AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ದೇವನಹಳ್ಳಿ: ವಿಮಾನದಲ್ಲಿ ಸಿಬ್ಬಂದಿ ಜೊತೆ ಪ್ರಯಾಣಿಕನ ಅಸಭ್ಯ ವರ್ತನೆ; ಬಂಧನ

ವಿಮಾನದಲ್ಲಿ ಸಿಬ್ಬಂದಿ ಜೊತೆ ಅಸಭ್ಯವಾಗಿ ವರ್ತಿಸಿದ್ದ ಪ್ರಯಾಣಿಕನನ್ನು ಕೆಂಪೇಗೌಡ ವಿಮಾನ ನಿಲ್ದಾಣ ಠಾಣೆ ಪೊಲೀಸರು ಬಂಧಿಸಿದ್ದಾರೆ. ಜೈಪುರದಿಂದ ಬೆಂಗಳೂರಿಗೆ ಬರುತ್ತಿದ್ದ 6E556 ಇಂಡಿಗೋ ವಿಮಾನದಲ್ಲಿ ಘಟನೆ ನಡೆದಿದೆ.

ದೇವನಹಳ್ಳಿ: ವಿಮಾನದಲ್ಲಿ ಸಿಬ್ಬಂದಿ ಜೊತೆ ಪ್ರಯಾಣಿಕನ ಅಸಭ್ಯ ವರ್ತನೆ; ಬಂಧನ
ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣ ಪೊಲೀಸ್​ ಠಾಣೆ
ನವೀನ್ ಕುಮಾರ್ ಟಿ
| Edited By: |

Updated on: Nov 19, 2023 | 10:11 AM

Share

ದೇವನಹಳ್ಳಿ ನ.19: ವಿಮಾನದಲ್ಲಿ ಸಿಬ್ಬಂದಿ ಜೊತೆ ಅಸಭ್ಯವಾಗಿ ವರ್ತಿಸಿದ್ದ ಪ್ರಯಾಣಿಕನನ್ನು ಕೆಂಪೇಗೌಡ ವಿಮಾನ ನಿಲ್ದಾಣ (Kempegowda International Airport) ಠಾಣೆ ಪೊಲೀಸರು (Police) ಬಂಧಿಸಿದ್ದಾರೆ. ರಣದೀರ್ ಸಿಂಗ್ ಬಂಧಿತ ಪ್ರಯಾಣಿಕ ಜೈಪುರದಿಂದ ಬೆಂಗಳೂರಿಗೆ ಬರುತ್ತಿದ್ದ 6E556 ಇಂಡಿಗೋ ವಿಮಾನದಲ್ಲಿ ರಣದೀರ್ ಸಿಂಗ್ ನಶೆಯಲ್ಲಿ ಪ್ಲೈಟ್ ಕ್ಯಾಬಿನ್ ಸ್ಟಾಪ್​​ಗೆ ಅವಾಚ್ಯ ಶಬ್ದಗಳಿಂದ ನಿಂದಿಸಿದ್ದಾನೆ. ಅಲ್ಲದೆ ಕೈ ಹಿಡಿದು ಅಸಭ್ಯವಾಗಿ ವರ್ತಿಸಿದ್ದಾನೆ. ಈ ಹಿನ್ನೆಲೆಯಲ್ಲಿ ಪೊಲೀಸರು ರಣಬೀರ್​ ಸಿಂಗ್​​ನನ್ನು ಬಂಧಿಸಿದ್ದಾರೆ. ಕೆಂಪೇಗೌಡ ವಿಮಾನ ನಿಲ್ದಾಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

3 ಪ್ರತ್ಯೇಕ ಪ್ರಕರಣಗಳಲ್ಲಿ 1 ಕೋಟಿಗೂ ಅಧಿಕ ಮೌಲ್ಯದ ಚಿನ್ನ ವಶ

ಮೂರು ಪ್ರತ್ಯೇಕ ಪ್ರಕರಣಗಳಲ್ಲಿ ಒಂದು ಕೋಟಿಗೂ ಅಧಿಕ ಮೌಲ್ಯದ ಚಿನ್ನವನ್ನು ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣದ ಕಸ್ಟಮ್ಸ್​​ ಅಧಿಕಾರಿಗಳು ವಶಪಡಿಸಿಕೊಂಡಿದ್ದರು. ಬ್ಯಾಂಕಾಕ್, ಕೊಲಂಬೋ ಮತ್ತು ಮಸ್ಕಟ್​​ನಿಂದ ಅಕ್ರಮವಾಗಿ ಸಾಗಿಸುತ್ತಿದ್ದ ಎರಡು ಕೆಜಿಗೂ ಅಧಿಕ‌‌ ಚಿನ್ನವನ್ನು ಜಪ್ತಿ ಮಾಡಿದ್ದರು.

ಇದನ್ನೂ ಓದಿ: ವಿಮಾನದಲ್ಲಿ ಮಹಿಳೆಯ ಖಾಸಗಿ ಅಂಗಾಂಗ ಮುಟ್ಟಿ ಸಹಪ್ರಯಾಣಿಕನಿಂದ ಕಿರುಕುಳ; ದೂರು ದಾಖಲು

ಬ್ಯಾಂಕಾಕ್​ನಿಂದ ಮೂವರು ಪುರುಷರು, ಕೊಲಂಬೋದ ಇಬ್ಬರು ಮಹಿಳೆಯರು ಮತ್ತು ಮಸ್ಕಟ್​ನ ಒರ್ವ ಪ್ರಯಾಣಿಕ ಶರ್ಟ್ ಮತ್ತು ಒಳ ಉಡುಪಿನಲ್ಲಿ ಚಿನ್ನದ ಕಟ್ ಫಿಸ್​​ಗಳನ್ನು ಅಡಗಿಸಿಟ್ಟುಕೊಂಡು ತಂದಿದ್ದರು.‌ ಕಸ್ಟಮ್ಸ್​​ ಅಧಿಕಾರಿಗಳ ತಪಾಸಣೆ ವೇಳೆ ಮೂರು ಪ್ರಕರಣಗಳಿಂದ 1,26,58, 618 ರೂ. ಮೌಲ್ಯದ 2 ಕೆಜಿ 79 ಗ್ರಾಂ ತೂಕದ ಚಿನ್ನ ಪತ್ತೆಯಾಗಿತ್ತು. ಮೂರು ಪ್ರಕರಣಕ್ಕೆ ಸಂಬಂಧಿಸಿದ ಆರೋಪಿಗಳನ್ನು ಅಧಿಕಾರಿಗಳು ಪಡೆದು ವಿಚಾರಣೆ ನಡೆಸಿದ್ದರು.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ

‘ನಗ್ತಾ ಇರಿ, ಖುಷಿಯಾಗಿರಿ’; ಮಾತಿನ ಮೂಲಕ ವಿಶ್ ಮಾಡಿದ ಸುದೀಪ್
‘ನಗ್ತಾ ಇರಿ, ಖುಷಿಯಾಗಿರಿ’; ಮಾತಿನ ಮೂಲಕ ವಿಶ್ ಮಾಡಿದ ಸುದೀಪ್
ಹೊಸ ವರ್ಷಾಚರಣೆ ವೇಳೆ ಸ್ವಿಟ್ಜರ್​ಲ್ಯಾಂಡ್​ನ ಬಾರ್‌ನಲ್ಲಿ ಬಾಂಬ್ ಸ್ಫೋಟ
ಹೊಸ ವರ್ಷಾಚರಣೆ ವೇಳೆ ಸ್ವಿಟ್ಜರ್​ಲ್ಯಾಂಡ್​ನ ಬಾರ್‌ನಲ್ಲಿ ಬಾಂಬ್ ಸ್ಫೋಟ
ಹೊಸ ವರ್ಷದ ದಿನ ನಮ್ಮ ಮೆಟ್ರೋಗೆ ಬಂಪರ್​ ಆದಾಯ: ಕಲೆಕ್ಷನ್​ ಎಷ್ಟು?
ಹೊಸ ವರ್ಷದ ದಿನ ನಮ್ಮ ಮೆಟ್ರೋಗೆ ಬಂಪರ್​ ಆದಾಯ: ಕಲೆಕ್ಷನ್​ ಎಷ್ಟು?
ಪರೋಕ್ಷವಾಗಿ ಸಿಎಂ ಆಗುವ ಆಸೆ ವ್ಯಕ್ತಪಡಿಸಿದ ಡಾ. ಜಿ. ಪರಮೇಶ್ವರ್
ಪರೋಕ್ಷವಾಗಿ ಸಿಎಂ ಆಗುವ ಆಸೆ ವ್ಯಕ್ತಪಡಿಸಿದ ಡಾ. ಜಿ. ಪರಮೇಶ್ವರ್
ಹೂ, ಎಲೆಗಳ ಸಿಂಗಾರ; ವಿಶೇಷ ಅಲಂಕಾರದಲ್ಲಿ ಕಂಗೊಳಿಸಿದ ನಾಡ ದೇವತೆ
ಹೂ, ಎಲೆಗಳ ಸಿಂಗಾರ; ವಿಶೇಷ ಅಲಂಕಾರದಲ್ಲಿ ಕಂಗೊಳಿಸಿದ ನಾಡ ದೇವತೆ
ಮಂತ್ರಾಲಯದಲ್ಲಿ ಹೊಸ ವರ್ಷದ ಸಂಭ್ರಮ: ಸಾಗರೋಪಾದಿಯಲ್ಲಿ ಹರಿದುಬಂದ ಭಕ್ತರು
ಮಂತ್ರಾಲಯದಲ್ಲಿ ಹೊಸ ವರ್ಷದ ಸಂಭ್ರಮ: ಸಾಗರೋಪಾದಿಯಲ್ಲಿ ಹರಿದುಬಂದ ಭಕ್ತರು
ಪಕ್ಕದಮನೆಯವರ ಬಗ್ಗೆ ಮಾತನಾಡಲ್ಲ; ವಿಜಯಲಕ್ಷ್ಮೀ ಬಗ್ಗೆ ಸುದೀಪ್ ಮಾತು
ಪಕ್ಕದಮನೆಯವರ ಬಗ್ಗೆ ಮಾತನಾಡಲ್ಲ; ವಿಜಯಲಕ್ಷ್ಮೀ ಬಗ್ಗೆ ಸುದೀಪ್ ಮಾತು
ಮಂಗಳೂರಿನ ಕದ್ರಿ ಮಂಜುನಾಥ ದೇವಸ್ಥಾನದಲ್ಲಿ ಭಕ್ತರ ದಂಡು
ಮಂಗಳೂರಿನ ಕದ್ರಿ ಮಂಜುನಾಥ ದೇವಸ್ಥಾನದಲ್ಲಿ ಭಕ್ತರ ದಂಡು
ಪುಟಿನ್ ರಹಸ್ಯ ನಿವಾಸದ ಮೇಲೆ ಉಕ್ರೇನ್ ಡ್ರೋನ್ ದಾಳಿ
ಪುಟಿನ್ ರಹಸ್ಯ ನಿವಾಸದ ಮೇಲೆ ಉಕ್ರೇನ್ ಡ್ರೋನ್ ದಾಳಿ
ಕಾರ್ಮಿಕರ ಮೇಲೆ ಹಲ್ಲೆ ಮಾಡಿ ಚಹಾ ಅಂಗಡಿ ಧ್ವಂಸಗೊಳಿಸಿದ ಪೊಲೀಸಪ್ಪ!
ಕಾರ್ಮಿಕರ ಮೇಲೆ ಹಲ್ಲೆ ಮಾಡಿ ಚಹಾ ಅಂಗಡಿ ಧ್ವಂಸಗೊಳಿಸಿದ ಪೊಲೀಸಪ್ಪ!