AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ತಡರಾತ್ರಿವರೆಗೂ ತೆರೆದಿದ್ದ ಬೆಂಗಳೂರಿನ ಪಬ್​ಗಳ ಮೇಲೆ ಪೊಲೀಸರ ದಾಳಿ

ಬೆಂಗಳೂರು ಕೇಂದ್ರ ವಿಭಾಗದ ಪೊಲೀಸರು ಶನಿವಾರ ರಾತ್ರಿ ಎಂಜಿ ರೋಡ್, ಬ್ರಿಗೇಡ್ ರೋಡ್, ಚರ್ಚ್ ಸ್ಟ್ರೀಟ್​ನ ಪಬ್​​ಗಳ ಮೇಲೆ ಪೊಲೀಸರು ದಾಳಿ ಮಾಡಿ, ಎಚ್ಚರಿಕೆ ನೀಡಿ ಬಂದ್​ ಮಾಡಿಸಿದರು. ಕೇಂದ್ರ ವಿಭಾಗದ ಡಿಸಿಪಿ ಶೇಖರ್.ಟಿ.ಹೆಚ್ ನೇತೃತ್ವದಲ್ಲಿ ಕಾರ್ಯಾಚರಣೆ ನಡೆಯಿತು.

ತಡರಾತ್ರಿವರೆಗೂ ತೆರೆದಿದ್ದ ಬೆಂಗಳೂರಿನ ಪಬ್​ಗಳ ಮೇಲೆ ಪೊಲೀಸರ ದಾಳಿ
ಬೆಂಗಳೂರು ಪೊಲೀಸ್​ ಆಯುಕ್ತರ ಕಚೇರಿ
ವಿವೇಕ ಬಿರಾದಾರ
|

Updated on: Jul 21, 2024 | 10:34 AM

Share

ಬೆಂಗಳೂರು, ಜುಲೈ 21: ವಿಕೆಂಡ್ ಬ್ಯೂಸಿಯಲ್ಲಿದ್ದ ಪಬ್​ಗಳಿಗೆ (Pub) ನಗರ ಪೊಲೀಸರು (Benagluru Police) ಬಿಸಿ ಮುಟ್ಟಿಸಿದ್ದಾರೆ. ತಡರಾತ್ರಿವರೆಗು ಎಣ್ಣೆ ಪಾರ್ಟಿಗೆ ಅವಕಾಶ ಮಾಡಿಕೊಟ್ಟಿದ್ದ ಪಬ್​ಗಳ ಮೇಲೆ ಕೇಂದ್ರ ವಿಭಾಗದ ಡಿಸಿಪಿ ಶೇಖರ್.ಟಿ.ಹೆಚ್ ನೇತೃತ್ವದ ತಂಡ ದಾಳಿ ಮಾಡಿತು. ಟೀಂ ಇಂಡಿಯಾದ ಮಾಜಿ ನಾಯಕ ವಿರಾಟ್​ ಕೊಹ್ಲಿ (Virat Kohli) ಒಡೆತನದ ಪಬ್​ ಸೇರಿದಂತೆ 15 ಪಬ್​ಗಳ ಮೇಲೆ ಈ ಹಿಂದೆ ಎಫ್​ಐಆರ್​​ ದಾಖಲಾಗಿತ್ತು. ಈ ಎಲ್ಲ ಪಬ್​ಗಳು ಸೇರಿದಂತೆ ಇದೀಗ ಹೊಸದಾಗಿ ಅವಧಿಗೂ ಮೀರಿ ತೆರದಿದ್ದ ಎಂಜಿ ರೋಡ್, ಬ್ರಿಗೇಡ್ ರೋಡ್, ಚರ್ಚ್ ಸ್ಟ್ರೀಟ್​ನ ಪಬ್​​ಗಳ ಮೇಲೆ ಪೊಲೀಸರು ದಾಳಿ ಮಾಡಿ, ಎಚ್ಚರಿಕೆ ನೀಡಿ ಬಂದ್​ ಮಾಡಿಸಿದರು.

ಕೋಹ್ಲಿ ಮಾಲಿಕತ್ವದ ಪಬ್​ ಮೇಲೆ ಎಫ್​​ಐಆರ್​

ಟೀಂ ಇಂಡಿಯಾ ಕ್ರಿಕೆಟಿಗ ವಿರಾಟ್ ಕೊಹ್ಲಿ ಮಾಲೀಕತ್ವದ ಪಬ್ ಮೇಲೆ ಎಫ್​ಐಆರ್ ದಾಖಲಾಗಿತ್ತು. ರಾತ್ರಿ ಅವಧಿಗೂ ಮೀರಿ ಪಬ್ ತೆರೆದಿದ್ದ ಹಿನ್ನೆಲೆ ಬೆಂಗಳೂರಿನ ಕಸ್ತೂರಬಾ ರಸ್ತೆಯಲ್ಲಿರುವ ಕೊಹ್ಲಿ ಮಾಲೀಕತ್ವದ ಒನ್ 8 ಕಮ್ಯೂನ್ ಪಬ್​​ (One8 Commune Pub) ಮೇಲೆ ಕಬ್ಬನ್​ಪಾರ್ಕ್​ ಠಾಣೆಯಲ್ಲಿ FIR ದಾಖಲಾಗಿತ್ತು. ಪಬ್ ಓಪನ್ ಆಗಿದ್ದ ಬಗ್ಗೆ ರಾತ್ರಿ ಗಸ್ತಿನಲ್ಲಿದ್ದ ಪೊಲೀಸರಿಗೆ ಮಾಹಿತಿ ಸಿಕ್ಕಿತ್ತು. ಸ್ಥಳಕ್ಕೆ ಹೋಗಿ ಪರಿಶೀಲಿಸಿದಾಗ ಪಬ್​​ನಲ್ಲಿ ಗ್ರಾಹಕರು ಇದ್ದರು. ನಿಯಮ ಉಲ್ಲಂಘಿಸಿ ರಾತ್ರಿ ಅವಧಿಗೂ ಮೀರಿ ಪಬ್ ಓಪನ್​​​ ಮಾಡಿದ ಹಿನ್ನೆಲೆ ಎಫ್​ಐಆರ್ ದಾಖಲಿಸಲಾಗಿತ್ತು.

ಇದನ್ನೂ ಓದಿ: ಬೆಂಗಳೂರಿನ ಪಬ್​​ಗಳಲ್ಲಿ ಎಣ್ಣೆ, ಡಿಜೆ ಜೊತೆ ಮತ್ತೊಂದು ಮನರಂಜನೆ ಕಾರ್ಯಕ್ರಮ: ಏನದು?

ಸರ್ಕಾರ ನಿಗದಿಪಡಿಸಿರುವ ನಿಯಮವನ್ನು ಗಾಳಿಗೆ ತೂರಿ ತಡರಾತ್ರಿವರೆಗೂ ಪಬ್ ತೆರೆದು ಪಾರ್ಟಿಗೆ ಅನುವು ಮಾಡಿಕೊಟ್ಟ ರೆಸ್ಟೋರೆಂಟ್, ಬಾರ್, ಪಬ್ ವಿರುದ್ಧ ಜು.6ರ ರಾತ್ರಿ ಕಬ್ಬನ್ ಪಾರ್ಕ್ ಠಾಣಾ ಪೊಲೀಸರು ವಿಶೇಷ ಕಾರ್ಯಾಚರಣೆ ಕೈಗೊಂಡಿದ್ದರು.

ಈ ವೇಳೆ, ರಾತ್ರಿ 1.20ರವರೆಗೂ ಪಬ್ ಓಪನ್ ಮಾಡಿದ್ದ ಆರೋಪದಡಿ ನಗರದ ಕಸ್ತೂರಬಾ ರಸ್ತೆಯಲ್ಲಿರುವ ಒನ್ 8 ಕಮ್ಯೂನ್, ಚರ್ಚ್ ಸ್ಟ್ರೀಟ್‌ನಲ್ಲಿರುವ ಎಂಪೈರ್ ರೆಸ್ಟೋರೆಂಟ್, ಬ್ರಿಗೇಡ್ ರಸ್ತೆಯಲ್ಲಿರುವ ಪಾಂಜಿಯೋ ಬಾರ್ ಆ್ಯಂಡ್ ರೆಸ್ಟೋರೆಂಟ್ ವ್ಯವಸ್ಥಾಪಕರ ವಿರುದ್ಧ ಕಬ್ಬನ್ ಪಾರ್ಕ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ

ಚಿತ್ರದುರ್ಗ ಬಸ್ ದುರಂತದ ಬಳಿಕವೂ ಎಚ್ಚೆತ್ತುಕೊಳ್ಳದ RTO ಅಧಿಕಾರಿಗಳು
ಚಿತ್ರದುರ್ಗ ಬಸ್ ದುರಂತದ ಬಳಿಕವೂ ಎಚ್ಚೆತ್ತುಕೊಳ್ಳದ RTO ಅಧಿಕಾರಿಗಳು
ಚಿತ್ರರಂಗಕ್ಕೆ ಬಂದಿದ್ದು ಗಲಾಟೆ ಮಾಡೋಕಲ್ಲ, ನಟಿಸೋಕೆ; ಸುದೀಪ್
ಚಿತ್ರರಂಗಕ್ಕೆ ಬಂದಿದ್ದು ಗಲಾಟೆ ಮಾಡೋಕಲ್ಲ, ನಟಿಸೋಕೆ; ಸುದೀಪ್
ತಮಿಳು ನಟ ನವೀನ್ ಚಂದ್ರಗೆ ಅಷ್ಟು ಸ್ಪಷ್ಟ ಕನ್ನಡ ಹೇಗೆ ಬರುತ್ತೆ?
ತಮಿಳು ನಟ ನವೀನ್ ಚಂದ್ರಗೆ ಅಷ್ಟು ಸ್ಪಷ್ಟ ಕನ್ನಡ ಹೇಗೆ ಬರುತ್ತೆ?
ವಿಶ್ವ ಕ್ರಿಕೆಟ್​ನಲ್ಲಿ ಈ ಸಾಧನೆ ಮಾಡಿದ ಏಕೈಕ ಮಹಿಳಾ ಆಟಗಾರ್ತಿ ದೀಪ್ತಿ
ವಿಶ್ವ ಕ್ರಿಕೆಟ್​ನಲ್ಲಿ ಈ ಸಾಧನೆ ಮಾಡಿದ ಏಕೈಕ ಮಹಿಳಾ ಆಟಗಾರ್ತಿ ದೀಪ್ತಿ
ಕರ್ನಾಟಕದಲ್ಲಿ ಸಿಎಂ ಬದಲಾವಣೆ ಬಗ್ಗೆ ಕೋಡಿಶ್ರೀ ಸ್ಫೋಟಕ ಭವಿಷ್ಯ
ಕರ್ನಾಟಕದಲ್ಲಿ ಸಿಎಂ ಬದಲಾವಣೆ ಬಗ್ಗೆ ಕೋಡಿಶ್ರೀ ಸ್ಫೋಟಕ ಭವಿಷ್ಯ
ನಾನು ಸಿನಿಮಾ ಡೈಲಾಗ್ ಮೂಲಕ ಟಾಂಟ್ ಕೊಡಲ್ಲ ಎಂದ ಸುದೀಪ್
ನಾನು ಸಿನಿಮಾ ಡೈಲಾಗ್ ಮೂಲಕ ಟಾಂಟ್ ಕೊಡಲ್ಲ ಎಂದ ಸುದೀಪ್
ಅವರೇ ಮೇಳದಲ್ಲಿ ಡಿಕೆಶಿಗೆ ಮಹಿಳೆ ಕೇಳಿದ ಪ್ರಶ್ನೆಗೆ ಕಕ್ಕಾಬಿಕ್ಕಿಯಾದ ಜನ
ಅವರೇ ಮೇಳದಲ್ಲಿ ಡಿಕೆಶಿಗೆ ಮಹಿಳೆ ಕೇಳಿದ ಪ್ರಶ್ನೆಗೆ ಕಕ್ಕಾಬಿಕ್ಕಿಯಾದ ಜನ
ಮುಸ್ಲಿಂ ಕುಟುಂಬಗಳಿಗೆ ಬೇರೆ ಜಾಗ ನೀಡುತ್ತೇವೆ
ಮುಸ್ಲಿಂ ಕುಟುಂಬಗಳಿಗೆ ಬೇರೆ ಜಾಗ ನೀಡುತ್ತೇವೆ
‘ಮಾರ್ಕ್’ ಮೊದಲ ದಿನದ ಕಲೆಕ್ಷನ್ 15 ಕೋಟಿ ನಾ? ಸುದೀಪ್ ಕಡೆಯಿಂದ ಸ್ಪಷ್ಟನೆ
‘ಮಾರ್ಕ್’ ಮೊದಲ ದಿನದ ಕಲೆಕ್ಷನ್ 15 ಕೋಟಿ ನಾ? ಸುದೀಪ್ ಕಡೆಯಿಂದ ಸ್ಪಷ್ಟನೆ
ನಪುಂಸಕ, ಗಂಡಸೇ ಅಲ್ಲ ಎಂದಿದ್ದಕ್ಕೆ ಮನನೊಂದು ವ್ಯಕ್ತಿ ಸಾವಿಗೆ ಶರಣು
ನಪುಂಸಕ, ಗಂಡಸೇ ಅಲ್ಲ ಎಂದಿದ್ದಕ್ಕೆ ಮನನೊಂದು ವ್ಯಕ್ತಿ ಸಾವಿಗೆ ಶರಣು