ದೇವನಹಳ್ಳಿ: ವಿಮಾನದಲ್ಲಿ ಸಿಬ್ಬಂದಿ ಜೊತೆ ಪ್ರಯಾಣಿಕನ ಅಸಭ್ಯ ವರ್ತನೆ; ಬಂಧನ

ವಿಮಾನದಲ್ಲಿ ಸಿಬ್ಬಂದಿ ಜೊತೆ ಅಸಭ್ಯವಾಗಿ ವರ್ತಿಸಿದ್ದ ಪ್ರಯಾಣಿಕನನ್ನು ಕೆಂಪೇಗೌಡ ವಿಮಾನ ನಿಲ್ದಾಣ ಠಾಣೆ ಪೊಲೀಸರು ಬಂಧಿಸಿದ್ದಾರೆ. ಜೈಪುರದಿಂದ ಬೆಂಗಳೂರಿಗೆ ಬರುತ್ತಿದ್ದ 6E556 ಇಂಡಿಗೋ ವಿಮಾನದಲ್ಲಿ ಘಟನೆ ನಡೆದಿದೆ.

ದೇವನಹಳ್ಳಿ: ವಿಮಾನದಲ್ಲಿ ಸಿಬ್ಬಂದಿ ಜೊತೆ ಪ್ರಯಾಣಿಕನ ಅಸಭ್ಯ ವರ್ತನೆ; ಬಂಧನ
ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣ ಪೊಲೀಸ್​ ಠಾಣೆ
Follow us
| Edited By: ವಿವೇಕ ಬಿರಾದಾರ

Updated on: Nov 19, 2023 | 10:11 AM

ದೇವನಹಳ್ಳಿ ನ.19: ವಿಮಾನದಲ್ಲಿ ಸಿಬ್ಬಂದಿ ಜೊತೆ ಅಸಭ್ಯವಾಗಿ ವರ್ತಿಸಿದ್ದ ಪ್ರಯಾಣಿಕನನ್ನು ಕೆಂಪೇಗೌಡ ವಿಮಾನ ನಿಲ್ದಾಣ (Kempegowda International Airport) ಠಾಣೆ ಪೊಲೀಸರು (Police) ಬಂಧಿಸಿದ್ದಾರೆ. ರಣದೀರ್ ಸಿಂಗ್ ಬಂಧಿತ ಪ್ರಯಾಣಿಕ ಜೈಪುರದಿಂದ ಬೆಂಗಳೂರಿಗೆ ಬರುತ್ತಿದ್ದ 6E556 ಇಂಡಿಗೋ ವಿಮಾನದಲ್ಲಿ ರಣದೀರ್ ಸಿಂಗ್ ನಶೆಯಲ್ಲಿ ಪ್ಲೈಟ್ ಕ್ಯಾಬಿನ್ ಸ್ಟಾಪ್​​ಗೆ ಅವಾಚ್ಯ ಶಬ್ದಗಳಿಂದ ನಿಂದಿಸಿದ್ದಾನೆ. ಅಲ್ಲದೆ ಕೈ ಹಿಡಿದು ಅಸಭ್ಯವಾಗಿ ವರ್ತಿಸಿದ್ದಾನೆ. ಈ ಹಿನ್ನೆಲೆಯಲ್ಲಿ ಪೊಲೀಸರು ರಣಬೀರ್​ ಸಿಂಗ್​​ನನ್ನು ಬಂಧಿಸಿದ್ದಾರೆ. ಕೆಂಪೇಗೌಡ ವಿಮಾನ ನಿಲ್ದಾಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

3 ಪ್ರತ್ಯೇಕ ಪ್ರಕರಣಗಳಲ್ಲಿ 1 ಕೋಟಿಗೂ ಅಧಿಕ ಮೌಲ್ಯದ ಚಿನ್ನ ವಶ

ಮೂರು ಪ್ರತ್ಯೇಕ ಪ್ರಕರಣಗಳಲ್ಲಿ ಒಂದು ಕೋಟಿಗೂ ಅಧಿಕ ಮೌಲ್ಯದ ಚಿನ್ನವನ್ನು ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣದ ಕಸ್ಟಮ್ಸ್​​ ಅಧಿಕಾರಿಗಳು ವಶಪಡಿಸಿಕೊಂಡಿದ್ದರು. ಬ್ಯಾಂಕಾಕ್, ಕೊಲಂಬೋ ಮತ್ತು ಮಸ್ಕಟ್​​ನಿಂದ ಅಕ್ರಮವಾಗಿ ಸಾಗಿಸುತ್ತಿದ್ದ ಎರಡು ಕೆಜಿಗೂ ಅಧಿಕ‌‌ ಚಿನ್ನವನ್ನು ಜಪ್ತಿ ಮಾಡಿದ್ದರು.

ಇದನ್ನೂ ಓದಿ: ವಿಮಾನದಲ್ಲಿ ಮಹಿಳೆಯ ಖಾಸಗಿ ಅಂಗಾಂಗ ಮುಟ್ಟಿ ಸಹಪ್ರಯಾಣಿಕನಿಂದ ಕಿರುಕುಳ; ದೂರು ದಾಖಲು

ಬ್ಯಾಂಕಾಕ್​ನಿಂದ ಮೂವರು ಪುರುಷರು, ಕೊಲಂಬೋದ ಇಬ್ಬರು ಮಹಿಳೆಯರು ಮತ್ತು ಮಸ್ಕಟ್​ನ ಒರ್ವ ಪ್ರಯಾಣಿಕ ಶರ್ಟ್ ಮತ್ತು ಒಳ ಉಡುಪಿನಲ್ಲಿ ಚಿನ್ನದ ಕಟ್ ಫಿಸ್​​ಗಳನ್ನು ಅಡಗಿಸಿಟ್ಟುಕೊಂಡು ತಂದಿದ್ದರು.‌ ಕಸ್ಟಮ್ಸ್​​ ಅಧಿಕಾರಿಗಳ ತಪಾಸಣೆ ವೇಳೆ ಮೂರು ಪ್ರಕರಣಗಳಿಂದ 1,26,58, 618 ರೂ. ಮೌಲ್ಯದ 2 ಕೆಜಿ 79 ಗ್ರಾಂ ತೂಕದ ಚಿನ್ನ ಪತ್ತೆಯಾಗಿತ್ತು. ಮೂರು ಪ್ರಕರಣಕ್ಕೆ ಸಂಬಂಧಿಸಿದ ಆರೋಪಿಗಳನ್ನು ಅಧಿಕಾರಿಗಳು ಪಡೆದು ವಿಚಾರಣೆ ನಡೆಸಿದ್ದರು.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ

ತಾಜಾ ಸುದ್ದಿ
Telangana Assembly Polls 2023: ಮತಗಟ್ಟೆಗೆ ಆಗಮಿಸಿದ ಜ್ಯೂ. ಎನ್ ಟಿ ಆರ್
Telangana Assembly Polls 2023: ಮತಗಟ್ಟೆಗೆ ಆಗಮಿಸಿದ ಜ್ಯೂ. ಎನ್ ಟಿ ಆರ್
ಸಂಸಾರದಲ್ಲಿನ ಬಿರುಕಿಗೆ ಕಾರಣ ತಿಳಿಸಿದ ವರ್ತೂರು ಸಂತೋಷ್
ಸಂಸಾರದಲ್ಲಿನ ಬಿರುಕಿಗೆ ಕಾರಣ ತಿಳಿಸಿದ ವರ್ತೂರು ಸಂತೋಷ್
ನಾಲ್ಕನೇ ಟಿ20 ಪಂದ್ಯಕ್ಕಾಗಿ ರಾಯ್​ಪುರ ತಲುಪಿದ ಟೀಮ್ ಇಂಡಿಯಾ ಆಟಗಾರರು
ನಾಲ್ಕನೇ ಟಿ20 ಪಂದ್ಯಕ್ಕಾಗಿ ರಾಯ್​ಪುರ ತಲುಪಿದ ಟೀಮ್ ಇಂಡಿಯಾ ಆಟಗಾರರು
ಪೂಜಾ ಗಾಂಧಿ ಮದುವೆಯಲ್ಲಿ ಹಳೆ ಜಗಳ ನೆನಪಿಸಿಕೊಂಡ ಗೆಳತಿ ಸಂಜನಾ ಗಲ್ರಾನಿ
ಪೂಜಾ ಗಾಂಧಿ ಮದುವೆಯಲ್ಲಿ ಹಳೆ ಜಗಳ ನೆನಪಿಸಿಕೊಂಡ ಗೆಳತಿ ಸಂಜನಾ ಗಲ್ರಾನಿ
ಪೂಜಾ ಗಾಂಧಿ ಮದುವೆಯಲ್ಲಿ ಹಳೆ ಜೋಕ್ ನೆನಪಿಸಿಕೊಂಡ ಯೋಗರಾಜ್ ಭಟ್
ಪೂಜಾ ಗಾಂಧಿ ಮದುವೆಯಲ್ಲಿ ಹಳೆ ಜೋಕ್ ನೆನಪಿಸಿಕೊಂಡ ಯೋಗರಾಜ್ ಭಟ್
ನಿಮ್ಹಾನ್ಸ್ ಆಸ್ಪತ್ರೆಯ​​ ಸಿಬ್ಬಂದಿ ನಿರ್ಲಕ್ಷ್ಯಕ್ಕೆ ಮಗು ಬಲಿ ಆರೋಪ
ನಿಮ್ಹಾನ್ಸ್ ಆಸ್ಪತ್ರೆಯ​​ ಸಿಬ್ಬಂದಿ ನಿರ್ಲಕ್ಷ್ಯಕ್ಕೆ ಮಗು ಬಲಿ ಆರೋಪ
ತೆಲಂಗಾಣದಲ್ಲಿ ಕೆಸಿಅರ್ ನನ್ನ ಡೋಂಗಿ ಅಂತ  ಹೇಳುತ್ತಿದ್ದಾರೆ: ಸಿದ್ದರಾಮಯ್ಯ
ತೆಲಂಗಾಣದಲ್ಲಿ ಕೆಸಿಅರ್ ನನ್ನ ಡೋಂಗಿ ಅಂತ  ಹೇಳುತ್ತಿದ್ದಾರೆ: ಸಿದ್ದರಾಮಯ್ಯ
ಡಿಎ ಪ್ರಕರಣ; ನ್ಯಾಯಾಲಯದಲ್ಲಿ ಶಿವಕುಮಾರ್​ಗೆ ಜಯ ಸಿಗಲ್ಲ: ಬಿವೈ ವಿಜಯೇಂದ್ರ
ಡಿಎ ಪ್ರಕರಣ; ನ್ಯಾಯಾಲಯದಲ್ಲಿ ಶಿವಕುಮಾರ್​ಗೆ ಜಯ ಸಿಗಲ್ಲ: ಬಿವೈ ವಿಜಯೇಂದ್ರ
ಸಿಎಂಗೆ ಪ್ರಶ್ನೆ ಕೇಳುವ ಮುನ್ನ ಅಶೋಕ ಹೋಮ್​ವರ್ಕ್ ಮಾಡಿರಬೇಕು: ಲಕ್ಷ್ಮಣ್
ಸಿಎಂಗೆ ಪ್ರಶ್ನೆ ಕೇಳುವ ಮುನ್ನ ಅಶೋಕ ಹೋಮ್​ವರ್ಕ್ ಮಾಡಿರಬೇಕು: ಲಕ್ಷ್ಮಣ್
ಕೇಂದ್ರ ಸರ್ಕಾರದಿಂದ ಬರ ಪರಿಹಾರ ನಿಧಿ ಬಿಡುಗಡೆ ಆಗಿಲ್ಲ: ಸಿದ್ದರಾಮಯ್ಯ
ಕೇಂದ್ರ ಸರ್ಕಾರದಿಂದ ಬರ ಪರಿಹಾರ ನಿಧಿ ಬಿಡುಗಡೆ ಆಗಿಲ್ಲ: ಸಿದ್ದರಾಮಯ್ಯ