AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ವಿದೇಶಗಳಿಂದ ಬಂದವರಿಗೆ ಬೆಂಗಳೂರು ವಿಮಾನ ನಿಲ್ದಾಣದಲ್ಲಿ ಆರ್​ಟಿಪಿಸಿಆರ್​ ಪರೀಕ್ಷೆ ಅಗತ್ಯವಿಲ್ಲ

ಪ್ರಯಾಣಿಕರು ಏರ್​ ಸುವಿಧಾ ಪೋರ್ಟಲ್​ನಲ್ಲಿ ವರದಿಯ ಪ್ರತಿಯನ್ನು ಅಪ್​ಲೋಡ್​ ಮಾಡಬೇಕು. ಪ್ರಯಾಣಿಕರು ವಿಮಾನ ಹತ್ತುವ ಮೊದಲು ವಿಮಾನಯಾನ ಕಂಪನಿಗಳು ಈ ವರದಿಗಳನ್ನು ಪರೀಕ್ಷಿಸಬೇಕು ಎಂದು ಸರ್ಕಾರ ಸೂಚಿಸಿದೆ.

ವಿದೇಶಗಳಿಂದ ಬಂದವರಿಗೆ ಬೆಂಗಳೂರು ವಿಮಾನ ನಿಲ್ದಾಣದಲ್ಲಿ ಆರ್​ಟಿಪಿಸಿಆರ್​ ಪರೀಕ್ಷೆ ಅಗತ್ಯವಿಲ್ಲ
ಪ್ರಾತಿನಿಧಿಕ ಚಿತ್ರ
TV9 Web
| Updated By: Ghanashyam D M | ಡಿ.ಎಂ.ಘನಶ್ಯಾಮ|

Updated on:Oct 19, 2021 | 5:06 PM

Share

ಬೆಂಗಳೂರು: ವಿದೇಶಗಳಿಂದ ನಗರಕ್ಕೆ ಬರುವವರಿಗೆ ಇನ್ನು ಮುಂದೆ ಕೊವಿಡ್ ಪರೀಕ್ಷೆ (ಆರ್​ಟಿಪಿಸಿಅರ್​) ಅಗತ್ಯವಿಲ್ಲ ಎಂದು ರಾಜ್ಯ ಸರ್ಕಾರ ಸ್ಪಷ್ಟಪಡಿಸಿದೆ. ವಿಮಾನ ನಿಲ್ದಾಣದಲ್ಲಿ ವಿದೇಶಿ ಪ್ರಯಾಣಿಕರ ಆರ್​ಟಿಪಿಸಿಆರ್​ ಪರೀಕ್ಷಾ ವರದಿಗಳನ್ನು ಪರಿಶೀಲಿಸುವುದಿಲ್ಲ ಎಂದು ರಾಜ್ಯ ಸರ್ಕಾರ ಸ್ಪಷ್ಟಪಡಿಸಿದೆ. ವಿಮಾನವು ಲ್ಯಾಂಡ್ ಆದ ನಂತರ ನಿಲ್ದಾಣದಿಂದ ಹೊರಬರುವ ಮೊದಲು ಪರೀಕ್ಷಾ ವರದಿಗಳನ್ನು ಪ್ರಯಾಣಿಕರು ತೋರಿಸಬೇಕಿಲ್ಲ. ಆದರೆ ಪ್ರಯಾಣಿಕರು ಏರ್​ ಸುವಿಧಾ ಪೋರ್ಟಲ್​ನಲ್ಲಿ ವರದಿಯ ಪ್ರತಿಯನ್ನು ಅಪ್​ಲೋಡ್​ ಮಾಡಬೇಕು. ಪ್ರಯಾಣಿಕರು ವಿಮಾನ ಹತ್ತುವ ಮೊದಲು ವಿಮಾನಯಾನ ಕಂಪನಿಗಳು ಈ ವರದಿಗಳನ್ನು ಪರೀಕ್ಷಿಸಬೇಕು ಎಂದು ಸರ್ಕಾರ ಸೂಚಿಸಿದೆ.

ಕರ್ನಾಟಕದಲ್ಲಿ ಕೊವಿಡ್ ಪ್ರಕರಣಗಳ ಸಂಖ್ಯೆ ಕ್ರಮೇಣ ಕಡಿಮೆಯಾಗುತ್ತಿದೆ. ಈ ಹಿನ್ನೆಲೆಯಲ್ಲಿ ರಾಜ್ಯದಲ್ಲಿ ಕೊವಿಡ್ ನಿರ್ಬಂಧಗಳನ್ನು ಸಡಿಲಿಸಲಾಗುತ್ತಿದೆ. ಮಾರ್ಚ್​ 2020ರ ನಂತರ ಇದೇ ಮೊದಲ ಬಾರಿಗೆ ಈಜುಕೊಳಗಳನ್ನು ಬಳಕೆಗೆ ಮುಕ್ತಗೊಳಿಸಲಾಗಿದೆ. ಅಥ್ಲೆಟಿಕ್ ಕ್ರೀಡಾಪಟುಗಳಿಗೆ ತರಬೇತಿ ಪಡೆಯಲು ಅವಕಾಶ ಕಲ್ಪಿಸಲಾಗಿದೆ. ಎರಡು ಡೋಸ್ ಲಸಿಕೆ ಪಡೆದುಕೊಂಡವರು ಮಾತ್ರ ಈಜುಕೊಳಗಳಿಗೆ ಹೋಗಬಹುದು ಎಂದು ಸೂಚಿಸಲಾಗಿದೆ.

ಅಕ್ಟೋಬರ್ 25ರಿಂದ 1 ರಿಂದ 5ನೇ ತರಗತಿ ಶಾಲೆ ಆರಂಭ ಅಕ್ಟೋಬರ್ 25ರಿಂದ 1 ರಿಂದ 5ನೇ ತರಗತಿ ಶಾಲೆ ಆರಂಭ ಆಗಲಿದೆ. ಶಾಲೆ ಆರಂಭಿಸುವುದಕ್ಕೆ ಶಿಕ್ಷಣ ಇಲಾಖೆಯಿಂದ ತೀರ್ಮಾನ ಮಾಡಲಾಗಿದೆ. ಶಾಲೆ ಆರಂಭಕ್ಕೆ ಕೊವಿಡ್​ ತಾಂತ್ರಿಕ ಸಲಹಾ ಸಮಿತಿ ಒಪ್ಪಿಗೆ ನೀಡಿದ ಹಿನ್ನೆಲೆಯಲ್ಲಿ ಈ ನಿರ್ಧಾರ ಕೈಗೊಳ್ಳಲಾಗಿದೆ. 1 ರಿಂದ 5ನೇ ತರಗತಿವರೆಗೆ ಶಾಲೆ ಆರಂಭಕ್ಕೆ ತಜ್ಞರ ಸಮ್ಮತಿ ಒಪ್ಪಿಗೆ ನೀಡಿದೆ. ಮಕ್ಕಳನ್ನ ಶಾಲೆಗೆ ಕಳಿಸಲು ಪೋಷಕರ ಅನುಮತಿ ಕಡ್ಡಾಯ ಎಂದು ತಿಳಿಸಲಾಗಿದೆ. ಶಿಕ್ಷಕರು ಕಡ್ಡಾಯವಾಗಿ 2 ಡೋಸ್​ ಲಸಿಕೆ ಪಡೆದಿರಬೇಕು ಎಂದೂ ಹೇಳಲಾಗಿದೆ. ತರಗತಿಯಲ್ಲಿ ಶೇಕಡಾ 50ರಷ್ಟು ಮಕ್ಕಳಿಗೆ ಮಾತ್ರ ಅವಕಾಶ ನೀಡಿ ಸದ್ಯ ಶಾಲೆ ತೆರೆಯಲಾಗುವುದು. ತರಗತಿಯಲ್ಲಿ ಶಿಕ್ಷಕರು ಕಡ್ಡಾಯವಾಗಿ ಮಾಸ್ಕ್​​ ಧರಿಸಬೇಕು ಎಂದು ಸೂಚನೆ ನೀಡಲಾಗಿದೆ.

ಈ ಬಗ್ಗೆ ಟಿವಿ9ಗೆ ಶಿಕ್ಷಣ ಇಲಾಖೆ ಸಚಿವ ಬಿ.ಸಿ. ನಾಗೇಶ್​ ಪ್ರತಿಕ್ರಿಯೆ ನೀಡಿದ್ದಾರೆ. ದಸರಾ ಬಳಿಕ ಶಾಲೆ ಆರಂಭಿಸುವುದಾಗಿ ನಾವು ಹೇಳಿದ್ದೆವು. ಅದರಂತೆ ಶಾಲೆ ಆರಂಭ ಆಗಲಿದೆ. ಆದರೆ, ಮಕ್ಕಳಿಗೆ ಹಾಜರಾತಿ ಕಡ್ಡಾಯ ಇರುವುದಿಲ್ಲ. ಶಾಲೆಗೆ ಹಾಜರಾಗಲು ಮಕ್ಕಳಿಗೆ ಒತ್ತಾಯ ಇರುವುದಿಲ್ಲ. ಮಕ್ಕಳನ್ನ ಶಾಲೆಗೆ ಕಳಿಸಲು ಪೋಷಕರ ಒಪ್ಪಿಗೆ ಬೇಕು. ಜಾಗದ ಕೊರತೆ ಇರುವಲ್ಲಿ ಶೇ.50ರಷ್ಟು ಮಕ್ಕಳು ಮಾತ್ರ ಹಾಜರಾಗಬೇಕು ಎಂದು ನಾಗೇಶ್ ತಿಳಿಸಿದ್ದಾರೆ.

ಸದ್ಯಕ್ಕೆ LKG, UKG ಬಗ್ಗೆ ಇಲಾಖೆ ನಿರ್ಧಾರ ಮಾಡಿಲ್ಲ. ಅಕ್ಟೋಬರ್ 21 ಅಥವಾ 25ರಂದು ಶಾಲೆ ಆರಂಭಿಸಲು ನಿರ್ಧಾರ ಮಾಡಲಾಗಿದೆ. ಫೀಸ್​ ಬಗ್ಗೆ ಕೋರ್ಟ್​​ನಿಂದ ಆದೇಶ ಬಳಿಕ ನಿರ್ಧಾರ ಕೈಗೊಳ್ಳಲಾಗುತ್ತದೆ ಎಂದು ಟಿವಿ9ಗೆ ಶಿಕ್ಷಣ ಇಲಾಖೆ ಸಚಿವ ನಾಗೇಶ್​ ಪ್ರತಿಕ್ರಿಯೆ ನೀಡಿದ್ದಾರೆ.

ಇದನ್ನೂ ಓದಿ: 99 ಕೋಟಿ ಡೋಸ್ ಕೊವಿಡ್​ 19 ಲಸಿಕೆ ನೀಡಿಕೆ, 100 ಕೋಟಿ ಸಾಧನೆಗೆ ತುಂಬ ಸನಿಹ; ಫುಲ್​ ಖುಷಿಯಿಂದ ಟ್ವೀಟ್​ ಮಾಡಿದ ಆರೋಗ್ಯ ಸಚಿವ ಇದನ್ನೂ ಓದಿ: Covid 19 Guidelines: ಕೊವಿಡ್ ಹೊಸ ಮಾರ್ಗಸೂಚಿ ಬಿಡುಗಡೆ ಮಾಡಿದ ಸರ್ಕಾರ; ಈಜುಕೊಳ ಕಾರ್ಯಾಚರಣೆಗೆ ಅವಕಾಶ

Published On - 5:06 pm, Tue, 19 October 21

ಅರ್ಧಕ್ಕೆ ಕೈಕೊಟ್ಟ ಇಂಡಿಗೋ ವಿಮಾನ: ಅಯ್ಯಪ್ಪ ಮಾಲಾಧಾರಿಗಳು ಕಂಗಾಲು
ಅರ್ಧಕ್ಕೆ ಕೈಕೊಟ್ಟ ಇಂಡಿಗೋ ವಿಮಾನ: ಅಯ್ಯಪ್ಪ ಮಾಲಾಧಾರಿಗಳು ಕಂಗಾಲು
ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ