AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ರೂಲ್ಸ್ ಮಾಡುವವರಿಂದಲೇ ರೂಲ್ಸ್ ಬ್ರೇಕ್; ಗೃಹ ಸಚಿವರ ಮನೆ ಮುಂದೆ ರಾರಾಜಿಸುತ್ತಿವೆ ಫ್ಲೆಕ್ಸ್, ಬ್ಯಾನರ್ಸ್

ಅನಧಿಕೃತ ಬ್ಯಾನರ್​ಗಳ ಮಟ್ಟಹಾಕಲು ಬಿಬಿಎಂಪಿ ಹಾಗೂ ಬೆಂಗಳೂರು ಪೊಲೀಸ್ ಇಲಾಖೆ ಜಂಟಿ ಕಾರ್ಯಾಚರಣೆಗೆ ಮುಂದಾಗಿತ್ತು. ಈ ಬಗ್ಗೆ ಇತ್ತೀಚೆಗೆ ಸಭೆ ನಡೆಸಿ ಕ್ರಮಕ್ಕೆ ಮುಂದಾಗಿತ್ತು. ಆದರೆ ಈಗ ಪೊಲೀಸ್ ಇಲಾಖೆ ನಿರ್ವಹಿಸುವ ಗೃಹ ಸಚಿವರ ಮನೆ ಸುತ್ತಮುತ್ತಲೇ ಫ್ಲೆಕ್ಸ್, ಬ್ಯಾನರ್​ಗಳು ರಾರಾಜಿಸುತ್ತಿವೆ.

ರೂಲ್ಸ್ ಮಾಡುವವರಿಂದಲೇ ರೂಲ್ಸ್ ಬ್ರೇಕ್; ಗೃಹ ಸಚಿವರ ಮನೆ ಮುಂದೆ ರಾರಾಜಿಸುತ್ತಿವೆ ಫ್ಲೆಕ್ಸ್, ಬ್ಯಾನರ್ಸ್
ಗೃಹ ಸಚಿವರ ಮನೆ ಮುಂದೆ ರಾರಾಜಿಸುತ್ತಿವೆ ಫ್ಲೆಕ್ಸ್, ಬ್ಯಾನರ್ಸ್
ಶಾಂತಮೂರ್ತಿ
| Edited By: |

Updated on: Aug 03, 2024 | 10:36 AM

Share

ಬೆಂಗಳೂರು, ಆಗಸ್ಟ್.03: ನಗರದಲ್ಲಿ ಹೆಚ್ಚಾಗಿರೋ ಅನಧಿಕೃತ ಬ್ಯಾನರ್​ಗಳ ಮಟ್ಟ ಹಾಕಲು ಬಿಬಿಎಂಪಿ (BBMP) ಮುಂದಾಗಿತ್ತು. 1533ಕ್ಕೆ ಕರೆ ಮಾಡಿ ದೂರು ನೀಡಲು ಸೂಚನೆ ನೀಡಿತ್ತು. ಆದರೆ ಇದೀಗ ರೂಲ್ಸ್ ಮಾಡಿದವರಿಂದಲೇ ಫ್ಲೆಕ್ಸ್, (Flex) ಬ್ಯಾನರ್ ರೂಲ್ಸ್ ಬ್ರೇಕ್ ಹಾಕಿದೆ. ಗೃಹ ಸಚಿವ ಡಾ.ಜಿ. ಪರಮೇಶ್ವರ್ (Dr G Parameshwar) ಅವರ ಮನೆ ಮುಂದೆಯೇ ಹುಟ್ಟಹಬ್ಬದ ಫ್ಲೆಕ್ಸ್, ಬ್ಯಾನರ್ ರಾರಾಜಿಸುತ್ತಿದೆ.

ಗೃಹ ಸಚಿವ ಪರಮೇಶ್ವರ್ ಅವರ ಬರ್ತ್ ಡೇ ಹಿನ್ನೆಲೆ ಸದಾಶಿವನಗರದ ನಿವಾಸದ ಸುತ್ತಮುತ್ತ ಫ್ಲೆಕ್ಸ, ಬ್ಯಾನರ್ ಹಾಕಲಾಗಿದೆ. ಅತ್ತ ಫ್ಲೆಕ್ಸ್ ಕಂಟ್ರೋಲ್ ಗೆ ರಾತ್ರಿ ವೇಳೆ ಗಸ್ತು ತಿರುಗಲು ಪಾಲಿಕೆ ಜೊತೆ ಖಾಕಿ ಪಡೆ ಕೈ ಜೋಡಿಸಿತ್ತು. ಆದರೆ ಇದೀಗ ಅದೇ ಪೊಲೀಸ್ ಇಲಾಖೆ ನಿರ್ವಹಿಸುವ ಗೃಹ ಸಚಿವರಿಂದಲೇ ರೂಲ್ಸ್ ಬ್ರೇಕ್ ಆಗಿದೆ. ರಾಜಕಾರಣಿಗಳಿಗೆ ಒಂದು ನ್ಯಾಯ, ಜನರಿಗೆ ಮತ್ತೊಂದು ನ್ಯಾಯನಾ? ಎಂದು ಜನಪ್ರತಿನಿಧಿಗಳ ನಡೆಗೆ ಸಾರ್ವಜನಿಕರು ಆಕ್ರೋಶ ಹೊರ ಹಾಕಿದ್ದಾರೆ.

Rules broken who make the rules Flexes and banners installed in front of the home minister house bengaluru kannada news

ಗೃಹ ಸಚಿವರ ಮನೆ ಮುಂದೆ ರಾರಾಜಿಸುತ್ತಿವೆ ಫ್ಲೆಕ್ಸ್, ಬ್ಯಾನರ್ಸ್

ಹಲವು ಕ್ರಮಗಳನ್ನು ಕೈಗೊಂಡ ಬಿಬಿಎಂಪಿಗೆ ರಾತ್ರಿ ವೇಳೆ ರಸ್ತೆಗಳಲ್ಲಿ ಉದ್ಭವವಾಗೊ ಅನಧಿಕೃತ ಫ್ಲೆಕ್ಸ್ ತಲೆ ಬಿಸಿ ತಂದಿತ್ತು. ಮೊದಲಿನಿಂದಲೂ ಈ ರೀತಿ ಬ್ಯಾನರ್ ಹಾಕುವವರ ವಿರುದ್ಧ ಕ್ರಮಕೈಗೊಂಡರು, ಮತ್ತೆ ಮತ್ತೆ ಈ ರೀತಿ ಚಟುವಟಿಕೆ ಹೆಚ್ಚಾಗಿದ್ದು, ಹೈ ಕೊರ್ಟ್ ನ ನಿರ್ದೇಶನದ ಮೇರೆಗೆ ಬಿಬಿಎಂಪಿ, ಪೊಲೀಸರ ಜೊತೆ ಜಂಟಿ ಕಾರ್ಯಾಚರಣೆಗೆ ಮುಂದಾಗಿತ್ತು. ಇತ್ತೀಚೆಗೆ ಬೆಂಗಳೂರು ಪೊಲೀಸರ ಜೊತೆ ಮಹತ್ವದ ಸಭೆ ನಡೆಸಿ, ಈಗಾಗಲೇ ಹಾಕಿರುವ ಅನಧಿಕೃತ ಬ್ಯಾನರ್ ಹಾಗೂ ಅನಧಿಕೃತ ಫ್ಲೆಕ್ಸ್ ಗಳ ವಿರುದ್ಧ ಹಾಗೂ ಅನಧಿಕೃತ ಫ್ಲೆಕ್ಸ್ ಗಳ ಹಾಕುವ ಸಂದರ್ಭದಲ್ಲಿ ಕೈಗೊಳ್ಳಬೇಕಾದ ನಿರ್ಧಾರ ಹಾಗೂ ಕ್ರಮಗಳ ಬಗ್ಗೆ ಚರ್ಚೆ ಮಾಡಲಾಗಿತ್ತು.

ಇದನ್ನೂ ಓದಿ: ಮಳೆಯಿಂದ ಅತಿವೃಷ್ಟಿ ಅನಾಹುತ ಕಡಿಮೆಯಾಗಲೆಂದು ಕಳಸೇಶ್ವರನಿಗೆ ಅಗಿಲು ಸೇವೆ ಸಲ್ಲಿಸಿದ ಕಳಸ ಗ್ರಾಮಸ್ಥರು

ಸಭೆಯಲ್ಲಿ ಮೊದಲ ಹಂತದ ಕ್ರಮವಾಗಿ ಪೊಲೀಸರಿಗೆ ಬಿಬಿಎಂಪಿಯಿಂದ ನಿರ್ಧರಿತವಾದ ನಂಬರ್ ನೀಡಿದ್ದು, ರಾತ್ರಿ ವೇಳೆ ಪೊಲೀಸ್ ಗಸ್ತು ಸಂದರ್ಭದಲ್ಲಿ ಬ್ಯಾನರ್, ಫ್ಲೆಕ್ಸ್ ಗಳು ಹಾಕುವುದು ಕಂಡು ಬಂದಲ್ಲಿ ಕೂಡಲೇ ನಿರ್ಧರಿತ ನಂಬರ್ ಗೆ ಮಾಹಿತಿ ನೀಡುವುದು. ಬಳಿಕ ಅದು ಅಧಿಕೃತವೋ ಅಥವ ಅನಧಿಕೃತವೋ ಎಂಬ ಸಂಗತಿ ಪತ್ತೆ ಮಾಡುವುದು. ನಂತರ ಅನಧಿಕೃತವಾಗಿದ್ದಲ್ಲಿ ಬಿಬಿಎಂಪಿಯಿಂದ ದೂರು ಪಡೆದು ಕ್ರಮ ಕೈಗೊಳ್ಳುವ ನಿರ್ಧಾರ ಮಾಡಲಾಯ್ತು. ಎರಡನೇ ಹಂತದ ಕ್ರಮವಾಗಿ ಈಗಾಗಲೇ ಅಳವಡಿಸಿರುವ ಅನಧಿಕೃತ ಫ್ಲೆಕ್ಸ್ ಹಾಗೂ ಬ್ಯಾನರ್ ಗಳ ಕೂಡಲೇ ತೆರವು ಮಾಡುವುದು ಹಾಗೂ ಸಂಬಂಧ ಪಟ್ಟವರ ವಿರುದ್ಧ ಕೈಗೊಳ್ಳಬಹುದಾದ ಕಠಿಣಾತಿ ಕಠಿಣ ಕಾನೂನಿನ ಕ್ರಮಗಳ ಬಗ್ಗೆ ಯಾವ ರೀತಿ ಹೆಜ್ಜೆ ಇಡುವುದು ಎಂಬ ವಿಚಾರವಾಗಿ ಚರ್ಚೆ ನಡೆಸಲಾಯ್ತು. ಇನ್ನು ಈ ಸಭೆಯಲ್ಲೇ ಎಲ್ಲಾ ಪೊಲೀಸ್ ಅಧಿಕಾರಿಗಳಿಗೆ ಅನಧಿಕೃತ ಫ್ಲೆಕ್ಸ್ ಗಳ ತೆರುವಿನ ಬಗ್ಗೆ ಸೂಚನೆ ನೀಡಿದ್ದು, ಬೇಜವಾಬ್ದಾರಿ ತೋರಿದಲ್ಲಿ ಅಧಿಕಾರಿಗಳ ವಿರುದ್ಧ ಕ್ರಮ ಕೈಗೊಳ್ಳೊದಾಗಿ ಎಚ್ಚರಿಕೆ ನೀಡಲಾಗಿತ್ತು. ಆದರೆ ಈಗ ರೂಲ್ಸ್ ಮಾಡಿದವರಿಂದಲೇ ರೂಲ್ಸ್ ಬ್ರೇಕ್ ಆಗಿದ್ದು ಆಕ್ರೋಶ ವ್ಯಕ್ತವಾಗಿದೆ.

ರಾಜ್ಯದ ಪ್ರಮುಖ ಸುದ್ದಿಗಳನ್ನು ಓದಲು ಇದರ ಮೇಲೆ ಕ್ಲಿಕ್ ಮಾಡಿ

ಪ್ರಧಾನಿ ಮೋದಿಗೆ ಇಥಿಯೋಪಿಯಾದ ಅತ್ಯುನ್ನತ ಗೌರವ
ಪ್ರಧಾನಿ ಮೋದಿಗೆ ಇಥಿಯೋಪಿಯಾದ ಅತ್ಯುನ್ನತ ಗೌರವ
ರಿಷಬ್​​ಗೆ ಇದೇ ತಿರುಗುಬಾಣವಾಗುತ್ತೆ: ಭವಿಷ್ಯ ನುಡಿದ ದೈವನರ್ತಕ ತಮ್ಮಣ್ಣ
ರಿಷಬ್​​ಗೆ ಇದೇ ತಿರುಗುಬಾಣವಾಗುತ್ತೆ: ಭವಿಷ್ಯ ನುಡಿದ ದೈವನರ್ತಕ ತಮ್ಮಣ್ಣ
ಗೃಹಲಕ್ಷ್ಮೀ ತಪ್ಪು ಮಾಹಿತಿ: ಮುಖಭಂಗ ತಪ್ಪಿಸಲು ‘ಕೈ’ ಸಂಧಾನ ಯತ್ನ
ಗೃಹಲಕ್ಷ್ಮೀ ತಪ್ಪು ಮಾಹಿತಿ: ಮುಖಭಂಗ ತಪ್ಪಿಸಲು ‘ಕೈ’ ಸಂಧಾನ ಯತ್ನ
ದೆಹಲಿ-ಮುಂಬೈ ಎಕ್ಸ್​ಪ್ರೆಸ್​ವೇನಲ್ಲಿ ಬಹು ವಾಹನಗಳ ನಡುವೆ ಡಿಕ್ಕಿ
ದೆಹಲಿ-ಮುಂಬೈ ಎಕ್ಸ್​ಪ್ರೆಸ್​ವೇನಲ್ಲಿ ಬಹು ವಾಹನಗಳ ನಡುವೆ ಡಿಕ್ಕಿ
25.2 ಕೋಟಿ ರೂ. ಹರಾಜಿನ ಬೆನ್ನಲ್ಲೇ ಸೊನ್ನೆ ಸುತ್ತಿದ ಕ್ಯಾಮರೋನ್ ಗ್ರೀನ್
25.2 ಕೋಟಿ ರೂ. ಹರಾಜಿನ ಬೆನ್ನಲ್ಲೇ ಸೊನ್ನೆ ಸುತ್ತಿದ ಕ್ಯಾಮರೋನ್ ಗ್ರೀನ್
ಕಾವ್ಯಾ ರೌದ್ರಾವತಾರಕ್ಕೆ ಎಲ್ಲರೂ ಶಾಕ್; ಅಶ್ವಿನಿಗೆ ಏಕವಚನದಲ್ಲೇ ಕ್ಲಾಸ್
ಕಾವ್ಯಾ ರೌದ್ರಾವತಾರಕ್ಕೆ ಎಲ್ಲರೂ ಶಾಕ್; ಅಶ್ವಿನಿಗೆ ಏಕವಚನದಲ್ಲೇ ಕ್ಲಾಸ್
ರಸ್ತೆ ಬದಿ ನಿಂತಿದ್ದ ಯುವತಿಯನ್ನು ಕೆಟ್ಟದಾಗಿ ಸ್ಪರ್ಶಿಸಿ ಪರಾರಿಯಾದ ಯುವಕ
ರಸ್ತೆ ಬದಿ ನಿಂತಿದ್ದ ಯುವತಿಯನ್ನು ಕೆಟ್ಟದಾಗಿ ಸ್ಪರ್ಶಿಸಿ ಪರಾರಿಯಾದ ಯುವಕ
ಇಸ್ಲಾಮಿಯಾದಿಂದ ಇಂಡಿಯಾವರೆಗೆ; ಸಖತ್ ಮಜವಾಗಿದೆ ಈ ಎಡಿಟೆಡ್ ವಿಡಿಯೋ
ಇಸ್ಲಾಮಿಯಾದಿಂದ ಇಂಡಿಯಾವರೆಗೆ; ಸಖತ್ ಮಜವಾಗಿದೆ ಈ ಎಡಿಟೆಡ್ ವಿಡಿಯೋ
ತಮ್ಮ ಸಾವಿಗೂ ಮುನ್ನ ದಾಳಿಕೋರನನ್ನು ತಡೆಯಲು ಯತ್ನಿಸಿದ್ದ ದಂಪತಿ
ತಮ್ಮ ಸಾವಿಗೂ ಮುನ್ನ ದಾಳಿಕೋರನನ್ನು ತಡೆಯಲು ಯತ್ನಿಸಿದ್ದ ದಂಪತಿ
ಶಬರಿಮಲೆಯ 18 ಮೆಟ್ಟಿಲುಗಳ ಮಹತ್ವವೇನು ಗೊತ್ತಾ?
ಶಬರಿಮಲೆಯ 18 ಮೆಟ್ಟಿಲುಗಳ ಮಹತ್ವವೇನು ಗೊತ್ತಾ?