AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

99 ಪಂಚಾಯಿತಿ ಅಭಿವೃದ್ಧಿ ಅಧಿಕಾರಿಗಳ ವರ್ಗಾವಣೆ: ಗ್ರಾಮೀಣಾಭಿವೃದ್ಧಿ ಇಲಾಖೆ ಆದೇಶ

ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯಿಂದ ಸಿಎಂ ಕಛೇರಿಗೆ ಅನುಮೋದನೆ ಪಡೆಯಲು ಕಳಿಸಿದ್ದ ಪ್ರತಿ ವರ್ಗಾವಣೆಗೂ ಮೊದಲೇ ಸೋರಿಕೆ ಬೆನ್ನಲೆ, 99 ಪಂಚಾಯಿತಿ ಅಭಿವೃದ್ಧಿ ಅಧಿಕಾರಿಗಳ ವರ್ಗಾವಣೆ ಮಾಡಿ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್​ ರಾಜ್ ಇಲಾಖೆಯಿಂದ ಬುಧವಾರ ಆದೇಶ ಹೊರಡಿಸಲಾಗಿದೆ. ಜ್ಯೇಷ್ಠತಾ ಪಟ್ಟಿ ಅಂತಿಮಗೊಳ್ಳದೇ ಇರುವುದರಿಂದ ಭಡ್ತಿ ಮತ್ತು ವರ್ಗಾವಣೆ ಪ್ರಕ್ರಿಯೆಗಳಲ್ಲಿ ಗೊಂದಗಳು ಉಂಟಾಗಿವೆ.

99 ಪಂಚಾಯಿತಿ ಅಭಿವೃದ್ಧಿ ಅಧಿಕಾರಿಗಳ ವರ್ಗಾವಣೆ: ಗ್ರಾಮೀಣಾಭಿವೃದ್ಧಿ ಇಲಾಖೆ ಆದೇಶ
ಪ್ರಾತಿನಿಧಿಕ ಚಿತ್ರ
ಗಂಗಾಧರ​ ಬ. ಸಾಬೋಜಿ
|

Updated on:Sep 06, 2023 | 4:17 PM

Share

ಬೆಂಗಳೂರು, ಸೆಪ್ಟೆಂಬರ್​ 6: ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯಿಂದ ಸಿಎಂ ಕಛೇರಿಗೆ ಅನುಮೋದನೆ ಪಡೆಯಲು ಕಳಿಸಿದ್ದ ಪ್ರತಿ ವರ್ಗಾವಣೆಗೂ ಮೊದಲೇ ಸೋರಿಕೆ ಬೆನ್ನಲೆ, 99 ಪಂಚಾಯಿತಿ ಅಭಿವೃದ್ಧಿ ಅಧಿಕಾರಿಗಳ (pdo) ವರ್ಗಾವಣೆ ಮಾಡಿ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್​ ರಾಜ್ ಇಲಾಖೆಯಿಂದ ಬುಧವಾರ ಆದೇಶ ಹೊರಡಿಸಲಾಗಿದೆ. ಪಿಡಿಒ ಹುದ್ದೆಗಳು ಸೃಷ್ಟಿಯಾಗಿ 13 ವರ್ಷ ಕಳೆದರೂ ಯಾವುದೇ ಜ್ಯೇಷ್ಠತಾ ಪಟ್ಟಿ ಅಂತಿಮಗೊಳ್ಳದೇ ಇರುವುದರಿಂದ ಭಡ್ತಿ ಮತ್ತು ವರ್ಗಾವಣೆ ಪ್ರಕ್ರಿಯೆಗಳಲ್ಲಿ ಗೊಂದಗಳು ಉಂಟಾಗಿವೆ.

ಸರ್ಕಾರದ ಅನುಮೋದನೆ ಆಗುವುದಕ್ಕೆ ಮೊದಲೇ ವಾಟ್ಸಪ್​ನಲ್ಲಿ ವರ್ಗಾವಣೆ ಪ್ರತಿ ಹರಿಬಿಡಲಾಗಿತ್ತು. ಸರ್ಕಾರದ ಇ ಆಫೀಸ್​ನಲ್ಲಿ ಇದ್ದ ಪ್ರತಿ ಹ್ಯಾಕ್ ಮಾಡಲಾಗಿದೆ ಎಂದು ದೂರು ನೀಡಲಾಗಿತ್ತು. ಪಿಡಿಒಗಳ ವರ್ಗಾವಣೆ ಆದೇಶ ಆಗುವುದಕ್ಕೂ ಮೊದಲೇ ಕಳ್ಳತನ ಅರೋಪ ಇತ್ತು. ಕೇಂದ್ರ ವಿಭಾಗ ಸಿಇ ಎನ್ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದ್ದು, ಅಪ್ಪಾ ಮಗ ಇಬ್ಬರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಮಗ ಶ್ರೀಧರ್, ಅಪ್ಪ ನಾರಾಯಣ್​​ ಸದ್ಯ ಪೊಲೀಸರ ವಶದಲ್ಲಿದ್ದಾರೆ.

ಇದನ್ನೂ ಓದಿ: ಅಪ್ಪ-ಮಗ ಅರೆಸ್ಟ್​: ಸರ್ಕಾರಿ ಕಂಪ್ಯೂಟರ್​​ನಲ್ಲಿದ್ದ ದಾಖಲೆಯನ್ನು ವಾಟ್ಸಪ್ ಮೂಲಕ ಎಲ್ಲರಿಗೂ ಕಳಿಸಿದ್ದ ಅರೋಪಿಗಳು!

ಶ್ರೀಧರ್ ಆರ್​ಡಿಪಿಆರ್​ ವಿಭಾಗದಲ್ಲಿ ಕರ್ತವ್ಯ ನಿರ್ವಹಿಸುತಿದ್ದ. ಅಪ್ಪ ನಾರಾಯಣ್ ಸಹ ಸರ್ಕಾರಿ ನೌಕರಾಗಿದ್ದಾರೆ. ಸರ್ಕಾರಿ ಕಂಪ್ಯೂಟರ್​​ನಲ್ಲಿ ಇದ್ದ ದಾಖಲಾತಿಯನ್ನು ವಾಟ್ಸಪ್​ಗೆ ಹಾಕಿಕೊಂಡು ಎಲ್ಲರಿಗೂ ಕಳಿಸಿದ್ದಾರೆ. ಕೇಂದ್ರ ವಿಭಾಗ ಸಿಇಎನ್ ಪೊಲೀಸರಿಂದ ತನಿಖೆ ಮುಂದುವರೆದಿದೆ.

ಇದನ್ನೂ ಓದಿ: ಬೆಂಗಳೂರು: 10 ಐಪಿಎಸ್​​ ಅಧಿಕಾರಿಗಳನ್ನು ವರ್ಗಾವಣೆಗೊಳಿಸಿ ಸರ್ಕಾರ ಆದೇಶ

ಕಾಂಗ್ರೆಸ್​ ಸರ್ಕಾರ ಅಧಿಕಾರಕ್ಕೆ ಬಂದಾಗಿನಿಂದ ವರ್ಗಾವಣೆ ಪರ್ವ ನಡೆಯುತ್ತಿದ್ದು, ಕಳೆದ ಜೂನ್​ನಲ್ಲಿ 11 ಐಎಎಸ್​ ಅಧಿಕಾರಿಗಳನ್ನು ಹಾಗೂ ಜುಲೈ 1 ರಂದು 14 ಐಎಫ್​ಎಸ್​ ಅಧಿಕಾರಿಗಳನ್ನು ವರ್ಗಾವಣೆ ಮಾಡಲಾಗಿತ್ತು. ಅದೇ ರೀತಿಯಾಗಿ ಇತ್ತೀಚೆಗೆ ಬರೊಬ್ಬರಿ 10 ಜನ ಐಪಿಎಸ್​ ಅಧಿಕಾರಿಗಳನ್ನು ವರ್ಗಾವಣೆಗೊಳಿಸಿ (IPS Officers Transfer) ಸರ್ಕಾರ ಆದೇಶ ಹೊರಡಿಸಿತ್ತು.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Published On - 4:07 pm, Wed, 6 September 23

ಬಯಲು ಪ್ರಾಚ್ಯವಸ್ತು ಸಂಗ್ರಹಾಲಯ ಅಭಿವೃದ್ಧಿಗೆ ಫೌಂಡೇಶನ್ ಸಜ್ಜು
ಬಯಲು ಪ್ರಾಚ್ಯವಸ್ತು ಸಂಗ್ರಹಾಲಯ ಅಭಿವೃದ್ಧಿಗೆ ಫೌಂಡೇಶನ್ ಸಜ್ಜು
ಜಲಮಂಡಳಿ ನಿರ್ಲಕ್ಷ್ಯಕ್ಕೆ 14 ವರ್ಷದ ಬಾಲಕ ಬಲಿ
ಜಲಮಂಡಳಿ ನಿರ್ಲಕ್ಷ್ಯಕ್ಕೆ 14 ವರ್ಷದ ಬಾಲಕ ಬಲಿ
ವಿಜಯ್​​ ರಾಘವೇಂದ್ರಗೆ ‘ಥ್ಯಾಂಕ್​​ ಯೂ ಮಾವ’ ಎಂದ ಪಲ್ಲವಿ ಪಾಂಚಾಲ್
ವಿಜಯ್​​ ರಾಘವೇಂದ್ರಗೆ ‘ಥ್ಯಾಂಕ್​​ ಯೂ ಮಾವ’ ಎಂದ ಪಲ್ಲವಿ ಪಾಂಚಾಲ್
ಅಕ್ರಮ ಗಣಿಗಾರಿಕೆ ನಿಲ್ಲಿಸದ್ದಕ್ಕೆ ರಣಚಂಡಿಯಾದ ಮಹಿಳಾ ಅಧಿಕಾರಿ
ಅಕ್ರಮ ಗಣಿಗಾರಿಕೆ ನಿಲ್ಲಿಸದ್ದಕ್ಕೆ ರಣಚಂಡಿಯಾದ ಮಹಿಳಾ ಅಧಿಕಾರಿ
ಅಕ್ರಮ ಸಂಬಂಧ ಬಯಲಿಗೆಳೆದಿದ್ದಕ್ಕೆ, ಮಾವನಿಗೆ ಬೆಂಕಿ ಹಚ್ಚಿದ ಸೊಸೆ
ಅಕ್ರಮ ಸಂಬಂಧ ಬಯಲಿಗೆಳೆದಿದ್ದಕ್ಕೆ, ಮಾವನಿಗೆ ಬೆಂಕಿ ಹಚ್ಚಿದ ಸೊಸೆ
ಪಾರ್ಶ್ವವಾಯು ಪೀಡಿತ ಮಹಿಳೆಯನ್ನು ಏರ್​​ಲಿಫ್ಟ್​ ಮಾಡಿದ ವಾಯುಪಡೆ
ಪಾರ್ಶ್ವವಾಯು ಪೀಡಿತ ಮಹಿಳೆಯನ್ನು ಏರ್​​ಲಿಫ್ಟ್​ ಮಾಡಿದ ವಾಯುಪಡೆ
‘ಔಟಾದೆ, ಹೋಗಪ್ಪ’; ಕಿಚ್ಚನ ಸ್ಲೆಡ್ಜಿಂಗ್​​ಗೆ ಎದುರಾಳಿ ತಂಡದವರು ಕಂಗಾಲು
‘ಔಟಾದೆ, ಹೋಗಪ್ಪ’; ಕಿಚ್ಚನ ಸ್ಲೆಡ್ಜಿಂಗ್​​ಗೆ ಎದುರಾಳಿ ತಂಡದವರು ಕಂಗಾಲು
ವೈಎಸ್​ಆರ್​ಸಿಪಿ ನಾಯಕ ಜೋಗಿ ರಮೇಶ್ ಮನೆಗೆ ಬೆಂಕಿ ಹಚ್ಚಿದ ಕಿಡಿಗೇಡಿಗಳು
ವೈಎಸ್​ಆರ್​ಸಿಪಿ ನಾಯಕ ಜೋಗಿ ರಮೇಶ್ ಮನೆಗೆ ಬೆಂಕಿ ಹಚ್ಚಿದ ಕಿಡಿಗೇಡಿಗಳು
ಸಿಸಿಎಲ್​ ಗೆಲುವನ್ನು ತಮ್ಮದೇ ಸ್ಟೈಲ್​​​ನಲ್ಲಿ ಸೆಲೆಬ್ರೇಟ್ ಮಾಡಿದ ಸುದೀಪ್
ಸಿಸಿಎಲ್​ ಗೆಲುವನ್ನು ತಮ್ಮದೇ ಸ್ಟೈಲ್​​​ನಲ್ಲಿ ಸೆಲೆಬ್ರೇಟ್ ಮಾಡಿದ ಸುದೀಪ್
ದೇವಾಲಯಗಳಲ್ಲಿ ಸೆಲ್ಫಿ ಅಥವಾ ಗರ್ಭಗುಡಿ ಫೋಟೋ ತೆಗೆಯಬಾರದು!
ದೇವಾಲಯಗಳಲ್ಲಿ ಸೆಲ್ಫಿ ಅಥವಾ ಗರ್ಭಗುಡಿ ಫೋಟೋ ತೆಗೆಯಬಾರದು!