AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಆಗಸ್ಟ್ 21ರ ನಂತರ ನಡೆಯಬೇಕಿದ್ದ ಖಾಸಗಿ ಶಾಲೆಗಳ ಬಂದ್ ಪ್ರತಿಭಟನೆ ವಾಪಸ್; ಕಾರಣ?

ಖಾಸಗಿ ಶಾಲೆಗಳ ಮೇಲಿನ ಅನ್ಯಾಯ ವಿರೋಧಿಸಿ ರುಪ್ಸಾ (RUPSA) ಕರ್ನಾಟಕ ಖಾಸಗಿ ಅನುದಾನ ರಹಿತ ಶಾಲೆಗಳ ಒಕ್ಕೂಟದಿಂದ ಆಗಸ್ಟ್ 21 ರಂದು ಶಾಲೆಗಳನ್ನ ಬಂದ್ (bandh)ಪ್ರತಿಭಟನೆಯನ್ನ ವಾಪಸ್​ ಪಡೆದಿದೆ. ಇಂದು(ಆ.13) ಶಿಕ್ಷಣ ಸಚಿವ ಮಧು ಬಂಗಾರಪ್ಪ ನೇತೃತ್ವದಲ್ಲಿ ನಡೆದ ಸಚಿವರ ಸಭೆ ಬಳಿಕ ಮಾತನಾಡಿದ ಲೇಪಾಕ್ಷಿ ಹಾಲನೂರು, ‘ಪ್ರತಿಭಟನೆಯನ್ನ ಕೈಬಿಡಲಾಗಿದೆ ಎಂದಿದ್ದಾರೆ.

ಆಗಸ್ಟ್ 21ರ ನಂತರ ನಡೆಯಬೇಕಿದ್ದ ಖಾಸಗಿ ಶಾಲೆಗಳ ಬಂದ್ ಪ್ರತಿಭಟನೆ ವಾಪಸ್; ಕಾರಣ?
ಖಾಸಗಿ ಶಾಲೆಗಳ ಬಂದ್ ಪ್ರತಿಭಟನೆ ವಾಪಸ್
Vinay Kashappanavar
| Edited By: |

Updated on:Aug 13, 2024 | 3:50 PM

Share

ಬೆಂಗಳೂರು, ಆ.13: ಇದೇ ಆಗಸ್ಟ್ 21 ರಂದು ಖಾಸಗಿ ಶಾಲೆಗಳ ಮೇಲಿನ ಅನ್ಯಾಯ ವಿರೋಧಿಸಿ ರುಪ್ಸಾ (RUPSA) ಕರ್ನಾಟಕ ಖಾಸಗಿ ಅನುದಾನ ರಹಿತ ಶಾಲೆಗಳ ಒಕ್ಕೂಟದಿಂದ ಶಾಲೆಗಳನ್ನ ಬಂದ್ (bandh) ಮಾಡಿ ಪ್ರತಿಭಟನೆ ಮಾಡುವುದಾಗಿ ರುಪ್ಸಾ (ಖಾಸಗಿ ಶಾಲೆಗಳ ಒಕ್ಕೂಟ) ಕರ್ನಾಟಕ ಅಧ್ಯಕ್ಷ ಲೇಪಾಕ್ಷಿ ಹಾಲನೂರು ಪತ್ರಿಕಾಗೋಷ್ಠಿ ನಡೆಸಿ ಸರ್ಕಾರಕ್ಕೆ ಎಚ್ಚರಿಕೆ ನೀಡಿದ್ದರು. ಇದೀಗ ಸಚಿವರ ಸಭೆ ಬಳಿಕ ಪ್ರತಿಭಟನೆ ವಾಪಸ್ ಪಡೆದಿದ್ದಾರೆ.

ಸಚಿವರ ಸಭೆ ಬಳಿಕ ಪ್ರತಿಭಟನೆ ವಾಪಸ್

ಪ್ರತಿಭಟನೆ ನಡೆಸುವುದಾಗಿ ತಿಳಿಸಿದ ಬೆನ್ನಲ್ಲೇ ಎಚ್ಚೆತ್ತ ರಾಜ್ಯ ಸರ್ಕಾರ, ಇಂದು(ಆ.13) ಶಿಕ್ಷಣ ಸಚಿವ ಮಧು ಬಂಗಾರಪ್ಪ ನೇತೃತ್ವದಲ್ಲಿ ನಡೆದ ಸಚಿವರ ಸಭೆ ಬಳಿಕ ಆಗಸ್ಟ್ 21ರ ಖಾಸಗಿ ಶಾಲೆಗಳು ಬಂದ್ ಪ್ರತಿಭಟನೆಯನ್ನ ರೂಪ್ಸಾ ಸಂಘಟನೆ ಹಿಂದಕ್ಕೆ ಪಡೆದಿದೆ. ಸಚಿವ ಮಧು ಬಂಗಾರಪ್ಪ ನೀಡಿದ ಭರವಸೆ ಹಿನ್ನಲೆ ಶಾಲೆ ಬಂದ್ ಪ್ರತಿಭಟನೆಯನ್ನ ಕೈಬಿಡಲಾಗಿದೆ ಎಂದು ರೂಪ್ಸಾ ಕರ್ನಾಟಕ ಅಧ್ಯಕ್ಷ ಹಾಲನೂರು ಲೇಪಾಕ್ಷಿ ಹೇಳಿದ್ದಾರೆ.

ಇದನ್ನೂ ಓದಿ:ಸರ್ಕಾರಕ್ಕೆ ರುಪ್ಸಾ ಡೆಡ್ ಲೈನ್: ಆಗಸ್ಟ್ 21ರ ನಂತರ ಖಾಸಗಿ ಶಾಲೆ ಬಂದ್ ಎಚ್ಚರಿಕೆ

ಇದೇ ಆ.05 ರಂದು ಪತ್ರಿಕಾಗೋಷ್ಠಿ ನಡೆಸಿ ಮಾತನಾಡಿದ್ದ ಲೇಪಾಕ್ಷಿ ಹಾಲನೂರು, ‘ಕಳೆದ ನಾಲ್ಕು ವರ್ಷಗಳಿಂದ ಶಾಲಾ ಶಿಕ್ಷಣ ಇಲಾಖೆಯ ಅಧಿಕಾರಿಗಳು ಸುಲಿಗೆ ಮಾಡುತ್ತಿದ್ದಾರೆ. ಶಾಲಾ ಶಿಕ್ಷಣ ಇಲಾಖೆ ಶೈಕ್ಷಣಿಕ ಉದ್ದೇಶಕ್ಕೆ ಬಳಸುವ ನಿವೇಶನ ಅಥವಾ ಕಟ್ಟಡಗಳಿಗೆ ಕಾನೂನು ಬಾಹಿರವಾಗಿ ಟ್ಯಾಕ್ಸ್ ವಸೂಲಿ ಮಾಡುತ್ತಿದೆ. ಆರ್​ಆರ್​ ವಿಚಾರದಲ್ಲಿ ಅಧಿಕಾರಿಗಳ ಶಾಲಾ ಶಿಕ್ಷಣ ಇಲಾಖೆಯ ಅಧಿಕಾರಿಗಳು ನಡೆಸುತ್ತಿರುವ ಸುಲಿಗೆ ಸೇರಿದ್ದಂತೆ ಅನೇಕ ವಿಷಯಗಳಿಗೆ ವಿರೋಧ ವ್ಯಕ್ತಪಡಿಸಲಾಗಿದೆ. ಹೀಗಾಗಿ ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಒತ್ತಾಯಿಸಿ ಆಗಸ್ಟ್ 21 ರಂದು ಪ್ರತಿಭಟನೆ ನಡೆಸುವುದಾಗಿ ಹೇಳಿದ್ದರು. ಇದೀಗ ಸಭೆ ಬಳಿಕ ಪ್ರತಿಭಟನೆಯನ್ನ ಕೈಬಿಟ್ಟಿದೆ.

ಮತ್ತಷ್ಟು ಶಿಕ್ಷಣ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Published On - 3:39 pm, Tue, 13 August 24

ಮದ್ಯದ ಅಮಲಿನಲ್ಲಿ ಲಾರಿ ಚಾಲಕ 20ಕ್ಕೂ ಹೆಚ್ಚು ವಾಹನಗಳಿಗೆ ಡಿಕ್ಕಿ
ಮದ್ಯದ ಅಮಲಿನಲ್ಲಿ ಲಾರಿ ಚಾಲಕ 20ಕ್ಕೂ ಹೆಚ್ಚು ವಾಹನಗಳಿಗೆ ಡಿಕ್ಕಿ
ಗಿಲ್ಲಿಯನ್ನೇ ಹೊರಗೆ ಕಳಿಸುವ ಭ್ರಮೆಯಲ್ಲಿ ರಕ್ಷಿತಾ: ಕಾವ್ಯಾ ಖಡಕ್ ತಿರುಗೇಟು
ಗಿಲ್ಲಿಯನ್ನೇ ಹೊರಗೆ ಕಳಿಸುವ ಭ್ರಮೆಯಲ್ಲಿ ರಕ್ಷಿತಾ: ಕಾವ್ಯಾ ಖಡಕ್ ತಿರುಗೇಟು
ಟೀಮ್ ಇಂಡಿಯಾ ವಿರುದ್ಧ ಭರ್ಜರಿ ಸೆಂಚುರಿ ಸಿಡಿಸಿದ ಸಮೀರ್
ಟೀಮ್ ಇಂಡಿಯಾ ವಿರುದ್ಧ ಭರ್ಜರಿ ಸೆಂಚುರಿ ಸಿಡಿಸಿದ ಸಮೀರ್
ಮನ್ರೇಗಾ ಯೋಜನೆ ಹೆಸ್ರು ಬದಲಾವಣೆ: ಕೇಂದ್ರದ ಕ್ರಮಕ್ಕೆ AICC ಅಧ್ಯಕ್ಷ ಕಿಡಿ
ಮನ್ರೇಗಾ ಯೋಜನೆ ಹೆಸ್ರು ಬದಲಾವಣೆ: ಕೇಂದ್ರದ ಕ್ರಮಕ್ಕೆ AICC ಅಧ್ಯಕ್ಷ ಕಿಡಿ
2026 ಸಿಂಹ ರಾಶಿಯವರಿಗೆ ಹಲವು ಮಹತ್ವದ ಬದಲಾವಣೆಗಳನ್ನು ತರುವ ವರ್ಷ
2026 ಸಿಂಹ ರಾಶಿಯವರಿಗೆ ಹಲವು ಮಹತ್ವದ ಬದಲಾವಣೆಗಳನ್ನು ತರುವ ವರ್ಷ
Pulse Polio Campaign: ಮಕ್ಕಳಿಗೆ ಪೋಲಿಯೋ ಲಸಿಕೆ ಹಾಕಿದ ಡಿಕೆ ಶಿವಕುಮಾರ್
Pulse Polio Campaign: ಮಕ್ಕಳಿಗೆ ಪೋಲಿಯೋ ಲಸಿಕೆ ಹಾಕಿದ ಡಿಕೆ ಶಿವಕುಮಾರ್
ಡಿಕೆ ಶಿವಕುಮಾರ್​​​ ಭೇಟಿ ಬಗ್ಗೆ ಕೆಎನ್​ ರಾಜಣ್ಣ ಸ್ಫೋಟಕ ಹೇಳಿಕೆ
ಡಿಕೆ ಶಿವಕುಮಾರ್​​​ ಭೇಟಿ ಬಗ್ಗೆ ಕೆಎನ್​ ರಾಜಣ್ಣ ಸ್ಫೋಟಕ ಹೇಳಿಕೆ
Ashes 2025: ಮೂರಕ್ಕೆ ಮೂರು... ಆಸ್ಟ್ರೇಲಿಯಾ ಪಾಲಾದ ಆ್ಯಶಸ್
Ashes 2025: ಮೂರಕ್ಕೆ ಮೂರು... ಆಸ್ಟ್ರೇಲಿಯಾ ಪಾಲಾದ ಆ್ಯಶಸ್
ಶೆಟ್ಟಿ ಗ್ಯಾಂಗ್ ಬಿರುಕು? ಮೊದಲ ಬಾರಿಗೆ ಮೌನ ಮುರಿದ ಪ್ರಮೋದ್ ಶೆಟ್ಟಿ
ಶೆಟ್ಟಿ ಗ್ಯಾಂಗ್ ಬಿರುಕು? ಮೊದಲ ಬಾರಿಗೆ ಮೌನ ಮುರಿದ ಪ್ರಮೋದ್ ಶೆಟ್ಟಿ
ನಾಯಕತ್ವ ಬದಲಾವಣೆ ಗೊಂದಲ ಬಗೆಹರಿಸಿ: ಖರ್ಗೆಗೆ VR ಸುದರ್ಶನ್ ಪತ್ರ
ನಾಯಕತ್ವ ಬದಲಾವಣೆ ಗೊಂದಲ ಬಗೆಹರಿಸಿ: ಖರ್ಗೆಗೆ VR ಸುದರ್ಶನ್ ಪತ್ರ