AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ತಡರಾತ್ರಿವರೆಗೂ ತೆರೆದಿದ್ದ ಬೆಂಗಳೂರಿನ ಪಬ್​ಗಳ ಮೇಲೆ ಪೊಲೀಸರ ದಾಳಿ

ಬೆಂಗಳೂರು ಕೇಂದ್ರ ವಿಭಾಗದ ಪೊಲೀಸರು ಶನಿವಾರ ರಾತ್ರಿ ಎಂಜಿ ರೋಡ್, ಬ್ರಿಗೇಡ್ ರೋಡ್, ಚರ್ಚ್ ಸ್ಟ್ರೀಟ್​ನ ಪಬ್​​ಗಳ ಮೇಲೆ ಪೊಲೀಸರು ದಾಳಿ ಮಾಡಿ, ಎಚ್ಚರಿಕೆ ನೀಡಿ ಬಂದ್​ ಮಾಡಿಸಿದರು. ಕೇಂದ್ರ ವಿಭಾಗದ ಡಿಸಿಪಿ ಶೇಖರ್.ಟಿ.ಹೆಚ್ ನೇತೃತ್ವದಲ್ಲಿ ಕಾರ್ಯಾಚರಣೆ ನಡೆಯಿತು.

ತಡರಾತ್ರಿವರೆಗೂ ತೆರೆದಿದ್ದ ಬೆಂಗಳೂರಿನ ಪಬ್​ಗಳ ಮೇಲೆ ಪೊಲೀಸರ ದಾಳಿ
ಬೆಂಗಳೂರು ಪೊಲೀಸ್​ ಆಯುಕ್ತರ ಕಚೇರಿ
ವಿವೇಕ ಬಿರಾದಾರ
ವಿವೇಕ ಬಿರಾದಾರ|

Updated on: Jul 21, 2024 | 10:34 AM

Share

ಬೆಂಗಳೂರು, ಜುಲೈ 21: ವಿಕೆಂಡ್ ಬ್ಯೂಸಿಯಲ್ಲಿದ್ದ ಪಬ್​ಗಳಿಗೆ (Pub) ನಗರ ಪೊಲೀಸರು (Benagluru Police) ಬಿಸಿ ಮುಟ್ಟಿಸಿದ್ದಾರೆ. ತಡರಾತ್ರಿವರೆಗು ಎಣ್ಣೆ ಪಾರ್ಟಿಗೆ ಅವಕಾಶ ಮಾಡಿಕೊಟ್ಟಿದ್ದ ಪಬ್​ಗಳ ಮೇಲೆ ಕೇಂದ್ರ ವಿಭಾಗದ ಡಿಸಿಪಿ ಶೇಖರ್.ಟಿ.ಹೆಚ್ ನೇತೃತ್ವದ ತಂಡ ದಾಳಿ ಮಾಡಿತು. ಟೀಂ ಇಂಡಿಯಾದ ಮಾಜಿ ನಾಯಕ ವಿರಾಟ್​ ಕೊಹ್ಲಿ (Virat Kohli) ಒಡೆತನದ ಪಬ್​ ಸೇರಿದಂತೆ 15 ಪಬ್​ಗಳ ಮೇಲೆ ಈ ಹಿಂದೆ ಎಫ್​ಐಆರ್​​ ದಾಖಲಾಗಿತ್ತು. ಈ ಎಲ್ಲ ಪಬ್​ಗಳು ಸೇರಿದಂತೆ ಇದೀಗ ಹೊಸದಾಗಿ ಅವಧಿಗೂ ಮೀರಿ ತೆರದಿದ್ದ ಎಂಜಿ ರೋಡ್, ಬ್ರಿಗೇಡ್ ರೋಡ್, ಚರ್ಚ್ ಸ್ಟ್ರೀಟ್​ನ ಪಬ್​​ಗಳ ಮೇಲೆ ಪೊಲೀಸರು ದಾಳಿ ಮಾಡಿ, ಎಚ್ಚರಿಕೆ ನೀಡಿ ಬಂದ್​ ಮಾಡಿಸಿದರು.

ಕೋಹ್ಲಿ ಮಾಲಿಕತ್ವದ ಪಬ್​ ಮೇಲೆ ಎಫ್​​ಐಆರ್​

ಟೀಂ ಇಂಡಿಯಾ ಕ್ರಿಕೆಟಿಗ ವಿರಾಟ್ ಕೊಹ್ಲಿ ಮಾಲೀಕತ್ವದ ಪಬ್ ಮೇಲೆ ಎಫ್​ಐಆರ್ ದಾಖಲಾಗಿತ್ತು. ರಾತ್ರಿ ಅವಧಿಗೂ ಮೀರಿ ಪಬ್ ತೆರೆದಿದ್ದ ಹಿನ್ನೆಲೆ ಬೆಂಗಳೂರಿನ ಕಸ್ತೂರಬಾ ರಸ್ತೆಯಲ್ಲಿರುವ ಕೊಹ್ಲಿ ಮಾಲೀಕತ್ವದ ಒನ್ 8 ಕಮ್ಯೂನ್ ಪಬ್​​ (One8 Commune Pub) ಮೇಲೆ ಕಬ್ಬನ್​ಪಾರ್ಕ್​ ಠಾಣೆಯಲ್ಲಿ FIR ದಾಖಲಾಗಿತ್ತು. ಪಬ್ ಓಪನ್ ಆಗಿದ್ದ ಬಗ್ಗೆ ರಾತ್ರಿ ಗಸ್ತಿನಲ್ಲಿದ್ದ ಪೊಲೀಸರಿಗೆ ಮಾಹಿತಿ ಸಿಕ್ಕಿತ್ತು. ಸ್ಥಳಕ್ಕೆ ಹೋಗಿ ಪರಿಶೀಲಿಸಿದಾಗ ಪಬ್​​ನಲ್ಲಿ ಗ್ರಾಹಕರು ಇದ್ದರು. ನಿಯಮ ಉಲ್ಲಂಘಿಸಿ ರಾತ್ರಿ ಅವಧಿಗೂ ಮೀರಿ ಪಬ್ ಓಪನ್​​​ ಮಾಡಿದ ಹಿನ್ನೆಲೆ ಎಫ್​ಐಆರ್ ದಾಖಲಿಸಲಾಗಿತ್ತು.

ಇದನ್ನೂ ಓದಿ: ಬೆಂಗಳೂರಿನ ಪಬ್​​ಗಳಲ್ಲಿ ಎಣ್ಣೆ, ಡಿಜೆ ಜೊತೆ ಮತ್ತೊಂದು ಮನರಂಜನೆ ಕಾರ್ಯಕ್ರಮ: ಏನದು?

ಸರ್ಕಾರ ನಿಗದಿಪಡಿಸಿರುವ ನಿಯಮವನ್ನು ಗಾಳಿಗೆ ತೂರಿ ತಡರಾತ್ರಿವರೆಗೂ ಪಬ್ ತೆರೆದು ಪಾರ್ಟಿಗೆ ಅನುವು ಮಾಡಿಕೊಟ್ಟ ರೆಸ್ಟೋರೆಂಟ್, ಬಾರ್, ಪಬ್ ವಿರುದ್ಧ ಜು.6ರ ರಾತ್ರಿ ಕಬ್ಬನ್ ಪಾರ್ಕ್ ಠಾಣಾ ಪೊಲೀಸರು ವಿಶೇಷ ಕಾರ್ಯಾಚರಣೆ ಕೈಗೊಂಡಿದ್ದರು.

ಈ ವೇಳೆ, ರಾತ್ರಿ 1.20ರವರೆಗೂ ಪಬ್ ಓಪನ್ ಮಾಡಿದ್ದ ಆರೋಪದಡಿ ನಗರದ ಕಸ್ತೂರಬಾ ರಸ್ತೆಯಲ್ಲಿರುವ ಒನ್ 8 ಕಮ್ಯೂನ್, ಚರ್ಚ್ ಸ್ಟ್ರೀಟ್‌ನಲ್ಲಿರುವ ಎಂಪೈರ್ ರೆಸ್ಟೋರೆಂಟ್, ಬ್ರಿಗೇಡ್ ರಸ್ತೆಯಲ್ಲಿರುವ ಪಾಂಜಿಯೋ ಬಾರ್ ಆ್ಯಂಡ್ ರೆಸ್ಟೋರೆಂಟ್ ವ್ಯವಸ್ಥಾಪಕರ ವಿರುದ್ಧ ಕಬ್ಬನ್ ಪಾರ್ಕ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ

Follow Us
ಸಚಿವ ಸಂಪುಟ ವಿಸ್ತರಣೆ ವಿಚಾರವಾಗಿ BJP ಟೀಕೆಗೆ ಹರಿಪ್ರಸಾದ್ ಕೌಂಟರ್​​
ಸಚಿವ ಸಂಪುಟ ವಿಸ್ತರಣೆ ವಿಚಾರವಾಗಿ BJP ಟೀಕೆಗೆ ಹರಿಪ್ರಸಾದ್ ಕೌಂಟರ್​​
ಕಾಂಗ್ರೆಸ್ ನಾಯಕರ ವಿರುದ್ಧ ಆಕ್ರೋಶ ಹೊರಹಾಕಿದ ಶಾಸಕ ಸುಬ್ಬಾರೆಡ್ಡಿ
ಕಾಂಗ್ರೆಸ್ ನಾಯಕರ ವಿರುದ್ಧ ಆಕ್ರೋಶ ಹೊರಹಾಕಿದ ಶಾಸಕ ಸುಬ್ಬಾರೆಡ್ಡಿ
ರಾಜೀನಾಮೆ ವಾಪಸ್ ಪಡೆದ ಯಶವಂತರಾಯಗೌಡ ಪಾಟೀಲ್
ರಾಜೀನಾಮೆ ವಾಪಸ್ ಪಡೆದ ಯಶವಂತರಾಯಗೌಡ ಪಾಟೀಲ್
ಮೇಕೆದಾಟು ಯೋಜನೆ ತಡೆಯಲು ತಮಿಳುನಾಡಿಗೆ ಅಧಿಕಾರವಿಲ್ಲ
ಮೇಕೆದಾಟು ಯೋಜನೆ ತಡೆಯಲು ತಮಿಳುನಾಡಿಗೆ ಅಧಿಕಾರವಿಲ್ಲ
ಎರಡು ವರ್ಷಗಳ ಬಳಿಕ ಹಾಸನದಲ್ಲಿ ರಾರಾಜಿಸಿದ ಪ್ರಜ್ವಲ್ ರೇವಣ್ಣ ಫ್ಲೆಕ್ಸ್ ಗಳು
ಎರಡು ವರ್ಷಗಳ ಬಳಿಕ ಹಾಸನದಲ್ಲಿ ರಾರಾಜಿಸಿದ ಪ್ರಜ್ವಲ್ ರೇವಣ್ಣ ಫ್ಲೆಕ್ಸ್ ಗಳು
ಸಚಿವ ಸ್ಥಾನ ಹರಾಜು: ರಾಜ್ಯ ರಾಜಕಾರಣದಲ್ಲಿ ಸಂಚಲನ ಮೂಡಿಸಿದ ಆಡಿಯೋ
ಸಚಿವ ಸ್ಥಾನ ಹರಾಜು: ರಾಜ್ಯ ರಾಜಕಾರಣದಲ್ಲಿ ಸಂಚಲನ ಮೂಡಿಸಿದ ಆಡಿಯೋ
ನಾಗೇಂದ್ರಗೆ ಮಂತ್ರಿ ಸ್ಥಾನ ಹೈಕಮಾಂಡ್ ತೀರ್ಮಾನ
ನಾಗೇಂದ್ರಗೆ ಮಂತ್ರಿ ಸ್ಥಾನ ಹೈಕಮಾಂಡ್ ತೀರ್ಮಾನ
ಸಚಿವರ ಪ್ರಮಾಣವಚನಕ್ಕೆ ಸಿದ್ದು ಗೈರಾಗಿದ್ಯಾಕೆ? ಜಾರಕಿಹೊಳಿ ಹಿಂಗ್ಯಾಕಂದ್ರು?
ಸಚಿವರ ಪ್ರಮಾಣವಚನಕ್ಕೆ ಸಿದ್ದು ಗೈರಾಗಿದ್ಯಾಕೆ? ಜಾರಕಿಹೊಳಿ ಹಿಂಗ್ಯಾಕಂದ್ರು?
ರಾಜೀನಾಮೆ ನೀಡುವ ಮಟ್ಟಕ್ಕೆ ಹೋಗಿದ್ದ ಶಾಸಕ ಶ್ರೀನಿವಾಸ್ ದಿಢೀರ್ ಯುಟರ್ನ್
ರಾಜೀನಾಮೆ ನೀಡುವ ಮಟ್ಟಕ್ಕೆ ಹೋಗಿದ್ದ ಶಾಸಕ ಶ್ರೀನಿವಾಸ್ ದಿಢೀರ್ ಯುಟರ್ನ್
ಸಂಪುಟ ವಿಸ್ತರಣೆ ಬೆನ್ನಲ್ಲೇ ಖಾತೆಗಳಿಗಾಗಿ ಹೆಚ್ಚಿದ ಪೈಪೋಟಿ
ಸಂಪುಟ ವಿಸ್ತರಣೆ ಬೆನ್ನಲ್ಲೇ ಖಾತೆಗಳಿಗಾಗಿ ಹೆಚ್ಚಿದ ಪೈಪೋಟಿ