AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಹಾಲನೂರು ಲೇಪಾಕ್ಷಿ ನೇತೃತ್ವದಲ್ಲಿ ಸುದ್ದಿಗೋಷ್ಠಿ; ಸಿಎಂಗೆ ಗೌರವಕೊಟ್ಟು ಶಾಲೆ ತೆರೆಯಲು ಮತ್ತಷ್ಟು ಕಾಲಾವಕಾಶ ನೀಡಲು ರುಪ್ಸಾ ನಿರ್ಧಾರ

ಶಾಲೆ(School) ಆರಂಭಿಸುವಂತೆ ಜುಲೈ 21ರವರೆಗೆ ರೂಪ್ಸಾ(RUPSA) ಡೆಡ್ ಲೈನ್ ನೀಡಿತ್ತು. ಆದ್ರೆ ಡೆಡ್ ಲೈನ್ ಮುಗಿದರು ಶಿಕ್ಷಣ ಇಲಾಖೆ ಶಾಲೆ ಆರಂಭಕ್ಕೆ ಅನುಮತಿ ನೀಡಲಿಲ್ಲ. ಈ ಹಿನ್ನೆಲೆಯಲ್ಲಿ ನಾಳೆಯಿಂದ ಶಾಲೆಗಳು ಆರಂಭದ ಕುರಿತು ರೂಪ್ಸಾ ಅಧ್ಯಕ್ಷ ಹಾಲನೂರು ಲೇಪಾಕ್ಷಿ ನೇತೃತ್ವದಲ್ಲಿ ಪತ್ರಿಕಾಗೋಷ್ಠಿ ನಡೆದಿದೆ.

ಹಾಲನೂರು ಲೇಪಾಕ್ಷಿ ನೇತೃತ್ವದಲ್ಲಿ ಸುದ್ದಿಗೋಷ್ಠಿ; ಸಿಎಂಗೆ ಗೌರವಕೊಟ್ಟು ಶಾಲೆ ತೆರೆಯಲು ಮತ್ತಷ್ಟು ಕಾಲಾವಕಾಶ ನೀಡಲು ರುಪ್ಸಾ ನಿರ್ಧಾರ
ಸಂಗ್ರಹ ಚಿತ್ರ
TV9 Web
| Edited By: |

Updated on: Aug 01, 2021 | 2:39 PM

Share

ಬೆಂಗಳೂರು: ಶಾಲೆಗಳನ್ನು ಆರಂಭಿಸಲು ಸರ್ಕಾರ ಅನುಮತಿ ನೀಡದ ಹಿನ್ನೆಲೆಯಲ್ಲಿ ರಾಜ್ಯ ಸರ್ಕಾರದ ವಿರುದ್ಧ ಖಾಸಗಿ ಶಿಕ್ಷಣ ಸಂಸ್ಥೆಗಳು ಸಿಡಿದೆದ್ದಿವೆ. ರುಪ್ಸಾ ಅಧ್ಯಕ್ಷ ಹಾಲನೂರು ಲೇಪಾಕ್ಷಿ ನೇತೃತ್ವದಲ್ಲಿ ನಗರದ ಪ್ರೆಸ್ ಕ್ಲಬ್ನಲ್ಲಿ ಸುದ್ದಿಗೋಷ್ಠಿ ನಡೆಸಿದೆ.

ಶಾಲೆ(School) ಆರಂಭಿಸುವಂತೆ ಜುಲೈ 21ರವರೆಗೆ ರೂಪ್ಸಾ(RUPSA) ಡೆಡ್ ಲೈನ್ ನೀಡಿತ್ತು. ಆದ್ರೆ ಡೆಡ್ ಲೈನ್ ಮುಗಿದರು ಶಿಕ್ಷಣ ಇಲಾಖೆ ಶಾಲೆ ಆರಂಭಕ್ಕೆ ಅನುಮತಿ ನೀಡಲಿಲ್ಲ. ಈ ಹಿನ್ನೆಲೆಯಲ್ಲಿ ನಾಳೆಯಿಂದ ಶಾಲೆಗಳು ಆರಂಭದ ಕುರಿತು ರೂಪ್ಸಾ ಅಧ್ಯಕ್ಷ ಹಾಲನೂರು ಲೇಪಾಕ್ಷಿ ನೇತೃತ್ವದಲ್ಲಿ ಪತ್ರಿಕಾಗೋಷ್ಠಿ ನಡೆದಿದೆ. ಖಾಸಗಿ ಶಿಕ್ಷಣ ಸಂಸ್ಥೆಗಳು ರಾಜ್ಯದಲ್ಲಿ ಶಾಲೆಗಳ ಆರಂಭಕ್ಕೆ ಮುಂದಾಗಿವೆ.

ಪರ್ಯಾಯ ಮಾರ್ಗದಿಂದಾದರೂ ಶಾಲೆ ಆರಂಭ ಮಾಡಬೇಕಿದೆ. ಶಿಕ್ಷಕರಿಗೆ ಲಸಿಕೆ ನೀಡಿದ್ದೀವಿ. ವಿದ್ಯಾಗಮ ಹಾಗೂ ಪಾಳಿ ಪದ್ದತಿಯಲ್ಲಿ ಶಾಲೆ ಆರಂಭ ಮಾಡುವಂತೆ ಮನವಿ ಇಟ್ಟಿದ್ದೀವಿ ಎಂದು ರೂಪ್ಸಾ ಅಧ್ಯಕ್ಷ ಹಾಲನೂರು ಲೇಪಾಕ್ಷಿ ಹೇಳಿಕೆ ನೀಡಿದ್ದಾರೆ.

ರುಪ್ಸಾ-ರಾಜ್ಯ ಅನುದಾನರಹಿತ ಖಾಸಗಿ ಶಾಲೆಗಳ ಒಕ್ಕೂಟ ಹಲವು ರಾಜ್ಯಗಳಲ್ಲಿ ಈಗಾಗಲೇ ಶಾಲೆ ಆರಂಭಿಸಲು ನಿರ್ಧಾರ ಮಾಡಿದೆ. ನಮ್ಮ ಸರ್ಕಾರ ಮಾತ್ರ ಶಾಲೆ ಆರಂಭಕ್ಕೆ ನಿರ್ಧಾರ ಮಾಡ್ತಿಲ್ಲ. ಸಿಎಂ ಕರೆ ಮಾಡಿ ಸಭೆ ನಡೆಸಿ ಚರ್ಚಿಸಲು ಮನವಿ ಮಾಡಿದ್ದಾರೆ. ನಾಳೆಯಿಂದ ಶಾಲೆ ಆರಂಭ ಮಾಡಲು ನಿರ್ಧಾರ ಮಾಡಲಾಗಿತ್ತು. ಶಾಲಾ ಆರಂಭದ ಬಗ್ಗೆ ಚರ್ಚಿಸಲು ಸಿಎಂ ಕರೆ ನೀಡಿದ್ದಾರೆ. ಸಿಎಂ ಭೇಟಿ ಮಾಡಿ ಶಾಲೆ ಆರಂಭದ ಬಗ್ಗೆ ಚರ್ಚೆ ಮಾಡುತ್ತೇವೆ. ಶಾಲೆಗಳ ಆರಂಭದ ಬಗ್ಗೆ ದುಡುಕಿನ ನಿರ್ಧಾರ ಬೇಡ ಅಂತಿದ್ದಾರೆ. ಸಿಎಂಗೆ ಗೌರವಕೊಟ್ಟು ಮತ್ತಷ್ಟು ಕಾಲಾವಕಾಶ ನೀಡಲು ನಿರ್ಧಾರ ಮಾಡಿದ್ದೇವೆ ಎಂದು ಸುದ್ದಿಗೋಷ್ಠಿಯಲ್ಲಿ ರುಪ್ಸಾ ಅಧ್ಯಕ್ಷ ಹಾಲನೂರು ಲೇಪಾಕ್ಷಿ ಹೇಳಿದ್ರು.

ಇದನ್ನೂ ಓದಿ: ಸರ್ಕಾರದ ವಿರುದ್ಧ ಸಿಡಿದೆದ್ದ ಖಾಸಗಿ ಶಿಕ್ಷಣ ಸಂಸ್ಥೆಗಳು; ಅನುಮತಿ ಇಲ್ಲದಿದ್ದರೂ ಆಗಸ್ಟ್ 2ರಿಂದ ಶಾಲೆ ತೆರೆಯಲು ಮುಂದಾದ ರುಪ್ಸಾ

ವಿಪಕ್ಷ ಶಾಸಕರ ಮಾತಿಗೆ ಸಿಎಂ ಸಿದ್ದರಾಮಯ್ಯ ಖಡಕ್ ಉತ್ತರ, ಸದನ ಫುಲ್ ಸೈಲೆಂಟ್
ವಿಪಕ್ಷ ಶಾಸಕರ ಮಾತಿಗೆ ಸಿಎಂ ಸಿದ್ದರಾಮಯ್ಯ ಖಡಕ್ ಉತ್ತರ, ಸದನ ಫುಲ್ ಸೈಲೆಂಟ್
ಟೀ, ಸಿಗರೇಟ್​​ ನೆಪದಲ್ಲಿ ಅಂಗಡಿಗೆ ಬಂದು ಮಾಂಗಲ್ಯ ಸರ ಕದ್ದು ಎಸ್ಕೇಪ್​!
ಟೀ, ಸಿಗರೇಟ್​​ ನೆಪದಲ್ಲಿ ಅಂಗಡಿಗೆ ಬಂದು ಮಾಂಗಲ್ಯ ಸರ ಕದ್ದು ಎಸ್ಕೇಪ್​!
ಕನಕೋತ್ಸವ ವೇದಿಕೆಯಲ್ಲಿ ಗಿಲ್ಲಿ, ಮಂಗ್ಲಿ ಮಸ್ತ್ ಮನರಂಜನೆ; ವಿಡಿಯೋ ನೋಡಿ
ಕನಕೋತ್ಸವ ವೇದಿಕೆಯಲ್ಲಿ ಗಿಲ್ಲಿ, ಮಂಗ್ಲಿ ಮಸ್ತ್ ಮನರಂಜನೆ; ವಿಡಿಯೋ ನೋಡಿ
ರಾಯಲ್ ಸ್ಟ್ರಾಂಗ್ ಅಂತ ಬಿಯರ್ ಇದೆ ಕಣ್ಣಯ್ಯ:ಸದನದಲ್ಲಿ ಅಶೋಕ್‌-ಸಿಎಂ ಕಾಮಿಡಿ
ರಾಯಲ್ ಸ್ಟ್ರಾಂಗ್ ಅಂತ ಬಿಯರ್ ಇದೆ ಕಣ್ಣಯ್ಯ:ಸದನದಲ್ಲಿ ಅಶೋಕ್‌-ಸಿಎಂ ಕಾಮಿಡಿ
ವಿದ್ಯಾರ್ಥಿಗಳಿಗೆ ಶಾಕ್​​: ಸಾಂಬಾರಿನಲ್ಲಿ ನುಸಿ ಹುಳ ಪತ್ತೆ
ವಿದ್ಯಾರ್ಥಿಗಳಿಗೆ ಶಾಕ್​​: ಸಾಂಬಾರಿನಲ್ಲಿ ನುಸಿ ಹುಳ ಪತ್ತೆ
ಮಕ್ಕಳನ್ನು ರಸ್ತೆಗೆ ಬಿಡುವ ಮುನ್ನ ಎಚ್ಚರ!
ಮಕ್ಕಳನ್ನು ರಸ್ತೆಗೆ ಬಿಡುವ ಮುನ್ನ ಎಚ್ಚರ!
ದೇವಸ್ಥಾನದ ಸುಪ್ರಭಾತ ಹಾಡು ಹಾಕಿದಕ್ಕೆ ಮುಸ್ಲಿಂ ಯವಕನಿಂದ ಕಿರಿಕ್
ದೇವಸ್ಥಾನದ ಸುಪ್ರಭಾತ ಹಾಡು ಹಾಕಿದಕ್ಕೆ ಮುಸ್ಲಿಂ ಯವಕನಿಂದ ಕಿರಿಕ್
ನಟ ಯಶ್​ ತಾಯಿ ಜಾಗ ವಿವಾದಕ್ಕೆ ಟ್ವಿಸ್ಟ್​​: ಒಂದೇ ಸೈಟ್​​ಗೆ ಎರಡು ದಾಖಲೆ?
ನಟ ಯಶ್​ ತಾಯಿ ಜಾಗ ವಿವಾದಕ್ಕೆ ಟ್ವಿಸ್ಟ್​​: ಒಂದೇ ಸೈಟ್​​ಗೆ ಎರಡು ದಾಖಲೆ?
ಬಾಯಿಯ ಆರೋಗ್ಯ ಚೆನ್ನಾಗಿಲ್ಲದಿದ್ದರೆ ಹೃದಯದ ಆಯಸ್ಸು ಕಡಿಮೆಯಾಗುತ್ತಾ?
ಬಾಯಿಯ ಆರೋಗ್ಯ ಚೆನ್ನಾಗಿಲ್ಲದಿದ್ದರೆ ಹೃದಯದ ಆಯಸ್ಸು ಕಡಿಮೆಯಾಗುತ್ತಾ?
ಕೊಡಗಿನಲ್ಲಿ ರೆಸಾರ್ಟ್, ವಿಲ್ಲಾಗಳಿಗಾಗಿ ಬೆಟ್ಟ ಬಗೆದ ಮಾಫಿಯಾ ಗ್ಯಾಂಗ್
ಕೊಡಗಿನಲ್ಲಿ ರೆಸಾರ್ಟ್, ವಿಲ್ಲಾಗಳಿಗಾಗಿ ಬೆಟ್ಟ ಬಗೆದ ಮಾಫಿಯಾ ಗ್ಯಾಂಗ್