಪತ್ರ ನೀಡಿದೆ.

ಕೇಂದ್ರ ಸರ್ಕಾರದ ರಸ್ತೆ ಸಾರಿಗೆ ಮತ್ತು ಹೆದ್ದಾರಿಗಳ ಸಚಿವಾಲಯದ ಆದೇಶದನ್ವಯ ಸಾರಿಗೆ ಇಲಾಖೆಯು ಕರ್ನಾಟಕ ರಾಜ್ಯದಲ್ಲಿ ನೋಂದಾಯಿತ ವಾಹನಗಳ ಸ್ಕ್ರ್ಯಾಪಿಂಗ್ ನೀತಿ  ಡಿಸೆಂಬರ್ 30, 2022ರಲ್ಲಿ ಜಾರಿಗೊಳಿಸಿದ್ದು, ಸಾರಿಗೆ ಇಲಾಖೆಯ ಜಾಲತಾಣದಲ್ಲಿ ಪ್ರಕಟಿಸಲಾಗಿತ್ತು.

ಇದನ್ನೂ ಓದಿ: ಚೀನಾದ ಕೀಪ್ ಶೇರರ್ ಮೊಬೈಲ್​ ಆ್ಯಪ್​ ಮೂಲಕ ವಂಚನೆ: 6. 71 ಕೋಟಿ ರೂ. ಜಪ್ತಿ ಮಾಡಿದ ಜಾರಿ ನಿರ್ದೇಶನಾಲಯ

M/s Mahindra MSTC Recycling Pvt. Ltd, ವಿಜಯಪುರ, ದೇವನಹಳ್ಳಿ ತಾಲೂಕು ಇವರಿಗೆ ಮೊಟ್ಟ ಮೊದಲನೇ ನೋಂದಾಯಿತ ವಾಹನಗಳ ಸ್ಕ್ರ್ಯಾಪಿಂಗ್ ಕೇಂದ್ರ ಸ್ಥಾಪಿಸಲು ಸೆಪ್ಟೆಂಬರ್​​​ 14, 2023 ರಿಂದ ಜಾರಿಗೆ ಬರುವಂತೆ ನೋಂದಣಿ ಪುಮಾಣ ಪತ್ರವನ್ನು ನೀಡಲಾಗಿದೆ. ಹಾಗಾಗಿ ಸಾರ್ವಜನಿಕರು ತಮ್ಮ ಹಳೆಯ ಅನರ್ಹ ವಾಹನಗಳನ್ನು ಸ್ವಯಂ ಪ್ರೇರಿತರಾಗಿ ನಾಶಪಡಿಸಲು ಈ ಕೇಂದ್ರದ ಉಪಯೋಗ ಪಡೆದುಕೊಳ್ಳಬಹುದೆಂದು ಪ್ರಕಟಣೆಯಲ್ಲಿ ತಿಳಿಸಲಾಗಿದೆ.

ಇದನ್ನೂ ಓದಿ: ಸಿಸಿಬಿ ಎದುರು ವಿಚಾರಣೆಗೆ ಹಾಜರಾಗಿ ಹೊರಬಂದ ಗೋವಿಂದ ಬಾಬು ಮಾಧ್ಯಮದವರ ಪ್ರಶ್ನೆಗಳಿಗೆ ಸರಿಯಾಗಿ ಉತ್ತರಿಸಲಿಲ್ಲ

ಕೇಂದ್ರ ಸರ್ಕಾರದ ರಸ್ತೆ ಸಾರಿಗೆ ಮತ್ತು ಹೆದ್ದಾರಿಗಳ ಸಚಿವಾಲಯದ ಹೊಸ ನೀತಿ ಪ್ರಕಾರ ಈ ಕೇಂದ್ರವನ್ನು ಆರಂಭಿಸಲಾಗಿದೆ. 15 ವರ್ಷಕ್ಕಿಂತ ಹಳೆಯದಾದ, ಅನರ್ಹ ವಾಹನಗಳನ್ನು ಹಾಗೂ ಮಾಲಿನ್ಯ ಉಂಟು ಮಾಡುವ ವಾಹನಗಳನ್ನು ನೋಂದಾಯಿತ ವಾಹನ ಗುಜರಿ ಕೇಂದ್ರಕ್ಕೆ ತಂದು ಸ್ಕ್ರ್ಯಾಪಿಂಗ್ ಮಾಡಬಹುದಾಗಿದೆ. 15 ವರ್ಷ ಓಡಿರುವ ಎಲ್ಲ ಸರ್ಕಾರಿ ವಾಹಗಳನ್ನು ಸ್ಕ್ರ್ಯಾಪಿಂಗ್​ ಹಾಕಬೇಕು.

ಭಾರತದಾದ್ಯಂತ ಸುಮಾರು 60 ಆರ್‌ವಿಎಸ್‌ಎಫ್‌ಗಳಿವೆ. ಆದರೆ, ಕರ್ನಾಟಕದಲ್ಲಿ ಯಾವುದೂ ಇಲ್ಲ ಎಂದು ಸಾರಿಗೆ ಇಲಾಖೆಯ ಮೂಲಗಳು ತಿಳಿಸಿವೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

ಮ್ಯಾಜಿಸ್ಟ್ರೇಟ್ 50,000 ರೂ. ಲಂಚ ಕೇಳಿದ್ದಕ್ಕೆ ಮರ ಹತ್ತಿದ ವೃದ್ಧೆ!
ಮ್ಯಾಜಿಸ್ಟ್ರೇಟ್ 50,000 ರೂ. ಲಂಚ ಕೇಳಿದ್ದಕ್ಕೆ ಮರ ಹತ್ತಿದ ವೃದ್ಧೆ!
ಮತ್ತೆ ಜೈಲಿಗೆ ಹೋದ ರಜತ್ ಬಗ್ಗೆ ಕೇಳಿದ್ದಕ್ಕೆ ವಿನಯ್ ಗೌಡ ಹೇಳಿದ್ದೇನು?
ಮತ್ತೆ ಜೈಲಿಗೆ ಹೋದ ರಜತ್ ಬಗ್ಗೆ ಕೇಳಿದ್ದಕ್ಕೆ ವಿನಯ್ ಗೌಡ ಹೇಳಿದ್ದೇನು?
ಸಂಪುಟ ಪುನಾರಚನೆ ಹೈಕಮಾಂಡ್ ವಿವೇಚನೆಗೆ ಬಿಟ್ಟ ವಿಷಯವಾಗಿದೆ: ಸಚಿವ
ಸಂಪುಟ ಪುನಾರಚನೆ ಹೈಕಮಾಂಡ್ ವಿವೇಚನೆಗೆ ಬಿಟ್ಟ ವಿಷಯವಾಗಿದೆ: ಸಚಿವ
ಪುಣೆ ಆಸ್ಪತ್ರೆಯಲ್ಲಿ ಅಂಗವಿಕಲ ನೆಲದಲ್ಲಿ ತೆವಳಿ ಹೋಗುತ್ತಿರುವ ವಿಡಿಯೋ
ಪುಣೆ ಆಸ್ಪತ್ರೆಯಲ್ಲಿ ಅಂಗವಿಕಲ ನೆಲದಲ್ಲಿ ತೆವಳಿ ಹೋಗುತ್ತಿರುವ ವಿಡಿಯೋ
ಮನೋಹರ್, ಹನುಮಂತರಾಯಪ್ಪ, ವೆಂಕಟೇಶ್ ನೇತೃತ್ವದಲ್ಲಿ ಪ್ರತಿಭಟನೆ
ಮನೋಹರ್, ಹನುಮಂತರಾಯಪ್ಪ, ವೆಂಕಟೇಶ್ ನೇತೃತ್ವದಲ್ಲಿ ಪ್ರತಿಭಟನೆ
ಪೋಷಕರಲ್ಲಿ ನಿರಾಳತೆ ಉಂಟು ಮಾಡಿದ ಸರ್ಕಾರದ ನಿರ್ಧಾರ
ಪೋಷಕರಲ್ಲಿ ನಿರಾಳತೆ ಉಂಟು ಮಾಡಿದ ಸರ್ಕಾರದ ನಿರ್ಧಾರ
ಆಟೋಗ್ರಾಫ್ ಕೇಳುವವರೆ ಇರಲಿಲ್ಲ.. ಈಗ ಕ್ಯೂ ನಿಲ್ಲುತ್ತಿದ್ದಾರೆ; ಜಿತೇಶ್
ಆಟೋಗ್ರಾಫ್ ಕೇಳುವವರೆ ಇರಲಿಲ್ಲ.. ಈಗ ಕ್ಯೂ ನಿಲ್ಲುತ್ತಿದ್ದಾರೆ; ಜಿತೇಶ್
ಸರ್ಕಾರಗಳು ನಮ್ಮ ಬವಣೆಯನ್ನು ಅರ್ಥಮಾಡಿಕೊಳ್ಳಬೇಕು: ಲಾರಿ ಮಾಲೀಕ
ಸರ್ಕಾರಗಳು ನಮ್ಮ ಬವಣೆಯನ್ನು ಅರ್ಥಮಾಡಿಕೊಳ್ಳಬೇಕು: ಲಾರಿ ಮಾಲೀಕ
ವರದಿಯಲ್ಲಿರುವ ಶಿಫಾರಸ್ಸುಗಳನ್ನು ಸರ್ಕಾರ ತಿರಸ್ಕರಿಸಬಹುದಾಗಿದೆ: ಖರ್ಗೆ
ವರದಿಯಲ್ಲಿರುವ ಶಿಫಾರಸ್ಸುಗಳನ್ನು ಸರ್ಕಾರ ತಿರಸ್ಕರಿಸಬಹುದಾಗಿದೆ: ಖರ್ಗೆ
Video: ವೇಗವಾಗಿ ಬಂದು ವಾಹನಗಳ ಮೇಲೆ ಹರಿದ ಬಸ್, ಮೂವರು ಸಾವು
Video: ವೇಗವಾಗಿ ಬಂದು ವಾಹನಗಳ ಮೇಲೆ ಹರಿದ ಬಸ್, ಮೂವರು ಸಾವು