AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಆಗಸ್ಟ್ 21ರ ನಂತರ ನಡೆಯಬೇಕಿದ್ದ ಖಾಸಗಿ ಶಾಲೆಗಳ ಬಂದ್ ಪ್ರತಿಭಟನೆ ವಾಪಸ್; ಕಾರಣ?

ಖಾಸಗಿ ಶಾಲೆಗಳ ಮೇಲಿನ ಅನ್ಯಾಯ ವಿರೋಧಿಸಿ ರುಪ್ಸಾ (RUPSA) ಕರ್ನಾಟಕ ಖಾಸಗಿ ಅನುದಾನ ರಹಿತ ಶಾಲೆಗಳ ಒಕ್ಕೂಟದಿಂದ ಆಗಸ್ಟ್ 21 ರಂದು ಶಾಲೆಗಳನ್ನ ಬಂದ್ (bandh)ಪ್ರತಿಭಟನೆಯನ್ನ ವಾಪಸ್​ ಪಡೆದಿದೆ. ಇಂದು(ಆ.13) ಶಿಕ್ಷಣ ಸಚಿವ ಮಧು ಬಂಗಾರಪ್ಪ ನೇತೃತ್ವದಲ್ಲಿ ನಡೆದ ಸಚಿವರ ಸಭೆ ಬಳಿಕ ಮಾತನಾಡಿದ ಲೇಪಾಕ್ಷಿ ಹಾಲನೂರು, ‘ಪ್ರತಿಭಟನೆಯನ್ನ ಕೈಬಿಡಲಾಗಿದೆ ಎಂದಿದ್ದಾರೆ.

ಆಗಸ್ಟ್ 21ರ ನಂತರ ನಡೆಯಬೇಕಿದ್ದ ಖಾಸಗಿ ಶಾಲೆಗಳ ಬಂದ್ ಪ್ರತಿಭಟನೆ ವಾಪಸ್; ಕಾರಣ?
ಖಾಸಗಿ ಶಾಲೆಗಳ ಬಂದ್ ಪ್ರತಿಭಟನೆ ವಾಪಸ್
ವಿನಯ್​ ಕಾಶಪ್ಪನವರ್​
| Edited By: ಕಿರಣ್ ಹನುಮಂತ್​ ಮಾದಾರ್|

Updated on:Aug 13, 2024 | 3:50 PM

Share

ಬೆಂಗಳೂರು, ಆ.13: ಇದೇ ಆಗಸ್ಟ್ 21 ರಂದು ಖಾಸಗಿ ಶಾಲೆಗಳ ಮೇಲಿನ ಅನ್ಯಾಯ ವಿರೋಧಿಸಿ ರುಪ್ಸಾ (RUPSA) ಕರ್ನಾಟಕ ಖಾಸಗಿ ಅನುದಾನ ರಹಿತ ಶಾಲೆಗಳ ಒಕ್ಕೂಟದಿಂದ ಶಾಲೆಗಳನ್ನ ಬಂದ್ (bandh) ಮಾಡಿ ಪ್ರತಿಭಟನೆ ಮಾಡುವುದಾಗಿ ರುಪ್ಸಾ (ಖಾಸಗಿ ಶಾಲೆಗಳ ಒಕ್ಕೂಟ) ಕರ್ನಾಟಕ ಅಧ್ಯಕ್ಷ ಲೇಪಾಕ್ಷಿ ಹಾಲನೂರು ಪತ್ರಿಕಾಗೋಷ್ಠಿ ನಡೆಸಿ ಸರ್ಕಾರಕ್ಕೆ ಎಚ್ಚರಿಕೆ ನೀಡಿದ್ದರು. ಇದೀಗ ಸಚಿವರ ಸಭೆ ಬಳಿಕ ಪ್ರತಿಭಟನೆ ವಾಪಸ್ ಪಡೆದಿದ್ದಾರೆ.

ಸಚಿವರ ಸಭೆ ಬಳಿಕ ಪ್ರತಿಭಟನೆ ವಾಪಸ್

ಪ್ರತಿಭಟನೆ ನಡೆಸುವುದಾಗಿ ತಿಳಿಸಿದ ಬೆನ್ನಲ್ಲೇ ಎಚ್ಚೆತ್ತ ರಾಜ್ಯ ಸರ್ಕಾರ, ಇಂದು(ಆ.13) ಶಿಕ್ಷಣ ಸಚಿವ ಮಧು ಬಂಗಾರಪ್ಪ ನೇತೃತ್ವದಲ್ಲಿ ನಡೆದ ಸಚಿವರ ಸಭೆ ಬಳಿಕ ಆಗಸ್ಟ್ 21ರ ಖಾಸಗಿ ಶಾಲೆಗಳು ಬಂದ್ ಪ್ರತಿಭಟನೆಯನ್ನ ರೂಪ್ಸಾ ಸಂಘಟನೆ ಹಿಂದಕ್ಕೆ ಪಡೆದಿದೆ. ಸಚಿವ ಮಧು ಬಂಗಾರಪ್ಪ ನೀಡಿದ ಭರವಸೆ ಹಿನ್ನಲೆ ಶಾಲೆ ಬಂದ್ ಪ್ರತಿಭಟನೆಯನ್ನ ಕೈಬಿಡಲಾಗಿದೆ ಎಂದು ರೂಪ್ಸಾ ಕರ್ನಾಟಕ ಅಧ್ಯಕ್ಷ ಹಾಲನೂರು ಲೇಪಾಕ್ಷಿ ಹೇಳಿದ್ದಾರೆ.

ಇದನ್ನೂ ಓದಿ:ಸರ್ಕಾರಕ್ಕೆ ರುಪ್ಸಾ ಡೆಡ್ ಲೈನ್: ಆಗಸ್ಟ್ 21ರ ನಂತರ ಖಾಸಗಿ ಶಾಲೆ ಬಂದ್ ಎಚ್ಚರಿಕೆ

ಇದೇ ಆ.05 ರಂದು ಪತ್ರಿಕಾಗೋಷ್ಠಿ ನಡೆಸಿ ಮಾತನಾಡಿದ್ದ ಲೇಪಾಕ್ಷಿ ಹಾಲನೂರು, ‘ಕಳೆದ ನಾಲ್ಕು ವರ್ಷಗಳಿಂದ ಶಾಲಾ ಶಿಕ್ಷಣ ಇಲಾಖೆಯ ಅಧಿಕಾರಿಗಳು ಸುಲಿಗೆ ಮಾಡುತ್ತಿದ್ದಾರೆ. ಶಾಲಾ ಶಿಕ್ಷಣ ಇಲಾಖೆ ಶೈಕ್ಷಣಿಕ ಉದ್ದೇಶಕ್ಕೆ ಬಳಸುವ ನಿವೇಶನ ಅಥವಾ ಕಟ್ಟಡಗಳಿಗೆ ಕಾನೂನು ಬಾಹಿರವಾಗಿ ಟ್ಯಾಕ್ಸ್ ವಸೂಲಿ ಮಾಡುತ್ತಿದೆ. ಆರ್​ಆರ್​ ವಿಚಾರದಲ್ಲಿ ಅಧಿಕಾರಿಗಳ ಶಾಲಾ ಶಿಕ್ಷಣ ಇಲಾಖೆಯ ಅಧಿಕಾರಿಗಳು ನಡೆಸುತ್ತಿರುವ ಸುಲಿಗೆ ಸೇರಿದ್ದಂತೆ ಅನೇಕ ವಿಷಯಗಳಿಗೆ ವಿರೋಧ ವ್ಯಕ್ತಪಡಿಸಲಾಗಿದೆ. ಹೀಗಾಗಿ ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಒತ್ತಾಯಿಸಿ ಆಗಸ್ಟ್ 21 ರಂದು ಪ್ರತಿಭಟನೆ ನಡೆಸುವುದಾಗಿ ಹೇಳಿದ್ದರು. ಇದೀಗ ಸಭೆ ಬಳಿಕ ಪ್ರತಿಭಟನೆಯನ್ನ ಕೈಬಿಟ್ಟಿದೆ.

ಮತ್ತಷ್ಟು ಶಿಕ್ಷಣ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Published On - 3:39 pm, Tue, 13 August 24

Follow Us
KPSC ಹಗರಣ: ಐಎಎಸ್‌ ಅಧಿಕಾರಿ ಜ್ಞಾನೇಂದ್ರ ರಾತ್ರಿ ಕಾರುಬಾರು ಬಯಲು!
KPSC ಹಗರಣ: ಐಎಎಸ್‌ ಅಧಿಕಾರಿ ಜ್ಞಾನೇಂದ್ರ ರಾತ್ರಿ ಕಾರುಬಾರು ಬಯಲು!
ಬಿಗ್ ಬಾಸ್ ಅಗ್ನಿಪರೀಕ್ಷೆ ಗ್ರ್ಯಾಂಡ್ ಫಿನಾಲೆಗೆ ಕ್ಷಣಗಣನೆ; ಗೆಲ್ಲೋರ್ಯಾರು?
ಬಿಗ್ ಬಾಸ್ ಅಗ್ನಿಪರೀಕ್ಷೆ ಗ್ರ್ಯಾಂಡ್ ಫಿನಾಲೆಗೆ ಕ್ಷಣಗಣನೆ; ಗೆಲ್ಲೋರ್ಯಾರು?
SIR: ಜೀವಂತ ವ್ಯಕ್ತಿಯನ್ನೇ ‘ಸತ್ತಿದ್ದಾರೆ’ ಎಂದು ಘೋಷಿಸಿದ ಚುನಾವಣಾ ಆಯೋಗ!
SIR: ಜೀವಂತ ವ್ಯಕ್ತಿಯನ್ನೇ ‘ಸತ್ತಿದ್ದಾರೆ’ ಎಂದು ಘೋಷಿಸಿದ ಚುನಾವಣಾ ಆಯೋಗ!
ಸ್ಯಾಂಪಲ್ ತಗೊಳಿ, ಹೋಟೆಲ್ ಹೆಸರು ಹೇಳ್ಬೇಡಿ! ಸ್ಟಾರ್ ಹೋಟೆಲ್ ಮಾಲೀಕರ ಅಳಲು
ಸ್ಯಾಂಪಲ್ ತಗೊಳಿ, ಹೋಟೆಲ್ ಹೆಸರು ಹೇಳ್ಬೇಡಿ! ಸ್ಟಾರ್ ಹೋಟೆಲ್ ಮಾಲೀಕರ ಅಳಲು
'ನನಗೆ ಗೊತ್ತಿಲ್ಲದೆ ಪ್ರಶ್ನೆ ಪತ್ರಿಕೆ ತೆಗೆದು ಕೊಂಡಿರಬಹುದು': ಜ್ಞಾನೇಂದ್ರ
'ನನಗೆ ಗೊತ್ತಿಲ್ಲದೆ ಪ್ರಶ್ನೆ ಪತ್ರಿಕೆ ತೆಗೆದು ಕೊಂಡಿರಬಹುದು': ಜ್ಞಾನೇಂದ್ರ
ಯಾರು ಸಿಕ್ಕಿಬಿದ್ರೂ ನಯಾಪೈಸೆ ಉಪಕಾರ ಮಾಡಲ್ಲವೆಂದ ಖಾದರ್!
ಯಾರು ಸಿಕ್ಕಿಬಿದ್ರೂ ನಯಾಪೈಸೆ ಉಪಕಾರ ಮಾಡಲ್ಲವೆಂದ ಖಾದರ್!
ಕೊಡಗು-ಕೇರಳ ಗಡಿಯಲ್ಲಿ ಲಂಚಾವತಾರ? ಚೆಕ್‌ಪೋಸ್ಟ್‌ ವಿಡಿಯೋ ವೈರಲ್
ಕೊಡಗು-ಕೇರಳ ಗಡಿಯಲ್ಲಿ ಲಂಚಾವತಾರ? ಚೆಕ್‌ಪೋಸ್ಟ್‌ ವಿಡಿಯೋ ವೈರಲ್
ಮನೆಯ ಮುಂದೆ ಪಾರ್ಕ್ ಮಾಡಿದ್ದ ಆಟೋದ ಚಕ್ರ ಕಳವು
ಮನೆಯ ಮುಂದೆ ಪಾರ್ಕ್ ಮಾಡಿದ್ದ ಆಟೋದ ಚಕ್ರ ಕಳವು
ಹೊಸ ಗೃಹಬಳಕೆ ಸಂಪರ್ಕ ಸಿಗದೆ ಗ್ರಾಹಕರ ಆಕ್ರೋಶ
ಹೊಸ ಗೃಹಬಳಕೆ ಸಂಪರ್ಕ ಸಿಗದೆ ಗ್ರಾಹಕರ ಆಕ್ರೋಶ
ಬ್ಯಾಂಕ್​ಗಳಲ್ಲಿ ಕನ್ನಡಿಗರನ್ನೇ ಕೆಲಸಕ್ಕೆ ನೇಮಿಸಿ: ಸಚಿವ ತಂಗಡಗಿ
ಬ್ಯಾಂಕ್​ಗಳಲ್ಲಿ ಕನ್ನಡಿಗರನ್ನೇ ಕೆಲಸಕ್ಕೆ ನೇಮಿಸಿ: ಸಚಿವ ತಂಗಡಗಿ